Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 4:25 - ಕನ್ನಡ ಸಮಕಾಲಿಕ ಅನುವಾದ

25 ನಿನ್ನನ್ನು ಮನುಷ್ಯರೊಳಗಿಂದ ಬಹಿಷ್ಕರಿಸಿ ಬಿಡುವರು. ನಿನ್ನ ನಿವಾಸವು ಕಾಡುಮೃಗಗಳ ಸಂಗಡ ಇರುವುದು. ಪಶುಗಳಂತೆ ನೀನು ಹುಲ್ಲನ್ನು ತಿನ್ನುವೆ. ಆಕಾಶದ ಮಂಜಿನಿಂದ ನಿನ್ನನ್ನು ತೋಯಿಸುವುದು. ಮಹೋನ್ನತರು ಮನುಷ್ಯರ ರಾಜ್ಯವನ್ನು ಆಳುವರೆಂದೂ, ತಮಗೆ ಬೇಕಾದವರಿಗೆ ಅದನ್ನು ಕೊಡುತ್ತಾರೆಂದೂ ನೀನು ತಿಳಿಯುವವರೆಗೂ, ಆ ಏಳು ಕಾಲಗಳು ಕಳೆದುಹೋಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ನೀನು ಮನುಷ್ಯರೊಳಗಿಂದ ತಳ್ಳಲ್ಪಟ್ಟು ಕಾಡು ಮೃಗಗಳೊಂದಿಗೆ ವಾಸಿಸುವಿ, ಎತ್ತುಗಳಂತೆ ಹುಲ್ಲು ಮೇಯುವುದೇ ನಿನಗೆ ಗತಿಯಾಗುವುದು, ಆಕಾಶದ ಇಬ್ಬನಿಯು ನಿನ್ನನ್ನು ತೋಯಿಸುವುದು; ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದನ್ನು ತನಗೆ ಬೇಕಾದವರಿಗೆ ಒಪ್ಪಿಸುತ್ತಾನೆ ಎಂಬುದು ನಿನಗೆ ತಿಳಿದು ಬರುವುದರೊಳಗೆ ಏಳು ವರ್ಷ ಹೀಗೆ ಕಳೆಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ತಾವು ಮಾನವ ಸಮಾಜದಿಂದ ಬಹಿಷ್ಕೃತರಾಗುವಿರಿ. ಕಾಡುಮೃಗಗಳ ನಡುವೆ ವಾಸಮಾಡುವಿರಿ. ದನಕರುಗಳಂತೆ ಹುಲ್ಲು ಮೇಯುವ ಗತಿ ನಿಮ್ಮದಾಗುವುದು. ಆಕಾಶದ ಇಬ್ಬನಿ ನಿಮ್ಮನ್ನು ತೋಯಿಸುವುದು. ಪರಾತ್ಪರ ದೇವರಿಗೆ ಮಾನವರ ರಾಜ್ಯದ ಮೇಲೂ ಅಧಿಕಾರವಿದೆ. ಅದನ್ನು ತಮಗೆ ಬೇಕಾದವರಿಗೆ ಒಪ್ಪಿಸುತ್ತಾರೆ. ಇದು ತಮಗೆ ತಿಳಿದುಬರುವುದರೊಳಗೆ ಏಳು ವರ್ಷ ಕಳೆದಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ನೀನು ಮನುಷ್ಯರೊಳಗಿಂದ ತಳ್ಳಲ್ಪಟ್ಟು ಕಾಡುಮೃಗಗಳೊಂದಿಗೆ ವಾಸಿಸುವಿ, ದನಗಳಂತೆ ಹುಲ್ಲು ಮೇಯುವದೇ ನಿನಗೆ ಗತಿಯಾಗುವದು, ಆಕಾಶದ ಇಬ್ಬನಿಯು ನಿನ್ನನ್ನು ತೋಯಿಸುವದು; ಪರಾತ್ಪರನು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದನ್ನು ತನಗೆ ಬೇಕಾದವರಿಗೆ ಒಪ್ಪಿಸುತ್ತಾನೆ ಎಂಬದು ನಿನಗೆ ತಿಳಿದುಬರುವದರೊಳಗೆ ಏಳು ವರುಷ ನಿನಗೆ ಹೀಗೆ ಕಳೆಯುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ರಾಜನಾದ ನೆಬೂಕದ್ನೆಚ್ಚರನೇ, ನಿನ್ನನ್ನು ಬಲವಂತದಿಂದ ಜನರಿಂದ ದೂರಮಾಡುವರು. ನೀನು ಕಾಡುಪ್ರಾಣಿಗಳೊಂದಿಗೆ ವಾಸಮಾಡುವೆ; ಹಸುಗಳಂತೆ ಹುಲ್ಲು ತಿನ್ನುವೆ; ಇಬ್ಬನಿಯಿಂದ ತೋಯಿಸಿಕೊಳ್ಳುವೆ. ಏಳು ವರ್ಷಗಳು ಕಳೆಯುವವು. ಆಗ ನೀನು ಮಹೋನ್ನತನಾದ ದೇವರು ಮಾನವರ ಸಾಮ್ರಾಜ್ಯದ ಮೇಲೆ ಆಳ್ವಿಕೆ ಮಾಡುತ್ತಾನೆ ಮತ್ತು ತನಗೆ ಬೇಕಾದವರಿಗೆ ರಾಜ್ಯವನ್ನು ಕೊಡುತ್ತಾನೆ ಎಂಬ ಪಾಠವನ್ನು ಕಲಿಯುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 4:25
15 ತಿಳಿವುಗಳ ಹೋಲಿಕೆ  

“ ‘ಈ ತೀರ್ಮಾನವು ದೂತರಿಂದ ಪ್ರಕಟವಾಯಿತು, ಪರಿಶುದ್ಧರು ಅಂತಿಮ ನಿರ್ಣಯವನ್ನು ಘೋಷಿಸುವರು, ಮಹೋನ್ನತರು ಜನರ ರಾಜ್ಯಗಳ ಮೇಲೆ ಸರ್ವಾಧಿಕಾರಿಯಾಗಿರುವರೆಂದೂ, ರಾಜ್ಯಗಳನ್ನು ತಮ್ಮ ಮನಸ್ಸಿಗೆ ಬಂದವರಿಗೆ ಕೊಡುವರೆಂದೂ, ಅವುಗಳ ಮೇಲೆ ಕೀಳಾದವರನ್ನು ನೇಮಿಸುವರೆಂದೂ ಇದರಿಂದ ಜೀವಿತರು ತಿಳಿದುಕೊಳ್ಳುವರು.’


ನಾನೇ ಭೂಮಿಯನ್ನೂ, ಭೂಮಿಯ ಮೇಲಿರುವ ಮನುಷ್ಯರನ್ನೂ, ಮೃಗಗಳನ್ನೂ ನನ್ನ ಮಹಾ ಬಲದಿಂದಲೂ, ನನ್ನ ಚಾಚಿದ ಕೈಯಿಂದಲೂ ಉಂಟುಮಾಡಿ, ನನಗೆ ಸರಿ ತೋಚಿದವರಿಗೆ ಅದನ್ನು ಕೊಟ್ಟಿದ್ದೇನೆ.


ಯೆಹೋವ ದೇವರು ಎಂಬ ಹೆಸರುಳ್ಳ ನೀವು ಮಾತ್ರವೇ ಸಮಸ್ತ ಭೂಮಿಯ ಮೇಲೆ ಮಹೋನ್ನತರಾಗಿದ್ದೀರಿ ಎಂದು ಅವರು ತಿಳಿದುಕೊಳ್ಳಲಿ.


ಅವರು ಕಾಲವನ್ನೂ, ಸಮಯವನ್ನೂ ಬದಲಾಯಿಸುತ್ತಾ ಅವರು ಅರಸರನ್ನು ಕಡೆಗಣಿಸುತ್ತಾರೆ ಮತ್ತು ಇತರರನ್ನು ಮೇಲಕ್ಕೆತ್ತುತ್ತಾರೆ. ಜ್ಞಾನಿಗಳಿಗೆ ಜ್ಞಾನವನ್ನೂ, ಬುದ್ಧಿವಂತರಿಗೆ ತಿಳುವಳಿಕೆಯನ್ನೂ ಕೊಡುವರು.


ಹೀಗೆ ಅವರು ತಮ್ಮ ಮಹಿಮೆಯುಳ್ಳ ದೇವರನ್ನು ಹುಲ್ಲು ತಿನ್ನುವ ಎತ್ತಿನ ರೂಪಕ್ಕೆ ಬದಲಾಯಿಸಿದರು.


ಆದರೆ ದೇವರು ನ್ಯಾಯತೀರಿಸುವವರಾಗಿದ್ದಾರೆ. ದೇವರು ಒಬ್ಬನನ್ನು ತಗ್ಗಿಸುತ್ತಾರೆ, ಒಬ್ಬನನ್ನು ಎತ್ತುತ್ತಾರೆ.


ಯೆಹೋವ ದೇವರು ಪರಲೋಕದಲ್ಲಿ ತಮ್ಮ ಸಿಂಹಾಸನವನ್ನು ಸ್ಥಾಪಿಸಿದ್ದಾರೆ, ಅವರ ಸಾಮ್ರಾಜ್ಯದ ಆಳಿಕೆಯು ಎಲ್ಲರ ಮೇಲೆ ಇರುವುದು.


ಅರಸನೇ, ನೀನು ಅರಸರಿಗೆ ಅರಸನಾಗಿರುವೆ. ಏಕೆಂದರೆ ಪರಲೋಕದ ದೇವರು ನಿನಗೆ ರಾಜ್ಯವನ್ನೂ, ಬಲವನ್ನೂ, ಅಧಿಕಾರವನ್ನೂ, ಘನವನ್ನೂ ಕೊಟ್ಟಿದ್ದಾರೆ.


ಅರಸನು ದಾನಿಯೇಲನಿಗೆ ಉತ್ತರವಾಗಿ, “ನೀನು ಈ ರಹಸ್ಯವನ್ನು ಪ್ರಕಟಮಾಡಲು ಸಮರ್ಥನಾದ್ದರಿಂದ ನಿಶ್ಚಯವಾಗಿ ನಿಮ್ಮ ದೇವರು ದೇವರುಗಳಿಗೆ ದೇವರಾಗಿಯೂ, ಅರಸುಗಳ ಒಡೆಯರಾಗಿಯೂ, ರಹಸ್ಯಗಳನ್ನು ಪ್ರಕಟ ಮಾಡುವವರಾಗಿಯೂ ಇದ್ದಾರೆ,” ಎಂದನು.


ಮಹೋನ್ನತ ದೇವರು ನನ್ನ ವಿಷಯದಲ್ಲಿ ನಡೆಸಿರುವ ಸೂಚಕಕಾರ್ಯಗಳನ್ನೂ, ಅದ್ಭುತಗಳನ್ನೂ ಪ್ರಚುರಪಡಿಸಬೇಕೆಂದು ನನಗೆ ವಿಹಿತವಾಗಿ ತೋರಿ ಬಂದಿದೆ.


ಅವನಿಗೆ ಏಳು ವರ್ಷಕಾಲ, ಮನುಷ್ಯ ಹೃದಯ ಹೋಗಿ ಮೃಗದ ಹೃದಯ ಬರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು