Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 5:29 - ಕನ್ನಡ ಸಮಕಾಲಿಕ ಅನುವಾದ

29 ಆಗ ಬೇಲ್ಯಚ್ಚರನು ಆಜ್ಞಾಪಿಸಲು ದಾನಿಯೇಲನಿಗೆ ಧೂಮ್ರವಸ್ತ್ರವನ್ನು ಹೊದಿಸಿ, ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿ, ಇವನು ರಾಜ್ಯದ ಮೂರನೇ ಉನ್ನತ ಅಧಿಕಾರಿಗಳಲ್ಲಿ ಒಬ್ಬನೆಂದು ಸಾರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಆಗ ಬೇಲ್ಶಚ್ಚರನು ಆಜ್ಞಾಪಿಸಲು ದಾನಿಯೇಲನಿಗೆ ಧೂಮ್ರವಸ್ತ್ರವನ್ನು ಹೊದಿಸಿ, ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿ, ಈತನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನಾದನು ಎಂದು ಪ್ರಕಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ತಕ್ಷಣವೇ ಬೇಲ್ಶಚ್ಚರನ ಆಜ್ಞೆಯ ಮೇರೆಗೆ ದಾನಿಯೇಲನಿಗೆ ಕೆನ್ನೀಲಿ ರಾಜವಸ್ತ್ರವನ್ನು ಹೊದಿಸಿದರು. ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿದರು. ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ದಾನಿಯೇಲನು ಒಬ್ಬನಾದನು ಎಂದು ಪ್ರಕಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಆಗ ಬೇಲ್ಶಚ್ಚರನು ಆಜ್ಞಾಪಿಸಲು ದಾನಿಯೇಲನಿಗೆ ಧೂಮ್ರವಸ್ತ್ರವನ್ನು ಹೊದಿಸಿ ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿ ಈತನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನಾದನು ಎಂದು ಪ್ರಕಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ದಾನಿಯೇಲನಿಗೆ ಬೇಲ್ಶಚ್ಚರನ ಆಜ್ಞೆಯಂತೆ ಕಂದು ಬಣ್ಣದ ವಸ್ತ್ರಗಳನ್ನು ಕೊಡಲಾಯಿತು. ಚಿನ್ನದ ಸರವನ್ನು ಅವನ ಕೊರಳಿಗೆ ಹಾಕಲಾಯಿತು; ಅವನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 5:29
7 ತಿಳಿವುಗಳ ಹೋಲಿಕೆ  

ಈಗ ನೀನು ಅರ್ಥಗಳನ್ನು ವಿವರಿಸಿ, ಕಷ್ಟಕರವಾದ ಸಮಸ್ಯೆಗಳನ್ನು ಬಗೆಹರಿಸಲು ಸಮರ್ಥನೆಂದು ನಾನು ನಿನ್ನ ವಿಷಯವಾಗಿ ಕೇಳಿದ್ದೇನೆ. ಹೀಗಾದರೆ ಈ ಬರಹವನ್ನು ಓದುವುದಕ್ಕೂ, ಅದರ ಅರ್ಥವನ್ನು ತಿಳಿಸುವುದಕ್ಕೂ ನಿನ್ನಿಂದ ಸಾಧ್ಯವಾದರೆ, ನಿನಗೆ ಧೂಮ್ರವಸ್ತ್ರವನ್ನು ಹೊದಿಸಿ, ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ, ರಾಜ್ಯದ ಮೂರನೆಯ ಅಧಿಕಾರಿಯನ್ನಾಗಿ ನೇಮಿಸುವೆನು,” ಎಂದು ಹೇಳಿದನು.


ಅರಸನು ಗಟ್ಟಿಯಾಗಿ ಕಿರುಚಿ ಜ್ಯೋತಿಷ್ಯರನ್ನೂ, ಪಂಡಿತರನ್ನೂ, ಶಕುನ ಹೇಳುವವರನ್ನೂ ಕರೆಸಿ, ಬಾಬಿಲೋನಿನ ಜ್ಞಾನಿಗಳಿಗೆ, “ಯಾರು ಈ ಬರಹವನ್ನು ಓದಿ, ಅದರ ಅರ್ಥವನ್ನು ನನಗೆ ತಿಳಿಸುವರೋ, ಅವರಿಗೆ ಧೂಮ್ರವಸ್ತ್ರವನ್ನು ಹೊದಿಸಿ, ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿ, ರಾಜ್ಯದ ಮೂರನೆಯ ಅಧಿಕಾರಿಯಾಗಿ ಮಾಡುವೆನು,” ಎಂದು ಹೇಳಿದನು.


ಅವು ನಿನ್ನ ತಲೆಗೆ ಸುಂದರ ಕಿರೀಟ ನಿನ್ನ ಕೊರಳನ್ನು ಅಲಂಕರಿಸುವ ಹಾರ.


ಆಗ ಅರಸನು ದಾನಿಯೇಲನನ್ನು ಉನ್ನತ ಸ್ಥಾನದಲ್ಲಿರಿಸಿ, ಅವನಿಗೆ ಅನೇಕ ದೊಡ್ಡ ಬಹುಮಾನಗಳನ್ನು ಕೊಟ್ಟನು. ಸಮಸ್ತ ಬಾಬಿಲೋನಿನ ಪ್ರಾಂತಗಳಿಗೆ ಅಧಿಕಾರಿಯನ್ನಾಗಿಯೂ, ಬಾಬಿಲೋನಿನ ಸಮಸ್ತ ಜ್ಞಾನಿಗಳಿಗೆ ಮುಖ್ಯಾಧಿಪತಿಯನ್ನಾಗಿಯೂ ನೇಮಿಸಿದನು.


ಇವರ ಮೇಲೆ ಮೂವರು ದೇಶಾಧಿಪತಿಗಳನ್ನು ನೇಮಿಸುವುದು ದಾರ್ಯಾವೆಷನಿಗೆ ಹಿತವೆಂದು ತೋಚಿತು. ಇದರಿಂದ ರಾಜನಿಗೆ ಯಾವ ನಷ್ಟವಾಗದಂತೆ ಲೆಕ್ಕ ಒಪ್ಪಿಸಲಾಯಿತು. ಇವರಲ್ಲಿ ದಾನಿಯೇಲನು ಒಬ್ಬನಾಗಿದ್ದನು.


ಫರೋಹನು ತನ್ನ ಕೈಯೊಳಗಿನ ಉಂಗುರವನ್ನು ತೆಗೆದು ಯೋಸೇಫನ ಕೈಯಲ್ಲಿಟ್ಟು, ನಾರುಮಡಿಯ ವಸ್ತ್ರವನ್ನು ತೊಡಿಸಿ, ಚಿನ್ನದ ಸರಪಣಿಯನ್ನು ಅವನ ಕೊರಳಿಗೆ ಹಾಕಿದನು.


ಯೆಹೂದ್ಯನಾದ ಮೊರ್ದೆಕೈ ಅರಸನಾದ ಅಹಷ್ವೇರೋಷನಿಗೆ ಎರಡನೆಯವನೂ ಯೆಹೂದ್ಯರಲ್ಲಿ ಸನ್ಮಾನಿತನೂ ತನ್ನ ಸಹೋದರರ ಸಮೂಹದಲ್ಲಿ ಹೆಚ್ಚಿನ ಗೌರವ ಪಾತ್ರನೂ ತನ್ನ ಜನರ ಹಿತಚಿಂತಕನೂ ತನ್ನ ಸಂತಾನದವರಿಗೆ ಕ್ಷೇಮಾಭಿವೃದ್ಧಿಯನ್ನು ಮಾತನಾಡುವವನೂ ಆಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು