Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 3:28 - ಕನ್ನಡ ಸಮಕಾಲಿಕ ಅನುವಾದ

28 ನೆಬೂಕದ್ನೆಚ್ಚರನು ಮಾತನಾಡಿ, “ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬುವರ ದೇವರಿಗೆ ಸ್ತೋತ್ರವಾಗಲಿ. ಅವರು ತಮ್ಮ ದೂತನನ್ನು ಕಳುಹಿಸಿ, ತಮ್ಮ ಸೇವಕರನ್ನು ರಕ್ಷಿಸಿದ್ದಾರೆ. ಅವರು ದೇವರಲ್ಲಿ ನಂಬಿಕೆ ಇಟ್ಟರು. ಅರಸನ ಆಜ್ಞೆಯನ್ನು ಮೀರಿದರು. ಸ್ವಂತ ದೇವರನ್ನೇ ಹೊರತು ಬೇರೆ ಯಾವ ದೇವರನ್ನೂ ಸೇವಿಸದೆ, ಆರಾಧಿಸದೆ ಇರುವ ಹಾಗೆ ತಮ್ಮ ಪ್ರಾಣಗಳನ್ನು ಕೊಡಲೂ ಸಿದ್ಧರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಆಗ ನೆಬೂಕದ್ನೆಚ್ಚರನು, “ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರ ದೇವರಿಗೆ ಸ್ತೋತ್ರವಾಗಲಿ! ಆತನು ತನ್ನ ದೂತನನ್ನು ಕಳುಹಿಸಿ ತನ್ನಲ್ಲಿ ಭರವಸವಿಟ್ಟು ರಾಜಾಜ್ಞೆಯನ್ನು ಜಯಿಸಿ ತನ್ನನ್ನೇ ಹೊರತು ಇನ್ನಾವ ದೇವರನ್ನೂ ಸೇವಿಸಿ ಪೂಜಿಸಬಾರದೆಂದು ಸ್ವದೇಹಗಳನ್ನು ಮರಣಕ್ಕೆ ಒಪ್ಪಿಸಿದ ತನ್ನ ಸೇವಕರನ್ನು ಉದ್ಧರಿಸಿದ್ದಾನಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಆಗ ನೆಬೂಕದ್ನೆಚ್ಚರನು, “ಶದ್ರಕ್, ಮೇಶಕ್ ಹಾಗು ಅಬೇದ್‍ನೆಗೋ ಎಂಬುವರ ದೇವರಿಗೆ ಸ್ತೋತ್ರವಾಗಲಿ! ಆತ ತನ್ನ ದೂತರನ್ನು ಕಳಿಸಿ ತನ್ನಲ್ಲಿ ವಿಶ್ವಾಸವಿಟ್ಟ ಇವರನ್ನು ರಕ್ಷಿಸಿದ್ದಾನೆ. ಇವರೋ ರಾಜಾಜ್ಞೆಯನ್ನೂ ಮೀರಿ ತಮ್ಮ ದೇವರನ್ನೇ ಹೊರತು ಇನ್ನಾವ ದೇವರನ್ನೂ ಪೂಜಿಸಿ ಆರಾಧಿಸಬಾರದೆಂದು ಸ್ವಂತ ದೇಹಗಳನ್ನೇ ಸಾವಿಗೊಪ್ಪಿಸಿದಂಥ ಭಕ್ತರು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಆಗ ನೆಬೂಕದ್ನೆಚ್ಚರನು - ಶದ್ರಕ್ ಮೇಶಕ್ ಅಬೇದ್‍ನೆಗೋ ಎಂಬವರ ದೇವರಿಗೆ ಸ್ತೋತ್ರವಾಗಲಿ! ಆತನು ತನ್ನ ದೂತನನ್ನು ಕಳುಹಿಸಿ ತನ್ನಲ್ಲಿ ಭರವಸವಿಟ್ಟು ರಾಜಾಜ್ಞೆಯನ್ನು ಜಯಿಸಿ ತನ್ನನ್ನೇ ಹೊರತು ಇನ್ನಾವ ದೇವರನ್ನೂ ಸೇವಿಸಿ ಪೂಜಿಸಬಾರದೆಂದು ಸ್ವದೇಹಗಳನ್ನು ಮರಣಕ್ಕೆ ಒಪ್ಪಿಸಿದ ತನ್ನ ಸೇವಕರನ್ನು ಉದ್ಧರಿಸಿದ್ದಾನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಆಗ ನೆಬೂಕದ್ನೆಚ್ಚರನು, “ಶದ್ರಕ್, ಮೇಶಕ್, ಅಬೇದ್‌ನೆಗೋ ಇವರುಗಳ ದೇವರಿಗೆ ಸ್ತೋತ್ರವಾಗಲಿ. ಅವರ ದೇವರು ತನ್ನ ದೂತನನ್ನು ಕಳುಹಿಸಿ ತನ್ನ ಸೇವಕರನ್ನು ಬೆಂಕಿಯಿಂದ ರಕ್ಷಿಸಿದ್ದಾನೆ. ಈ ಮೂರು ಜನರು ತಮ್ಮ ದೇವರ ಮೇಲೆ ವಿಶ್ವಾಸವಿಟ್ಟರು. ಅವರು ನನ್ನ ಆಜ್ಞೆಯನ್ನು ಪಾಲಿಸಲು ಒಪ್ಪಲಿಲ್ಲ. ಬೇರೆ ಯಾವ ದೇವರನ್ನೂ ಪೂಜಿಸುವುದಕ್ಕೆ ಅಥವಾ ಸೇವಿಸುವುದಕ್ಕೆ ಬದಲಾಗಿ ಸಾಯಲು ಅವರು ಸಿದ್ಧರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 3:28
45 ತಿಳಿವುಗಳ ಹೋಲಿಕೆ  

ನೀನು ಅವುಗಳಿಗೆ ಅಡ್ಡ ಬೀಳಬಾರದು ಮತ್ತು ಆರಾಧಿಸಲೂಬಾರದು. ಏಕೆಂದರೆ ನಿನ್ನ ದೇವರಾದ ನಾನು, ನನಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬರಿಗೆ ಸಲ್ಲಗೊಡಿಸದ ಸ್ವಾಮ್ಯಾಸಕ್ತನಾದ ಯೆಹೋವ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆತಾಯಿಗಳ ಅಪರಾಧವನ್ನು ಮಕ್ಕಳ ಮೇಲೆಯೂ ಮೂರನೆಯ ನಾಲ್ಕನೆಯ ತಲೆಗಳವರೆಗೂ ಬರಮಾಡುವೆನು.


ಅವರು ಮರಣದವರೆಗೆ ತಮ್ಮ ಪ್ರಾಣವನ್ನು ಪ್ರೀತಿಸದೆ, ಕುರಿಮರಿಯಾಗಿರುವವರ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ ಅವನನ್ನು ಜಯಿಸಿದರು.


ಆದ್ದರಿಂದ, ಪ್ರಿಯರೇ ದೇವರ ಕರುಣೆಯಿಂದ ಬೇಡಿಕೊಳ್ಳುವುದೇನೆಂದರೆ, ನೀವು ನಿಮ್ಮ ದೇಹಗಳನ್ನು ದೇವರಿಗೆ ಪರಿಶುದ್ಧವೂ ಮೆಚ್ಚುಗೆಯೂ ಆಗಿರುವ ಸಜೀವ ಯಜ್ಞವಾಗಿ ಸಮರ್ಪಿಸಿರಿ. ಇದೇ ನಿಮ್ಮ ವಿವೇಕ ಪೂರ್ವಕವಾದ ಆರಾಧನೆಯು.


ಯೆಹೋವ ದೇವರು ತಮಗೆ ಭಯಪಡುವವರಲ್ಲಿ ಆನಂದಿಸುತ್ತಾರೆ, ತಮ್ಮ ಒಡಂಬಡಿಕೆಯ ಪ್ರೀತಿಯನ್ನು ಎದುರು ನೋಡುವವರಲ್ಲಿ ಹರ್ಷಿಸುತ್ತಾರೆ.


ಆದರೆ ರಾತ್ರಿಯಲ್ಲಿ ಕರ್ತದೇವರ ದೂತನೊಬ್ಬನು ಸೆರೆಮೆನೆಯ ದ್ವಾರಗಳನ್ನು ತೆರೆದು ಅವರನ್ನು ಹೊರಗೆ ನಡೆಸಿಕೊಂಡು ಬಂದು,


ಅರಸನು ಅವರಿಗೆ ಉತ್ತರವಾಗಿ, “ಇಗೋ, ಕಟ್ಟಿಲ್ಲದ ನಾಲ್ಕು ಮನುಷ್ಯರು ಬೆಂಕಿಯಲ್ಲಿ ನಡೆಯುತ್ತಿರುವುದನ್ನು ನೋಡುತ್ತೇನೆ. ಅವರಿಗೆ ಯಾವ ಹಾನಿಯೂ ಇಲ್ಲ. ಅಲ್ಲದೆ ನಾಲ್ಕನೆಯವರ ರೂಪವು ದೇವಪುತ್ರನ ಹಾಗಿದೆ,” ಎಂದು ಹೇಳಿದನು.


ಯೇಸು ಅವನಿಗೆ, “ಸೈತಾನನೇ, ತೊಲಗು. ಏಕೆಂದರೆ, ‘ನಿನ್ನ ಕರ್ತದೇವರನ್ನು ಆರಾಧಿಸಿ, ಅವರಿಗೆ ಮಾತ್ರವೇ ಸೇವೆ ಸಲ್ಲಿಸಬೇಕು,’ ಎಂದು ಪವಿತ್ರ ವೇದದಲ್ಲಿ ಬರೆದಿದೆ,” ಎಂದರು.


ಅರಸನು ದಾನಿಯೇಲನಿಗೆ ಉತ್ತರವಾಗಿ, “ನೀನು ಈ ರಹಸ್ಯವನ್ನು ಪ್ರಕಟಮಾಡಲು ಸಮರ್ಥನಾದ್ದರಿಂದ ನಿಶ್ಚಯವಾಗಿ ನಿಮ್ಮ ದೇವರು ದೇವರುಗಳಿಗೆ ದೇವರಾಗಿಯೂ, ಅರಸುಗಳ ಒಡೆಯರಾಗಿಯೂ, ರಹಸ್ಯಗಳನ್ನು ಪ್ರಕಟ ಮಾಡುವವರಾಗಿಯೂ ಇದ್ದಾರೆ,” ಎಂದನು.


ಜನರೇ, ಎಲ್ಲಾ ಕಾಲದಲ್ಲಿಯೂ ದೇವರಲ್ಲಿ ಭರವಸೆ ಇಡಿರಿ. ನಿಮ್ಮ ಹೃದಯವನ್ನು ದೇವರ ಮುಂದೆ ಒಯ್ಯಿರಿ. ದೇವರು ನಮಗೆ ಆಶ್ರಯವಾಗಿದ್ದಾರೆ.


ಹೇಗೆಂದರೆ, ನಾನು ಯಾವ ವಿಷಯದಲ್ಲೂ ನಾಚಿಕೆಪಡದೆ ಎಂದಿನಂತೆ ಈಗಲೂ ಪೂರ್ಣ ಧೈರ್ಯದಿಂದಿರುವಂತೆಯೇ ಬದುಕಿದರೂ ಸತ್ತರೂ ನನ್ನ ದೇಹದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂಬುದೇ ನನ್ನ ಬಯಕೆಯೂ ನಿರೀಕ್ಷೆಯೂ ಆಗಿದೆ.


ಆಗ ಯೆಹೋವ ದೇವರ ದೂತನು ಹೊರಟುಬಂದು ಅಸ್ಸೀರಿಯದ ದಂಡಿನಲ್ಲಿದ್ದ 1,85,000 ಜನರನ್ನು ಸಂಹರಿಸಿದನು. ಉದಯದಲ್ಲಿ ಜನರು ಎದ್ದಾಗ, ಇಗೋ, ಅವರೆಲ್ಲರು ಸತ್ತು ಹೆಣಗಳಾಗಿದ್ದರು.


ಆಗ ಯೆಹೋವ ದೇವರು ತಮ್ಮ ದೂತನನ್ನು ಕಳುಹಿಸಿದರು. ಅವನು ಅಸ್ಸೀರಿಯದ ಅರಸನ ದಂಡಿನಲ್ಲಿರುವ ಸಮಸ್ತ ಪರಾಕ್ರಮಶಾಲಿಗಳನ್ನೂ, ನಾಯಕರನ್ನೂ, ಅಧಿಪತಿಗಳನ್ನೂ ನಿರ್ಮೂಲ ಮಾಡಿದನು. ಹೀಗೆ ಇವನು ನಾಚಿಕೆಯಿಂದ ತನ್ನ ದೇಶಕ್ಕೆ ಹಿಂದಿರುಗಿದನು. ಅವನು ತನ್ನ ದೇವರ ಆಲಯದಲ್ಲಿ ಪ್ರವೇಶಿಸಿದಾಗ, ಅವನ ಹೊಟ್ಟೆಯಲ್ಲಿ ಹುಟ್ಟಿದವರು ಅವನನ್ನು ಖಡ್ಗದಿಂದ ಕೊಂದುಹಾಕಿದರು.


ಅವರು ಉದಯದಲ್ಲಿ ಎದ್ದು ತೆಕೋವದ ಮರುಭೂಮಿಗೆ ಹೊರಟರು. ಅವರು ಹೊರಟು ಹೋಗುತ್ತಿರುವಾಗ ಯೆಹೋಷಾಫಾಟನು ನಿಂತುಕೊಂಡು, “ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ನನ್ನ ಮಾತನ್ನು ಕೇಳಿರಿ. ನಿಮ್ಮ ದೇವರಾದ ಯೆಹೋವ ದೇವರನ್ನು ನಂಬಿ ಸ್ಥಿರವಾಗಿರಿ. ದೇವರ ಪ್ರವಾದಿಗಳನ್ನು ನಂಬಿರಿ, ಆಗ ಜಯ ಹೊಂದುವಿರಿ,” ಎಂದನು.


ಕ್ರಿಸ್ತ ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿ ಅವರಿಗೆ ಮಹಿಮೆಯನ್ನು ಕೊಟ್ಟ ದೇವರಲ್ಲಿ ನೀವು ಕ್ರಿಸ್ತ ಯೇಸುವಿನ ಮೂಲಕ ವಿಶ್ವಾಸವಿಟ್ಟಿದ್ದೀರಿ. ಹೀಗಿರಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿರಲಿ.


ಕೆಲವರ ಮೇಲೆ ಕಲ್ಲೆಸೆದರು, ಕೆಲವರನ್ನು ಗರಗಸದಿಂದ ಎರಡು ಭಾಗವಾಗಿ ಕೊಯ್ದು ಸಾಯಿಸಿದರು, ಕೆಲವರನ್ನು ಶೋಧಿಸಿದರು, ಕೆಲವರನ್ನು ಕತ್ತಿಯಿಂದ ಕೊಂದರು, ಕೆಲವರು ಕೊರತೆ, ಹಿಂಸೆ, ಬಾಧೆ ಇವುಗಳನ್ನು ಅನುಭವಿಸುವವರಾಗಿದ್ದು ಕುರಿಮೇಕೆಗಳ ಚರ್ಮಗಳನ್ನು ಉಟ್ಟುಕೊಂಡವರಾಗಿ


ಈ ದೇವದೂತರೆಲ್ಲರೂ ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿಸಲಾದ ಸೇವೆಯ ಆತ್ಮಗಳು ಅಲ್ಲವೇ?


ಆದರೆ ಪೇತ್ರ ಮತ್ತು ಯೋಹಾನರು, “ದೇವರಿಗಿಂತ ಹೆಚ್ಚಾಗಿ ನಿಮಗೆ ಕಿವಿಗೊಡುವುದು ದೇವರ ದೃಷ್ಟಿಯಲ್ಲಿ ಸರಿಯಾದದ್ದೋ? ಎಂಬುದರ ಬಗ್ಗೆ ನೀವೇ ತೀರ್ಮಾನ ಮಾಡಿಕೊಳ್ಳಿರಿ.


“ನನ್ನ ರಾಜ್ಯದ ಪ್ರತಿಯೊಬ್ಬ ಮನುಷ್ಯನು ದಾನಿಯೇಲನ ದೇವರಿಗೆ ಭಯಭಕ್ತಿಯಿಂದ ನಡೆದುಕೊಳ್ಳಬೇಕೆಂಬ ನಿರ್ಣಯ ಹೊರಡಿಸಿದ್ದೇನೆ. “ಅವರೇ ಜೀವವುಳ್ಳ ದೇವರಾಗಿದ್ದು, ಎಂದೆಂದಿಗೂ ಸ್ಥಿರವಾಗಿರುವವರಾಗಿದ್ದಾರೆ. ಅವರ ರಾಜ್ಯವು ನಾಶವಾಗದೆ, ಅವರ ಆಳ್ವಿಕೆ ಶಾಶ್ವತವಾಗಿ ನಿಲ್ಲುವುದು.


ಆ ಸಮಯದ ಅಂತ್ಯದಲ್ಲಿ ನೆಬೂಕದ್ನೆಚ್ಚರನಾದ ನಾನು ನನ್ನ ಕಣ್ಣುಗಳನ್ನು ಪರಲೋಕದ ಕಡೆಗೆ ಎತ್ತಿದೆನು. ನನ್ನ ತಿಳುವಳಿಕೆ ನನಗೆ ತಿರುಗಿ ಬಂತು. ಆಗ ನಾನು ಮಹೋನ್ನತರನ್ನು ಕೊಂಡಾಡಿದೆನು. ಸದಾಕಾಲಕ್ಕೂ ಇರುವವರಾದ ಅವರನ್ನು ಗೌರವಿಸಿ, ಮಹಿಮೆ ಪಡಿಸಿದೆನು. ಅವರ ಆಡಳಿತವು ನಿತ್ಯವಾದ ಆಡಳಿತವಾಗಿದೆ. ಅವರ ರಾಜ್ಯವು ತಲತಲಾಂತರಕ್ಕೂ ಇರುವುದು.


ಯೆಹೋವ ದೇವರು ತಮ್ಮ ಸೇವಕರ ಪ್ರಾಣವನ್ನು ವಿಮೋಚಿಸುತ್ತಾರೆ; ದೇವರನ್ನು ಆಶ್ರಯಿಸುವವರು ಯಾರೂ ಶಿಕ್ಷೆಗೆ ಒಳಗಾಗುವುದಿಲ್ಲ.


ದೇವರಲ್ಲಿ ನಮ್ಮ ಹೃದಯವು ಸಂತೋಷಿಸುತ್ತದೆ; ನಾವು ಅವರ ಪರಿಶುದ್ಧ ಹೆಸರಿನಲ್ಲಿ ಭರವಸೆ ಇಟ್ಟಿದ್ದೇವೆ.


ಯೆಹೋವ ದೇವರ ಕಣ್ಣು ತಮಗೆ ಭಯಪಡುವವರ ಮೇಲಿರುತ್ತದೆ, ಅವರ ಒಡಂಬಡಿಕೆಯ ಪ್ರೀತಿಯನ್ನು ಎದುರು ನೋಡುವವರ ಮೇಲೆಯೂ ಇರುತ್ತೆ.


ನಾನು ಕೊಡುವ ಅಪ್ಪಣೆ ಏನೆಂದರೆ, ಯಾವನಾದರೂ ಈ ನನ್ನ ಆಜ್ಞೆಯನ್ನು ಬದಲು ಮಾಡಿದರೆ, ಅವನ ಮನೆಯಿಂದ ಒಂದು ತೊಲೆಯನ್ನು ತೆಗೆದು ಅದರಿಂದಲೇ ಅವನನ್ನು ಗಲ್ಲಿಗೆ ಏರಿಸಬೇಕು. ಅವನ ಮನೆಯನ್ನು ಇದರ ನಿಮಿತ್ತ ತಿಪ್ಪೆಯನ್ನಾಗಿ ಮಾಡಿಬಿಡಬೇಕು.


ನಿಮ್ಮಲ್ಲಿ ಯಾರು ಅವರ ಪ್ರಜೆಗಳಾಗಿರುತ್ತೀರೋ, ಅಂಥವರು ಯೆಹೂದ, ಯೆರೂಸಲೇಮಿಗೆ ಹೋಗಿ, ಅಲ್ಲಿ ವಾಸಿಸುತ್ತಿರುವ ಇಸ್ರಾಯೇಲ್ ದೇವರಾದ ಯೆಹೋವ ದೇವರಿಗೆ ಒಂದು ದೇವಾಲಯವನ್ನು ಕಟ್ಟಲಿ, ಅವರ ಸಂಗಡ ಅವರ ದೇವರು ಇರಲಿ!


ಇವರು ಅವರಿಗೆ ವಿರೋಧವಾಗಿ ಸಹಾಯ ಹೊಂದಿದ್ದರಿಂದ, ಹಗ್ರೀಯರೂ, ಅವರ ಸಂಗಡ ಕೂಡಿದ್ದವರೆಲ್ಲರೂ ಇವರ ಕೈವಶವಾದರು. ಅವರು ಯುದ್ಧದಲ್ಲಿ ದೇವರಿಗೆ ಮೊರೆಯಿಟ್ಟು, ಅವರಲ್ಲಿ ಭರವಸೆ ಇಟ್ಟಿದ್ದರಿಂದ, ದೇವರು ಅವರ ಮನವಿಯನ್ನು ಕೇಳಿದರು.


ನೋಹನು ಮತ್ತೆ ಹೇಳಿದ್ದು, “ಶೇಮನ ದೇವರಾದ ಯೆಹೋವ ಸ್ತುತಿಹೊಂದಲಿ. ಕಾನಾನನು ಶೇಮನಿಗೆ ದಾಸನಾಗಿರಲಿ.


ದೇವರ ದೂತರೇ, ಅವರ ಮಾತನ್ನು ಕೇಳಿ, ಅವರಿಗೆ ವಿಧೇಯರಾಗುವ ಪರಾಕ್ರಮಿಗಳೇ, ಯೆಹೋವ ದೇವರನ್ನು ಸ್ತುತಿಸಿರಿ.


ನಾನು ನನ್ನ ಎಲ್ಲಾ ಆಸ್ತಿಯನ್ನು ದಾನಮಾಡಿದರೂ, ನಾನು ಹೊಗಳಿಕೊಳ್ಳುವಂತೆ ನನ್ನ ದೇಹವನ್ನು ಸುಡುವುದಕ್ಕಾಗಿ ಒಪ್ಪಿಸಿಕೊಟ್ಟರೂ ಪ್ರೀತಿಯು ನನಗಿಲ್ಲದಿದ್ದರೆ, ನನಗೇನೂ ಪ್ರಯೋಜನವಾಗುವುದಿಲ್ಲ.


ನಿಜವಾಗಿಯೂ ದೇವರೇ ನನಗೆ ರಕ್ಷಣೆಯು, ನಾನು ಭರವಸವಿಡುವೆನು ಮತ್ತು ಭಯಪಡೆನು. ಕರ್ತರಾದ ಯೆಹೋವ ದೇವರೇ ನನ್ನ ಬಲವೂ ನನ್ನ ಕೀರ್ತನೆಯೂ, ಅವರೇ ನನಗೆ ರಕ್ಷಣೆಯೂ ಆಗಿದ್ದಾರೆ.”


ನಿಮ್ಮೊಳಗೆ ಯೆಹೋವ ದೇವರಿಗೆ ಭಯಪಟ್ಟು, ಅವರ ಸೇವಕನ ಮಾತನ್ನು ಕೇಳಿ, ಬೆಳಕಿಲ್ಲದೇ ಕತ್ತಲೆಯಲ್ಲಿ ನಡೆಯುವವನು ಯಾರು? ಅವನು ಯೆಹೋವ ದೇವರ ಹೆಸರಿನಲ್ಲಿ ನಂಬಿಕೆ ಇಟ್ಟು, ತನ್ನ ದೇವರ ಮೇಲೆ ಆತುಕೊಳ್ಳಲಿ.


ಆಗ ರಾಜನು ಆಜ್ಞಾಪಿಸಲು, ಅವರು ದಾನಿಯೇಲನನ್ನು ತಂದು ಸಿಂಹದ ಗುಹೆಯಲ್ಲಿ ಹಾಕಿದರು. ಅರಸನು ದಾನಿಯೇಲನಿಗೆ, “ನೀನು ಯಾವಾಗಲೂ ಸೇವಿಸುವ ನಿನ್ನ ದೇವರು ನಿನ್ನನ್ನು ಕಾಪಾಡಲಿ!” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು