Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 5:28 - ಕನ್ನಡ ಸಮಕಾಲಿಕ ಅನುವಾದ

28 “ಫರ್ಸಿನ್ ಎಂದರೆ ನಿನ್ನ ರಾಜ್ಯವು ವಿಭಿನ್ನವಾಗಿ ಮೇದ್ಯರಿಗೂ, ಪಾರಸಿಯರಿಗೂ ಕೊಡಲಾಗಿದೆ,” ಎಂಬದಾಗಿ ಅರಿಕೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಪೆರೇಸ್ ಎಂದರೆ, ನಿನ್ನ ರಾಜ್ಯವು ವಿಭಾಗವಾಗಿ ಮೇದ್ಯಯರಿಗೂ, ಪಾರಸಿಯರಿಗೂ ಕೊಡಲ್ಪಟ್ಟಿದೆ” ಎಂದು ಅರಿಕೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ‘ಫರ್ಸಿನ್’ ಎಂದರೆ ನಿನ್ನ ರಾಜ್ಯವನ್ನು ವಿಭಾಗಮಾಡಿ ಮೇದ್ಯರಿಗೂ ಪರ್ಷಿಯದವರಿಗೂ ಕೊಡಲಾಗಿದೆ,” ಎಂದು ಅರಿಕೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಫೆರೇಸ್ ಅಂದರೆ ನಿನ್ನ ರಾಜ್ಯವು ಭಿನ್ನವಾಗಿ ಮೇದ್ಯಯರಿಗೂ ಪಾರಸಿಯರಿಗೂ ಕೊಡಲ್ಪಟ್ಟಿದೆ ಎಂದು ಅರಿಕೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಉಪರ್ಸಿನ್ ಎಂದರೆ: ನಿನ್ನ ರಾಜ್ಯವನ್ನು ನಿನ್ನಿಂದ ತೆಗೆದುಕೊಂಡು ವಿಭಜಿಸಲಾಗಿದೆ. ಅದನ್ನು ಮೇದ್ಯಯರಿಗೂ ಪಾರಸಿಯರಿಗೂ ಕೊಡಲಾಗುವುದು” ಎಂದು ವಿವರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 5:28
16 ತಿಳಿವುಗಳ ಹೋಲಿಕೆ  

ಹೀಗೆ ದಾನಿಯೇಲನು ದಾರ್ಯಾವೆಷನ ಆಳ್ವಿಕೆಯಲ್ಲಿಯೂ, ಪಾರಸಿಯನಾದ ಕೋರೆಷನ ಆಳ್ವಿಕೆಯಲ್ಲಿಯೂ ಸಮೃದ್ಧವಾಗಿ ಬಾಳಿದನು.


ಇಗೋ, ಬೆಳ್ಳಿಯನ್ನು ಲಕ್ಷಿಸದೆ, ಬಂಗಾರದಲ್ಲಿ ಆನಂದಿಸದೆ ಇರುವ ಮೇದ್ಯರನ್ನು ಅವರಿಗೆ ವಿರೋಧವಾಗಿ ನಾನು ಎಬ್ಬಿಸುವೆನು.


ಮೇದ್ಯನಾದ ದಾರ್ಯಾವೆಷನು ತನ್ನ ಅರವತ್ತೆರಡು ವಯಸ್ಸಿನಲ್ಲಿ ರಾಜ್ಯವನ್ನು ವಶಪಡಿಸಿಕೊಂಡನು.


ಘೋರ ದರ್ಶನವು ನನಗೆ ತಿಳಿಯಬಂದಿದೆ: ಬಾಧಕನು ಬಾಧಿಸುತ್ತಿದ್ದಾನೆ. ಸೂರೆಗಾರನು ಸೂರೆಮಾಡುತ್ತಿದ್ದಾನೆ. ಏಲಾಮೇ, ಏಳು! ಮೇದ್ಯವೇ ಮುತ್ತಿಗೆ ಹಾಕು, ಅದರ ನಿಟ್ಟುಸಿರನ್ನೆಲ್ಲಾ ನಿಲ್ಲಿಸಿಬಿಟ್ಟಿದ್ದೇನೆ.


ಅಹಷ್ವೇರೋಷನ ಮಗನೂ ಮೇದ್ಯಯ ವಂಶದವನೂ ಆದ ದಾರ್ಯಾವೆಷನ ಆಳ್ವಿಕೆಯ ಪ್ರಥಮ ವರ್ಷದಲ್ಲಿ ಬಾಬಿಲೋನ್ ರಾಜ್ಯದ ಮೇಲೆ ಅಧಿಕಾರಿಯಾಗಿದ್ದಾಗ,


ನೀನು ಕಂಡ ಆ ಎರಡು ಕೊಂಬುಗಳುಳ್ಳ ಟಗರು, ಮೇದ್ಯ ಮತ್ತು ಪಾರಸಿಯ ರಾಜರು.


ಪಾರ್ಥಿಯರು, ಮೇದ್ಯರು ಹಾಗೂ ಏಲಾಮ್ಯರು, ಮೆಸೊಪೊಟೇಮಿಯ, ಯೂದಾಯ, ಕಪ್ಪದೋಕ್ಯ, ಪೊಂತ, ಏಷ್ಯಾ,


ರಾಜನೇ, ಈಗ ನೀನು ಈ ನಿಬಂಧನೆಯನ್ನು ವಿಧಿಸಿ, ಇದು ಬದಲಾಗದ ಮೇದ್ಯರ ಮತ್ತು ಪಾರಸಿಯರ ನಿಯಮಗಳ ಪ್ರಕಾರ ಇದು ರದ್ದಾಗದಂತೆ ನಿರ್ಣಯವನ್ನು ರೂಪಿಸಿ, ಶಾಸನಕ್ಕೆ ರುಜುಹಾಕು,” ಎಂದು ವಿನಂತಿಸಿದರು.


“ಪಾರಸಿಯ ಅರಸ ಕೋರೆಷನು ಹೀಗೆ ಹೇಳುತ್ತಾನೆ: “ ‘ಪರಲೋಕದ ದೇವರಾದ ಯೆಹೋವ ದೇವರು ಭೂಲೋಕದ ರಾಜ್ಯಗಳನ್ನೆಲ್ಲಾ ನನಗೆ ಕೊಟ್ಟಿದ್ದಾರೆ ಮತ್ತು ಅವರು ಯೆಹೂದ ದೇಶದ ಯೆರೂಸಲೇಮಿನಲ್ಲಿ ತಮಗೆ ಆಲಯವನ್ನು ಕಟ್ಟಿಸಲು ನನಗೆ ಆಜ್ಞಾಪಿಸಿದ್ದಾರೆ. ನಿಮ್ಮಲ್ಲಿ ಯಾರು ಅವರ ಪ್ರಜೆಗಳಾಗಿರುತ್ತೀರೋ, ಅಂಥವರು ಸ್ವಂತನಾಡಿಗೆ ಹೋಗಬಹುದು. ದೇವರಾದ ಯೆಹೋವ ದೇವರು ಅವರ ಸಂಗಡ ಇರಲಿ!’ ” ಎಂದನು.


ಆದ್ದರಿಂದ ನಿನ್ನ ಮಂತ್ರಕ್ಕೂ ಮೀರಿದ ಕೇಡು ನಿನ್ನ ಮೇಲೆ ಬರುವುದು. ನೀನು ಪರಿಹರಿಸಲಾಗದ ವಿಪತ್ತು ನಿನ್ನ ಮೇಲೆ ಬೀಳುವುದು. ನಿನಗೆ ತಿಳಿಯದ ನಾಶನವು ಫಕ್ಕನೆ ನಿನ್ನ ಮೇಲೆ ಬರುವುದು.”


ನಿಶ್ಚಯವಾಗಿ ಆ ದೇಶದ ಮೇಲೆ ನಾನು ಅದಕ್ಕೆ ವಿರೋಧವಾಗಿ ಹೇಳಿದ ನನ್ನ ಎಲ್ಲಾ ವಾಕ್ಯಗಳನ್ನೂ, ಯೆರೆಮೀಯನು ಜನಾಂಗಗಳಿಗೆ ವಿರೋಧವಾಗಿ ಪ್ರವಾದಿಸಿ, ಈ ಪುಸ್ತಕದಲ್ಲಿ ಬರೆದಿರುವ ಎಲ್ಲವನ್ನೂ ಅವರ ಮೇಲೆ ಬರಮಾಡುವೆನು.


ಅದಕ್ಕೆ ವಿರೋಧವಾಗಿ ಜನಾಂಗಗಳನ್ನೂ, ಮೇದ್ಯರ ಅರಸರನ್ನೂ, ಅದರ ಅಧಿಪತಿಗಳನ್ನೂ, ಅಧಿಕಾರಿಗಳನ್ನೂ, ಅವನ ರಾಜ್ಯದ ದೇಶವನ್ನೆಲ್ಲಾ ಸಿದ್ಧಮಾಡಿರಿ.


ಈ ಪ್ರತಿಮೆಯ ತಲೆಯು ಅಪ್ಪಟ ಬಂಗಾರದಿಂದಲೂ, ಅದರ ಎದೆಯು ಮತ್ತು ತೋಳುಗಳು ಬೆಳ್ಳಿಯಿಂದಲೂ, ಅದರ ಹೊಟ್ಟೆಯು ಮತ್ತು ತೊಡೆಗಳು ಕಂಚಿನಿಂದಲೂ,


“ನಿನ್ನ ತರುವಾಯ ನಿನಗಿಂತ ಕನಿಷ್ಠವಾದ ಇನ್ನೊಂದು ರಾಜ್ಯ ಏಳುವುದು. ಅನಂತರ ಮೂರನೆಯ ಕಂಚಿನ ರಾಜ್ಯ ಬರುವುದು. ಅದು ಸಮಸ್ತ ಭೂಮಿಯ ಮೇಲೂ ದೊರೆತನ ನಡೆಸುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು