Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 8:1 - ಕನ್ನಡ ಸಮಕಾಲಿಕ ಅನುವಾದ

1 ಮೊದಲು ನನಗೆ ಕಾಣಿಸಿದ ದರ್ಶನವಲ್ಲದೆ ಅರಸನಾದ ಬೇಲ್ಯಚ್ಚರನ ಆಳ್ವಿಕೆಯ ಮೂರನೆಯ ವರ್ಷದಲ್ಲಿಯೂ, ಮೊದಲಿನ ದರ್ಶನದಂಥ ಇನ್ನೊಂದು ದರ್ಶನವೂ ದಾನಿಯೇಲನಾದ ನನಗೆ ಕಾಣಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಮೊದಲು ನನಗೆ ಕಾಣಿಸಿದ ಕನಸಲ್ಲದೆ ಅರಸನಾದ ಬೇಲ್ಶಚ್ಚರನ ಆಳ್ವಿಕೆಯ ಮೂರನೆಯ ವರ್ಷದಲ್ಲಿಯೂ ಇನ್ನೊಂದು ಕನಸು ದಾನಿಯೇಲನಾದ ನನಗೆ ಕಾಣಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಮೊದಲು ನನಗೆ ಕಾಣಿಸಿದ ಕನಸಲ್ಲದೆ, ಅರಸ ಬೇಲ್ಶಚ್ಚರನ ಆಳ್ವಿಕೆಯ ಮೂರನೇ ವರ್ಷದಲ್ಲಿ ದಾನಿಯೇಲನಾದ ನನಗೆ ಇನ್ನೊಂದು ಕನಸು ಕಾಣಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಮೊದಲು ನನಗೆ ಕಾಣಿಸಿದ ಕನಸಲ್ಲದೆ ಅರಸನಾದ ಬೇಲ್ಶಚ್ಚರನ ಆಳಿಕೆಯ ಮೂರನೆಯ ವರುಷದಲ್ಲಿಯೂ ಇನ್ನೊಂದು ಕನಸು ದಾನಿಯೇಲನಾದ ನನಗೆ ಕಾಣಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಅರಸನಾದ ಬೇಲ್ಶಚ್ಚರನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ದಾನಿಯೇಲನೆಂಬ ನಾನು ಈ ದರ್ಶನವನ್ನು ಕಂಡೆನು. ಇದು ಮೊದಲಿನ ದರ್ಶನದ ತರುವಾಯ ಕಂಡದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 8:1
11 ತಿಳಿವುಗಳ ಹೋಲಿಕೆ  

ಬಾಬಿಲೋನಿನ ಅರಸನಾದ ಬೇಲ್ಯಚ್ಚರನ ಮೊದಲನೆಯ ವರ್ಷದಲ್ಲಿ ದಾನಿಯೇಲನು ಹಾಸಿಗೆಯ ಮೇಲೆ ಮಲಗಿದ್ದಾಗ ಕನಸನ್ನೂ, ದರ್ಶನಗಳನ್ನೂ ಕಂಡು, ತನ್ನ ಕನಸಿನ ತಾತ್ಪರ್ಯವನ್ನು ಬರೆದಿಟ್ಟನು.


ಅವನು ಉದಯಿಸಿದ ನಂತರ, ಅವನ ರಾಜ್ಯ ಒಡೆದು ಆಕಾಶದ ನಾಲ್ಕು ದಿಕ್ಕುಗಳಿಗೂ ಪಾಲಾಗುವುದು. ಅದು ಅವನ ಸಂತತಿಗೆ ಭಾಗವಾಗದು. ಅವನ ಆಳ್ವಿಕೆಯಲ್ಲಿ ರಾಜ್ಯವು ಪ್ರಬಲವಾಗಿದ್ದಂತೆ ಅದು ಇನ್ನು ಪ್ರಬಲವಾಗದು. ಏಕೆಂದರೆ ಅವನ ರಾಜ್ಯವನ್ನು ಅವನಿಂದ ಕಿತ್ತುಕೊಂಡು ಇತರರಿಗೆ ನೀಡಲಾಗುವುದು.


ದಾನಿಯೇಲನೆಂಬ ನಾನು ಒಬ್ಬನೇ ಆ ದರ್ಶನವನ್ನು ನೋಡಿದೆನು. ನನ್ನ ಸಂಗಡವಿದ್ದ ಜನರು ಆ ದರ್ಶನವನ್ನು ನೋಡಲಿಲ್ಲ. ಆದರೆ ಅವರು ಭಯಭ್ರಾಂತರಾಗಿ ಓಡಿಹೋಗಿ ಅಡಗಿಕೊಂಡರು.


ಆ ಸಮಯದಲ್ಲಿ ದಾನಿಯೇಲನೆಂಬ ನಾನು, ಮೂರು ವಾರಗಳವರೆಗೂ ದುಃಖಪಡುತ್ತಿದ್ದೆನು.


ದಾನಿಯೇಲನಾದ ನಾನು ಪವಿತ್ರ ಗ್ರಂಥಗಳನ್ನು ಪರೀಕ್ಷಿಸಿ, ಯೆಹೋವ ದೇವರ ಪ್ರವಾದಿ ಯೆರೆಮೀಯನಿಗೆ ದಯಪಾಲಿಸಿದ ವಾಕ್ಯಾನುಸಾರ, ಯೆರೂಸಲೇಮ್ ಪಾಳುಬಿದ್ದಿರಬೇಕಾದ ಪೂರ್ಣ ಕಾಲಾವಧಿ ಎಪ್ಪತ್ತು ವರ್ಷಗಳೆಂದು ತಿಳಿದುಕೊಂಡೆನು.


ದಾನಿಯೇಲನೆಂಬ ನಾನು ಆ ದರ್ಶನವನ್ನು ನೋಡಿ, ಅದರ ಅರ್ಥವನ್ನು ಗ್ರಹಿಸಲು ಪ್ರಯತ್ನಿಸುತ್ತಿರುವಾಗ, ಮನುಷ್ಯನ ರೂಪದಂತಿರುವ ಒಬ್ಬನು ನನ್ನ ಮುಂದೆ ನಿಂತಿದ್ದನು.


“ಇಷ್ಟರಲ್ಲಿ ಇದರ ಪ್ರಸ್ತಾಪವು ಮುಗಿಯಿತು. ದಾನಿಯೇಲನೆಂಬ ನನಗೆ ನನ್ನ ಆಲೋಚನೆಗಳು ಬಹಳವಾಗಿ ಕಳವಳಪಡಿಸಿದವು. ನನ್ನ ಮುಖವು ಕಳೆಗುಂದಿತು. ಆದರೂ ಈ ಸಂಗತಿಯನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡೆನು.”


“ದಾನಿಯೇಲನೆಂಬ ನಾನು ನನ್ನ ಆತ್ಮದಲ್ಲಿ ನೊಂದುಕೊಂಡೆನು. ನನ್ನ ಮನಸ್ಸಿನಲ್ಲಿ ಹಾದುಹೋದ ದರ್ಶನಗಳ ನಿಮಿತ್ತ ಕಳವಳಗೊಂಡೆನು.


ನಾನು ಸೆರೆಯವರ ಜೊತೆ ಕೆಬಾರ್ ನದಿಯ ಬಳಿಯಲ್ಲಿರುವಾಗ ಮೂವತ್ತನೆಯ ವರ್ಷದ, ನಾಲ್ಕನೆಯ ತಿಂಗಳಿನ, ಐದನೆಯ ದಿನದಲ್ಲಿ ಆಕಾಶ ತೆರೆಯಿತು. ನಾನು ದೇವರ ದರ್ಶನಗಳನ್ನು ಕಂಡೆನು.


ಈ ನಾಲ್ಕು ಯೌವನಸ್ಥರಿಗೆ ದೇವರು ಎಲ್ಲಾ ವಿದ್ಯೆಯಲ್ಲಿಯೂ, ಜ್ಞಾನದಲ್ಲಿಯೂ, ತಿಳುವಳಿಕೆಯನ್ನೂ, ವಿವೇಕವನ್ನೂ ಕೊಟ್ಟರು. ದಾನಿಯೇಲನು ಸಕಲ ದರ್ಶನಗಳಲ್ಲಿಯೂ, ಕನಸುಗಳಲ್ಲಿಯೂ ತಿಳುವಳಿಕೆಯುಳ್ಳವನಾಗಿದ್ದನು.


ಈ ದರ್ಶನದಲ್ಲಿ ನಾನು ನೋಡಿದ್ದೇನೆಂದರೆ: ನಾನು ಏಲಾಮ್ ಸೀಮೆಯಲ್ಲಿರುವ ಶೂಷನಿನ ಅರಮನೆಯಲ್ಲಿದ್ದೆನು. ಆ ದರ್ಶನದಲ್ಲಿ ನಾನು ಊಲಾ ನದಿಯ ದಡದ ಬಳಿಯಲ್ಲಿ ನಿಂತಿರುವ ಹಾಗೆ ತೋರಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು