Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 2:6 - ಕನ್ನಡ ಸಮಕಾಲಿಕ ಅನುವಾದ

6 ಆದರೆ ನೀವು ಕನಸನ್ನೂ, ಅದರ ಅರ್ಥವನ್ನೂ ನನಗೆ ತಿಳಿಸಿದರೆ, ದಾನಬಹುಮಾನಗಳನ್ನೂ, ಬಹಳ ಘನತೆಯನ್ನೂ ನನ್ನಿಂದ ಪಡೆಯುವಿರಿ. ಹೀಗಿರಲಾಗಿ ಕನಸನ್ನೂ, ಅದರ ವ್ಯಾಖ್ಯಾನವನ್ನೂ ನನಗೆ ತಿಳಿಸಿರಿ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನೀವು ಆ ಕನಸನ್ನೂ, ಅದರ ಅರ್ಥವನ್ನೂ ತಿಳಿಸಿದರೆ ನನ್ನಿಂದ ನಿಮಗೆ ದಾನ ಮತ್ತು ಬಹುಮಾನಗಳೂ, ವಿಶೇಷ ಸನ್ಮಾನಗಳೂ ಲಭಿಸುವವು. ಆದಕಾರಣ ಆ ಕನಸನ್ನೂ, ಅದರ ಅಭಿಪ್ರಾಯವನ್ನೂ ನನಗೆ ತಿಳಿಸಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನೀವು ಆ ಕನಸನ್ನೂ ಅದರ ಉದ್ದೇಶವನ್ನೂ ತಿಳಿಸಿದ್ದೇ ಆದರೆ ನನ್ನಿಂದ ನಿಮಗೆ ದಾನ ಬಹುಮಾನಗಳೂ ವಿಶೇಷ ಸನ್ಮಾನಗಳೂ ದೊರಕುವುವು. ಆದಕಾರಣ ಆ ಕನಸನ್ನೂ ಅದರ ಉದ್ದೇಶವನ್ನೂ ನನಗೆ ತಿಳಿಸಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನೀವು ಆ ಕನಸನ್ನೂ ಅದರ ಅಭಿಪ್ರಾಯವನ್ನೂ ತಿಳಿಸಿದರೆ ನನ್ನಿಂದ ನಿಮಗೆ ದಾನಬಹುಮಾನಗಳೂ ವಿಶೇಷಸನ್ಮಾನಗಳೂ ಲಭಿಸುವವು; ಆದಕಾರಣ ಆ ಕನಸನ್ನೂ ಅದರ ಅಭಿಪ್ರಾಯವನ್ನೂ ನನಗೆ ತಿಳಿಸಿರಿ ಎಂದು ಹೇಳಲು ಪಂಡಿತರು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದರೆ ನೀವು ನನಗೆ ನನ್ನ ಕನಸನ್ನೂ ಅದರ ಅರ್ಥವನ್ನೂ ಹೇಳಿದರೆ ಕಾಣಿಕೆಗಳನ್ನೂ ಬಹುಮಾನಗಳನ್ನೂ ಕೊಡುತ್ತೇನೆ ಮತ್ತು ಮಹಾಸನ್ಮಾನವನ್ನು ಮಾಡುತ್ತೇನೆ. ಆದ್ದರಿಂದ ನೀವು ನನಗೆ ಕನಸನ್ನೂ ಅದರ ಅರ್ಥವನ್ನೂ ಹೇಳಿರಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 2:6
8 ತಿಳಿವುಗಳ ಹೋಲಿಕೆ  

ಅರಸನು ಗಟ್ಟಿಯಾಗಿ ಕಿರುಚಿ ಜ್ಯೋತಿಷ್ಯರನ್ನೂ, ಪಂಡಿತರನ್ನೂ, ಶಕುನ ಹೇಳುವವರನ್ನೂ ಕರೆಸಿ, ಬಾಬಿಲೋನಿನ ಜ್ಞಾನಿಗಳಿಗೆ, “ಯಾರು ಈ ಬರಹವನ್ನು ಓದಿ, ಅದರ ಅರ್ಥವನ್ನು ನನಗೆ ತಿಳಿಸುವರೋ, ಅವರಿಗೆ ಧೂಮ್ರವಸ್ತ್ರವನ್ನು ಹೊದಿಸಿ, ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿ, ರಾಜ್ಯದ ಮೂರನೆಯ ಅಧಿಕಾರಿಯಾಗಿ ಮಾಡುವೆನು,” ಎಂದು ಹೇಳಿದನು.


ಆಗ ಅರಸನು ದಾನಿಯೇಲನನ್ನು ಉನ್ನತ ಸ್ಥಾನದಲ್ಲಿರಿಸಿ, ಅವನಿಗೆ ಅನೇಕ ದೊಡ್ಡ ಬಹುಮಾನಗಳನ್ನು ಕೊಟ್ಟನು. ಸಮಸ್ತ ಬಾಬಿಲೋನಿನ ಪ್ರಾಂತಗಳಿಗೆ ಅಧಿಕಾರಿಯನ್ನಾಗಿಯೂ, ಬಾಬಿಲೋನಿನ ಸಮಸ್ತ ಜ್ಞಾನಿಗಳಿಗೆ ಮುಖ್ಯಾಧಿಪತಿಯನ್ನಾಗಿಯೂ ನೇಮಿಸಿದನು.


ಆಗ ಬೇಲ್ಯಚ್ಚರನು ಆಜ್ಞಾಪಿಸಲು ದಾನಿಯೇಲನಿಗೆ ಧೂಮ್ರವಸ್ತ್ರವನ್ನು ಹೊದಿಸಿ, ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿ, ಇವನು ರಾಜ್ಯದ ಮೂರನೇ ಉನ್ನತ ಅಧಿಕಾರಿಗಳಲ್ಲಿ ಒಬ್ಬನೆಂದು ಸಾರಿದನು.


ಈಗ ನಿನ್ನ ಸ್ಥಳಕ್ಕೆ ಓಡಿಹೋಗು. ನಾನು ನಿನ್ನನ್ನು ಬಹು ಗೌರವಿಸಬೇಕೆಂದಿದ್ದೆ. ಆದರೆ ಇಗೋ, ಯೆಹೋವ ದೇವರು ನಿನಗೆ ಘನತೆ ಬಾರದಂತೆ ತಡೆದಿದ್ದಾನೆ,” ಎಂದನು.


ಬಾಲಾಕನು ಬಿಳಾಮನಿಗೆ, “ನಾನು ನಿನಗೆ ತುರ್ತಾಗಿ ಬರುವಂತೆ ಹೇಳಿ ಕಳುಹಿಸಲಿಲ್ಲವೋ? ನೀನು ನನ್ನ ಬಳಿಗೆ ಏಕೆ ಬರಲಿಲ್ಲ? ನಾನು ನಿನ್ನನ್ನು ಘನಪಡಿಸಲು ನಿಶ್ಚಯವಾಗಿ ಸಾಮರ್ಥ್ಯವುಳ್ಳವನಲ್ಲವೋ?” ಎಂದನು.


ಏಕೆಂದರೆ ನಾನು ನಿನ್ನನ್ನು ಬಹಳವಾಗಿ ಘನಪಡಿಸುವೆನು. ನೀನು ಹೇಳುವುದನ್ನೆಲ್ಲಾ ನಾನು ಮಾಡುವೆನು. ಆದಕಾರಣ ನೀನು ದಯಮಾಡಿ ಬಂದು ಈ ಜನರನ್ನು ನನಗಾಗಿ ಶಪಿಸು,” ಎಂದನು.


ಆಗ ಮೋವಾಬಿನ ಹಿರಿಯರೂ ಮಿದ್ಯಾನಿನ ಹಿರಿಯರೂ ಭವಿಷ್ಯವಾಣಿ ಕೇಳಲು ಸಲ್ಲಿಸಬೇಕಾದ ಕಾಣಿಕೆಗಳನ್ನು ತೆಗೆದುಕೊಂಡು ಹೋದರು. ಅವರು ಬಿಳಾಮನ ಬಳಿಗೆ ಬಂದು, ಅವನಿಗೆ ಬಾಲಾಕನ ಮಾತುಗಳನ್ನು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು