Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 4:37 - ಕನ್ನಡ ಸಮಕಾಲಿಕ ಅನುವಾದ

37 ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕದ ಅರಸರನ್ನು ಸ್ತುತಿಸಿ, ಹೆಚ್ಚಿಸಿ ಘನಪಡಿಸುತ್ತೇನೆ. ಅವರ ಕ್ರಿಯೆಗಳೆಲ್ಲಾ ಸತ್ಯವೇ. ಅವರ ಮಾರ್ಗಗಳು ನ್ಯಾಯವೇ. ಗರ್ವದಲ್ಲಿ ನಡೆಯುವವರನ್ನು ಅವರೇ ತಗ್ಗಿಸಬಲ್ಲರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕ ರಾಜನನ್ನು ಹೊಗಳಿ, ಕೊಂಡಾಡಿ ಕೀರ್ತಿಸುತ್ತೇನೆ. ಆತನ ಕಾರ್ಯಗಳೆಲ್ಲಾ ಸತ್ಯ, ಆತನ ಮಾರ್ಗಗಳೆಲ್ಲಾ ನ್ಯಾಯ; ಸೊಕ್ಕಿನಿಂದ ನಡೆಯುವವರನ್ನು ತಗ್ಗಿಸಬಲ್ಲನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ನೆಬೂಕದ್ನೆಚ್ಚರನಾದ ನಾನು ಪರಲೋಕ ರಾಜನನ್ನು ಹೊಗಳಿ, ಕೊಂಡಾಡಿ, ಕೀರ್ತಿಸುತ್ತೇನೆ: ಆತನ ಕಾರ್ಯಗಳೆಲ್ಲವು ಸತ್ಯ, ಆತನ ಮಾರ್ಗಗಳೆಲ್ಲವು ನ್ಯಾಯ, ಗರ್ವಿಷ್ಠರನ್ನು ಆತ ತಗ್ಗಿಸಬಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕರಾಜನನ್ನು ಹೊಗಳಿ ಕೊಂಡಾಡಿ ಕೀರ್ತಿಸುತ್ತೇನೆ; ಆತನ ಕಾರ್ಯಗಳೆಲ್ಲಾ ಸತ್ಯ, ಆತನ ಮಾರ್ಗಗಳೆಲ್ಲಾ ನ್ಯಾಯ; ಸೊಕ್ಕಿನಿಂದ ನಡೆಯುವವರನ್ನು ತಗ್ಗಿಸಬಲ್ಲನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಅರಸ ನೆಬೂಕದ್ನೆಚ್ಚರನಾದ ನಾನು ಈಗ ಪರಲೋಕದ ರಾಜನನ್ನು ಘನಪಡಿಸುತ್ತೇನೆ, ಮಹಿಮೆಪಡಿಸುತ್ತೇನೆ. ಆತನು ಮಾಡುವದೆಲ್ಲ ಸರಿ. ಆತನು ಯಾವಾಗಲೂ ನ್ಯಾಯವಂತನಾಗಿದ್ದಾನೆ. ಆತನು ಗರ್ವಿಷ್ಠರನ್ನು ದೀನರನ್ನಾಗಿ ಮಾಡಬಲ್ಲನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 4:37
31 ತಿಳಿವುಗಳ ಹೋಲಿಕೆ  

“ಇನ್ನು ಮೇಲೆ ಗರ್ವದಿಂದ ಮಾತನಾಡಬೇಡಿರಿ. ನಿಮ್ಮ ಬಾಯಿಂದ ಕಠಿಣ ಮಾತು ಹೊರಡದಿರಲಿ. ಏಕೆಂದರೆ ಯೆಹೋವ ದೇವರು ತಿಳುವಳಿಕೆಯುಳ್ಳ ದೇವರು. ಅವರು ಮನುಷ್ಯರ ಕಾರ್ಯಗಳನ್ನು ತೂಗಿನೋಡುವರು.


ದೇವರು ಸಂರಕ್ಷಿಸುವ ಬಂಡೆ. ದೇವರ ಕಾರ್ಯವು ಸಂಪೂರ್ಣವಾದದ್ದು. ಅವರ ಮಾರ್ಗಗಳೆಲ್ಲಾ ನ್ಯಾಯವಾಗಿವೆ. ಅವರು ಯಾವ ತಪ್ಪನ್ನೂ ಮಾಡದ ನಂಬಿಗಸ್ತ ದೇವರು, ನೀತಿವಂತರೂ ಯಥಾರ್ಥರೂ ಆದ ದೇವರು.


ಆಗ ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ, ನೀನು ಅವುಗಳನ್ನು ಜ್ಞಾಪಕಕ್ಕೆ ತಂದುಕೊಂಡು, ಅವಮಾನದ ನಿಮಿತ್ತ ಇನ್ನು ನೀನು ಬಾಯಿ ತೆರೆಯಲೇಬಾರದು ಎಂದು ನಿನ್ನ ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’ ”


ಯೆಹೋವ ದೇವರೇ, ನಿಮ್ಮ ನಿಯಮಗಳು ನೀತಿಯುಳ್ಳವುಗಳು; ನಿಮ್ಮ ನಂಬಿಗಸ್ತಿಕೆಯಿಂದಲೇ ನೀವು ನನ್ನನ್ನು ಕಷ್ಟಪಡಿಸಿದ್ದೀರಿ ಎಂದು ನನಗೆ ಗೊತ್ತಿದೆ.


ಎಲ್ಲಾ ದೇವರುಗಳಿಗಿಂತ ಯೆಹೋವ ದೇವರೇ ದೊಡ್ಡವರೆಂದು ಈಗ ನಾನು ತಿಳಿದುಕೊಂಡಿದ್ದೇನೆ. ಏಕೆಂದರೆ ಈಜಿಪ್ಟಿನವರು ಗರ್ವಪಟ್ಟಿದ್ದರಿಂದ ಯೆಹೋವ ದೇವರು ಅವರನ್ನು ತಗ್ಗಿಸಿದರು,” ಎಂದನು.


“ಜಗತ್ತನ್ನೂ ಅದರಲ್ಲಿರುವ ಸಮಸ್ತವನ್ನೂ ಸೃಷ್ಟಿಸಿದ ದೇವರು ಇಹಪರಲೋಕಗಳ ಅಧಿಪತಿಯಾಗಿದ್ದಾರೆ. ಅವರು ಕೈಗಳಿಂದ ಕಟ್ಟಿದ ದೇವಾಲಯಗಳಲ್ಲಿ ವಾಸಿಸುವವರಲ್ಲ.


ದೇವರ ದಾಸನಾದ ಮೋಶೆಯ ಮತ್ತು ಕುರಿಮರಿ ಆಗಿರುವವರ ಹಾಡನ್ನೂ ಹಾಡುತ್ತಾ: “ಕರ್ತ ಆಗಿರುವ ಸರ್ವಶಕ್ತ ದೇವರೇ, ನಿಮ್ಮ ಕೃತ್ಯಗಳು ಮಹತ್ತಾದವುಗಳೂ ಆಶ್ಚರ್ಯವಾದವುಗಳೂ ಆಗಿವೆ. ರಾಷ್ಟ್ರಗಳ ಅರಸರಾಗಿರುವ ನಿಮ್ಮ ಮಾರ್ಗಗಳು ನೀತಿಯುಳ್ಳವೂ ಸತ್ಯವೂ ಆಗಿವೆ.


ಆ ಸಮಯದಲ್ಲಿ ಯೇಸು, “ತಂದೆಯೇ, ಪರಲೋಕ ಭೂಲೋಕಗಳ ಒಡೆಯನೇ, ನೀವು ಈ ವಿಷಯಗಳನ್ನು ಜ್ಞಾನಿಗಳಿಂದಲೂ ಬುದ್ಧಿವಂತರಿಂದಲೂ ಮರೆಮಾಡಿ, ಶಿಶುಗಳಿಗೆ ಪ್ರಕಟ ಮಾಡಿರುವುದರಿಂದ ನಾನು ನಿಮ್ಮನ್ನು ಕೊಂಡಾಡುತ್ತೇನೆ.


ಆ ಸಮಯದ ಅಂತ್ಯದಲ್ಲಿ ನೆಬೂಕದ್ನೆಚ್ಚರನಾದ ನಾನು ನನ್ನ ಕಣ್ಣುಗಳನ್ನು ಪರಲೋಕದ ಕಡೆಗೆ ಎತ್ತಿದೆನು. ನನ್ನ ತಿಳುವಳಿಕೆ ನನಗೆ ತಿರುಗಿ ಬಂತು. ಆಗ ನಾನು ಮಹೋನ್ನತರನ್ನು ಕೊಂಡಾಡಿದೆನು. ಸದಾಕಾಲಕ್ಕೂ ಇರುವವರಾದ ಅವರನ್ನು ಗೌರವಿಸಿ, ಮಹಿಮೆ ಪಡಿಸಿದೆನು. ಅವರ ಆಡಳಿತವು ನಿತ್ಯವಾದ ಆಡಳಿತವಾಗಿದೆ. ಅವರ ರಾಜ್ಯವು ತಲತಲಾಂತರಕ್ಕೂ ಇರುವುದು.


ಆದರೆ ಸೇನಾಧೀಶ್ವರ ಯೆಹೋವ ದೇವರು ನ್ಯಾಯತೀರ್ಪಿನಲ್ಲಿ ಉನ್ನತವಾಗಿರುವರು. ಪರಿಶುದ್ಧ ದೇವರು ತಮ್ಮ ನ್ಯಾಯದಲ್ಲಿ ಪರಿಶುದ್ಧರೆಂದು ಕಾಣಿಸಿಕೊಳ್ಳುವರು.


ನ್ಯಾಯ ಪ್ರಿಯ ರಾಜರೇ, ನೀವು ನೀತಿಯನ್ನು ಸ್ಥಿರಪಡಿಸುತ್ತೀರಿ. ನ್ಯಾಯವನ್ನೂ ನೀತಿಯನ್ನೂ ಯಾಕೋಬ್ಯರಲ್ಲಿ ನೀವು ಮನದಟ್ಟಾಗಿಸಿರುವಿರಿ.


ಆಗ ಬಲಿಪೀಠವು ಹೀಗೆ ಮಾತನಾಡುವುದನ್ನು ಕೇಳಿದೆನು: “ಕರ್ತಾ, ಸರ್ವಶಕ್ತರಾದ ದೇವರೇ, ನಿಮ್ಮ ನ್ಯಾಯತೀರ್ಪುಗಳು ಸತ್ಯವೂ ನೀತಿಯುಳ್ಳವುಗಳೂ ಆಗಿವೆ.”


ಅವರು ದ್ರಾಕ್ಷಾರಸವನ್ನು ಕುಡಿದು ಬಂಗಾರ, ಬೆಳ್ಳಿ, ಕಂಚು, ಕಬ್ಬಿಣ, ಮರ ಮತ್ತು ಕಲ್ಲಿನ ದೇವರುಗಳನ್ನು ಸ್ತುತಿಸಿದರು.


ಅವರ ಸೂಚಕಕಾರ್ಯಗಳು ಎಷ್ಟೋ ದೊಡ್ಡವುಗಳು! ಅವರ ಅದ್ಭುತಗಳು ಪರಾಕ್ರಮವಾದವುಗಳು! ಅವರ ರಾಜ್ಯವು ನಿತ್ಯವಾದ ರಾಜ್ಯವು, ಅವರ ಆಡಳಿತವು ತಲತಲಾಂತರಕ್ಕೂ ಇರುವುದು.


ನಿನ್ನ ಸಹೋದರಿಯರಾದ ಸೊದೋಮನ್ನು ನಿನ್ನ ಗರ್ವದ ದಿವಸಗಳಲ್ಲಿ ನಿನ್ನ ಬಾಯಿಂದ ಉಚ್ಚರಿಸಲಿಲ್ಲ.


ಇದಲ್ಲದೆ ಅವನ ಪ್ರಾರ್ಥನೆಯೂ, ಅವನು ದೇವರಿಗೆ ಭಿನ್ನವಿಸಿದ್ದೂ, ಅವನ ಸಮಸ್ತ ಪಾಪವೂ, ಅವನ ಅಪನಂಬಿಕೆಯೂ, ಅವನು ತಗ್ಗಿಸಿಕೊಳ್ಳುವುದಕ್ಕಿಂತ ಮುಂಚೆ ಕಟ್ಟಿಸಿದ ಉನ್ನತ ಸ್ಥಳಗಳನ್ನೂ, ನಿಲ್ಲಿಸಿದ ಅಶೇರ ಸ್ತಂಭಗಳೂ, ಕೆತ್ತಿಸಿದ ವಿಗ್ರಹಗಳೂ, ಸ್ಥಾಪಿಸಿದ ಸ್ಥಳಗಳೂ ಪ್ರವಾದಿಗಳ ದಾಖಲೆಗಳಲ್ಲಿ ಬರೆದಿರುತ್ತವೆ.


ಗರ್ವದ ಸಕಲ ವೈಭವವನ್ನು ಹೊಲಸು ಮಾಡಬೇಕೆಂತಲೂ, ಭೂಮಿಯಲ್ಲಿ ಘನವುಳ್ಳವರೆಲ್ಲರನ್ನು ಅವಮಾನಪಡಿಸಬೇಕೆಂತಲೂ ಸೇನಾಧೀಶ್ವರ ಯೆಹೋವ ದೇವರೇ ಹೀಗೆ ಸಂಕಲ್ಪಿಸಿದ್ದಾರೆ.


“ಬಾಬಿಲೋನಿಗೆ ವಿರೋಧವಾಗಿ ಬಿಲ್ಲುಬಾಣಗಾರರನ್ನೆಲ್ಲ ಒಟ್ಟಾಗಿ ಕರೆಯಿರಿ; ಅದರ ಸುತ್ತಲು ದಂಡಿಳಿಸಿರಿ ಅದರ ನಿವಾಸಿಗಳಲ್ಲಿ ಯಾರೂ ತಪ್ಪಿಸಿಕೊಳ್ಳದ ಹಾಗಿರಲಿ. ಅದರ ಕೃತ್ಯಕ್ಕೆ ತಕ್ಕಂತೆ ಮುಯ್ಯಿತೀರಿಸಿರಿ ಅದು ಮಾಡಿದಂತೆಯೇ ಅದಕ್ಕೆ ಮಾಡಿ. ಏಕೆಂದರೆ ಅದು ಅಹಂಕಾರದಿಂದ ಇಸ್ರಾಯೇಲರ ಪರಿಶುದ್ಧ ಯೆಹೋವ ದೇವರನ್ನು ಅಸಡ್ಡೆಮಾಡಿತು.


ಆ ಮರದ ಬೇರಿನ ಮೋಟನ್ನು ಉಳಿಸಬೇಕೆಂಬ ಆಜ್ಞೆಯ ಅರ್ಥ ಏನೆಂದರೆ, ಪರಲೋಕವು ಆಳುತ್ತದೆಂದು ನೀನು ತಿಳಿದುಕೊಂಡ ಮೇಲೆ ನಿನ್ನ ರಾಜ್ಯವು ನಿನಗೆ ಪುನಃಸ್ಥಾಪನೆಯಾಗುವುದು.


ನಿನ್ನ ಮೇಲೆಯೂ ನಿನ್ನ ಜನರ ಮೇಲೆಯೂ ನಿನ್ನ ಎಲ್ಲಾ ಅಧಿಕಾರಿಗಳ ಮೇಲೆಯೂ ಕಪ್ಪೆಗಳು ಏರಿ ಬರುವುವು,’ ಎಂದು ಹೇಳು,” ಎಂದರು.


ಆಗ ಅರಸನು ಹಾಮಾನನಿಗೆ, “ನೀನು ಹೇಳಿದ ಪ್ರಕಾರವೇ ಬೇಗನೆ ಹೋಗಿ ರಾಜವಸ್ತ್ರಗಳನ್ನೂ ಪಟ್ಟದ ಕುದುರೆಯನ್ನೂ ತೆಗೆದುಕೊಂಡು ಅರಮನೆಯ ಹೆಬ್ಬಾಗಿಲಲ್ಲಿ ಕುಳಿತಿರುವ ಯೆಹೂದ್ಯನಾದ ಮೊರ್ದೆಕೈಗೆ ಹಾಗೆಯೇ ಮಾಡು. ನೀನು ಸಲಹೆಮಾಡಿದ್ದರಲ್ಲಿ ಒಂದನ್ನೂ ಬಿಡದೆ, ಎಲ್ಲವನ್ನೂ ಮಾಡು,” ಎಂದು ಹಾಮಾನನಿಗೆ ಆಜ್ಞಾಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು