Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 3:7 - ಕನ್ನಡ ಸಮಕಾಲಿಕ ಅನುವಾದ

7 ಆದ್ದರಿಂದ ಜನರೆಲ್ಲರು ತುತೂರಿ, ಕೊಳಲು, ತಂಬೂರಿ, ವೀಣೆ, ಕಿನ್ನರಿ, ನಾಗಸ್ವರ ಮೊದಲಾದ ಶಬ್ದವನ್ನು ಕೇಳಿದ ಕೂಡಲೇ, ಎಲ್ಲಾ ಪ್ರಜೆಗಳು ಜನಾಂಗಗಳು ವಿವಿಧ ಭಾಷೆಯವರು ಅಡ್ಡಬಿದ್ದು, ಅರಸನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಆರಾಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆದಕಾರಣ ಅದೇ ಕಾಲದಲ್ಲಿ ಸಮಸ್ತ ಜನಾಂಗ, ಕುಲ, ಭಾಷೆಗಳವರು ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಎಲ್ಲರೂ ಅಡ್ಡಬಿದ್ದು ರಾಜನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಪೂಜಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅಂತೆಯೇ ಸಮಸ್ತ ಜನಾಂಗ-ಕುಲ-ಭಾಷೆಗಳವರು ತುತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಎಲ್ಲರು ಅದೇ ಸಮಯದಲ್ಲಿ ಅಡ್ಡಬಿದ್ದು ರಾಜ ನೆಬೂಕದ್ನೆಚ್ಚರನು ನಿಲ್ಲಿಸಿದ್ದ ಆ ಬಂಗಾರದ ಪ್ರತಿಮೆಯನ್ನು ಆರಾಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆದಕಾರಣ ಅದೇ ಕಾಲದಲ್ಲಿ ಸಮಸ್ತ ಜನಾಂಗ ಕುಲಭಾಷೆಗಳವರು ತುತೂರಿ ಕೊಳಲು ಕಿನ್ನರಿ ತಂಬೂರಿ ವೀಣೆ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಎಲ್ಲರೂ ಅಡ್ಡಬಿದ್ದು ರಾಜನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಪೂಜಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದ್ದರಿಂದ ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಅವರು ಅಡ್ಡಬಿದ್ದು ಬಂಗಾರದ ವಿಗ್ರಹವನ್ನು ಪೂಜಿಸಿದರು. ಅರಸನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ವಿಗ್ರಹವನ್ನು ಎಲ್ಲ ಜನಾಂಗಗಳ, ಭಾಷೆಗಳ ಜನರು ಪೂಜಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 3:7
15 ತಿಳಿವುಗಳ ಹೋಲಿಕೆ  

ಆಗ ಮೃಗವನ್ನು ಸೆರೆಹಿಡಿಯಲಾಯಿತು. ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ, ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಸುಳ್ಳು ಪ್ರವಾದಿ ಸಹ ಅದರ ಜೊತೆಯಲ್ಲಿ ಸೆರೆಸಿಕ್ಕಿದನು. ಇವರಿಬ್ಬರನ್ನೂ ಜೀವಸಹಿತವಾಗಿ ಗಂಧಕದಿಂದ ಉರಿಯುವ ಬೆಂಕಿಯ ಕೆರೆಯಲ್ಲಿ ಹಾಕಲಾಯಿತು.


ನೀನು ಕಂಡ ಮೃಗವು ಒಮ್ಮೆ ಇತ್ತು, ಈಗ ಇಲ್ಲ, ಪಾತಾಳದೊಳಗಿನಿಂದ ಮೇಲೆ ಬಂದು ವಿನಾಶಕ್ಕೆ ಹೊರಡಲಿದೆ. ಲೋಕದ ಸೃಷ್ಟಿಯಾದ ದಿನದಿಂದ ಯಾರ ಯಾರ ಹೆಸರುಗಳು ಜೀವಗ್ರಂಥದಲ್ಲಿ ಬರೆದಿರುವುದಿಲ್ಲವೋ, ಆ ಭೂನಿವಾಸಿಗಳು ಮೃಗವನ್ನು ನೋಡಿ ಆ ಮೃಗವು ಹಿಂದೆ ಇತ್ತು, ಈಗ ಇಲ್ಲ, ಇನ್ನು ಮೇಲೆ ಬರಲಿದೆ ಎಂದು ಆಶ್ಚರ್ಯಗೊಳ್ಳುವರು.


ಆ ಮೊದಲನೆಯ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡುವ ಅಧಿಕಾರವನ್ನು ಕೊಡಲಾಗಿದ್ದರಿಂದ ಭೂನಿವಾಸಿಗಳನ್ನು ಮೋಸಗೊಳಿಸುತ್ತದೆ. ಭೂಮಿಯ ಮೇಲೆ ವಾಸಿಸುವವರು, ಕತ್ತಿಯಿಂದ ಗಾಯಹೊಂದಿ, ಸಾಯದೆ ಬದುಕಿದ ಮೃಗದ ವಿಗ್ರಹವನ್ನು ಮಾಡಿಸಿಕೊಳ್ಳಬೇಕೆಂದು ಹೇಳುತ್ತದೆ.


ಜಗದುತ್ಪತ್ತಿಗೆ ಮೊದಲೇ ಕೊಯ್ಯಲಾದ ಕುರಿಮರಿಯವರ ಜೀವಗ್ರಂಥದಲ್ಲಿ ಯಾರ‍್ಯಾರ ಹೆಸರುಗಳು ಬರೆದಿರುವುದಿಲ್ಲವೋ, ಆ ಭೂನಿವಾಸಿಗಳೆಲ್ಲರೂ ಆ ಮೃಗವನ್ನು ಆರಾಧಿಸುವರು.


ಮೃಗದ ತಲೆಗಳಲ್ಲಿ ಒಂದು ಮರಣಾಂತಿಕ ಗಾಯ ಹೊಂದಿದಂತಿರುವುದನ್ನು ನೋಡಿದೆನು. ಆದರೆ ಆ ಮರಣಕರವಾದ ಗಾಯವು ವಾಸಿಯಾಯಿತು. ಭೂಲೋಕವೆಲ್ಲಾ ಆ ಮೃಗವನ್ನು ಕಾಣುತ್ತಾ ಆಶ್ಚರ್ಯಪಟ್ಟಿತು.


ಭೂಲೋಕದವರನ್ನೆಲ್ಲಾ ವಂಚಿಸುತ್ತಿದ್ದ ಆ ಮಹಾ ಘಟಸರ್ಪನು ಎಂದರೆ ಪಿಶಾಚನೆಂತಲೂ ಸೈತಾನನೆಂತಲೂ ಕರೆಯಲಾದ ಪುರಾತನ ಸರ್ಪವನ್ನು ಭೂಮಿಗೆ ತಳ್ಳಲಾಯಿತು. ಅವನ ದೂತರನ್ನೂ ಅವನೊಂದಿಗೆ ತಳ್ಳಲಾಯಿತು.


ನಾವು ದೇವರ ಮಕ್ಕಳೆಂದೂ ಲೋಕವೆಲ್ಲವು ಕೆಡುಕನ ನಿಯಂತ್ರಣದಲ್ಲಿ ಇದೆ ಎಂದೂ ನಮಗೆ ಗೊತ್ತಿದೆ.


ಬಾಬಿಲೋನ್ ಯೆಹೋವ ದೇವರ ಕೈಯಲ್ಲಿ ಭೂಮಿಗೆಲ್ಲಾ ಅಮಲೇರಿಸಿದ ಚಿನ್ನದ ಪಾತ್ರೆಯಾಗಿತ್ತು; ಜನಾಂಗಗಳು ಅದರ ದ್ರಾಕ್ಷಾರಸವನ್ನು ಕುಡಿದವು; ಆದ್ದರಿಂದ ಜನಾಂಗಗಳು ಹುಚ್ಚರಾದರು.


ದೇವರು ಹಿಂದಿನ ಕಾಲದಲ್ಲಿ, ಆಯಾ ದೇಶಗಳು ತಮ್ಮ ತಮ್ಮ ಮಾರ್ಗಗಳಲ್ಲಿಯೇ ನಡೆಯುವಂತೆ ಬಿಟ್ಟುಬಿಟ್ಟರು.


ಆಗ ಅರಸನಾದ ನೆಬೂಕದ್ನೆಚ್ಚರನು ಅಡ್ಡಬಿದ್ದು, ದಾನಿಯೇಲನಿಗೆ ನಮಸ್ಕರಿಸಿ, ಅವನಿಗೆ ಕಾಣಿಕೆಗಳನ್ನೂ, ಸುಗಂಧ ದ್ರವ್ಯವನ್ನೂ ಅರ್ಪಿಸಬೇಕೆಂದೂ ಆಜ್ಞಾಪಿಸಿದನು.


ಆಗ ಘೋಷಣೆ ಮಾಡುವವರು ಗಟ್ಟಿಯಾಗಿ ಕೂಗಿ, “ಪ್ರಜೆಗಳೇ, ಜನಾಂಗಗಳೇ, ವಿವಿಧ ಭಾಷೆಯವರೇ


ನೀವು ಕೊಂಬು, ಪಿಳ್ಳಂಗೋವಿ, ತಂಬೂರಿ, ವೀಣೆ, ಕಿನ್ನರಿ, ನಾಗಸ್ವರ ಮೊದಲಾದ ವಾದ್ಯಗಳ ಶಬ್ದವನ್ನು ಕೇಳಿದ ಕೂಡಲೇ, ಅರಸನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ಬಂಗಾರದ ಪ್ರತಿಮೆಯ ಮುಂದೆ ಅಡ್ಡಬಿದ್ದು ಆರಾಧಿಸಬೇಕು.


ಯಾರು ಅಡ್ಡಬೀಳದೆ, ನಮಸ್ಕರಿಸದೆ ಇರುವರೋ ಅಂಥವರನ್ನು ಅದೇ ಗಳಿಗೆಯಲ್ಲಿ ಉರಿಯುವ ಬೆಂಕಿಯ ಕುಲುಮೆಯಲ್ಲಿ ಹಾಕಲಾಗುವುದು. ಇದು ರಾಜಾಜ್ಞೆ,” ಎಂದನು.


ಆ ಸಮಯದಲ್ಲಿ ಪಂಡಿತರು ಯೆಹೂದ್ಯರ ಮೇಲೆ ದೂರು ಹೊರಿಸಲು ಅರಸನ ಸನ್ನಿಧಿಗೆ ಬಂದು


ತುತೂರಿ, ಕೊಳಲು, ತಂಬೂರಿ, ವೀಣೆ, ಕಿನ್ನರಿ ಮತ್ತು ನಾಗಸ್ವರ ಮುಂತಾದ ಎಲ್ಲಾ ವಿಧವಾದ ವಾದ್ಯಗಳ ಶಬ್ದವನ್ನು ಕೇಳಿದಾಗ ಪ್ರತಿಯೊಬ್ಬ ಮನುಷ್ಯನು ಅಡ್ಡಬಿದ್ದು ಬಂಗಾರದ ಪ್ರತಿಮೆಯನ್ನು ಆರಾಧಿಸಬೇಕೆಂದೂ ಅರಸನು ಆಜ್ಞೆಯನ್ನು ಹೊರಡಿಸಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು