Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 8:27 - ಕನ್ನಡ ಸಮಕಾಲಿಕ ಅನುವಾದ

27 ದಾನಿಯೇಲನಾದ ನಾನು ಬಳಲಿ ಕೆಲವು ದಿನಗಳವರೆಗೂ ಅಸ್ವಸ್ಥನಾದೆನು. ಅನಂತರ ನಾನು ಎದ್ದು, ಅರಸನ ಕೆಲಸ ಕಾರ್ಯಗಳನ್ನು ಮಾಡಿದೆನು. ನಾನು ಆ ದರ್ಶನದ ಬಗ್ಗೆ ಬೆಚ್ಚಿಬೆರಗಾದೆನು. ಅದರ ಅರ್ಥವನ್ನೇ ಗ್ರಹಿಸಿಕೊಳ್ಳಲಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆಗ ದಾನಿಯೇಲನಾದ ನಾನು ಮೂರ್ಛೆಹೋಗಿ, ಕೆಲವು ದಿನಗಳು ಕಾಯಿಲೆ ಬಿದ್ದೆನು. ಆ ಮೇಲೆ ಎದ್ದು ರಾಜಕಾರ್ಯವನ್ನು ನಡೆಸಿದೆನು. ಆ ಕನಸಿಗೆ ಬೆಚ್ಚಿಬೆರಗಾದೆನು. ಅದು ಯಾರಿಗೂ ತಿಳಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ದಾನಿಯೇಲನಾದ ನಾನು ಮೂರ್ಛೆಗೊಂಡೆ. ಕೆಲವು ದಿವಸ ಕಾಯಿಲೆ ಬಿದ್ದೆ. ಆಮೇಲೆ ಎದ್ದು ರಾಜಕಾರ್ಯವನ್ನು ಆರಂಭಿಸಿದೆ. ಆದರೂ ಆ ಕನಸಿಗೆ ಬೆಚ್ಚಿಬೆರಗಾದೆ. ಅದರ ಅರ್ಥವನ್ನು ಗ್ರಹಿಸಿಕೊಳ್ಳಲಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆಗ ದಾನಿಯೇಲನಾದ ನಾನು ಬೆಂಡಾಗಿ ಕೆಲವು ದಿವಸ ಕಾಯಿಲೆಬಿದ್ದೆನು; ಆಮೇಲೆ ಎದ್ದು ರಾಜಕಾರ್ಯವನ್ನು ನಡಿಸಿದೆನು; ಆ ಕನಸಿಗೆ ಬೆಚ್ಚಿಬೆರಗಾದೆನು; ಅದು ಯಾರಿಗೂ ತಿಳಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ದಾನಿಯೇಲನೆಂಬ ನಾನು ಬಹಳ ಅಶಕ್ತನಾದೆನು. ಆ ದರ್ಶನದ ತರುವಾಯ ಹಲವಾರು ದಿವಸ ನಾನು ಕಾಯಿಲೆ ಬಿದ್ದೆನು. ಆಮೇಲೆ ನಾನು ಗುಣಹೊಂದಿ ರಾಜಕಾರ್ಯವನ್ನು ಪ್ರಾರಂಭಿಸಿದೆನು. ಆದರೆ ಆ ದರ್ಶನದಿಂದ ನನ್ನ ಮನಸ್ಸು ಕಲಕಿತು. ಆ ದರ್ಶನದ ಅರ್ಥವೇನೆಂಬುದು ನನಗೆ ತಿಳಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 8:27
12 ತಿಳಿವುಗಳ ಹೋಲಿಕೆ  

“ಇಷ್ಟರಲ್ಲಿ ಇದರ ಪ್ರಸ್ತಾಪವು ಮುಗಿಯಿತು. ದಾನಿಯೇಲನೆಂಬ ನನಗೆ ನನ್ನ ಆಲೋಚನೆಗಳು ಬಹಳವಾಗಿ ಕಳವಳಪಡಿಸಿದವು. ನನ್ನ ಮುಖವು ಕಳೆಗುಂದಿತು. ಆದರೂ ಈ ಸಂಗತಿಯನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡೆನು.”


ನಾನು ಕೇಳಿದಾಗ ನನ್ನ ಹೃದಯ ಬಡಿದುಕೊಂಡಿತು; ಆ ಶಬ್ದಕ್ಕೆ ನನ್ನ ತುಟಿಗಳು ಕದಲಿದವು; ನನ್ನ ಎಲುಬುಗಳು ಕ್ಷಯಗೊಂಡವು; ನನ್ನ ಕಾಲುಗಳು ನಡುಗಿದವು; ಆದರೂ ನಮ್ಮ ಮೇಲೆ ದಾಳಿಮಾಡುವ ಜನರ ಮೇಲೆ ನಾಶನ ಬರುವುದನ್ನು ನೋಡಲು ತಾಳ್ಮೆಯಿಂದ ಕಾದಿರುವೆನು.


ಆಗ ಮಾನವನಂತೆ ಇರುವ ಒಬ್ಬನು ನನ್ನ ತುಟಿಗಳನ್ನು ಮುಟ್ಟಿದನು. ನಾನು ಬಾಯಿತೆರೆದು ಮಾತನಾಡಿ, ನನ್ನ ಮುಂದೆ ನಿಂತಿದ್ದವನಿಗೆ, “ನನ್ನ ಒಡೆಯನೇ, ಆ ದರ್ಶನದ ನಿಮಿತ್ತ, ನನ್ನ ಸಂಕಟಗಳು ನನ್ನ ಮೇಲೆ ತಿರುಗಿಕೊಂಡಿವೆ, ನಾನು ನಿತ್ರಾಣನಾಗಿದ್ದೇನೆ.


ನಾನು ಒಬ್ಬನೇ ಉಳಿದು, ಈ ಅದ್ಭುತ ದರ್ಶನವನ್ನು ನೋಡಿದೆನು. ನನ್ನಲ್ಲಿ ತ್ರಾಣವು ಇರಲಿಲ್ಲ. ನನ್ನ ಮುಖವು ನನ್ನಲ್ಲಿ ಕುಂದಿಹೋಯಿತು. ನನಗೆ ತ್ರಾಣವು ಇಲ್ಲದೆ ಹೋಯಿತು.


ಅದು ಟಗರಿನ ಹತ್ತಿರ ಬರುವುದನ್ನು ನಾನು ನೋಡಿದೆನು. ಅದರ ಮೇಲಿನ ಕ್ರೋಧದಿಂದ ಅದನ್ನು ಹಾದು, ಅದರ ಎರಡು ಕೊಂಬುಗಳನ್ನು ಮುರಿದು ಬಿಟ್ಟಿತು. ಅದರ ಮುಂದೆ ನಿಲ್ಲುವುದಕ್ಕೆ ಟಗರಿಗೆ ಏನೂ ಶಕ್ತಿಯಿರಲಿಲ್ಲ. ಆದರೆ ಹೋತವು ಟಗರನ್ನು ನೆಲಕ್ಕೆ ಉರುಳಿಸಿ ತುಳಿಯಿತು. ಟಗರನ್ನು ಹೋತದ ಹಿಡಿತದಿಂದ ಬಿಡಿಸುವವರು ಯಾರೂ ಇರಲಿಲ್ಲ.


ಈ ದರ್ಶನದಲ್ಲಿ ನಾನು ನೋಡಿದ್ದೇನೆಂದರೆ: ನಾನು ಏಲಾಮ್ ಸೀಮೆಯಲ್ಲಿರುವ ಶೂಷನಿನ ಅರಮನೆಯಲ್ಲಿದ್ದೆನು. ಆ ದರ್ಶನದಲ್ಲಿ ನಾನು ಊಲಾ ನದಿಯ ದಡದ ಬಳಿಯಲ್ಲಿ ನಿಂತಿರುವ ಹಾಗೆ ತೋರಿತು.


ನಿನ್ನಲ್ಲಿ ದೇವರುಗಳ ಆತ್ಮ ಉಂಟೆಂದೂ, ಒಳನೋಟ, ಬುದ್ಧಿಯೂ, ಉತ್ತಮ ಜ್ಞಾನವೂ ನಿನ್ನಲ್ಲಿ ಇವೆ ಎಂದೂ ನಿನ್ನ ವಿಷಯವಾಗಿ ಕೇಳಿದ್ದೇನೆ.


ಸಮುಯೇಲನು ಉದಯದವರೆಗೂ ಮಲಗಿದ್ದು, ಯೆಹೋವ ದೇವರ ಮನೆಯ ಬಾಗಿಲುಗಳನ್ನು ತೆರೆದನು. ಆದರೆ ಸಮುಯೇಲನು ದರ್ಶನವನ್ನು ಏಲಿಗೆ ತಿಳಿಸಲು ಭಯಪಟ್ಟನು.


ಆಗ ಬೇಲ್ತೆಶಚ್ಚರನೆಂಬ ಹೆಸರುಳ್ಳ ದಾನಿಯೇಲನು ಒಂದು ಗಳಿಗೆ ವಿಸ್ಮಿತನಾಗಿ ತನ್ನ ಆಲೋಚನೆಗಳಲ್ಲಿ ಕಳವಳಗೊಂಡನು. ಆಗ ಅರಸನು ಮಾತನಾಡಿ, “ಬೇಲ್ತೆಶಚ್ಚರನೇ, ಕನಸಾದರೂ, ಅದರ ಅರ್ಥವಾದರೂ ನಿನ್ನನ್ನು ಕಳವಳಪಡಿಸದಿರಲಿ,” ಎಂದನು. ಬೇಲ್ತೆಶಚ್ಚರನು ಉತ್ತರವಾಗಿ, “ನನ್ನ ಒಡೆಯನೇ, ಆ ಕನಸು ನಿನ್ನ ವೈರಿಗಳಿಗೂ, ಅದರ ಅರ್ಥವು ನಿನ್ನ ಶತ್ರುಗಳಿಗೂ ಆಗಲಿ.


ಅದರಂತೆ ಅವನು ನನ್ನ ಬಳಿಗೆ ಬಂದನು. ಅವನು ಬಂದಾಗ ನಾನು ಭಯಪಟ್ಟು ಮುಖ ಕೆಳಗಾಗಿ ಬಿದ್ದೆನು. ಆದರೆ ಅವನು ನನಗೆ, “ಮನುಷ್ಯಪುತ್ರನೇ, ಅಂತ್ಯಕಾಲದಲ್ಲಿ ನೆರವೇರುವ ದರ್ಶನವು ಎಂಬುದು ನಿನಗೆ ಮನದಟ್ಟಾಗಿರಲಿ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು