Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 4:26 - ಕನ್ನಡ ಸಮಕಾಲಿಕ ಅನುವಾದ

26 ಆ ಮರದ ಬೇರಿನ ಮೋಟನ್ನು ಉಳಿಸಬೇಕೆಂಬ ಆಜ್ಞೆಯ ಅರ್ಥ ಏನೆಂದರೆ, ಪರಲೋಕವು ಆಳುತ್ತದೆಂದು ನೀನು ತಿಳಿದುಕೊಂಡ ಮೇಲೆ ನಿನ್ನ ರಾಜ್ಯವು ನಿನಗೆ ಪುನಃಸ್ಥಾಪನೆಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ವೃಕ್ಷದ ಬುಡದ ಮೋಟನ್ನು ಉಳಿಸಿರಿ ಎಂದು ಅಪ್ಪಣೆಯಾಯಿತಲ್ಲಾ; ಇದರ ತಾತ್ಪರ್ಯವೇನೆಂದರೆ ಪರಲೋಕಕ್ಕೆ ಸರ್ವಾಧಿಕಾರ ಉಂಟೆಂಬುವುದನ್ನು ನೀನು ತಿಳಿದುಕೊಂಡ ನಂತರ ನಿನ್ನ ರಾಜ್ಯವು ನಿನಗೆ ಸ್ಥಿರವಾಗುವುದು ಎಂಬುವುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಆ ಮರದ ಬುಡದ ಮೋಟನ್ನು ಉಳಿಸಿರೆಂದು ಅಪ್ಪಣೆಯಾಗಿದೆ. ಇದರ ತಾತ್ಪರ್ಯವೇನೆಂದರೆ: ಪರಲೋಕದ ದೇವರಿಗೆ ಸರ್ವಾಧಿಕಾರ ಉಂಟೆಂಬುದನ್ನು ತಾವು ಅರಿತುಕೊಂಡ ನಂತರ ನಿಮ್ಮ ರಾಜ್ಯ ನಿಮಗೆ ಸ್ಥಿರವಾಗಿ ದೊರಕುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ವೃಕ್ಷದ ಬುಡದ ಮೋಟನ್ನು ಉಳಿಸಿರಿ ಎಂದು ಅಪ್ಪಣೆಯಾಯಿತಲ್ಲಾ; ಇದರ ತಾತ್ಪರ್ಯವೇನಂದರೆ ಪರಲೋಕಕ್ಕೆ ಸರ್ವಾಧಿಕಾರವುಂಟೆಂಬದನ್ನು ನೀನು ತಿಳಿದುಕೊಂಡ ನಂತರ ನಿನ್ನ ರಾಜ್ಯವು ನಿನಗೆ ಸ್ಥಿರವಾಗುವದು ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 “ಮರದ ಬುಡದ ಮೋಟನ್ನು ಮತ್ತು ಅದರ ಬೇರುಗಳನ್ನು ಭೂಮಿಯಲ್ಲಿಯೇ ಬಿಟ್ಟುಬಿಡಿ ಎಂಬುದರ ಅರ್ಥವೇನೆಂದರೆ, ನಿನ್ನ ರಾಜ್ಯವನ್ನು ನಿನಗೆ ಹಿಂತಿರುಗಿಸಲಾಗುವುದು. ಮಹೋನ್ನತನಾದ ದೇವರು ನಿನ್ನ ಸಾಮ್ರಾಜ್ಯದ ಮೇಲೆ ಆಳ್ವಿಕೆ ಮಾಡುತ್ತಾನೆ ಎಂಬುದನ್ನು ನೀನು ತಿಳಿದುಕೊಂಡ ಬಳಿಕ ಹೀಗಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 4:26
13 ತಿಳಿವುಗಳ ಹೋಲಿಕೆ  

ಆದರೆ ಅದರ ಬುಡವೂ, ಬೇರೂ, ಕಬ್ಬಿಣ, ಕಂಚಿನ ಕಟ್ಟುಳ್ಳದ್ದಾಗಿ ನೆಲದಲ್ಲಿ ಹೊಲದ ಹುಲ್ಲಿನಲ್ಲಿ ಇರಲಿ. “ ‘ಅವನು ಆಕಾಶದ ಮಂಜಿನಿಂದ ತೇವವಾಗಲಿ, ಭೂಮಿಯ ಗಿಡಗಳ ಮಧ್ಯದಲ್ಲಿರುವ ಮೃಗಗಳೊಂದಿಗೆ ಅವನು ವಾಸಿಸಲಿ.


“ಆದರೂ ಮಗನು ತಂದೆಗೆ, ‘ಅಪ್ಪಾ, ನಾನು ಪರಲೋಕಕ್ಕೆ ವಿರೋಧವಾಗಿಯೂ ನಿಮ್ಮ ಮುಂದೆಯೂ ಪಾಪಮಾಡಿದ್ದೇನೆ. ಇನ್ನೆಂದಿಗೂ ನಾನು ನಿಮ್ಮ ಮಗನೆಂದು ಕರೆಯಿಸಿಕೊಳ್ಳಲು ಯೋಗ್ಯನಲ್ಲ,’ ಎಂದನು.


ನಾನು ಎದ್ದು ನನ್ನ ತಂದೆಯ ಬಳಿಗೆ ಹೋಗಿ, ಆತನಿಗೆ: ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿಮಗೆ ವಿರೋಧವಾಗಿಯೂ ನಾನು ಪಾಪಮಾಡಿದ್ದೇನೆ.


ಶಿಷ್ಯರು ಅದನ್ನು ಕಂಡು ಆಶ್ಚರ್ಯದಿಂದ, “ಇಷ್ಟು ಬೇಗನೆ ಈ ಅಂಜೂರದ ಮರವು ಒಣಗಿಹೋಯಿತಲ್ಲಾ?” ಎಂದು ಕೇಳಿದರು.


ಆದರೆ ನಾನು ನಿಮಗೆ ಹೇಳುವುದೇನೆಂದರೆ, ಆಣೆಯಿಡಲೇ ಬೇಡಿರಿ. ಪರಲೋಕದ ಮೇಲೆ ಆಣೆ ಇಡಬೇಡಿರಿ, ಏಕೆಂದರೆ ಅದು ದೇವರ ಸಿಂಹಾಸನವು;


“ಪರಿಶುದ್ಧನಾದ ಒಬ್ಬನು ಪರಲೋಕದಿಂದ ಇಳಿದುಬಂದು, ‘ಮರವನ್ನು ಕಡಿದು ನಾಶಮಾಡಿರಿ. ಆದರೆ ಅದರ ಬೇರಿನ ಮೋಟನ್ನು ನೆಲದಲ್ಲಿ ಉಳಿಸಿ, ಮೋಟನ್ನು ಕಬ್ಬಿಣ ಮತ್ತು ಕಂಚುಗಳಿಂದ ಕಟ್ಟಿ, ಬಯಲಿನ ಎಳೆಯ ಹುಲ್ಲಿನಲ್ಲಿಯೂ, ಬೇರುಗಳನ್ನು ಭೂಮಿಯಲ್ಲಿಯೂ ಬಿಡಿರಿ. ಅವನು ಆಕಾಶದ ಮಂಜಿನಿಂದ ತೇವವಾಗಲಿ. ಏಳು ಕಾಲಗಳು ಕಳೆಯುವ ತನಕ ಅವನು ಕಾಡುಮೃಗಗಳ ಹಾಗೆ ಜೀವಿಸಲಿ, ಎಂದು ಸಾರುವುದನ್ನು ಅರಸನಾದ ನೀನು ನೋಡಿದೆಯಲ್ಲಾ.’


ಅರಸನೇ, ನೀನು ಅರಸರಿಗೆ ಅರಸನಾಗಿರುವೆ. ಏಕೆಂದರೆ ಪರಲೋಕದ ದೇವರು ನಿನಗೆ ರಾಜ್ಯವನ್ನೂ, ಬಲವನ್ನೂ, ಅಧಿಕಾರವನ್ನೂ, ಘನವನ್ನೂ ಕೊಟ್ಟಿದ್ದಾರೆ.


ದಾನಿಯೇಲನು ಅವನ ಜೊತೆಗಾರರೊಂದಿಗೆ ಉಳಿದ ಬಾಬಿಲೋನಿನ ಜ್ಞಾನಿಗಳ ಸಂಗಡ ಕೊಲೆಯಾಗದಂತೆ ಅವನು ತನ್ನ ಜೊತೆಗಾರರಿಗೆ ಅವರು ಈ ರಹಸ್ಯದ ಸಂಗತಿಯನ್ನು ಕುರಿತು ಪರಲೋಕದ ದೇವರಿಂದ ಕರುಣೆಯನ್ನು ಬೇಡಿಕೊಳ್ಳಬೇಕೆಂದು ಹೇಳಿದನು.


ಆ ರಹಸ್ಯವು ದಾನಿಯೇಲನಿಗೆ ರಾತ್ರಿ ದರ್ಶನದಲ್ಲಿ ಪ್ರಕಟವಾಯಿತು. ದಾನಿಯೇಲನು ಪರಲೋಕದ ದೇವರನ್ನು ಸ್ತುತಿಸಿ,


ಈ ಮಾತು ಅರಸನ ಬಾಯಿಯಲ್ಲಿ ಇರುವಾಗಲೇ ಪರಲೋಕದಿಂದ ಒಂದು ಧ್ವನಿ ಉಂಟಾಯಿತು: “ಅರಸನಾದ ನೆಬೂಕದ್ನೆಚ್ಚರನೇ, ನಿನ್ನ ವಿಷಯವಾದ ದೈವೋಕ್ತಿ ಏನೆಂದರೆ: ನಿನ್ನ ರಾಜ್ಯವು ನಿನ್ನಿಂದ ತೆಗೆಯಲಾಗುವುದು.


ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕದ ಅರಸರನ್ನು ಸ್ತುತಿಸಿ, ಹೆಚ್ಚಿಸಿ ಘನಪಡಿಸುತ್ತೇನೆ. ಅವರ ಕ್ರಿಯೆಗಳೆಲ್ಲಾ ಸತ್ಯವೇ. ಅವರ ಮಾರ್ಗಗಳು ನ್ಯಾಯವೇ. ಗರ್ವದಲ್ಲಿ ನಡೆಯುವವರನ್ನು ಅವರೇ ತಗ್ಗಿಸಬಲ್ಲರು.


ಆದರೆ ಅವನ ಹೃದಯವು ಹೆಮ್ಮೆಯಿಂದ ಉಬ್ಬಿಕೊಂಡಾಗ ಮತ್ತು ಅವನ ಹೃದಯವು ಗಟ್ಟಿಯಾದಾಗ, ಅವನನ್ನು ಸಿಂಹಾಸನದಿಂದ ತೆಗೆದುಹಾಕಲಾಯಿತು ಮತ್ತು ಅವನ ಪ್ರತಿಷ್ಠೆಯನ್ನು ಕಿತ್ತುಕೊಳ್ಳಲಾಯಿತು.


ಅವನು ಮಾನವ ಸಮಾಜದಿಂದ ಬಹಿಷ್ಕೃತನಾದನು. ಮಹೋನ್ನತರಾದ ದೇವರು ಮನುಷ್ಯರ ರಾಜ್ಯವನ್ನು ಆಳುತ್ತಾರೆಂದೂ, ಅವರು ತಮಗೆ ಬೇಕಾದವರನ್ನು ಅದಕ್ಕೆ ನೇಮಿಸುತ್ತಾರೆಂದೂ ತಿಳಿಯುವ ತನಕ ಅವನು ಮೃಗಬುದ್ಧಿಯುಳ್ಳವನಾಗಿದ್ದನು. ಅವನ ನಿವಾಸವು ಕಾಡುಕತ್ತೆಗಳ ಸಂಗಡ ಇತ್ತು. ಅವನು ದನಗಳಂತೆ ಹುಲ್ಲನ್ನು ಮೇಯುತ್ತಿದ್ದನು. ಅವನ ಶರೀರ ಆಕಾಶದ ಮಂಜಿನಿಂದ ತೇವವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು