Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 8:23 - ಕನ್ನಡ ಸಮಕಾಲಿಕ ಅನುವಾದ

23 “ಅವರ ರಾಜ್ಯದ ಕಡೆಯ ಕಾಲದಲ್ಲಿ ಯಾವಾಗ ಅಪರಾಧಿಗಳು ತುಂಬಿ ಬರುವರೋ, ಆಗ ಕ್ರೂರ ಮುಖವುಳ್ಳವನೂ, ತಂತ್ರವುಳ್ಳವನೂ ಆದ ಒಬ್ಬ ಅರಸನು ಏಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆ ರಾಜ್ಯಗಳ ಕಡೆಯ ಕಾಲದಲ್ಲಿ, ಅಧರ್ಮಿಗಳ ಅಧರ್ಮವು ಪೂರ್ತಿಯಾದಾಗ ಕಠಿಣಮುಖನೂ, ತಂತ್ರವುಳ್ಳವನೂ ಆದ ಒಬ್ಬ ರಾಜನು ತಲೆದೋರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಆ ರಾಜ್ಯಗಳ ಕಡೆಯಕಾಲ ಬಂದಾಗ, ಅಧರ್ಮಿಗಳ ಅಪರಾಧ ಭರ್ತಿಯಾದಾಗ, ಕ್ರೂರ ಮುಖನೂ ಕುತಂತ್ರ ವಚನ ನಿಪುಣನೂ ಆದ ಒಬ್ಬ ರಾಜನು ತಲೆದೋರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆ ರಾಜ್ಯಗಳ ಕಡೆಯ ಕಾಲದಲ್ಲಿ, ಅಧರ್ಮಿಗಳ ಅಧರ್ಮವು ಪೂರ್ತಿಯಾದಾಗ ಕಠಿನಮುಖನೂ ದ್ವಂದ್ವಾರ್ಥವಚನನಿಪುಣನು ಆದ ಒಬ್ಬ ರಾಜನು ತಲೆದೋರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 “ಆ ರಾಜ್ಯಗಳ ಅಂತ್ಯಕಾಲ ಸಮೀಪಿಸಿದಾಗ ಒಬ್ಬ ಧೈರ್ಯಶಾಲಿಯಾದ ಮತ್ತು ಕ್ರೂರನಾದ ಅರಸನು ತಲೆದೋರುವನು. ಈ ಅರಸನು ಬಹಳ ಕುತಂತ್ರಿಯಾಗಿರುವನು. ಅಧರ್ಮಿಗಳ ಮತ್ತು ಪಾಪಿಗಳ ಸಂಖ್ಯೆ ಹೆಚ್ಚಾದಾಗ ಇದೆಲ್ಲ ನಡೆಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 8:23
23 ತಿಳಿವುಗಳ ಹೋಲಿಕೆ  

ಆಗ ಮೃಗವನ್ನು ಸೆರೆಹಿಡಿಯಲಾಯಿತು. ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ, ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಸುಳ್ಳು ಪ್ರವಾದಿ ಸಹ ಅದರ ಜೊತೆಯಲ್ಲಿ ಸೆರೆಸಿಕ್ಕಿದನು. ಇವರಿಬ್ಬರನ್ನೂ ಜೀವಸಹಿತವಾಗಿ ಗಂಧಕದಿಂದ ಉರಿಯುವ ಬೆಂಕಿಯ ಕೆರೆಯಲ್ಲಿ ಹಾಕಲಾಯಿತು.


ಮುಂಬರುವ ದಿನಗಳಲ್ಲಿ ಕೆಲವರು ವಂಚಿಸುವ ಆತ್ಮಗಳಿಗೂ ದೆವ್ವಗಳ ಬೋಧನೆಗಳಿಗೂ ಲಕ್ಷ್ಯಗೊಟ್ಟು ವಿಶ್ವಾಸದಲ್ಲಿ ಬಿದ್ದುಹೋಗುವರೆಂದು ಪವಿತ್ರಾತ್ಮ ದೇವರು ಸ್ಪಷ್ಟವಾಗಿ ಹೇಳುತ್ತಾರೆ.


ಅದರ ತಲೆಯಲ್ಲಿದ್ದ ಹತ್ತು ಕೊಂಬುಗಳ ವಿಷಯವಾಗಿಯೂ, ನಾನು ನೋಡುತ್ತಿದ್ದ ಹಾಗೆಯೇ ಯಾವ ಕೊಂಬು ಮೊಳೆತು ಮೂರು ಕೊಂಬುಗಳನ್ನು ಬೀಳಿಸಿ, ತನ್ನಲ್ಲಿಯೇ ಕಣ್ಣುಳ್ಳದ್ದಾಗಿ ಬಡಾಯಿ ಮಾತನಾಡಿದ ಬಾಯುಳ್ಳದ್ದಾಗಿ, ಮಿಕ್ಕ ಕೊಂಬುಗಳಿಗಿಂತ ಭಯಂಕರವಾಗಿ ಕಾಣಿಸುತ್ತಾ ಇದ್ದ ಆ ಕೊಂಬಿನ ವಿಷಯವಾಗಿ ಸತ್ಯಾರ್ಥವನ್ನು ತಿಳಿಯಬೇಕೆಂದಿದ್ದೇನೆ.


“ನಾನು ನೋಡುತ್ತಿರಲು, ಆ ಕೊಂಬು ಬಡಾಯಿಕೊಚ್ಚಿಕೊಂಡದ್ದರಿಂದ ಮೃಗವನ್ನು ಕೊಂದು ಅದರ ಹೆಣವನ್ನು ಉರಿಯುವ ಬೆಂಕಿಗೆ ಹಾಕಿ ನಾಶಮಾಡಿದರು.


“ಆ ಕೊಂಬುಗಳ ಬಗ್ಗೆ ನಾನು ಆಲೋಚಿಸುತ್ತಿರುವಾಗ ಇಗೋ, ಮತ್ತೊಂದು ಚಿಕ್ಕ ಕೊಂಬು ಅವುಗಳಲ್ಲಿ ಎದ್ದು ಕಾಣುತ್ತಿದೆ. ಇದರ ಮುಂದೆ ಮೊದಲಿನ ಕೊಂಬುಗಳಲ್ಲಿ ಮೂರನ್ನು ಬೇರುಸಹಿತ ಕೀಳಲಾಯಿತು. ಈ ಕೊಂಬಿನಲ್ಲಿ ಮನುಷ್ಯರ ಕಣ್ಣುಗಳ ಹಾಗೆ ಕಣ್ಣುಗಳೂ, ಬಡಾಯಿ ಕೊಚ್ಚುವ ಬಾಯಿಯೂ ಇದ್ದವು.


ಅವನು ಮಹೋನ್ನತ ದೇವರಿಗೆ ವಿರೋಧವಾಗಿ ಕೊಚ್ಚಿಕೊಂಡು ಮಾತುಗಳನ್ನಾಡಿ, ಪರಿಶುದ್ಧರನ್ನು ಬಾಧಿಸಿ, ಕಾಲ ನಿಯಮಗಳನ್ನು ಬದಲಾಯಿಸುವುದಕ್ಕೆ ಪ್ರಯತ್ನಿಸುವನು. ಪರಿಶುದ್ಧರು ಒಂದುಕಾಲ, ಎರಡುಕಾಲ, ಅರ್ಧಕಾಲದ ತನಕ ಅವರು ಅವನ ಕೈವಶವಾಗಿರುವರು.


ಅವನು ತನ್ನ ಶಕ್ತಿಯಿಂದಲೇ ತನ್ನ ಕಪಟತನವನ್ನು ಸಿದ್ಧಿಗೆ ತರುವನು. ಅವನು ಹೃದಯದಲ್ಲಿ ತನ್ನನ್ನು ತಾನೇ ಹೆಚ್ಚಿಸಿಕೊಂಡು ಸುರಕ್ಷಿತರಾಗಿದ್ದೇವೆಂದು ಹೇಳುವಾಗಲೇ ಅನೇಕರನ್ನು ನಾಶಮಾಡುವನು. ಅಲ್ಲದೆ ಅವನು ರಾಜಕುಮಾರರ ರಾಜಕುಮಾರನಿಗೆ ವಿರುದ್ಧವಾಗಿ ನಿಲ್ಲುವನು. ಆದರೂ ಮಾನವ ಶಕ್ತಿಯ ಬಳಕೆ ಇಲ್ಲದೆಯೂ ನಾಶವಾಗುವನು.


ನೀನು ದೇಶವನ್ನು ಮುಚ್ಚುವ ಮೇಘದಂತೆ ನನ್ನ ಜನರಾಗಿರುವ ಇಸ್ರಾಯೇಲರಿಗೆ ವಿರೋಧವಾಗಿ ಅವರ ಮೇಲೆ ಬರುವೆ. ಇದು ನಡೆಯುವ ಕೊನೆಯ ದಿವಸಗಳಲ್ಲಿ ಓ ಗೋಗನೇ, ನಾನು ಅವರ ಕಣ್ಣುಗಳ ಮುಂದೆ ನಿನ್ನಲ್ಲಿ ಪರಿಶುದ್ಧನಾಗುವಾಗ, ಇತರ ಜನಾಂಗಗಳು ನನ್ನನ್ನು ತಿಳಿಯುವ ಹಾಗೆ ನಿನ್ನನ್ನು ನನ್ನ ದೇಶಕ್ಕೆ ವಿರೋಧವಾಗಿ ಬರಮಾಡುವೆನು.


ಬಹಳ ದಿವಸಗಳಾದ ಮೇಲೆ ನಾನು ನಿನ್ನನ್ನು ಕರೆಯುವೆನು; ನೀನು ಯುದ್ಧದಿಂದ ಉಳಿದುಕೊಂಡ ದೇಶಕ್ಕೂ, ಯಾವಾಗಲೂ ಹಾಳಾಗಿದ್ದ ಇಸ್ರಾಯೇಲ್ ಪರ್ವತಗಳ ಮೇಲೆಯೂ, ಜನಾಂಗಗಳಿಂದ ಒಟ್ಟುಗೂಡಿ ಭದ್ರವಾಗಿ ವಾಸಿಸುವವರ ವಿರೋಧವಾಗಿ ವರ್ಷಗಳ ಅಂತ್ಯದಲ್ಲಿ ಬರುವೆ.


ನೆಮ್ಮದಿಯ ಕಾಲದಲ್ಲಿ ಸಂಸ್ಥಾನಗಳ ಫಲವತ್ತಾದ ಪ್ರದೇಶಗಳಲ್ಲಿ ನುಗ್ಗಿ, ತಂದೆ ತಾತಂದಿರು ಮಾಡದ ಕಾರ್ಯಗಳನ್ನು ಮಾಡುವನು. ಸೂರೆ, ಸುಲಿಗೆ, ಕೊಳ್ಳೆ ಹೊಡೆದವುಗಳನ್ನು, ತನ್ನನ್ನು ಅವರಿಗೆ ಹಂಚುವನು. ಕೋಟೆಗಳನ್ನು ಹಿಡಿಯುವ ಕುತಂತ್ರಗಳನ್ನು ಕ್ಲುಪ್ತಕಾಲದ ತನಕ ಕಲ್ಪಿಸುತ್ತಿರುವನು.


ಅವನ ಸ್ಥಾನದಲ್ಲಿ ಒಬ್ಬ ನೀಚನು ನಿಲ್ಲುವನು. ಅವನಿಗೆ ರಾಜಮರ್ಯಾದೆಯನ್ನು ಕೊಡುವುದಿಲ್ಲ. ಆದರೆ ಅವನು ಸಮಾಧಾನವಾಗಿ ನಯನುಡಿಗಳಿಂದ ರಾಜ್ಯವನ್ನು ಪಡೆದುಕೊಳ್ಳುವನು.


ನಿನ್ನ ಜನರಿಗೆ ಮುಂದಿನ ದಿನಗಳಲ್ಲಿ ಏನು ಸಂಭವಿಸುವುದು ಎಂಬುದನ್ನು ತಿಳಿಸುವುದಕ್ಕೋಸ್ಕರ ನಾನೀಗ ಬಂದಿದ್ದೇನೆ. ಏಕೆಂದರೆ ದರ್ಶನವು ಮುಂದೆ ಬರಲಿಕ್ಕಿರುವ ಸಮಯವನ್ನು ಕುರಿತಾಗಿರುತ್ತದೆ,” ಎಂದನು.


ಆಗ ನಾಲ್ಕನೆಯ ಸಂತಾನದವರು ಇಲ್ಲಿಗೆ ತಿರುಗಿ ಬರುವರು. ಏಕೆಂದರೆ ಅಮೋರಿಯರ ಅಪರಾಧವು ಇನ್ನೂ ಪೂರ್ಣಸ್ಥಿತಿಗೆ ಬರಲಿಲ್ಲ,” ಎಂದು ಹೇಳಿದರು.


ಯೆಹೂದ್ಯರಲ್ಲದವರಿಗೆ ರಕ್ಷಣೆಯಾಗುವಂತೆ ಮಾತನಾಡುವ ನಮಗೆ ಅವರು ಅಡ್ಡಿ ಮಾಡುತ್ತಾರೆ. ಹೀಗೆ ತಮ್ಮ ಪಾಪಗಳನ್ನು ಯಾವಾಗಲೂ ಹೆಚ್ಚೆಚ್ಚಾಗಿ ಕೂಡಿಸಿಕೊಳ್ಳುತ್ತಾ ಹೋಗುತ್ತಾರೆ. ಕೊನೆಗೆ ಕೋಪಾಗ್ನಿಯೂ ಅವರ ಮೇಲೆ ಬರಲಿದೆ.


ಹಾಗಾದರೆ ನಿಮ್ಮ ಪಿತೃಗಳ ಅಪರಾಧದ ಅಳತೆಯನ್ನು ನೀವೇ ಪೂರ್ಣಗೊಳಿಸಿರಿ.


ಆ ಜನಾಂಗದವರು ಕ್ರೂರಮುಖವುಳ್ಳವರು. ನಿಮ್ಮನ್ನು ವೃದ್ಧರೆಂದು ಮರ್ಯಾದೆ ತೋರಿಸುವದಿಲ್ಲ, ಚಿಕ್ಕವರೆಂದು ದಯೆಯೂ ತೋರಿಸುವುದಿಲ್ಲ.


ಕಿತ್ತೀಮೆಂಬ ತೀರದಿಂದ ಹಡಗುಗಳು ಬಂದು, ಅಸ್ಸೀರಿಯರನ್ನೂ, ಏಬೆರ್ ಜನರನ್ನೂ ಸೋಲಿಸುವುವು. ಅವನು ಸಹ ಸದಾಕಾಲಕ್ಕೂ ನಾಶವಾಗುವನು.”


ಜ್ಞಾನೋಕ್ತಿಗಳನ್ನು, ಸಾಮ್ಯಗಳನ್ನು, ಜ್ಞಾನಿಗಳ ಮಾತು ಹಾಗೂ ಒಗಟುಗಳನ್ನು ಅರ್ಥಮಾಡಿಕೊಳ್ಳಲು ಇವು ಬರೆಯಲಾಗಿವೆ.


ಆ ಕೊಂಬು ಮುರಿದುಹೋದ ಮೇಲೆ, ಅದಕ್ಕೆ ಬದಲಾಗಿ ನಾಲ್ಕು ಕೊಂಬುಗಳು ಎದ್ದಂತೆಯೇ, ಆ ಜನಾಂಗದಿಂದ ನಾಲ್ಕು ರಾಜ್ಯಗಳು ಉದಯಿಸುವುವು. ಆದರೆ ಮೊದಲನೆಯ ಅರಸನಿಗೆ ಇದ್ದಷ್ಟು ಅಧಿಕಾರ ಅವರಿಗೆ ಇರುವುದಿಲ್ಲ.


ಅವನ ಶಕ್ತಿಯು ಬಲವಾಗಿರುವುದು. ಆದರೆ ಅದು ಸ್ವಂತ ಶಕ್ತಿಯಲ್ಲ. ಅವನು ಆಶ್ಚರ್ಯದ ರೀತಿಯಲ್ಲಿ ನಾಶಮಾಡಿ ಅಭಿವೃದ್ಧಿಯಾಗುವನು. ಅವನು ತನ್ನ ಇಷ್ಟಾರ್ಥವನ್ನು ತೀರಿಸಿಕೊಳ್ಳುವನು. ಬಲವಾದ, ಪರಿಶುದ್ಧ ಜನರನ್ನು ನಾಶಮಾಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು