Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 5:2 - ಕನ್ನಡ ಸಮಕಾಲಿಕ ಅನುವಾದ

2 ಬೇಲ್ಯಚ್ಚರನು ತನ್ನ ದ್ರಾಕ್ಷಾರಸವನ್ನು ಕುಡಿಯುತ್ತಿರುವಾಗ, ತನ್ನ ತಂದೆ ನೆಬೂಕದ್ನೆಚ್ಚರನು ಯೆರೂಸಲೇಮಿನ ದೇವಾಲಯದೊಳಗಿಂದ ತಂದ ಬೆಳ್ಳಿ ಬಂಗಾರಗಳ ಪಾತ್ರೆಗಳನ್ನು ತಂದು, ಅದರಲ್ಲಿ ಅರಸನು ಮತ್ತು ಪ್ರಧಾನರು, ಅವನ ಪತ್ನಿ ಮತ್ತು ಉಪಪತ್ನಿಯರು ಅವುಗಳಲ್ಲಿ ಕುಡಿಯುವಂತೆ ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಬೇಲ್ಶಚ್ಚರನು ಅದನ್ನು ಸವಿಯುತ್ತಾ, ಯೆರೂಸಲೇಮಿನ ದೇವಾಲಯದೊಳಗಿನಿಂದ ತನ್ನ ತಂದೆಯಾದ ನೆಬೂಕದ್ನೆಚ್ಚರನು ತೆಗೆದುಕೊಂಡು ಬಂದಿದ್ದ ಬೆಳ್ಳಿ, ಬಂಗಾರಗಳ ಪಾತ್ರೆಗಳಲ್ಲಿ ತಾನೂ, ತನ್ನ ಮುಖಂಡರೂ, ಪತ್ನಿಯರೂ ಮತ್ತು ಉಪಪತ್ನಿಯರೂ ಕುಡಿಯುವುದಕ್ಕಾಗಿ ಅವುಗಳನ್ನು ತರುವಂತೆ ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಹಾಗೆ ಕುಡಿದುಕೊಂಡಿರುವಾಗ ತಾನೂ ತನ್ನ ಪ್ರಮುಖರೂ ಪತ್ನಿಯರೂ ಉಪಪತ್ನಿಯರೂ ಕುಡಿಯುವುದಕ್ಕಾಗಿ ತನ್ನ ತಂದೆ ನೆಬೂಕದ್ನೆಚ್ಚರನು ಜೆರುಸಲೇಮಿನ ದೇವಾಲಯದ ಗರ್ಭಗುಡಿಯಿಂದ ಸೂರೆಯಾಗಿ ತಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅದನ್ನು ಸವಿಯುತ್ತಾ ಯೆರೂಸಲೇವಿುನ ದೇವಾಲಯದೊಳಗಿಂದ ತನ್ನ ತಂದೆಯಾದ ನೆಬೂಕದ್ನೆಚ್ಚರನು ಎತ್ತಿಕೊಂಡು ಬಂದಿದ್ದ ಬೆಳ್ಳಿಬಂಗಾರಗಳ ಪಾತ್ರೆಗಳಲ್ಲಿ ತಾನೂ ತನ್ನ ಮುಖಂಡರೂ ಪತ್ನ್ಯುಪಪತ್ನಿಯರೂ ಕುಡಿಯುವದಕ್ಕಾಗಿ ಅವುಗಳನ್ನು ತರುವಂತೆ ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಬೇಲ್ಶಚ್ಚರನು ದ್ರಾಕ್ಷಾರಸ ಪಾನ ಮಾಡುವಾಗ, ತನ್ನ ತಂದೆಯಾದ ನೆಬೂಕದ್ನೆಚ್ಚರನು ಜೆರುಸಲೇಮಿನ ಆಲಯದಿಂದ ಎತ್ತಿಕೊಂಡು ಬಂದಿದ್ದ ಬೆಳ್ಳಿಬಂಗಾರಗಳ ಲೋಟಗಳನ್ನು ತೆಗೆದುಕೊಂಡು ಬರಬೇಕೆಂದು ತನ್ನ ಸೇವಕರಿಗೆ ಆಜ್ಞಾಪಿಸಿದನು. ತನ್ನ ಮುಖಂಡರು, ಪತ್ನಿಯರು ಮತ್ತು ಉಪಪತ್ನಿಯರು ಆ ಪಾತ್ರೆಗಳಲ್ಲಿ ದ್ರಾಕ್ಷಾರಸ ಪಾನ ಮಾಡಬೇಕೆಂದು ರಾಜನಾದ ಬೇಲ್ಶಚ್ಚರನ ಅಪೇಕ್ಷೆಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 5:2
23 ತಿಳಿವುಗಳ ಹೋಲಿಕೆ  

ಆಗ ಕರ್ತನು ಯೆಹೂದದ ಅರಸನಾದ ಯೆಹೋಯಾಕೀಮನನ್ನು ದೇವಾಲಯದ ಕೆಲವು ವಸ್ತುಗಳನ್ನು ಕೂಡ ಅವನಿಗೆ ಒಪ್ಪಿಸಿದನು. ಅವನು ಅವುಗಳನ್ನು ಶಿನಾರ್ ದೇಶಕ್ಕೂ, ತನ್ನ ದೇವರ ಆಲಯಕ್ಕೂ ತಂದು, ಅವುಗಳನ್ನು ತನ್ನ ದೇವರ ಬೊಕ್ಕಸದ ಮನೆಯಲ್ಲಿ ಇರಿಸಿದನು.


ಯೆಹೋವ ದೇವರು ಮುಂತಿಳಿಸಿದ ಪ್ರಕಾರವೇ ನೆಬೂಕದ್ನೆಚ್ಚರನು ಯೆಹೋವ ದೇವರ ಆಲಯದಲ್ಲಿ ಸಮಸ್ತ ಬೊಕ್ಕಸಗಳನ್ನೂ, ಅರಮನೆಯ ಬೊಕ್ಕಸಗಳನ್ನೂ, ಇಸ್ರಾಯೇಲಿನ ಅರಸನಾದ ಸೊಲೊಮೋನನು ಅರಸನ ಆಲಯದಲ್ಲಿ ಮಾಡಿದ ಬಂಗಾರದ ಸಮಸ್ತ ಪಾತ್ರೆಗಳನ್ನೂ ಸೂರೆಯಾಗಿ ತೆಗೆದುಕೊಂಡನು.


ಪರಲೋಕದ ಒಡೆಯನಿಗೆ ವಿರೋಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ. ಅವರ ಆಲಯದ ಪಾತ್ರೆಗಳನ್ನು ನಿನ್ನ ಸನ್ನಿಧಿಗೆ ತಂದರು. ಆಗ ನೀನು ನಿನ್ನ ಪ್ರಧಾನರು ಮತ್ತು ಪತ್ನಿಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು, ಬುದ್ಧಿ, ಕಣ್ಣು ಕಿವಿಗಳಿಲ್ಲದ ಬೆಳ್ಳಿಬಂಗಾರ ಕಂಚು ಕಬ್ಬಿಣ ಮರ ಕಲ್ಲುಗಳ ದೇವರುಗಳನ್ನು ಸ್ತುತಿಸಿದಿರಿ. ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗತಿಗಳು ಯಾರ ಅಧೀನದಲ್ಲಿವೆಯೋ, ಆ ದೇವರನ್ನು ಘನಪಡಿಸಲೇ ಇಲ್ಲ.


ಕಾವಲುಗಾರರ ಅಧಿಪತಿಯು ಅಗ್ನಿ ಪಾತ್ರೆಗಳನ್ನೂ, ತಟ್ಟೆಗಳನ್ನೂ, ಬಂಗಾರ ಬೆಳ್ಳಿಗಳಿಂದ ಮಾಡಿದ ಎಲ್ಲವನ್ನೂ ತೆಗೆದುಕೊಂಡನು.


“ಅರಸನೇ, ಮಹೋನ್ನತರಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನಿಗೆ ಸಾರ್ವಭೌಮತ್ವವನ್ನೂ, ಮಹತ್ತನ್ನೂ, ಕೀರ್ತಿಯನ್ನೂ, ಘನವನ್ನೂ ಕೊಟ್ಟರು.


ಆಗ ದಾನಿಯೇಲನನ್ನು ಅರಸನ ಮುಂದೆ ತಂದರು. ಅರಸನು ದಾನಿಯೇಲನಿಗೆ, “ಅರಸನಾದ ನನ್ನ ತಂದೆಯು ಯೆಹೂದದಿಂದ ತಂದ ಯೆಹೂದದ ಸೆರೆಯವರಲ್ಲಿ ಒಬ್ಬನಾದ ದಾನಿಯೇಲನು ನೀನೋ?


ನಿನ್ನ ರಾಜ್ಯದಲ್ಲಿ ಪರಿಶುದ್ಧ ದೇವರುಗಳ ಆತ್ಮವುಳ್ಳ ಒಬ್ಬ ಮನುಷ್ಯನಿದ್ದಾನೆ. ದೇವರುಗಳ ಜ್ಞಾನಕ್ಕೆ ಸಮಾನವಾದ ಜ್ಞಾನವೂ, ವಿವೇಕವೂ, ಬುದ್ಧಿಯೂ, ಪ್ರಕಾಶವೂ ನಿನ್ನ ತಂದೆಯ ಕಾಲದಲ್ಲಿ ಅವನೊಳಗೆ ಕಂಡುಬಂದವು. ನಿನ್ನ ತಂದೆ ನೆಬೂಕದ್ನೆಚ್ಚರ ಅರಸನು ಅವನನ್ನು ಮಂತ್ರಗಾರರಿಗೂ, ಜ್ಯೋತಿಷ್ಯರಿಗೂ, ಪಂಡಿತರಿಗೂ, ಶಕುನಗಾರರಿಗೂ ಅಧಿಕಾರಿಯನ್ನಾಗಿ ನೇಮಿಸಿದನು.


ಅವರು ದ್ರಾಕ್ಷಾರಸವನ್ನು ಕುಡಿದು ಬಂಗಾರ, ಬೆಳ್ಳಿ, ಕಂಚು, ಕಬ್ಬಿಣ, ಮರ ಮತ್ತು ಕಲ್ಲಿನ ದೇವರುಗಳನ್ನು ಸ್ತುತಿಸಿದರು.


ಕಾವಲುಗಾರರ ಅಧಿಪತಿಯು ಬೋಗುಣಿಗಳನ್ನೂ, ಅಗ್ನಿ ಪಾತ್ರೆಗಳನ್ನೂ, ಬಟ್ಟಲುಗಳನ್ನೂ ಬೋಗುಣಿಗಳನ್ನೂ, ದೀಪಸ್ತಂಭಗಳನ್ನೂ, ಸೌಟುಗಳನ್ನೂ, ಪಾನಾರ್ಪಣೆಯ ಪಾತ್ರೆ ಬಂಗಾರ ಬೆಳ್ಳಿಗಳಿಂದ ಮಾಡಿದ ಎಲ್ಲವನ್ನೂ ತೆಗೆದುಕೊಂಡನು.


ಅವನ ದೇಶಕ್ಕೆ ನಿಯಮಿತ ಕಾಲ ಬರುವ ತನಕ, ಎಲ್ಲ ರಾಷ್ಟ್ರಗಳು ಅವನಿಗೂ, ಅವನ ಮಗನಿಗೂ, ಮೊಮ್ಮಗನಿಗೂ ಅಡಿಯಾಳಾಗಿ ಇರಬೇಕು. ಆಮೇಲೆ ಅನೇಕ ರಾಷ್ಟ್ರಗಳೂ, ಮಹಾರಾಜರೂ ಅವನನ್ನೇ ಅಡಿಯಾಳನ್ನಾಗಿ ಮಾಡಿಕೊಳ್ಳುವರು,” ಎಂಬುದು.


ಇದಲ್ಲದೆ ದೊಡ್ಡವೂ, ಸಣ್ಣವೂ ಆದ ಯೆಹೋವ ದೇವರ ಆಲಯದ ಎಲ್ಲಾ ಸಲಕರಣೆಗಳು ಆಲಯದ ಬೊಕ್ಕಸಗಳು, ಅರಸನ ಬೊಕ್ಕಸಗಳು, ಅವನ ಪ್ರಧಾನರ ಬೊಕ್ಕಸಗಳು ಇವುಗಳನ್ನೆಲ್ಲಾ ಬಾಬಿಲೋನಿಗೆ ತರಿಸಿದನು.


ಆದರೆ ಒಂದು ವರ್ಷವು ತೀರಿದ ಮೇಲೆ ಅರಸನಾದ ನೆಬೂಕದ್ನೆಚ್ಚರನು ಜನರನ್ನು ಕಳುಹಿಸಿ, ಅವನನ್ನೂ ಮತ್ತು ಯೆಹೋವ ದೇವರ ಆಲಯದ ಬೆಲೆಯುಳ್ಳ ಪಾತ್ರೆಗಳನ್ನೂ ಬಾಬಿಲೋನಿಗೆ ತೆಗೆದುಕೊಂಡು ಬರಮಾಡಿ, ಅವನ ಸಹೋದರನಾದ ಚಿದ್ಕೀಯನನ್ನು ಯೆಹೂದ ಮತ್ತು ಯೆರೂಸಲೇಮಿನ ಮೇಲೆ ಅರಸನನ್ನಾಗಿ ಮಾಡಿದನು.


ಅರಸನಾದ ಆಸನ ಅಜ್ಜಿ ಮಾಕ ಎಂಬವಳು ಅಶೇರ ದೇವತೆಯ ಒಂದು ಅಸಹ್ಯವಾದ ಮೂರ್ತಿಯನ್ನು ಮಾಡಿಸಿದ್ದರಿಂದ, ಅವಳನ್ನು ರಾಜಮಾತೆಯ ಸ್ಥಾನದಿಂದ ತೆಗೆದುಹಾಕಿದನು. ಇದಲ್ಲದೆ ಆಸನು ಆ ಮೂರ್ತಿಯನ್ನು ಕಡಿದು ಚೂರುಚೂರು ಮಾಡಿ, ಕಿದ್ರೋನ್ ಹಳ್ಳದ ಹತ್ತಿರ ಸುಟ್ಟುಬಿಟ್ಟನು.


ಇವಳ ತರುವಾಯ ಅವನು ಅಬ್ಷಾಲೋಮನ ಮಗಳಾದ ಮಾಕ ಎಂಬವಳನ್ನು ಮದುವೆಮಾಡಿಕೊಂಡನು. ಇವಳು ಅವನಿಗೆ ಅಬೀಯನನ್ನೂ, ಅತ್ತೈಯನ್ನೂ, ಜೀಜನನ್ನೂ, ಶೆಲೋಮೀತನನ್ನೂ ಹೆತ್ತಳು.


ಆಗ ದಾವೀದನು ಅವನಿಗೆ, “ಭಯಪಡಬೇಡ, ಏಕೆಂದರೆ ನಿನ್ನ ತಂದೆಯಾದ ಯೋನಾತಾನನ ನಿಮಿತ್ತ ನಾನು ನಿನಗೆ ಖಂಡಿತವಾಗಿ ದಯೆ ತೋರಿಸುವೆನು. ನಿನ್ನ ಅಜ್ಜನಾದ ಸೌಲನ ಭೂಮಿಯನ್ನೆಲ್ಲಾ ನಿನಗೆ ತಿರುಗಿ ಕೊಡುವೆನು ಮತ್ತು ನೀನು ನನ್ನ ಮೇಜಿನಲ್ಲಿ ನಿತ್ಯವೂ ಭೋಜನ ಮಾಡುವೆ,” ಎಂದನು.


ಅವನ ಅರ್ಪಣೆಯು ಏನೆಂದರೆ: ಪರಿಶುದ್ಧಸ್ಥಳದ ಸಮರ್ಪಣೆ ಮಾಡಬೇಕಾದ ತೂಕ ನೇಮಕವಾದ ಪ್ರಕಾರ, 130 ಶೆಕೆಲ್ ತೂಕದ ಬೆಳ್ಳಿಯ ತಟ್ಟೆ, 70 ಶೆಕೆಲ್ ತೂಕದ ಬೆಳ್ಳಿಯ ಒಂದು ಬಟ್ಟಲು, ಧಾನ್ಯ ಸಮರ್ಪಣೆಗಾಗಿ ಈ ಎರಡೂ ಎಣ್ಣೆ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು,


ಇದಲ್ಲದೆ ನೆಬೂಕದ್ನೆಚ್ಚರನು ಯೆರೂಸಲೇಮಿನಲ್ಲಿರುವ ದೇವಾಲಯದಿಂದ ತೆಗೆದುಕೊಂಡು, ಬಾಬಿಲೋನಿನ ಮಂದಿರಕ್ಕೆ ತಂದ ದೇವಸ್ಥಾನದ ಬೆಳ್ಳಿಬಂಗಾರದ ಸಾಮಗ್ರಿಗಳನ್ನು ಅರಸನಾದ ಕೋರೆಷನು ಬಾಬಿಲೋನಿನ ಮಂದಿರದಿಂದ ತೆಗೆದುಕೊಂಡು, ತಾನು ನೇಮಿಸಿದ ಅಧಿಪತಿಯಾದ ಶೆಷ್ಬಚ್ಚರನಿಗೆ ಒಪ್ಪಿಸಿಕೊಟ್ಟನು.


“ಬಾಬಿಲೋನಿಯರ ಮೇಲೆ ಬೀಳಲಿದೆ ಖಡ್ಗ,” ಎಂದು ಯೆಹೋವ ದೇವರು ಹೇಳುತ್ತಾರೆ. “ಅದರ ಜನಸಾಮಾನ್ಯರನ್ನು, ಪ್ರಧಾನರನ್ನು, ಪಂಡಿತರನ್ನು ಇವರೆಲ್ಲರನ್ನು ಹತಿಸಲಿದೆ ಖಡ್ಗ,


ಆಗ ಅವರು ಯೆರೂಸಲೇಮಿನ ದೇವರ ಆಲಯದೊಳಗಿಂದ ತಂದಿದ್ದ ಬಂಗಾರದ ಪಾತ್ರೆಗಳನ್ನು ತಂದರು. ಅರಸನೂ ಅವರ ಪ್ರಧಾನರೂ ಪತ್ನಿ ಮತ್ತು ಉಪಪತ್ನಿಯರೂ ಅವುಗಳಲ್ಲಿ ಕುಡಿದರು.


ಅದೇ ರಾತ್ರಿಯಲ್ಲಿ ಕಸ್ದೀಯರ ಅರಸನಾದ ಬೇಲ್ಯಚ್ಚರನು ಹತನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು