Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 4:9 - ಕನ್ನಡ ಸಮಕಾಲಿಕ ಅನುವಾದ

9 “ಮಂತ್ರಗಾರರಲ್ಲಿ ಪ್ರಾಮುಖ್ಯನಾದ ಬೇಲ್ತೆಶಚ್ಚರನೇ, ನಿನ್ನಲ್ಲಿ ಪರಿಶುದ್ಧ ದೇವರುಗಳ ಆತ್ಮವಿರುವುದೆಂದು ನಾನು ಬಲ್ಲೆನು. ಯಾವುದೇ ರಹಸ್ಯವು ನಿನಗೆ ಅಸಾಧ್ಯವಾದದ್ದಲ್ಲ. ಆದ್ದರಿಂದ ನಾನು ಕಂಡ ಕನಸಿನ ದರ್ಶನ, ಅದರ ಅರ್ಥವನ್ನೂ ನೀನು ನನಗೆ ಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ‘ಬೇಲ್ತೆಶಚ್ಚರನೇ, ಜೋಯಿಸರಲ್ಲಿ ಪ್ರಧಾನನೇ, ಪರಿಶುದ್ಧ ದೇವರುಗಳ ಆತ್ಮವು ನಿನ್ನಲ್ಲಿ ನೆಲೆಯಾಗಿದೆ ಎಂದು ತಿಳಿದಿದ್ದೇನೆ, ಯಾವ ರಹಸ್ಯವೂ ನಿನಗೆ ಅಶೋಧ್ಯವಲ್ಲವೆಂಬುದು ನನಗೆ ಗೊತ್ತು; ಆದುದರಿಂದ ನಾನು ಕಂಡ ಕನಸನ್ನೂ ಅದರ ಅರ್ಥವನ್ನೂ ನನಗೆ ತಿಳಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ‘ಬೇಲ್ತೆಶಚ್ಚರನೇ, ಜೋಯಿಸರಲ್ಲಿ ಪ್ರಾಮುಖ್ಯನೇ, ಪರಿಶುದ್ಧ ದೇವರ ಆತ್ಮ ನಿನ್ನಲ್ಲಿ ನೆಲೆಯಾಗಿದೆಯೆಂದು ತಿಳಿದಿದ್ದೇನೆ. ಯಾವ ರಹಸ್ಯವೂ ನಿನಗೆ ಅಶೋಧ್ಯವಲ್ಲವೆಂದು ನನಗೆ ಗೊತ್ತು. ಆದುದರಿಂದ ನಾನು ಕಂಡ ಕನಸನ್ನೂ ಅದರ ಅರ್ಥವನ್ನೂ ನನಗೆ ತಿಳಿಸು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಬೇಲ್ತೆಶಚ್ಚರನೇ, ಜೋಯಿಸರಲ್ಲಿ ಪ್ರಧಾನನೇ, ಪರಿಶುದ್ಧದೇವರುಗಳ ಆತ್ಮವು ನಿನ್ನಲ್ಲಿ ನೆಲೆಯಾಗಿದೆ ಎಂದು ತಿಳಿದಿದ್ದೇನೆ, ಯಾವ ರಹಸ್ಯವೂ ನಿನಗೆ ಅಶೋಧ್ಯವಲ್ಲವೆಂಬದು ನನಗೆ ಗೊತ್ತು. ಆದದರಿಂದ ನಾನು ಕಂಡ ಕನಸನ್ನೂ ಅದರ ಅರ್ಥವನ್ನೂ ನನಗೆ ತಿಳಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನಾನು, “ಬೇಲ್ತೆಶಚ್ಚರನೇ, ಎಲ್ಲಾ ಮಂತ್ರವಾದಿಗಳಿಗಿಂತಲೂ ನೀನು ಬಹಳ ಶ್ರೇಷ್ಠನು. ಪರಿಶುದ್ಧ ದೇವರುಗಳ ಆತ್ಮವು ನಿನ್ನಲ್ಲಿ ನೆಲೆಸಿದೆ ಎಂದು ನನಗೆ ಗೊತ್ತಿದೆ. ನಿನಗೆ ತಿಳಿದುಕೊಳ್ಳಲು ಕಷ್ಟವಾದ ಯಾವ ರಹಸ್ಯವೂ ಇಲ್ಲವೆಂದು ನಾನು ಬಲ್ಲೆನು. ನಾನು ಕನಸಿನಲ್ಲಿ ಕಂಡದ್ದು ಇಂತಿದೆ. ಅದರ ಅರ್ಥವನ್ನು ನನಗೆ ಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 4:9
18 ತಿಳಿವುಗಳ ಹೋಲಿಕೆ  

ನಿನ್ನ ರಾಜ್ಯದಲ್ಲಿ ಪರಿಶುದ್ಧ ದೇವರುಗಳ ಆತ್ಮವುಳ್ಳ ಒಬ್ಬ ಮನುಷ್ಯನಿದ್ದಾನೆ. ದೇವರುಗಳ ಜ್ಞಾನಕ್ಕೆ ಸಮಾನವಾದ ಜ್ಞಾನವೂ, ವಿವೇಕವೂ, ಬುದ್ಧಿಯೂ, ಪ್ರಕಾಶವೂ ನಿನ್ನ ತಂದೆಯ ಕಾಲದಲ್ಲಿ ಅವನೊಳಗೆ ಕಂಡುಬಂದವು. ನಿನ್ನ ತಂದೆ ನೆಬೂಕದ್ನೆಚ್ಚರ ಅರಸನು ಅವನನ್ನು ಮಂತ್ರಗಾರರಿಗೂ, ಜ್ಯೋತಿಷ್ಯರಿಗೂ, ಪಂಡಿತರಿಗೂ, ಶಕುನಗಾರರಿಗೂ ಅಧಿಕಾರಿಯನ್ನಾಗಿ ನೇಮಿಸಿದನು.


ಆಗ ಅರಸನು ದಾನಿಯೇಲನನ್ನು ಉನ್ನತ ಸ್ಥಾನದಲ್ಲಿರಿಸಿ, ಅವನಿಗೆ ಅನೇಕ ದೊಡ್ಡ ಬಹುಮಾನಗಳನ್ನು ಕೊಟ್ಟನು. ಸಮಸ್ತ ಬಾಬಿಲೋನಿನ ಪ್ರಾಂತಗಳಿಗೆ ಅಧಿಕಾರಿಯನ್ನಾಗಿಯೂ, ಬಾಬಿಲೋನಿನ ಸಮಸ್ತ ಜ್ಞಾನಿಗಳಿಗೆ ಮುಖ್ಯಾಧಿಪತಿಯನ್ನಾಗಿಯೂ ನೇಮಿಸಿದನು.


ಕೊನೆಗೆ ದಾನಿಯೇಲನು ನನ್ನ ಬಳಿಗೆ ಬಂದನು. ಅವನು ನನ್ನ ದೇವರ ಹೆಸರು ಸೇರಿರುವ ಬೇಲ್ತೆಶಚ್ಚರ್ ಎಂಬ ಅಡ್ಡಹೆಸರನ್ನು ಹೊಂದಿದ್ದನು. ಪರಿಶುದ್ಧ ದೇವರುಗಳ ಆತ್ಮವು ಅವನಲ್ಲಿತ್ತು. ಅವನಿಗೆ ನನ್ನ ಕನಸನ್ನು ಹೀಗೆ ತಿಳಿಸಿದೆ.


ನನ್ನನ್ನು ಭಯಪಡಿಸುವಂಥಹ ಒಂದು ಕನಸನ್ನು ಕಂಡೆನು. ನನ್ನ ಹಾಸಿಗೆಯ ಮೇಲೆ ಮಲಗಿದ್ದಾಗ, ನನ್ನ ಮನಸ್ಸಿನಲ್ಲಿ ಹಾದುಹೋದ ಚಿತ್ರಗಳು ಮತ್ತು ದರ್ಶನಗಳು ನನ್ನನ್ನು ಭಯಭೀತಗೊಳಿಸಿದವು.


ಅರಸನು ಅವರ ಹತ್ತಿರ ವಿಚಾರಿಸಿದಾಗ ಸಮಸ್ತ ಜ್ಞಾನ ವಿವೇಕಗಳ ವಿಷಯದಲ್ಲಿ ತನ್ನ ರಾಜ್ಯದಲ್ಲಿರುವ ಎಲ್ಲಾ ಮಂತ್ರಗಾರರಿಗಿಂತಲೂ, ಜೋತಿಷ್ಯರಿಗಿಂತಲೂ ಇವರೇ ಹತ್ತರಷ್ಟು ಉತ್ತಮರೆಂದು ಕಂಡನು.


ನೀನು ದಾನಿಯೇಲನಿಗಿಂತ ಜ್ಞಾನಿಯಾಗಿರುವೆಯಾ? ನಿಮ್ಮಿಂದ ಮರೆಮಾಡಲು ಯಾವುದೇ ರಹಸ್ಯವಿಲ್ಲ.


ಫರೋಹನು ತನ್ನ ಸೇವಕರಿಗೆ, “ಯೋಸೇಫನಂಥ ದೇವರಾತ್ಮವುಳ್ಳ ಮನುಷ್ಯನು ಸಿಕ್ಕಾನೋ?” ಎಂದನು.


“ಈ ಕನಸನ್ನು ನೆಬೂಕದ್ನೆಚ್ಚರನೆಂಬ ಅರಸನಾದ ನಾನು ಕಂಡಿದ್ದೇನೆ. ಈಗ ಬೇಲ್ತೆಶಚ್ಚರನೆಂಬ ನೀನು ಅದರ ಅರ್ಥವನ್ನು ಹೇಳು. ಏಕೆಂದರೆ ನನ್ನ ರಾಜ್ಯದಲ್ಲಿರುವ ಸಕಲ ಜ್ಞಾನಿಗಳು ಅದರ ಅರ್ಥವನ್ನು ನನಗೆ ಹೇಳಲು ಶಕ್ತರಾದವರಲ್ಲ. ಆದರೆ ನಿನ್ನಲ್ಲಿ ಪರಿಶುದ್ಧ ದೇವರುಗಳ ಆತ್ಮವು ಇರುವುದರಿಂದ ನೀನು ಹೇಳಲು ಶಕ್ತನು,” ಎಂದನು.


ನೀನು ನೀತಿಯಲ್ಲಿ ನೆಲೆಗೊಂಡಿರುವೆ. ಬಾಧೆಯಿಂದ ದೂರವಾಗಿರುವೆ. ನೀನು ಭೀತಿಯಿಂದ ಭಯಪಡುವುದಿಲ್ಲ, ಏಕೆಂದರೆ ಅದು ನಿನ್ನ ಸಮೀಪಕ್ಕೆ ಬಾರದು.


ಆಗ ನೀವು ಹಿಂದಿನ ಭಯಂಕರವಾದ ವಿಷಯಗಳನ್ನು ಮನಸ್ಸಿಗೆ ತಂದುಕೊಳ್ಳುತ್ತಾ, “ಕಪ್ಪವನ್ನು ಲೆಕ್ಕಿಸಿದವನು ಎಲ್ಲಿ? ತೂಕ ಮಾಡಿದವನು ಎಲ್ಲಿ? ಗೋಪುರಗಳನ್ನು ಎಣಿಸಿದವನು ಎಲ್ಲಿ?” ಎಂದುಕೊಳ್ಳುವಿರಿ.


ಅಯ್ಯೋ! ಆ ಪರಾಕ್ರಮಿಯಾದ ದೇವರುಗಳ ಕೈಯಿಂದ ನಮ್ಮನ್ನು ತಪ್ಪಿಸುವವರ‍್ಯಾರು? ಈಜಿಪ್ಟಿನವರನ್ನು ಮರುಭೂಮಿಯಲ್ಲಿ ಸಕಲ ಬಾಧೆಗಳಿಂದ ಹೊಡೆದ ದೇವರುಗಳು ಇವರೇ.


ಅರಸನು ದಾನಿಯೇಲನಿಗೆ ಉತ್ತರವಾಗಿ, “ನೀನು ಈ ರಹಸ್ಯವನ್ನು ಪ್ರಕಟಮಾಡಲು ಸಮರ್ಥನಾದ್ದರಿಂದ ನಿಶ್ಚಯವಾಗಿ ನಿಮ್ಮ ದೇವರು ದೇವರುಗಳಿಗೆ ದೇವರಾಗಿಯೂ, ಅರಸುಗಳ ಒಡೆಯರಾಗಿಯೂ, ರಹಸ್ಯಗಳನ್ನು ಪ್ರಕಟ ಮಾಡುವವರಾಗಿಯೂ ಇದ್ದಾರೆ,” ಎಂದನು.


ಇಸ್ರಾಯೇಲಿನ ಉನ್ನತ ಪರ್ವತದಲ್ಲಿ ನಾನು ಅದನ್ನು ನೆಡುವೆನು. ಅದು ಕೊಂಬೆಗಳಲ್ಲಿ ಹುಟ್ಟಿಕೊಂಡು ಫಲಫಲಿಸುವುದು; ಸೊಂಪಾದ ದೇವದಾರು ಆಗುವುದು. ರೆಕ್ಕೆಗಳುಳ್ಳ ಪ್ರತಿಯೊಂದು ಪಕ್ಷಿಗಳೂ, ಅದರ ಕೊಂಬೆಗಳ ನೆರಳಿನ ಕೆಳಗೆ ವಾಸಮಾಡುವುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು