Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 4:24 - ಕನ್ನಡ ಸಮಕಾಲಿಕ ಅನುವಾದ

24 “ಅರಸನೇ, ಇದರ ವ್ಯಾಖ್ಯಾನವು ಏನೆಂದರೆ, ನನ್ನ ಒಡೆಯನಾದ ಅರಸನ ಮೇಲೆ ಬಂದಂಥ ಮಹೋನ್ನತನ ನಿರ್ಣಯವು ಹೀಗಿದೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 “ರಾಜನೇ ಇದರ ತಾತ್ಪರ್ಯವೇನೆಂದರೆ, ಎನ್ನೊಡೆಯನಾದ ಅರಸನಿಗೆ ಉಂಟಾಗಿರುವ ಪರಾತ್ಪರನಾದ ದೇವರ ತೀರ್ಪು ಹೀಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 “ರಾಜರೇ, ಕನಸಿನ ತಾತ್ಪರ್ಯ ಇದು: ನನ್ನೊಡೆಯರಾದ ಅರಸರಿಗೆ ಉಂಟಾಗಲಿರುವ ಪರಾತ್ಪರ ದೇವರ ತೀರ್ಪು ಹೀಗಿದೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ರಾಜನೇ, ಇದರ ತಾತ್ಪರ್ಯವೇನಂದರೆ, ಎನ್ನೊಡೆಯನಾದ ಅರಸನಿಗೆ ಉಂಟಾಗಿರುವ ಪರಾತ್ಪರನ ತೀರ್ಪು ಹೀಗಿದೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 “ಕನಸಿನ ಅರ್ಥವು ಹೀಗಿದೆ: ಅರಸನೇ, ಮಹೋನ್ನತನಾದ ದೇವರು ನನ್ನ ಒಡೆಯನಾದ ಅರಸನಿಗೆ ಹೀಗಾಗಬೇಕೆಂದು ಆಜ್ಞಾಪಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 4:24
14 ತಿಳಿವುಗಳ ಹೋಲಿಕೆ  

ದೇವರು ಅಧಿಪತಿಗಳಿಗೆ ಶಿಸ್ತನ್ನು ನೀಡಿ, ಅವರನ್ನು ದಾರಿಯಿಲ್ಲದ ಕಾಡಿನಲ್ಲಿ ಅಲೆಯುವಂತೆ ಮಾಡಿದರು.


“ ‘ಈ ತೀರ್ಮಾನವು ದೂತರಿಂದ ಪ್ರಕಟವಾಯಿತು, ಪರಿಶುದ್ಧರು ಅಂತಿಮ ನಿರ್ಣಯವನ್ನು ಘೋಷಿಸುವರು, ಮಹೋನ್ನತರು ಜನರ ರಾಜ್ಯಗಳ ಮೇಲೆ ಸರ್ವಾಧಿಕಾರಿಯಾಗಿರುವರೆಂದೂ, ರಾಜ್ಯಗಳನ್ನು ತಮ್ಮ ಮನಸ್ಸಿಗೆ ಬಂದವರಿಗೆ ಕೊಡುವರೆಂದೂ, ಅವುಗಳ ಮೇಲೆ ಕೀಳಾದವರನ್ನು ನೇಮಿಸುವರೆಂದೂ ಇದರಿಂದ ಜೀವಿತರು ತಿಳಿದುಕೊಳ್ಳುವರು.’


ಗರ್ವದ ಸಕಲ ವೈಭವವನ್ನು ಹೊಲಸು ಮಾಡಬೇಕೆಂತಲೂ, ಭೂಮಿಯಲ್ಲಿ ಘನವುಳ್ಳವರೆಲ್ಲರನ್ನು ಅವಮಾನಪಡಿಸಬೇಕೆಂತಲೂ ಸೇನಾಧೀಶ್ವರ ಯೆಹೋವ ದೇವರೇ ಹೀಗೆ ಸಂಕಲ್ಪಿಸಿದ್ದಾರೆ.


ಅವುಗಳನ್ನು ಯುಗ ಯುಗಗಳಿಗೂ ಸ್ಥಾಪಿಸಿದ್ದಾರೆ; ದೇವರು ತೀರ್ಪನ್ನು ಕೊಟ್ಟಿದ್ದಾರೆ, ಅದು ಮೀರಿ ಹೋಗುವುದಿಲ್ಲ.


ನಾನು ಯೆಹೋವ ದೇವರ ತೀರ್ಪನ್ನು ಹೀಗೆ ಪ್ರಕಟಿಸುವೆನು: ಅವರು ನನಗೆ ಹೇಳಿದ್ದು, “ನೀನು ನನ್ನ ಪುತ್ರನು; ಇಂದು ನಾನು ನಿನ್ನ ತಂದೆಯಾಗಿದ್ದೇನೆ.


ದುಷ್ಟನಿಗೆ ದೇವರಿಂದ ಬರುವ ಪಾಲೂ, ಅವನಿಗೆ ನೇಮವಾಗಿರುವ ಬಾಧ್ಯತೆಯೂ ಇವೇ.”


ಮಹೋನ್ನತ ದೇವರು ನನ್ನ ವಿಷಯದಲ್ಲಿ ನಡೆಸಿರುವ ಸೂಚಕಕಾರ್ಯಗಳನ್ನೂ, ಅದ್ಭುತಗಳನ್ನೂ ಪ್ರಚುರಪಡಿಸಬೇಕೆಂದು ನನಗೆ ವಿಹಿತವಾಗಿ ತೋರಿ ಬಂದಿದೆ.


ಆಗ ಬೇಲ್ತೆಶಚ್ಚರನೆಂಬ ಹೆಸರುಳ್ಳ ದಾನಿಯೇಲನು ಒಂದು ಗಳಿಗೆ ವಿಸ್ಮಿತನಾಗಿ ತನ್ನ ಆಲೋಚನೆಗಳಲ್ಲಿ ಕಳವಳಗೊಂಡನು. ಆಗ ಅರಸನು ಮಾತನಾಡಿ, “ಬೇಲ್ತೆಶಚ್ಚರನೇ, ಕನಸಾದರೂ, ಅದರ ಅರ್ಥವಾದರೂ ನಿನ್ನನ್ನು ಕಳವಳಪಡಿಸದಿರಲಿ,” ಎಂದನು. ಬೇಲ್ತೆಶಚ್ಚರನು ಉತ್ತರವಾಗಿ, “ನನ್ನ ಒಡೆಯನೇ, ಆ ಕನಸು ನಿನ್ನ ವೈರಿಗಳಿಗೂ, ಅದರ ಅರ್ಥವು ನಿನ್ನ ಶತ್ರುಗಳಿಗೂ ಆಗಲಿ.


ಪ್ರೀತಿ ಮತ್ತು ಸತ್ಯತೆಗಳಿಂದ ಪಾಪಕ್ಕೆ ಪ್ರಾಯಶ್ಚಿತ್ತವಾಗುತ್ತದೆ. ಯೆಹೋವ ದೇವರ ಭಯದ ಮೂಲಕ ಮನುಷ್ಯರು ಕೆಟ್ಟದ್ದರಿಂದ ತೊಲಗುತ್ತಾರೆ.


ಪ್ರೀತಿಯೂ ನಂಬಿಗಸ್ತಿಕೆಯೂ ಅರಸನನ್ನು ಕಾಯುತ್ತವೆ; ಪ್ರೀತಿಯಿಂದಲೇ ಅವನ ಸಿಂಹಾಸನವು ಸ್ಥಿರಗೊಳ್ಳುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು