Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 6:28 - ಕನ್ನಡ ಸಮಕಾಲಿಕ ಅನುವಾದ

28 ಹೀಗೆ ದಾನಿಯೇಲನು ದಾರ್ಯಾವೆಷನ ಆಳ್ವಿಕೆಯಲ್ಲಿಯೂ, ಪಾರಸಿಯನಾದ ಕೋರೆಷನ ಆಳ್ವಿಕೆಯಲ್ಲಿಯೂ ಸಮೃದ್ಧವಾಗಿ ಬಾಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಈ ದಾನಿಯೇಲನು ದಾರ್ಯಾವೆಷನ ಆಳ್ವಿಕೆಯಲ್ಲಿಯೂ, ಪಾರಸಿಯನಾದ ಕೋರೆಷನ ಆಳ್ವಿಕೆಯಲ್ಲಿಯೂ ಸನ್ಮಾನ, ಗೌರವಗಳಿಂದ ಬಾಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಹೀಗೆ ಈ ದಾನಿಯೇಲನು ದಾರ್ಯಾವೆಷನ ಆಳ್ವಿಕೆಯಲ್ಲೂ ಪರ್ಷಿಯನಾದ ಸೈರೆಷನ ಆಳ್ವಿಕೆಯಲ್ಲೂ ಪ್ರವರ್ಧಿಸುತ್ತಾ ಬಾಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಈ ದಾನಿಯೇಲನು ದಾರ್ಯಾವೆಷನ ಆಳಿಕೆಯಲ್ಲಿಯೂ ಪಾರಸಿಯನಾದ ಕೋರೆಷನ ಆಳಿಕೆಯಲ್ಲಿಯೂ ಘನವಂತನಾಗಿ ಬಾಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ದಾನಿಯೇಲನು ದಾರ್ಯಾವೆಷನ ಆಳ್ವಿಕೆಯಲ್ಲಿಯೂ ಪಾರಸಿಯನಾದ ಕೋರೆಷನ ಆಳ್ವಿಕೆಯಲ್ಲಿಯೂ ಘನತೆಯನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 6:28
10 ತಿಳಿವುಗಳ ಹೋಲಿಕೆ  

ದಾನಿಯೇಲನು ರಾಜ ಕೋರೆಷನ ಆಳಿಕೆಯ ಮೊದಲನೆಯ ವರ್ಷದ ತನಕ ಅಲ್ಲಿಯೇ ಇದ್ದನು.


ಆದರೆ ಪಾರಸಿಯ ಅರಸ ಕೋರೆಷನ ಮೊದಲನೆಯ ವರ್ಷದಲ್ಲಿ ಯೆಹೋವ ದೇವರು ಯೆರೆಮೀಯನ ಮುಂಖಾತರ ಹೇಳಿದ ವಾಕ್ಯವು ಈಡೇರುವ ಹಾಗೆ ಯೆಹೋವ ದೇವರು ಪಾರಸಿಯ ಅರಸ ಕೋರೆಷನ ಆತ್ಮವನ್ನು ಪ್ರೇರೇಪಿಸಿದ್ದರಿಂದ, ಅವನು ತನ್ನ ಸಮಸ್ತ ರಾಜ್ಯದಲ್ಲಿ ಡಂಗುರದಿಂದಲೂ, ಪತ್ರಗಳಿಂದಲೂ ಸಾರಿ ಹೇಳಿದ್ದೇನೆಂದರೆ,


ಕೋರೆಷನ ವಿಷಯವಾಗಿ ಹೀಗೆ ಹೇಳುವೆನು, ‘ನನ್ನ ಕುರುಬನು, ನನ್ನ ಇಷ್ಟವನ್ನೆಲ್ಲಾ ಪೂರೈಸುವವನು, ಯೆರೂಸಲೇಮಿಗೆ, “ನೀನು ಪುನಃ ನಿರ್ಮಾಣವಾಗುವೆ,” ದೇವಾಲಯಕ್ಕೆ, “ನಿನಗೆ ಅಸ್ತಿವಾರವು ಹಾಕಲಾಗುವುದು,” ಎಂದು ಅನ್ನುವವನೂ ನಾನೇ.’


ಪಾರಸಿಯ ಅರಸ ಕೋರೆಷನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಬೇಲ್ತೆಶಚ್ಚರನೆಂಬ ದಾನಿಯೇಲನಿಗೆ ಒಂದು ಪ್ರಕಟಣೆಯಾಯಿತು. ಅದರ ಸಂದೇಶವು ಸತ್ಯವಾದದ್ದು. ಅದು ಮಹಾ ಯುದ್ಧ ವಿಷಯವಾಗಿದೆ. ಸಂದೇಶದ ಅರ್ಥವು ಅವನಿಗೆ ಒಂದು ದರ್ಶನದಲ್ಲಿ ಬಂದಿತು.


“ಪಾರಸಿಯ ಅರಸ ಕೋರೆಷನು ಹೀಗೆ ಹೇಳುತ್ತಾನೆ: “ ‘ಪರಲೋಕದ ದೇವರಾದ ಯೆಹೋವ ದೇವರು ಭೂಲೋಕದ ರಾಜ್ಯಗಳನ್ನೆಲ್ಲಾ ನನಗೆ ಕೊಟ್ಟಿದ್ದಾರೆ ಮತ್ತು ಅವರು ಯೆಹೂದ ದೇಶದ ಯೆರೂಸಲೇಮಿನಲ್ಲಿ ತಮಗೆ ಆಲಯವನ್ನು ಕಟ್ಟಿಸಲು ನನಗೆ ಆಜ್ಞಾಪಿಸಿದ್ದಾರೆ. ನಿಮ್ಮಲ್ಲಿ ಯಾರು ಅವರ ಪ್ರಜೆಗಳಾಗಿರುತ್ತೀರೋ, ಅಂಥವರು ಸ್ವಂತನಾಡಿಗೆ ಹೋಗಬಹುದು. ದೇವರಾದ ಯೆಹೋವ ದೇವರು ಅವರ ಸಂಗಡ ಇರಲಿ!’ ” ಎಂದನು.


“ಫರ್ಸಿನ್ ಎಂದರೆ ನಿನ್ನ ರಾಜ್ಯವು ವಿಭಿನ್ನವಾಗಿ ಮೇದ್ಯರಿಗೂ, ಪಾರಸಿಯರಿಗೂ ಕೊಡಲಾಗಿದೆ,” ಎಂಬದಾಗಿ ಅರಿಕೆಮಾಡಿದನು.


ಯಾಕೋಬನ ಮತ್ತು ಯೋಸೇಫನ ಸಂತತಿಯವರಾದ ನಿಮ್ಮ ಜನರನ್ನು ನಿಮ್ಮ ಬಲವಾದ ತೋಳಿನಿಂದ ವಿಮೋಚಿಸಿದ್ದೀರಿ.


ನೀವು ಈ ದಿನದವರೆಗೂ ಈಜಿಪ್ಟ್ ದೇಶದಲ್ಲಿಯೂ ಇಸ್ರಾಯೇಲಿನಲ್ಲಿಯೂ ಜನಾಂಗಗಳೊಳಗೂ ಗುರುತುಗಳನ್ನೂ, ಲಕ್ಷಣಗಳನ್ನೂ ಇಟ್ಟಿದ್ದೀರಿ. ಇಂದಿನವರೆಗೂ ನಿಮಗೆ ಹೆಸರನ್ನು ಸ್ಥಿರಪಡಿಸಿಕೊಂಡಿದ್ದೀರಿ.


ಆದ್ದರಿಂದ ಸಕಲ ಪ್ರಜೆ, ಜನಾಂಗ, ಭಾಷೆಗಳಲ್ಲಿ ಯಾರು ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬುವರ ದೇವರಿಗೆ ವಿರೋಧವಾಗಿ ದೂಷಣೆ ಮಾಡುವರೋ, ಅವರನ್ನು ತುಂಡುತುಂಡಾಗಿ ಮಾಡಿರಿ, ಅವರ ಮನೆಗಳು ತಿಪ್ಪೆ ಗುಂಡಿಗಳಾಗಿ ಮಾಡಿರಿ, ಎಂದು ನಾನು ರಾಜಾಜ್ಞೆಯನ್ನು ವಿಧಿಸುತ್ತೇನೆ. ಏಕೆಂದರೆ ಈ ವಿಧವಾಗಿ ರಕ್ಷಿಸುವ ದೇವರು ಇನ್ಯಾರೂ ಇರುವುದಿಲ್ಲ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು