Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 5:7 - ಕನ್ನಡ ಸಮಕಾಲಿಕ ಅನುವಾದ

7 ಅರಸನು ಗಟ್ಟಿಯಾಗಿ ಕಿರುಚಿ ಜ್ಯೋತಿಷ್ಯರನ್ನೂ, ಪಂಡಿತರನ್ನೂ, ಶಕುನ ಹೇಳುವವರನ್ನೂ ಕರೆಸಿ, ಬಾಬಿಲೋನಿನ ಜ್ಞಾನಿಗಳಿಗೆ, “ಯಾರು ಈ ಬರಹವನ್ನು ಓದಿ, ಅದರ ಅರ್ಥವನ್ನು ನನಗೆ ತಿಳಿಸುವರೋ, ಅವರಿಗೆ ಧೂಮ್ರವಸ್ತ್ರವನ್ನು ಹೊದಿಸಿ, ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿ, ರಾಜ್ಯದ ಮೂರನೆಯ ಅಧಿಕಾರಿಯಾಗಿ ಮಾಡುವೆನು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಹೀಗಿರಲು ರಾಜನು ಗಟ್ಟಿಯಾಗಿ ಕೂಗಿಕೊಂಡು ಮಂತ್ರವಾದಿ, ಪಂಡಿತ, ಶಾಕುನಿಕರನ್ನು ಕರೆಯಿಸಿ ಬಾಬೆಲಿನ ಆ ವಿದ್ವಾಂಸರಿಗೆ, “ಯಾರು ಈ ಬರಹವನ್ನು ಓದಿ, ಇದರ ಅರ್ಥವನ್ನು ನನಗೆ ತಿಳಿಸುತ್ತಾನೋ ಅವನಿಗೆ ನಾನು ಧೂಮ್ರವಸ್ತ್ರವನ್ನು ಹೊದಿಸಿ, ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ, ಅವನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಕೂಡಲೆ ರಾಜನು ಗಟ್ಟಿಯಾಗಿ ಕೂಗಿ ಮಂತ್ರವಾದಿ, ಪಂಡಿತ ಹಾಗು ಶಾಕುನಿಕರನ್ನು ಕರೆಯಿಸಿದನು. ಬಾಬಿಲೋನಿನ ಆ ವಿದ್ವಾಂಸರಿಗೆ, “ಯಾವನು ಈ ಬರಹವನ್ನು ಓದಿ ಇದರ ಅರ್ಥವನ್ನು ನನಗೆ ತಿಳಿಸುತ್ತಾನೋ ಅವನಿಗೆ ಕೆನ್ನೀಲಿ ರಾಜವಸ್ತ್ರವನ್ನು ತೊಡಿಸಿ, ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ, ಅವನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುವೆನು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಹೀಗಿರಲು ರಾಜನು ಗಟ್ಟಿಯಾಗಿ ಕೂಗಿಕೊಂಡು ಮಂತ್ರವಾದಿ ಪಂಡಿತ ಶಾಕುನಿಕರನ್ನು ಕರೆಯಿಸಿ ಬಾಬೆಲಿನ ಆ ವಿದ್ವಾಂಸರಿಗೆ - ಯಾವನು ಈ ಬರಹವನ್ನು ಓದಿ ಇದರ ಅರ್ಥವನ್ನು ನನಗೆ ತಿಳಿಸುತ್ತಾನೋ ಅವನಿಗೆ ನಾನು ಧೂಮ್ರವಸ್ತ್ರವನ್ನು ಹೊದಿಸಿ ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ ಅವನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇವಿುಸುವೆನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆಗ ರಾಜನು ಗಟ್ಟಿಯಾಗಿ ಕೂಗಿಕೊಂಡು ಮಂತ್ರವಾದಿ, ಪಂಡಿತ, ಶಾಕುನಿಕರನ್ನು ತನ್ನಲ್ಲಿಗೆ ಕರೆಸಿದನು. ಅವನು ಆ ವಿದ್ವಾಂಸರಿಗೆ, “ಈ ಬರವಣಿಗೆಯನ್ನು ಓದಿ ನನಗೆ ಅದರ ಅರ್ಥವನ್ನು ಹೇಳಬಲ್ಲ ಮನುಷ್ಯನಿಗೆ ನಾನು ಬಹುಮಾನವನ್ನು ಕೊಡುತ್ತೇನೆ. ಆ ಮನುಷ್ಯನಿಗೆ ನಾನು ಕಂದು ಬಣ್ಣದ ವಸ್ತ್ರಗಳನ್ನು ಕೊಡುತ್ತೇನೆ. ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ ಅವನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 5:7
28 ತಿಳಿವುಗಳ ಹೋಲಿಕೆ  

ಆಗ ಬೇಲ್ಯಚ್ಚರನು ಆಜ್ಞಾಪಿಸಲು ದಾನಿಯೇಲನಿಗೆ ಧೂಮ್ರವಸ್ತ್ರವನ್ನು ಹೊದಿಸಿ, ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿ, ಇವನು ರಾಜ್ಯದ ಮೂರನೇ ಉನ್ನತ ಅಧಿಕಾರಿಗಳಲ್ಲಿ ಒಬ್ಬನೆಂದು ಸಾರಿದನು.


ಈಗ ನೀನು ಅರ್ಥಗಳನ್ನು ವಿವರಿಸಿ, ಕಷ್ಟಕರವಾದ ಸಮಸ್ಯೆಗಳನ್ನು ಬಗೆಹರಿಸಲು ಸಮರ್ಥನೆಂದು ನಾನು ನಿನ್ನ ವಿಷಯವಾಗಿ ಕೇಳಿದ್ದೇನೆ. ಹೀಗಾದರೆ ಈ ಬರಹವನ್ನು ಓದುವುದಕ್ಕೂ, ಅದರ ಅರ್ಥವನ್ನು ತಿಳಿಸುವುದಕ್ಕೂ ನಿನ್ನಿಂದ ಸಾಧ್ಯವಾದರೆ, ನಿನಗೆ ಧೂಮ್ರವಸ್ತ್ರವನ್ನು ಹೊದಿಸಿ, ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ, ರಾಜ್ಯದ ಮೂರನೆಯ ಅಧಿಕಾರಿಯನ್ನಾಗಿ ನೇಮಿಸುವೆನು,” ಎಂದು ಹೇಳಿದನು.


ಆಗ ಅರಸನು ದಾನಿಯೇಲನನ್ನು ಉನ್ನತ ಸ್ಥಾನದಲ್ಲಿರಿಸಿ, ಅವನಿಗೆ ಅನೇಕ ದೊಡ್ಡ ಬಹುಮಾನಗಳನ್ನು ಕೊಟ್ಟನು. ಸಮಸ್ತ ಬಾಬಿಲೋನಿನ ಪ್ರಾಂತಗಳಿಗೆ ಅಧಿಕಾರಿಯನ್ನಾಗಿಯೂ, ಬಾಬಿಲೋನಿನ ಸಮಸ್ತ ಜ್ಞಾನಿಗಳಿಗೆ ಮುಖ್ಯಾಧಿಪತಿಯನ್ನಾಗಿಯೂ ನೇಮಿಸಿದನು.


ಆದರೆ ನೀವು ಕನಸನ್ನೂ, ಅದರ ಅರ್ಥವನ್ನೂ ನನಗೆ ತಿಳಿಸಿದರೆ, ದಾನಬಹುಮಾನಗಳನ್ನೂ, ಬಹಳ ಘನತೆಯನ್ನೂ ನನ್ನಿಂದ ಪಡೆಯುವಿರಿ. ಹೀಗಿರಲಾಗಿ ಕನಸನ್ನೂ, ಅದರ ವ್ಯಾಖ್ಯಾನವನ್ನೂ ನನಗೆ ತಿಳಿಸಿರಿ,” ಎಂದು ಹೇಳಿದನು.


ಆದ್ದರಿಂದ, ಅರಸನು ತನ್ನ ಕನಸನ್ನು ತಿಳಿಸಲು ಮಂತ್ರಗಾರರನ್ನೂ, ಜೋತಿಷ್ಯರನ್ನೂ, ಮಾಟಗಾರರನ್ನೂ, ಪಂಡಿತರನ್ನೂ ಕರೆಯಲು ಆಜ್ಞಾಪಿಸಿದನು. ಇವರೆಲ್ಲರೂ ಬಂದು ಅರಸನ ಮುಂದೆ ನಿಂತರು.


ಆಭರಣಗಳಿಂದ ನಿನ್ನನ್ನು ಅಲಂಕರಿಸಿದೆನು: ನಾನು ನಿನ್ನ ಕೈಗಳಿಗೆ ಕಡಗಗಳನ್ನು ನಿನ್ನ ಕೊರಳಿಗೆ ಸರವನ್ನು ಹಾಕಿದೆನು.


ನೀನು ನಿನ್ನ ಬಹಳವಾದ ಆಲೋಚನೆಗಳಿಂದ ಆಯಾಸಗೊಂಡಿದ್ದೀ. ಖಗೋಳಜ್ಞರು, ಜೋಯಿಸರು, ಪಂಚಾಂಗದವರು, ಇವರೆಲ್ಲರೂ ನಿಂತುಕೊಂಡು ನಿನಗೆ ಬರುವ ವಿಪತ್ತುಗಳಿಂದ ನಿನ್ನನ್ನು ರಕ್ಷಿಸಲಿ.


ಅವನು ಗಟ್ಟಿಯಾಗಿ ಕೂಗಿ: ‘ಮರವನ್ನು ಕಡಿಯಿರಿ. ಅದರ ಕೊಂಬೆಗಳನ್ನು ಕತ್ತರಿಸಿ, ಅದರ ಎಲೆಗಳನ್ನು ಉದುರಿಸಿ, ಅದರ ಫಲವನ್ನು ಚದುರಿಸಿಬಿಡಿರಿ. ಮೃಗಗಳು ಅದರ ಕೆಳಗಿನಿಂದಲೂ, ಪಕ್ಷಿಗಳು ಅದರ ಕೊಂಬೆಗಳಿಂದಲೂ ಹೋಗಿಬಿಡಲಿ.


ನಿನ್ನ ಕೆನ್ನೆಗಳು ಆಭರಣಗಳ ಸಾಲಿನಿಂದಲೂ, ನಿನ್ನ ಕೊರಳು ಕಂಠ ಮಾಲೆಗಳಿಂದಲೂ ರಮ್ಯವಾಗಿವೆ.


ಅವು ನಿನ್ನ ತಲೆಗೆ ಸುಂದರ ಕಿರೀಟ ನಿನ್ನ ಕೊರಳನ್ನು ಅಲಂಕರಿಸುವ ಹಾರ.


ಈ ಕಾರ್ಯಗಳಾದ ತರುವಾಯ ಅರಸನಾದ ಅಹಷ್ವೇರೋಷನು ಅಗಾಗನ ವಂಶದವನೂ ಹಮ್ಮೆದಾತನ ಮಗ ಹಾಮಾನನನ್ನು ಹಿರಿಯ ಅಧಿಕಾರಿಯನ್ನಾಗಿ ಮಾಡಿ ಅವನನ್ನು ತನ್ನ ಬಳಿಯಲ್ಲಿರುವ ಸಮಸ್ತ ಶ್ರೇಷ್ಠರಿಗಿಂತ ಉನ್ನತಸ್ಥಾನವನ್ನು ಕೊಟ್ಟು ಗೌರವಿಸಿದನು.


ಇಸ್ರಾಯೇಲರು, “ಏರಿ ಬಂದ ಈ ಮನುಷ್ಯನನ್ನು ಕಂಡಿರೋ? ಇಸ್ರಾಯೇಲನ್ನು ಪ್ರತಿಭಟಿಸಿ ಏರಿ ಬಂದಿದ್ದಾನಲ್ಲ. ಯಾವನು ಇವನನ್ನು ಕೊಂದು ಬಿಡುವನೋ, ಅವನನ್ನು ಅರಸನು ಬಹಳ ಐಶ್ವರ್ಯವಂತನನ್ನಾಗಿ ಮಾಡಿ, ಅವನಿಗೆ ತನ್ನ ಮಗಳನ್ನು ಕೊಟ್ಟು ಮದುವೆ ಮಾಡಿಸುವನು ಮತ್ತು ಅವನ ತಂದೆಯ ಮನೆಯನ್ನು ಇಸ್ರಾಯೇಲರಲ್ಲಿ ತೆರಿಗೆಯಿಂದ ವಿಮೋಚಿಸುವನು,” ಎಂದರು.


ಈಗ ನಿನ್ನ ಸ್ಥಳಕ್ಕೆ ಓಡಿಹೋಗು. ನಾನು ನಿನ್ನನ್ನು ಬಹು ಗೌರವಿಸಬೇಕೆಂದಿದ್ದೆ. ಆದರೆ ಇಗೋ, ಯೆಹೋವ ದೇವರು ನಿನಗೆ ಘನತೆ ಬಾರದಂತೆ ತಡೆದಿದ್ದಾನೆ,” ಎಂದನು.


ಏಕೆಂದರೆ ನಾನು ನಿನ್ನನ್ನು ಬಹಳವಾಗಿ ಘನಪಡಿಸುವೆನು. ನೀನು ಹೇಳುವುದನ್ನೆಲ್ಲಾ ನಾನು ಮಾಡುವೆನು. ಆದಕಾರಣ ನೀನು ದಯಮಾಡಿ ಬಂದು ಈ ಜನರನ್ನು ನನಗಾಗಿ ಶಪಿಸು,” ಎಂದನು.


ಆಗ ಮೋವಾಬಿನ ಹಿರಿಯರೂ ಮಿದ್ಯಾನಿನ ಹಿರಿಯರೂ ಭವಿಷ್ಯವಾಣಿ ಕೇಳಲು ಸಲ್ಲಿಸಬೇಕಾದ ಕಾಣಿಕೆಗಳನ್ನು ತೆಗೆದುಕೊಂಡು ಹೋದರು. ಅವರು ಬಿಳಾಮನ ಬಳಿಗೆ ಬಂದು, ಅವನಿಗೆ ಬಾಲಾಕನ ಮಾತುಗಳನ್ನು ಹೇಳಿದರು.


ಬೆಳಿಗ್ಗೆ ಅವನ ಮನಸ್ಸು ಕಳವಳಗೊಂಡಿತು. ಆದ್ದರಿಂದ ಅವನು ಈಜಿಪ್ಟಿನ ಎಲ್ಲಾ ಮಂತ್ರವಾದಿಗಳನ್ನೂ ಎಲ್ಲಾ ಜ್ಞಾನಿಗಳನ್ನೂ ಕರೆಕಳುಹಿಸಿದನು. ಫರೋಹನು ಅವರಿಗೆ ತನ್ನ ಕನಸನ್ನು ತಿಳಿಸಿದಾಗ, ಅವುಗಳ ಅರ್ಥವನ್ನು ಹೇಳುವವರು ಯಾರೂ ಇರಲಿಲ್ಲ.


ಫರೋಹನು ಜ್ಞಾನಿಗಳನ್ನೂ, ಮಂತ್ರವಾದಿಗಳನ್ನೂ ಕರೆಸಿದನು. ಆಗ ಈಜಿಪ್ಟಿನ ಮಂತ್ರಗಾರರೂ ಸಹ ತಮ್ಮ ಮಾಟಗಳಿಂದ ಹಾಗೆಯೇ ಮಾಡಿದರು.


“ಬಾಬಿಲೋನಿಯರ ಮೇಲೆ ಬೀಳಲಿದೆ ಖಡ್ಗ,” ಎಂದು ಯೆಹೋವ ದೇವರು ಹೇಳುತ್ತಾರೆ. “ಅದರ ಜನಸಾಮಾನ್ಯರನ್ನು, ಪ್ರಧಾನರನ್ನು, ಪಂಡಿತರನ್ನು ಇವರೆಲ್ಲರನ್ನು ಹತಿಸಲಿದೆ ಖಡ್ಗ,


ಶಾರೀರಿಕ ನ್ಯೂನತೆ ಇಲ್ಲದವರಾಗಿಯೂ, ಸುಂದರವಾಗಿಯೂ, ಅವರು ಎಲ್ಲಾ ರೀತಿಯ ವಿಷಯಗಳನ್ನು ಕಲಿಯುವ ಸಾಮರ್ಥ್ಯವನ್ನು ಹೊಂದಿರಬೇಕು. ಅವರು ವಿವೇಕವುಳ್ಳವರಾಗಿಯೂ ಮತ್ತು ತ್ವರಿತವಾಗಿ ಅರ್ಥಮಾಡಿಕೊಳ್ಳುವವರಾಗಿಯೂ, ಅರಸನ ಅರಮನೆಯಲ್ಲಿ ಸೇವೆ ಮಾಡಲು ಸಾಮರ್ಥ್ಯವುಳ್ಳವರಾಗಿಯೂ ಇರುವ ಯೌವನಸ್ಥರನ್ನು ತಂದು ಬಾಬಿಲೋನಿಯರ ವಿದ್ಯೆಯನ್ನೂ, ಭಾಷೆಯನ್ನೂ ಅವರಿಗೆ ಬೋಧಿಸಬೇಕೆಂದು ಆಜ್ಞಾಪಿಸಿದನು.


ಅರಸನು ಅವರ ಹತ್ತಿರ ವಿಚಾರಿಸಿದಾಗ ಸಮಸ್ತ ಜ್ಞಾನ ವಿವೇಕಗಳ ವಿಷಯದಲ್ಲಿ ತನ್ನ ರಾಜ್ಯದಲ್ಲಿರುವ ಎಲ್ಲಾ ಮಂತ್ರಗಾರರಿಗಿಂತಲೂ, ಜೋತಿಷ್ಯರಿಗಿಂತಲೂ ಇವರೇ ಹತ್ತರಷ್ಟು ಉತ್ತಮರೆಂದು ಕಂಡನು.


ದಾನಿಯೇಲನು ಅರಸನ ಸನ್ನಿಧಿಯಲ್ಲಿ ಉತ್ತರವಾಗಿ, “ಅರಸನು ಕೇಳುವ ರಹಸ್ಯವನ್ನು ಜ್ಞಾನಿಗಳೂ, ಜ್ಯೋತಿಷ್ಯರೂ, ಮಂತ್ರಗಾರರೂ, ಶಕುನ ಹೇಳುವವರೂ ಅರಸನಿಗೆ ತಿಳಿಸಲಾರರು.


ನಿನ್ನ ರಾಜ್ಯದಲ್ಲಿ ಪರಿಶುದ್ಧ ದೇವರುಗಳ ಆತ್ಮವುಳ್ಳ ಒಬ್ಬ ಮನುಷ್ಯನಿದ್ದಾನೆ. ದೇವರುಗಳ ಜ್ಞಾನಕ್ಕೆ ಸಮಾನವಾದ ಜ್ಞಾನವೂ, ವಿವೇಕವೂ, ಬುದ್ಧಿಯೂ, ಪ್ರಕಾಶವೂ ನಿನ್ನ ತಂದೆಯ ಕಾಲದಲ್ಲಿ ಅವನೊಳಗೆ ಕಂಡುಬಂದವು. ನಿನ್ನ ತಂದೆ ನೆಬೂಕದ್ನೆಚ್ಚರ ಅರಸನು ಅವನನ್ನು ಮಂತ್ರಗಾರರಿಗೂ, ಜ್ಯೋತಿಷ್ಯರಿಗೂ, ಪಂಡಿತರಿಗೂ, ಶಕುನಗಾರರಿಗೂ ಅಧಿಕಾರಿಯನ್ನಾಗಿ ನೇಮಿಸಿದನು.


ಈಗ ಈ ಬರಹವನ್ನು ಓದುವುದಕ್ಕೂ, ಅದರ ಅರ್ಥವನ್ನು ತಿಳಿಸುವುದಕ್ಕೂ ಜ್ಯೋತಿಷ್ಯರಾದ ಜ್ಞಾನಿಗಳು ನನ್ನ ಮುಂದೆ ಬಂದಿದ್ದಾರೆ. ಆದರೆ ಇದರ ಅರ್ಥವನ್ನು ಹೇಳಲಾರದೆ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು