Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 2:7 - ಕನ್ನಡ ಸಮಕಾಲಿಕ ಅನುವಾದ

7 ಅವರು ಮತ್ತೆ ಉತ್ತರವಾಗಿ, “ಅರಸನು ತನ್ನ ಸೇವಕರಿಗೆ ಕನಸನ್ನು ಮೊದಲು ಹೇಳಲಿ. ಆಗ ಅದರ ಅರ್ಥವನ್ನು ನಾವು ತಿಳಿಸುವೆವು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಪಂಡಿತರು ಉತ್ತರವಾಗಿ, “ರಾಜನು ತನ್ನ ದಾಸರಿಗೆ ಕನಸನ್ನು ತಿಳಿಸಲಿ, ನಾವು ಅದರ ತಾತ್ಪರ್ಯವನ್ನು ವಿವರಿಸುವೆವು” ಎಂಬ ಉತ್ತರವನ್ನೇ ಪುನಃ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಪಂಡಿತರು, “ರಾಜರು ತಮ್ಮ ದಾಸರಿಗೆ ಕನಸನ್ನು ತಿಳಿಸೋಣವಾಗಲಿ, ನಾವು ಅದರ ತಾತ್ಪರ್ಯವನ್ನು ವಿವರಿಸುವೆವು,” ಎಂದು ಮತ್ತೊಮ್ಮೆ ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ರಾಜನು ತನ್ನ ದಾಸರಿಗೆ ಕನಸನ್ನು ತಿಳಿಸೋಣವಾಗಲಿ, ನಾವು ಅದರ ತಾತ್ಪರ್ಯವನ್ನು ವಿವರಿಸುವೆವು ಎಂಬ ಉತ್ತರವನ್ನೇ ಪುನಃ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆ ಪಂಡಿತರು ಅರಸನಿಗೆ, “ದಯವಿಟ್ಟು ತಾವು ಕನಸಿನ ಬಗ್ಗೆ ಹೇಳಿರಿ. ನಾವು ಅದರ ಅಭಿಪ್ರಾಯವನ್ನು ಹೇಳುತ್ತೇವೆ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 2:7
5 ತಿಳಿವುಗಳ ಹೋಲಿಕೆ  

ಆಗ ಪಂಡಿತರು ಅರಸನಿಗೆ ಅರಮಾಯ ಭಾಷೆಯಲ್ಲಿ, “ಅರಸನೇ, ನಿರಂತರವಾಗಿ ಬಾಳು! ಕನಸನ್ನು ನಿನ್ನ ಸೇವಕರಿಗೆ ಹೇಳು, ಆಗ ನಾವು ಅದರ ಅರ್ಥವನ್ನು ತಿಳಿಸುವೆವು,” ಎಂದು ಹೇಳಿದರು.


ನೀವು ಕನಸನ್ನು ನನಗೆ ಹೇಳದಿದ್ದರೆ, ನಿಮಗೆ ಒಂದೇ ಒಂದು ಶಿಕ್ಷೆಯಿದೆ. ತಪ್ಪು ಮಾರ್ಗಕ್ಕೆ ನಡೆಸುವ ಹಾಗೂ ಕೆಟ್ಟ ಸಂಗತಿಗಳನ್ನು ನನಗೆ ಹೇಳಿ, ಪರಿಸ್ಥಿತಿಯನ್ನು ನೀವು ನನಗೆ ವಿರೋಧವಾಗಿ ಒಪ್ಪಂದ ಮಾಡಿಕೊಂಡಿದ್ದೀರಿ, ಬದಲಾವಣೆಯನ್ನು ನಿರೀಕ್ಷಿಸುವಂತೆ. ಆದ್ದರಿಂದ ಕನಸನ್ನು ನನಗೆ ಹೇಳಲೇಬೇಕು. ಆಗ ಅದನ್ನು ವ್ಯಾಖ್ಯಾನ ಮಾಡಿ, ವಿವರಿಸುವಿರೆಂದು ನಾನು ತಿಳಿಯುವೆನು,” ಎಂದನು.


ಅಧಿಕಾರಿಯು ನಿನಗೆ ವಿರುದ್ಧವಾಗಿ ಸಿಟ್ಟುಗೊಂಡರೆ, ನಿನ್ನ ಉದ್ಯೋಗವನ್ನು ಬಿಟ್ಟುಬಿಡಬೇಡ. ಏಕೆಂದರೆ ತಾಳ್ಮೆಯು ದೊಡ್ಡ ಅಪರಾಧಗಳನ್ನು ಶಾಂತಪಡಿಸುತ್ತದೆ.


ಆಗ ಅರಸನು ಉತ್ತರವಾಗಿ, “ನಾನು ಇದನ್ನು ದೃಢವಾಗಿ ನಿರ್ಧರಿಸಿದ್ದೇನೆಂದು ಹೇಳಿದ್ದರಿಂದ ನೀವು ಸಮಯ ಉಳಿಸಿಕೊಳ್ಳುವುದಕ್ಕಾಗಿ ಪ್ರಯತ್ನಿಸುತ್ತಿದ್ದೀರೆಂದು ನನಗೆ ನಿಶ್ಚಯವಾಗಿದೆ.


ಆಗ ಮಂತ್ರಗಾರರು, ಜೋತಿಷ್ಯರು, ಪಂಡಿತರು, ಶಕುನಗಾರರು ಒಳಗೆ ಬಂದರು. ನಾನು ಕನಸನ್ನು ಅವರಿಗೆ ತಿಳಿಸಿದೆನು. ಆದರೆ ಅವರು ಅದರ ಅರ್ಥವನ್ನು ನನಗೆ ತಿಳಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು