Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 5:5 - ಕನ್ನಡ ಸಮಕಾಲಿಕ ಅನುವಾದ

5 ಕೂಡಲೇ ಒಬ್ಬ ಮನುಷ್ಯನ ಕೈಬೆರಳುಗಳು ಬಂದು ದೀಪಸ್ತಂಭಕ್ಕೆ ಎದುರಾಗಿ ಅರಮನೆಯ ಗೋಡೆಯ ಮೇಲೆ ಬರೆಯಲಾರಂಭಿಸಿದವು. ಅರಸನು ಆ ಬರೆಯುವ ಕೈಭಾಗವನ್ನು ನೋಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅದೇ ಸಮಯದಲ್ಲಿ ಒಬ್ಬನ ಕೈಯ ಬೆರಳುಗಳು ದೀಪಸ್ತಂಭದ ಎದುರಿಗೆ ಅರಮನೆಯ ಸುಣ್ಣದ ಗೋಡೆಯ ಮೇಲೆ ಬರೆಯಲು ತೊಡಗಿದವು; ಬರೆಯುತ್ತಿದ್ದ ಹಸ್ತವನ್ನು ರಾಜನು ನೋಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅದೇ ಸಮಯದಲ್ಲಿ ಒಬ್ಬ ಮನುಷ್ಯನ ಕೈಬೆರಳುಗಳು ಕಾಣಿಸಿಕೊಂಡು ದೀಪಸ್ತಂಭದ ಎದುರಿಗೆ ಅರಮನೆಯ ಸುಣ್ಣದ ಗೋಡೆಯ ಮೇಲೆ ಬರೆಯಲು ತೊಡಗಿದವು. ಬರೆಯುತ್ತಿದ್ದ ಆ ಕೈಯನ್ನು ರಾಜನು ನೋಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆಗಲೇ ಒಬ್ಬನ ಕೈಯ ಬೆರಳುಗಳು ಬಂದು ದೀಪಸ್ತಂಭದ ಎದುರಿಗೆ ಅರಮನೆಯ ಸುಣ್ಣದ ಗೋಡೆಯ ಮೇಲೆ ಬರಹ ಬರೆದವು; ಬರೆಯುತ್ತಿದ್ದ ಹಸ್ತವನ್ನು ರಾಜನು ನೋಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಗ ಫಕ್ಕನೆ ಮನುಷ್ಯನ ಕೈಯೊಂದು ಕಾಣಿಸಿಕೊಂಡು ಗೋಡೆಯ ಮೇಲೆ ಬರೆಯುವದಕ್ಕೆ ಪ್ರಾರಂಭಿಸಿತು. ಬೆರಳುಗಳು ಗೋಡೆಯ ಸುಣ್ಣದ ಮೇಲೆ ಅಕ್ಷರಗಳನ್ನು ಕೊರೆದವು. ಆ ಕೈಯು ದೀಪಸ್ತಂಭದ ಹತ್ತಿರ ಅರಮನೆಯ ಗೋಡೆಯ ಮೇಲೆ ಅರಸನ ಕಣ್ಣೆದುರಿನಲ್ಲಿಯೇ ಬರೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 5:5
15 ತಿಳಿವುಗಳ ಹೋಲಿಕೆ  

ಈ ಮಾತು ಅರಸನ ಬಾಯಿಯಲ್ಲಿ ಇರುವಾಗಲೇ ಪರಲೋಕದಿಂದ ಒಂದು ಧ್ವನಿ ಉಂಟಾಯಿತು: “ಅರಸನಾದ ನೆಬೂಕದ್ನೆಚ್ಚರನೇ, ನಿನ್ನ ವಿಷಯವಾದ ದೈವೋಕ್ತಿ ಏನೆಂದರೆ: ನಿನ್ನ ರಾಜ್ಯವು ನಿನ್ನಿಂದ ತೆಗೆಯಲಾಗುವುದು.


ನಮಗೆ ವಿರೋಧವಾಗಿ ನಿಂತು ನಮ್ಮ ಮೇಲೆ ತಪ್ಪು ಹೊರಿಸುವಂತೆ ಬರೆಯಲಾಗಿದ್ದ ಶಾಸನಗಳನ್ನು ಕ್ರಿಸ್ತ ಯೇಸು ರದ್ದುಮಾಡಿದರು. ಅವುಗಳನ್ನು ಶಿಲುಬೆಯ ಮೇಲೆ ಜಡಿದು ಇಲ್ಲದಂತೆ ಮಾಡಿದರು.


ದುಷ್ಟರ ಜಯವು ಅಲ್ಪ ಕಾಲ, ಭಕ್ತಿಹೀನರ ಸಂತೋಷವು ಕ್ಷಣ ಮಾತ್ರ.


ಈಗ ಈ ಬರಹವನ್ನು ಓದುವುದಕ್ಕೂ, ಅದರ ಅರ್ಥವನ್ನು ತಿಳಿಸುವುದಕ್ಕೂ ಜ್ಯೋತಿಷ್ಯರಾದ ಜ್ಞಾನಿಗಳು ನನ್ನ ಮುಂದೆ ಬಂದಿದ್ದಾರೆ. ಆದರೆ ಇದರ ಅರ್ಥವನ್ನು ಹೇಳಲಾರದೆ ಹೋದರು.


ಆಗ ಅರಸನ ಎಲ್ಲಾ ಜ್ಞಾನಿಗಳು ಒಳಗೆ ಬಂದರು. ಆದರೆ ಆ ಬರಹವನ್ನು ಓದಲೂ, ಅದರ ಅರ್ಥವನ್ನು ಅರಸನಿಗೆ ತಿಳಿಸಲೂ ಅವರಿಗೆ ಆಗದೆ ಹೋಯಿತು.


ಆ ನುಡಿ ಕೂಡಲೆ ನೆರವೇರಿತು. ನೆಬೂಕದ್ನೆಚ್ಚರನು ಸಮಾಜದಿಂದ ಬಹಿಷ್ಕೃತನಾದನು. ದನಗಳಂತೆ ಹುಲ್ಲು ಮೇಯುತ್ತಿದ್ದನು. ಕೊನೆಗೆ ಅವನ ಕೂದಲು ಹದ್ದಿನ ಗರಿಗಳಂತೆಯೂ, ಅವನ ಉಗುರುಗಳು ಪಕ್ಷಿಗಳ ಉಗುರುಗಳ ಹಾಗೆ ಬೆಳೆಯುವವರೆಗೆ ಅವನ ಶರೀರವು ಆಕಾಶದ ಮಂಜಿನಿಂದ ತೇವವಾಯಿತು.


ಅನೇಕಬಾರಿ ಗದರಿಸಿದರೂ ತಗ್ಗದ ಹಟಮಾರಿ ಪರಿಹಾರವಿಲ್ಲದೆ ಫಕ್ಕನೆ ಮುರಿದು ಬೀಳುವನು.


ಅವರು ದ್ರಾಕ್ಷಾರಸವನ್ನು ಕುಡಿದು ಬಂಗಾರ, ಬೆಳ್ಳಿ, ಕಂಚು, ಕಬ್ಬಿಣ, ಮರ ಮತ್ತು ಕಲ್ಲಿನ ದೇವರುಗಳನ್ನು ಸ್ತುತಿಸಿದರು.


ಆಗ ಅರಸನ ಮುಖವು ಕಳೆಗುಂದಿತು. ಅವನು ತುಂಬಾ ಭಯಭೀತನಾದನು. ಅವನ ಸೊಂಟದ ಕೀಲುಗಳು ಸಡಿಲಗೊಂಡವು. ಮೊಣಕಾಲುಗಳು ಒಂದಕ್ಕೊಂದು ಬಡಿದುಕೊಂಡವು.


ಬಾಬಿಲೋನಿನ ಅರಸನು ಅವರ ಸುದ್ದಿಯನ್ನು ಕೇಳಿದ್ದಾನೆ; ಅವನ ಕೈಗಳು ನಿತ್ರಾಣವಾದವು; ಸಂಕಟವೂ, ಹೆರುವ ಸ್ತ್ರೀಯ ಹಾಗೆ ನೋವೂ ಅವನನ್ನು ಹಿಡಿದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು