Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 6:4 - ಕನ್ನಡ ಸಮಕಾಲಿಕ ಅನುವಾದ

4 ಹೀಗಿರಲು ಉಪರಾಜರೂ, ದೇಶಾಧಿಪತಿಗಳೂ ರಾಜ್ಯಭಾರದ ವಿಷಯವಾಗಿ ದಾನಿಯೇಲನ ವಿರೋಧವಾಗಿ ತಪ್ಪು ಹೊರಿಸುವುದಕ್ಕೆ ಸಂದರ್ಭ ಹುಡುಕುತ್ತಿದ್ದರು. ಆದರೆ ಅವನು ನಂಬಿಗಸ್ತನಾಗಿದ್ದು ಅವನಲ್ಲಿ ತಪ್ಪು ನಿರ್ಲಕ್ಷ್ಯತೆ ಇಲ್ಲದಿರುವುದರಿಂದ ಅವರಿಗೆ ಯಾವ ತಪ್ಪೂ ಸಿಗಲಾರದೆ ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಹೀಗಿರಲು ಮುಖ್ಯಾಧಿಕಾರಿಗಳೂ, ದೇಶಾಧಿಪತಿಗಳೂ ಅಸೂಯೆಯಿಂದ ರಾಜ್ಯಭಾರದ ವಿಷಯವಾಗಿ ದಾನಿಯೇಲನ ಮೇಲೆ ತಪ್ಪುಹೊರಿಸುವುದಕ್ಕೆ ಸಂದರ್ಭ ಹುಡುಕುತ್ತಿದ್ದರು. ಆದರೆ ತಪ್ಪುಹೊರಿಸುವ ಯಾವ ಸಂದರ್ಭವನ್ನೂ, ಯಾವ ತಪ್ಪನ್ನೂ ಕಾಣಲಾರದೆ ಹೋದರು. ಅವನು ನಂಬಿಗಸ್ತನೇ ಆಗಿದ್ದನು, ಅವನಲ್ಲಿ ಆಲಸ್ಯವಾಗಲಿ, ಅಕ್ರಮವಾಗಲಿ ಸಿಕ್ಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಹೀಗಿರಲು ಮುಖ್ಯಾಧಿಕಾರಿಗಳು ಮತ್ತು ಪ್ರಾಂತ್ಯಾಧಿಪತಿಗಳು ರಾಜ್ಯಾಡಳಿತದ ವಿಷಯವಾಗಿ ದಾನಿಯೇಲನ ಮೇಲೆ ತಪ್ಪುಹೊರಿಸುವುದಕ್ಕೆ ಸಂದರ್ಭ ಹುಡುಕುತ್ತಿದ್ದರು. ಆದರೆ ತಪ್ಪುಹೊರಿಸುವ ಯಾವ ಸಂದರ್ಭವೂ ದೊರಕಲಿಲ್ಲ. ಅವನಲ್ಲಿ ಯಾವ ತಪ್ಪನ್ನೂ ಕಾಣಲಾರದೆ ಹೋದರು. ಅವನು ಅಷ್ಟು ನಂಬಿಕಸ್ತನಾಗಿದ್ದನು! ಅವನಲ್ಲಿ ಯಾವ ಅಕ್ರಮವಾಗಲಿ, ಆಲಸ್ಯವಾಗಲಿ ಕಾಣಸಿಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಹೀಗಿರಲು ಮುಖ್ಯಾಧಿಕಾರಿಗಳೂ ದೇಶಾಧಿಪತಿಗಳೂ ರಾಜ್ಯಭಾರದ ವಿಷಯವಾಗಿ ದಾನಿಯೇಲನ ಮೇಲೆ ತಪ್ಪುಹೊರಿಸುವದಕ್ಕೆ ಸಂದರ್ಭ ಹುಡುಕುತ್ತಿದ್ದರು; ಆದರೆ ತಪ್ಪುಹೊರಿಸುವ ಯಾವ ಸಂದರ್ಭವನ್ನೂ ಯಾವ ತಪ್ಪನ್ನೂ ಕಾಣಲಾರದೆ ಹೋದರು; ಅವನು ನಂಬಿಗಸ್ತನೇ ಆಗಿದ್ದನು, ಅವನಲ್ಲಿ ಆಲಸ್ಯವಾಗಲಿ ಅಕ್ರಮವಾಗಲಿ ಸಿಕ್ಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆದರೆ ಬೇರೆ ಮುಖ್ಯಾಧಿಕಾರಿಗಳು ಮತ್ತು ದೇಶಾಧಿಪತಿಗಳು ಈ ಸಮಾಚಾರವನ್ನು ತಿಳಿದು ಹೊಟ್ಟೆಕಿಚ್ಚುಪಟ್ಟರು. ಅವರು ದಾನಿಯೇಲನ ಮೇಲೆ ದೋಷಾರೋಪಣೆ ಮಾಡಲು ಕಾರಣಗಳನ್ನು ಹುಡುಕಲಾರಂಭಿಸಿದರು. ದಾನಿಯೇಲನು ಮಾಡುವ ರಾಜ್ಯದ ಎಲ್ಲ ಕೆಲಸಗಳ ಮೇಲೆ ಅವರು ಕಣ್ಣಿಟ್ಟರು. ಆದರೆ ದಾನಿಯೇಲನಲ್ಲಿ ಯಾವ ತಪ್ಪೂ ಅವರಿಗೆ ಸಿಕ್ಕಲಿಲ್ಲ. ಆದ್ದರಿಂದ ಅವರು ಅವನ ಮೇಲೆ ಯಾವ ದೋಷಾರೋಪಣೆಯನ್ನೂ ಮಾಡಲಾಗಲಿಲ್ಲ. ದಾನಿಯೇಲನು ಪ್ರಾಮಾಣಿಕನೂ ವಿಶ್ವಾಸಪಾತ್ರನೂ ಆಗಿದ್ದನು. ಅವನು ಬಹಳ ಕಷ್ಟಪಟ್ಟು ಕೆಲಸ ಮಾಡುತ್ತಿದ್ದನು; ಅರಸನಿಗೆ ಯಾವ ರೀತಿಯಲ್ಲೂ ವಂಚನೆ ಮಾಡುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 6:4
32 ತಿಳಿವುಗಳ ಹೋಲಿಕೆ  

ಒಳ್ಳೆಯ ಮನಸ್ಸಾಕ್ಷಿಯುಳ್ಳವರಾಗಿರಿ. ಆಗ ನೀವು ಕೆಟ್ಟದ್ದನ್ನು ಮಾಡುವವರೆಂದು ನಿಮ್ಮ ವಿಷಯವಾಗಿ ಕೆಟ್ಟದ್ದಾಗಿ ಮಾತನಾಡಿ ಕ್ರಿಸ್ತ ಯೇಸುವಿನಲ್ಲಿರುವ ನಿಮ್ಮ ಒಳ್ಳೆಯ ನಡವಳಿಕೆಯ ವಿಷಯವಾಗಿ ಸುಳ್ಳಾಗಿ ದೂರು ಹೇಳುವವರು ನಾಚಿಕೊಳ್ಳುವರು.


ಹೀಗೆ ನೀವು ನಿಂದಾರಹಿತರೂ ದೋಷವಿಲ್ಲದವರೂ, “ನಿಷ್ಕಳಂಕರಾದ ದೇವರ ಮಕ್ಕಳಾಗಿ, ವಕ್ರವಾದ ದುಷ್ಟ ಜನಾಂಗದ ಮಧ್ಯದಲ್ಲಿ,” ಜೀವವಾಕ್ಯವನ್ನು ಹಿಡಿದುಕೊಂಡು, ಲೋಕದಲ್ಲಿ ನಕ್ಷತ್ರಗಳಂತೆ ಹೊಳೆಯುವವರಾಗಿರುವಿರಿ.


ನಿಮ್ಮ ನಡವಳಿಕೆಯು ಯೆಹೂದ್ಯರಲ್ಲದವರ ನಡುವೆ ಯೋಗ್ಯವಾಗಿರಲಿ, ಆಗ ಅವರು ಯಾವ ವಿಷಯದಲ್ಲಿ ನಿಮ್ಮನ್ನು ಕೆಟ್ಟವರೆಂದು ನಿಂದಿಸುತ್ತಾರೋ, ಆ ನಿಮ್ಮ ವಿಷಯದಲ್ಲಿಯೇ ನಿಮ್ಮ ಸತ್ಕ್ರಿಯೆಗಳನ್ನು ಕಣ್ಣಾರೆ ಕಂಡು ಕರ್ತ ಯೇಸು ನಮ್ಮನ್ನು ದರ್ಶಿಸುವ ದಿನದಲ್ಲಿ ಅವರು ದೇವರನ್ನು ಕೊಂಡಾಡುವರು.


ಅವರು ಯೇಸುವನ್ನು ಹೊಂಚಿ ನೋಡುತ್ತಾ, ಮಾತಿನಲ್ಲಿ ಅವರನ್ನು ಸಿಕ್ಕಿಸುವಂತೆ ಅಧಿಪತಿಗೂ ಅಧಿಕಾರಕ್ಕೂ ಒಪ್ಪಿಸಿಕೊಡಲು, ನೀತಿವಂತರೆಂದು ನಟಿಸುವ ಗೂಢಚಾರರನ್ನು ಕಳುಹಿಸಿದರು.


ನಿಂದೆಗೆ ಹೊರತಾದ ಸ್ವಸ್ಥ ಮಾತುಗಳನ್ನಾಡುವವನಾಗಿರು. ಇದರಿಂದ ವಿರೋಧಿಸುವವನು ನಿನ್ನ ವಿಷಯದಲ್ಲಿ ಕೆಟ್ಟದ್ದೇನೂ ಹೇಳುವುದಕ್ಕಾಗದೆ ನಾಚಿಕೆ ಪಡುವನು.


ಯೇಸುವನ್ನು ಅವರು ಹೊಟ್ಟೆಕಿಚ್ಚಿನಿಂದ ಒಪ್ಪಿಸಿಕೊಟ್ಟಿದ್ದರೆಂದು ಪಿಲಾತನಿಗೆ ತಿಳಿದಿತ್ತು.


ಏಕೆಂದರೆ ಅನೇಕರ ಚಾಡಿಯನ್ನು ಕೇಳಿದೆನು. “ಸುತ್ತಲೂ ಭಯವಿದೆ. ಅವನನ್ನು ಖಂಡಿಸಿರಿ! ಅವನನ್ನು ಖಂಡಿಸೋಣ!” ನನ್ನ ಆಪ್ತರೆಲ್ಲರೂ ನಾನು ಕುಂಟುವುದನ್ನು ನೋಡಿಕೊಳ್ಳುತ್ತಾ ಒಂದು ವೇಳೆ ಅವನು ಮೋಸಗೊಂಡಾನು. “ಆಗ ನಾವು ಅವನನ್ನು ಗೆದ್ದು, ಅವನಲ್ಲಿ ಮುಯ್ಯಿಗೆ ಮುಯ್ಯಿ ತೀರಿಸಿಕೊಳ್ಳುವೆವು ಅನ್ನುತ್ತಾರೆ.”


ಆದ್ದರಿಂದ ಯೌವನಸ್ಥ ವಿಧವೆಯರು ಮದುವೆಮಾಡಿಕೊಂಡು, ಮಕ್ಕಳನ್ನು ಹೆತ್ತು, ಮನೆಯ ಕೆಲಸಮಾಡಿ, ವಿರೋಧಿಯ ನಿಂದೆಗೆ ಆಸ್ಪದ ಕೊಡಬಾರದೆಂಬುದೇ ನನ್ನ ಅಪೇಕ್ಷೆ.


ಮನುಷ್ಯನು ಪಡುವ ಎಲ್ಲಾ ಪ್ರಯಾಸವನ್ನೂ ಸಾಧಿಸುವ ಎಲ್ಲಾ ಕಾರ್ಯಗಳನ್ನೂ ನೋಡಿದಾಗ ಇವು ಪರಸ್ಪರ ಮತ್ಸರಕ್ಕೆ ಕಾರಣವೆಂದು ನಾನು ತಿಳಿದುಕೊಂಡೆನು. ಇದು ಕೂಡ ಗಾಳಿಯನ್ನು ಬೆನ್ನಟ್ಟಿದ ಹಾಗೆ ವ್ಯರ್ಥವೇ.


ನೀತಿವಂತರು ಅಪ್ರಾಮಾಣಿಕರನ್ನು ದ್ವೇಷಿಸುತ್ತಾರೆ. ದುಷ್ಟರು ಪ್ರಾಮಾಣಿಕರನ್ನು ತಿರಸ್ಕರಿಸುತ್ತಾರೆ.


ಇದು ಯೆಹೋವ ದೇವರಿಂದ ಉಂಟಾಯಿತೆಂದು ಅವನ ತಂದೆತಾಯಂದಿರು ಅರಿಯದೆ ಇದ್ದರು. ಏಕೆಂದರೆ ಫಿಲಿಷ್ಟಿಯರಿಗೆ ವಿರೋಧವಾಗಿ ಅವನು ಕಾರಣವನ್ನು ಹುಡುಕಿದನು. ಆ ಕಾಲದಲ್ಲಿ ಫಿಲಿಷ್ಟಿಯರು ಇಸ್ರಾಯೇಲರನ್ನು ಆಳುತ್ತಿದ್ದರು.


ಯೋಸೇಫನ ಮನೆಗೆ ಕರೆತಂದದ್ದರಿಂದ ಅವರು ಭಯಪಟ್ಟು, “ಹಿಂದೆ ನಮ್ಮ ಚೀಲಗಳಲ್ಲಿ ತಿರುಗಿ ಸೇರಿದ ಹಣಕ್ಕಾಗಿ ನಮ್ಮನ್ನು ಹಿಡಿದು, ನಮ್ಮ ಮೇಲೆ ಬಿದ್ದು, ನಮ್ಮನ್ನು ದಾಸರಾಗಿ ಮಾಡಿ, ನಮ್ಮ ಕತ್ತೆಗಳನ್ನು ತೆಗೆದುಕೊಳ್ಳುವುದಕ್ಕೆ ನಮ್ಮನ್ನು ಇಲ್ಲಿಗೆ ತಂದಿದ್ದಾನೆ,” ಎಂದರು.


ತಾವು ಮಾಡುವ ಕಾರ್ಯಗಳ ಬಗ್ಗೆ ನಮ್ಮೊಂದಿಗೆ ಸರಿಸಮಾನವೆಂದು ಹೊಗಳಿಕೊಳ್ಳಲು ಅವಕಾಶವನ್ನು ಹುಡುಕುವವರಿಗೆ, ಯಾವ ಆಸ್ಪದವೂ ಸಿಗದಂತೆ ನಾನು ಮಾಡುತ್ತಿರುವುದನ್ನು ನಿಲ್ಲಿಸದೆ, ಇನ್ನು ಮುಂದೆಯೂ ಮಾಡುತ್ತಿರುವೆನು.


ಆಗ ಪಿಲಾತನು ತಿರುಗಿ ಹೊರಗೆ ಹೋಗಿ ಯೆಹೂದ್ಯರ ಗುಂಪಿಗೆ, “ಇಗೋ, ನಾನು ಆತನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲವೆಂದು ನೀವು ತಿಳಿದುಕೊಳ್ಳುವಂತೆ ಆತನನ್ನು ನಿಮ್ಮ ಬಳಿಗೆ ತರುತ್ತೇನೆ,” ಎಂದನು.


ಮುಖ್ಯಯಾಜಕರೂ ನಿಯಮ ಬೋಧಕರೂ ಯೇಸುವನ್ನು ಹೇಗೆ ಕೊಲ್ಲಬೇಕೆಂದು ಹುಡುಕುತ್ತಿದ್ದರು. ಆದರೆ ಅವರು ಜನರಿಗೆ ಭಯಪಟ್ಟರು.


ತಾವು ಕುಯುಕ್ತಿಯಿಂದ ಯೇಸುವನ್ನು ಹಿಡಿದು ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡರು.


ಆ ಸಮಯದಲ್ಲಿ ಪಂಡಿತರು ಯೆಹೂದ್ಯರ ಮೇಲೆ ದೂರು ಹೊರಿಸಲು ಅರಸನ ಸನ್ನಿಧಿಗೆ ಬಂದು


ಆದರೂ ಯೆಹೋವ ದೇವರೇ, ಅವರು ನನ್ನನ್ನು ಸಾಯಿಸುವುದಕ್ಕೆ ನನಗೆ ವಿರೋಧವಾಗಿ ಮಾಡಿದ ಆಲೋಚನೆಯನ್ನೆಲ್ಲಾ ನೀವು ಬಲ್ಲಿರಿ. ಅವರ ಅಕ್ರಮವನ್ನು ಮನ್ನಿಸಬೇಡಿ. ಅವರ ಪಾಪಗಳನ್ನು ನಿನ್ನ ಸನ್ನಿಧಿಯೊಳಗಿಂದ ಅಳಿಸಿಬಿಡಬೇಡಿರಿ. ಅವರು ನಿಮ್ಮ ಮುಂದೆ ಎಡವಿಬೀಳಲಿ. ನಿಮ್ಮ ಕೋಪದ ಕಾಲದಲ್ಲಿ ಅವರಿಗೆ ತಕ್ಕದ್ದನ್ನು ಮಾಡಿರಿ.


ಆಗ ಜನರು, “ಬನ್ನಿರಿ, ಯೆರೆಮೀಯನಿಗೆ ವಿರೋಧವಾಗಿ ಯುಕ್ತಿಯನ್ನು ಕಲ್ಪಿಸೋಣ. ಯಾಜಕನಿಂದ ನಿಯಮ ಬೋಧನೆಯೂ, ಜ್ಞಾನಿಯಿಂದ ಆಲೋಚನೆಯೂ, ಪ್ರವಾದಿಯಿಂದ ವಾಕ್ಯವೂ ನಿಂತುಹೋಗುವುದಿಲ್ಲ. ಬನ್ನಿರಿ, ನಾಲಿಗೆಯಿಂದ ಅವನನ್ನು ಆಕ್ರಮಿಸೋಣ. ಅವನ ಮಾತುಗಳಲ್ಲಿ ಒಂದನ್ನಾದರೂ ಲಕ್ಷಿಸದೆ ಇರೋಣ,” ಎಂದು ಹೇಳಿದರು.


ಅಹೀಮೆಲೆಕನು ಅರಸನಿಗೆ ಉತ್ತರವಾಗಿ, “ನಿನ್ನ ಸಮಸ್ತ ಸೇವಕರಲ್ಲಿ ದಾವೀದನ ಹಾಗೆ ನಂಬಿಗಸ್ತನಾದವನು ಯಾರಿದ್ದಾರೆ? ಅವನು ಅರಸನಿಗೆ ಅಳಿಯನೂ ನಿಮ್ಮ ಅಂಗರಕ್ಷಕರ ನಾಯಕನೂ ನಿನ್ನ ಮನೆಯಲ್ಲಿ ಘನವುಳ್ಳವನೂ ಆಗಿದ್ದಾನೆ.


ಯೆಹೋವ ದೇವರು ದಾವೀದನ ಸಂಗಡ ಇದ್ದುದರಿಂದ ಅವನು ತನ್ನ ಸಕಲ ಮಾರ್ಗಗಳಲ್ಲಿ ವಿವೇಕದಿಂದ ವರ್ತಿಸಿ ಜಯಶಾಲಿಯಾಗುತ್ತಿದ್ದನು.


ಯೇಸು ಜನರ ಮುಂದೆ ಬಹಿರಂಗವಾಗಿ ಹೇಳಿದ ಮಾತಿನಲ್ಲಿ ಅವರು ತಪ್ಪು ಕಂಡುಹಿಡಿಯಲಾರದೆ ಹೋದರು. ಯೇಸುವಿನ ಉತ್ತರಗಳಿಗಾಗಿ ಆಶ್ಚರ್ಯಪಟ್ಟು ಸುಮ್ಮನಾದರು.


ನಾನು ನಿಮ್ಮನ್ನು ಸೆರೆಯಾಗಿ ಒಯ್ದ ಪಟ್ಟಣದ ಸಮಾಧಾನ ಮತ್ತು ಸಮೃದ್ಧಿಯನ್ನು ಹುಡುಕಿರಿ. ಅದಕ್ಕೋಸ್ಕರ ಯೆಹೋವ ದೇವರಿಗೆ ಪ್ರಾರ್ಥನೆಮಾಡಿರಿ. ಏಕೆಂದರೆ ಅದರ ಸಮಾಧಾನದಿಂದ ನಿಮಗೆ ಸಮಾಧಾನವಾಗುವುದು.”


ನನ್ನ ದೇವರು ತಮ್ಮ ದೂತನನ್ನು ಕಳುಹಿಸಿ, ನನಗೆ ಯಾವ ಹಾನಿಯೂ ಆಗದಂತೆ ಸಿಂಹಗಳ ಬಾಯಿಗಳನ್ನು ಮುಚ್ಚಿಹಾಕಿದ್ದಾರೆ. ಏಕೆಂದರೆ ಅವರ ಮುಂದೆ ನಾನು ಯಥಾರ್ಥನೆಂದು ಗೋಚರವಾಗಿದ್ದೇನೆ. ಅರಸನೇ, ನಿನ್ನ ಮುಂದೆಯೂ ಸಹ ನಾನು ಯಾರಿಗೂ ತಪ್ಪನ್ನು ಮಾಡಲಿಲ್ಲ,” ಎಂದು ಹೇಳಿದನು.


ಫರೋಹನು ತನ್ನ ಸೇವಕರಿಗೆ, “ಯೋಸೇಫನಂಥ ದೇವರಾತ್ಮವುಳ್ಳ ಮನುಷ್ಯನು ಸಿಕ್ಕಾನೋ?” ಎಂದನು.


ಅವರು, “ನೀನು ನಮಗೆ ವಂಚನೆ ಮಾಡಲಿಲ್ಲ, ನಮ್ಮನ್ನು ಹಿಂಸಿಸಲಿಲ್ಲ, ನೀನು ಯಾರ ಕೈಯಿಂದಲೂ ಏನೂ ತೆಗೆದುಕೊಳ್ಳಲಿಲ್ಲ,” ಎಂದರು.


ಏಕೆಂದರೆ ಬೇಲ್ತೆಶಚ್ಚರನೆಂಬ ಹೆಸರನ್ನು ಅರಸನಿಂದ ಪಡೆದ ಆ ದಾನಿಯೇಲನಲ್ಲಿ ಕನಸುಗಳ ಅರ್ಥವನ್ನು ಹೇಳುವುದಕ್ಕೂ, ಕಠಿಣವಾದ ಸಂಗತಿಗಳನ್ನು ತಿಳಿಸುವುದಕ್ಕೂ, ಒಗಟುಗಳನ್ನು ವಿವರಿಸುವುದಕ್ಕೂ ಕಷ್ಟಕರವಾದ ಸಮಸ್ಯೆಗಳನ್ನು ಪರಿಹರಿಸುವುದಕ್ಕೂ ಉತ್ತಮ ಆತ್ಮವೂ, ಜ್ಞಾನವೂ, ವಿವೇಕವೂ ಸಿಕ್ಕಿದವು. ಈಗ ಆ ದಾನಿಯೇಲನನ್ನು ಕರೆಯಿಸಿದರೆ, ಅವನು ಈ ಬರಹದ ಅರ್ಥವನ್ನು ವಿವರಿಸುವನು,” ಎಂದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು