Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 9:12 - ಕನ್ನಡ ಸಮಕಾಲಿಕ ಅನುವಾದ

12 ಅವರು ನಮಗೂ, ನಮಗೆ ನ್ಯಾಯ ತೀರಿಸಿದ ನ್ಯಾಯಾಧಿಪತಿಗಳಿಗೂ ವಿರೋಧವಾಗಿ ತಾವು ಹೇಳಿದ ಮಾತುಗಳನ್ನು ನೆರವೇರಿಸಿ, ನಮ್ಮ ಮೇಲೆ ದೊಡ್ಡ ವಿನಾಶ ಬರುವ ಹಾಗೆ ಮಾಡಿದ್ದಾರೆ. ಯೆರೂಸಲೇಮಿನಲ್ಲಿ ನಡೆದ ಹಾಗೆ ಇಡೀ ಆಕಾಶದ ಕೆಳಗೆ ಎಲ್ಲೂ ನಡೆಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆಹಾ, ನಮ್ಮ ದೇವರು ನಮ್ಮ ಮೇಲೆ ದೊಡ್ಡ ಕೇಡನ್ನು ಬರಮಾಡಿ ನಮ್ಮನ್ನೂ, ನಮ್ಮನ್ನಾಳುವ ಅಧಿಪತಿಗಳನ್ನೂ ಕುರಿತು ಗದರಿಸಿ ಹೇಳಿದ ಮಾತುಗಳನ್ನು ನೆರವೇರಿಸಿದ್ದಾನೆ; ಯೆರೂಸಲೇಮಿಗೆ ಆದಂತಹ ಕೇಡು ಭೂಮಂಡಲದಲ್ಲಿ ಎಲ್ಲಿಯೂ ಎಂದೂ ಆಗಲಿಲ್ಲವಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನಮ್ಮ ದೇವರು ನಮ್ಮ ಮೇಲೆ ದೊಡ್ಡ ಕೇಡನ್ನು ಬರಮಾಡಿದ್ದಾರೆ. ನಮ್ಮನ್ನೂ ನಮ್ಮನ್ನಾಳುವ ಅಧಿಪತಿಗಳನ್ನೂ ಖಂಡಿಸಿ ಹೇಳಿದ ಮಾತುಗಳನ್ನು ನೆರವೇರಿಸಿದ್ದಾರೆ. ಜೆರುಸಲೇಮಿಗೆ ಆದಂಥ ಕೇಡು ವಿಶ್ವದಲ್ಲಿ ಎಂದೂ ಆಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 [ಆಹಾ, ನಮ್ಮ ದೇವರು] ನಮ್ಮ ಮೇಲೆ ದೊಡ್ಡ ಕೇಡನ್ನು ಬರಮಾಡಿ ನಮ್ಮನ್ನೂ ನಮ್ಮನ್ನಾಳುವ ಅಧಿಪತಿಗಳನ್ನೂ ಕುರಿತು ಗದರಿಸಿ ಹೇಳಿದ ಮಾತುಗಳನ್ನು ನೆರವೇರಿಸಿದ್ದಾನೆ; ಯೆರೂಸಲೇವಿುಗೆ ಆದಂಥ ಕೇಡು ಭೂಮಂಡಲದಲ್ಲಿ ಎಲ್ಲಿಯೂ ಎಂದೂ ಆಗಲಿಲ್ಲವಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 “ನಮಗೂ ನಮ್ಮ ನಾಯಕರುಗಳಿಗೂ ನೀನು ಹೇಳಿದಂತೆಯೇ ಮಾಡಿರುವೆ. ನೀನು ನಮ್ಮ ಮೇಲೆ ದೊಡ್ಡ ಕೇಡನ್ನು ಬರಮಾಡಿರುವೆ. ಜೆರುಸಲೇಮ್ ನಗರಕ್ಕೆ ಉಂಟಾದಷ್ಟು ಕೇಡು ಭೂಮಂಡಲದಲ್ಲಿ ಯಾವ ನಗರಕ್ಕೂ ಆಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 9:12
31 ತಿಳಿವುಗಳ ಹೋಲಿಕೆ  

ನಾನು ಮಾಡದೆ ಇದ್ದದ್ದನ್ನೂ, ಇನ್ನು ಮೇಲೆ ಮಾಡದೇ ಇರುವಂಥದ್ದನ್ನೂ ನಿಮ್ಮ ಅಸಹ್ಯಗಳ ನಿಮಿತ್ತವಾಗಿ ನಿಮ್ಮಲ್ಲಿ ಮಾಡುತ್ತೇನೆ.


ಹಾದು ಹೋಗುವವರೇ, ಇದು ನಿಮಗೆ ಏನೂ ಇಲ್ಲವೋ? ಸುತ್ತಲೂ ದೃಷ್ಟಿಸಿ ನೋಡಿರಿ. ಯೆಹೋವ ದೇವರ ಉಗ್ರಕೋಪದ ದಿನದಲ್ಲಿ ನನ್ನನ್ನು ಸಂಕಟ ಪಡಿಸಿದ ಇಂಥಾ ದುಃಖವು, ಯಾರಿಗಾದರೂ ಉಂಟೋ ನೋಡಿರಿ.


ತನ್ನ ಸೇವಕನ ಮಾತುಗಳನ್ನು ಸ್ಥಾಪಿಸುವವನು, ಮತ್ತು ತನ್ನ ದೂತರ ಆಲೋಚನೆಯನ್ನು ಪೂರೈಸುವವನು. “ಯೆರೂಸಲೇಮಿಗೆ, ‘ನೀನು ನಿವಾಸವಾಗುವೆ,’ ಯೆಹೂದ ಪಟ್ಟಣಗಳಿಗೆ, ‘ಅವು ಪುನಃ ಕಟ್ಟಲಾಗುವುದು,’ ಮತ್ತು ಅದರ ಹಾಳು ಸ್ಥಳಗಳಿಗೆ, ‘ನಾನು ಪುನಃಸ್ಥಾಪಿಸುವೆನು,’ ಎಂದು ಹೇಳುವವನು,


ಯೆಹೋವ ದೇವರು ತಾವು ಸಂಕಲ್ಪಿಸಿದ್ದನ್ನು ಮಾಡಿದ್ದಾರೆ. ಅವರು ಪುರಾತನ ಕಾಲದ ದಿನಗಳಲ್ಲಿ ಆಜ್ಞಾಪಿಸಿದ ತಮ್ಮ ವಾಕ್ಯವನ್ನು ಪೂರೈಸಿದ್ದಾರೆ. ಅವರು ಕೆಡವಿ ಕನಿಕರಿಸಲಿಲ್ಲ. ಅವರು ನಿನ್ನ ಶತ್ರುವನ್ನು ನಿನ್ನ ವಿಷಯವಾಗಿ ಸಂತೋಷಪಡುವ ಹಾಗೆ ಮಾಡಿದ್ದಾರೆ. ಆತನು ನಿನ್ನ ವೈರಿಗಳ ಕೊಂಬನ್ನು ಎತ್ತಿದ್ದಾರೆ.


ಯೆರೂಸಲೇಮಿನ ಪುತ್ರಿಯೇ, ನಾನು ಯಾವುದನ್ನು ನಿನಗೆ ಸಾಕ್ಷಿಯನ್ನಾಗಿಡಲಿ? ಯಾವುದನ್ನು ನಿನಗೆ ಸಮಾನ ಮಾಡಲಿ? ಚೀಯೋನಿನ ಕನ್ಯೆಯೇ, ನಿನ್ನನ್ನು ಆದರಿಸುವವರು ಯಾರು?


ದೇವರು ಸಲಹೆಗಾರರನ್ನು ಸೆರೆಹಿಡಿಯುತ್ತಾರೆ; ನ್ಯಾಯಾಧಿಪತಿಗಳನ್ನು ಮೂರ್ಖರನ್ನಾಗಿ ಮಾಡುತ್ತಾರೆ.


ನಾನು ನಿಮಗೆ ಹೇಳುವುದೇನೆಂದರೆ, ದೇವರು ನಂಬಿಗಸ್ತರು ಎಂದು ತೋರಿಸುವುದಕ್ಕಾಗಿ ಕ್ರಿಸ್ತ ಯೇಸು ಯೆಹೂದ್ಯರಿಗೆ ಸೇವಕರಾಗಿ ಬಂದರು. ಹೀಗೆ ದೇವರು ಪಿತೃಗಳಿಗೆ ಕೊಟ್ಟ ವಾಗ್ದಾನಗಳನ್ನು ದೃಢಪಡಿಸಿದರು.


ಏಕೆಂದರೆ ಪವಿತ್ರ ವೇದದಲ್ಲಿ ಬರೆದಿರುವವುಗಳೆಲ್ಲವೂ ನೆರವೇರಲು, ಇವು ದಂಡನೆಯ ದಿವಸಗಳಾಗಿವೆ.


ಆ ದಿವಸಗಳಲ್ಲಿ ಮಹಾ ಸಂಕಟವಿರುವುದು, ದೇವರು ಜಗತ್ತನ್ನು ಸೃಷ್ಟಿಸಿದ ದಿನದಿಂದ ಮೊದಲುಗೊಂಡು ಈ ಸಮಯದವರೆಗೂ ಅಂಥ ಸಂಕಟವು ಆಗಲಿಲ್ಲ. ಇನ್ನು ಮುಂದೆಯೂ ಆಗುವುದಿಲ್ಲ.


ಅಂಥ ಮಹಾ ಸಂಕಟವು ಲೋಕಾದಿಯಿಂದ ಇಂದಿನವರೆಗೂ ಆಗಲಿಲ್ಲ. ಇನ್ನು ಮುಂದೆಯೂ ಆಗುವುದಿಲ್ಲ.


ಭೂಮಿ ಆಕಾಶಗಳು ಗತಿಸಿಹೋಗುವವು, ಆದರೆ ನಿಯಮವೆಲ್ಲಾ ನೆರವೇರುವ ತನಕ ಅದರಲ್ಲಿ ಒಂದು ಚಿಕ್ಕ ಅಕ್ಷರವಾದರೂ ಚಿಕ್ಕ ಚುಕ್ಕೆಯಾದರೂ ಅಳಿದುಹೋಗುವುದಿಲ್ಲ ಎಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.


ರಾತ್ರಿಯಲ್ಲಿ ನನಗೆ ದರ್ಶನವಾಯಿತು. ಕೆಂಪು ಕುದುರೆಯ ಮೇಲೆ ಸವಾರಿ ಮಾಡುವ ಒಬ್ಬನು, ತಗ್ಗಿನಲ್ಲಿದ್ದ ಗಂಧದ ಗಿಡಗಳ ನಡುವೆ ನಿಂತಿದ್ದನು. ಅವನ ಹಿಂದೆ ಕೆಂಪು, ಕಂದು ಬಣ್ಣದ ಹಾಗು ಬಿಳಿಯ ಕುದುರೆಗಳು ಇದ್ದವು.


ಆದರೆ ನಾನು ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿ, ನನ್ನ ವಾಕ್ಯಗಳೂ, ನನ್ನ ನಿಯಮಗಳೂ ನಿಮ್ಮ ಪಿತೃಗಳಿಗೆ ಸೇರಲಿಲ್ಲವೋ? “ಆಗ ಅವರು ತಿರುಗಿಕೊಂಡು, ‘ಸೇನಾಧೀಶ್ವರ ಯೆಹೋವ ದೇವರು ನಮಗೆ ಮಾಡುವುದಕ್ಕೆ ಯೋಚಿಸಿದ ಹಾಗೆಯೇ, ನಮ್ಮ ಮಾರ್ಗಗಳ ಪ್ರಕಾರವಾಗಿಯೂ, ನಮ್ಮ ಕ್ರಿಯೆಗಳ ಪ್ರಕಾರವಾಗಿಯೂ ನಮಗೆ ಮಾಡಿದ್ದಾರೆ,’ ಎಂದು ಹೇಳಿದರು.”


“ಭೂಮಿಯ ಎಲ್ಲಾ ಕುಟುಂಬಗಳಲ್ಲಿ ನಿಮ್ಮನ್ನು ಮಾತ್ರವೇ ಆರಿಸಿಕೊಂಡಿದ್ದೇನೆ. ಆದ್ದರಿಂದ ನಾನು ನಿಮ್ಮ ಎಲ್ಲಾ ಪಾಪಗಳಿಗಾಗಿ ಶಿಕ್ಷಿಸುತ್ತೇನೆ.”


ಅದು ಕತ್ತಲೆಯೂ ಮಬ್ಬೂ ಉಳ್ಳ ದಿವಸವೂ, ಮೇಘವೂ ಕಾರ್ಗತ್ತಲು ಉಳ್ಳ ದಿವಸವೂ ಆಗಿದೆ. ಬೆಟ್ಟಗಳ ಮೇಲೆ ಹರಡುವ ಉದಯದ ಹಾಗೆ ದೊಡ್ಡ ಬಲವಾದ ಸ್ಯೆನ್ಯವು ಬರುತ್ತದೆ. ಅದು ಪ್ರಾಚೀನ ಕಾಲದಲ್ಲಿ ಮತ್ತು ಮುಂದಿನ ಯುಗಗಳಲ್ಲಿ ಎಂದಿಗೂ ಇರುವುದಿಲ್ಲ.


“ಯೆಹೋವ ದೇವರು ಇಂತೆನ್ನುತ್ತಾರೆ,” ಎಂದು ನುಡಿ: ಅಂಥವರಿಗೆ ಆದ ದರ್ಶನ ಮಿಥ್ಯ, ಕೇಳಿಸಿದ ಕಣಿ ಸುಳ್ಳು, ಯೆಹೋವ ದೇವರು ಅವರನ್ನು ಕಳುಹಿಸಲಿಲ್ಲ, ತಾವು ನುಡಿದ ಮಾತು ನೆರವೇರುವುದೆಂದು ಸುಮ್ಮಸುಮ್ಮನೆ ನಿರೀಕ್ಷಿಸಿಕೊಂಡಿದ್ದಾರೆ.


ನನ್ನ ಜನರ ಅಕ್ರಮದ ದಂಡನೆಯು ಸೊದೋಮಿನ ಪಾಪದ ದಂಡನೆಗಿಂತ ದೊಡ್ಡದು. ಅದು ಕ್ಷಣಮಾತ್ರದಲ್ಲಿ ಕೆಡವಿ ಹಾಕಲಾಯಿತು ಮತ್ತು ಅವಳಿಗೆ ಸಹಾಯಮಾಡಲು ಯಾವ ಕೈಗಳೂ ಇರಲಿಲ್ಲ.


ನನ್ನಿಂದ ಅಧಿಪತಿಗಳು ಆಳುತ್ತಾರೆ, ಕೀರ್ತಿವಂತರೆಲ್ಲರೂ ಭೂಮಿಯ ಮೇಲೆ ಆಳುವರು.


ಭೂರಾಜರೇ, ಎಲ್ಲಾ ಪ್ರಜೆಗಳೇ, ಪ್ರಧಾನರೇ, ಭೂಮಿಯ ಎಲ್ಲಾ ನ್ಯಾಯಾಧಿಪತಿಗಳೇ,


ಆದ್ದರಿಂದ, ರಾಜರುಗಳೇ, ಈಗ ಜ್ಞಾನವಂತರಾಗಿರಿ. ಭೂಲೋಕದ ಅಧಿಕಾರಿಗಳೇ, ಎಚ್ಚರಿಕೆಯಿಂದಿರಿ.


ಆದ್ದರಿಂದ ನಿಮ್ಮ ಜನರನ್ನು ಪರಿಪಾಲಿಸುವುದಕ್ಕೆ, ಒಳ್ಳೆಯದನ್ನೂ ಕೆಟ್ಟದ್ದನ್ನೂ ತಿಳಿಯುವ ಹಾಗೆ, ನಿಮ್ಮ ಸೇವಕನಿಗೆ ತಿಳುವಳಿಕೆಯುಳ್ಳ ಹೃದಯವನ್ನು ಕೊಡಬೇಕು. ಏಕೆಂದರೆ ಈ ನಿಮ್ಮ ಮಹಾಜನರ ನ್ಯಾಯತೀರಿಸುವುದಕ್ಕೆ ಸಾಮರ್ಥ್ಯವುಳ್ಳವರು ಯಾರು?” ಎಂದನು.


ಅಯ್ಯೋ, ಈ ದಿನವು ಘೋರವಾದದ್ದು, ಅದಕ್ಕೆ ಎಣೆ ಇಲ್ಲ; ಅದು ಯಾಕೋಬ್ಯರಿಗೆ ಇಕ್ಕಟ್ಟಿನ ದಿನ; ಆದರೂ ಅವರು ಅದರಿಂದ ಪಾರಾಗುವರು.’


ಅವರು ಅದರಲ್ಲಿ ಸೇರಿ ಅದನ್ನು ಸ್ವಾಧೀನಪಡಿಸಿಕೊಂಡರು. ಆದರೆ ಅವರು ನಿಮ್ಮ ಮಾತಿಗೆ ಕಿವಿಗೊಡಲಿಲ್ಲ. ನಿಮ್ಮ ನಿಯಮದಲ್ಲಿ ನಡೆದುಕೊಳ್ಳಲಿಲ್ಲ. ಮಾಡಬೇಕೆಂದು ನೀವು ಅವರಿಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡಲಿಲ್ಲ. ಆದ್ದರಿಂದ ಈ ಕೇಡನ್ನೆಲ್ಲಾ ಅವರಿಗೆ ಸಂಭವಿಸುವಂತೆ ಮಾಡಿದ್ದೀರಿ.


“ನೀನು ಹೋಗಿ ಕೂಷ್ಯನಾದ ಎಬೆದ್ಮೆಲೆಕನ ಸಂಗಡ ಮಾತನಾಡಿ, ಹೇಳತಕ್ಕದ್ದೇನೆಂದರೆ: ‘ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ಒಳ್ಳೆಯದಕ್ಕಾಗಿ ಅಲ್ಲ, ಕೆಟ್ಟದ್ದಕ್ಕಾಗಿ ನನ್ನ ಮಾತುಗಳನ್ನು ಈ ಪಟ್ಟಣದ ಮೇಲೆ ಬರಮಾಡುತ್ತೇನೆ. ಅವು ಆ ದಿವಸಗಳಲ್ಲಿ ನಿನ್ನ ಮುಂದೆಯೇ ನೆರವೇರುವುವು.


ನೀವು ಧೂಪ ಸುಟ್ಟು, ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿ, ಯೆಹೋವ ದೇವರ ಮಾತನ್ನು ಕೇಳದೆ, ದೈವನಿಯಮವನ್ನೂ, ದೈವತೀರ್ಪುಗಳನ್ನೂ, ದೈವಷರತ್ತುಗಳನ್ನೂ ಅನುಸರಿಸದೆ, ದೇವರಿಗೆ ವಿಧೇಯರಾಗದೆ ಇದ್ದುದರಿಂದಲೇ, ಈ ಕೇಡು ಈ ದಿನ ನಿಮಗೆ ಸಂಭವಿಸಿದೆ,” ಎಂದನು.


“ಆ ಕಾಲದಲ್ಲಿ ನಿನ್ನ ಜನರನ್ನು ಕಾಪಾಡುವುದಕ್ಕಾಗಿ ಮಹಾರಾಜಕುಮಾರನಾದ ಮೀಕಾಯೇಲನು ಏಳುವನು. ಮೊಟ್ಟಮೊದಲು ಜನಾಂಗ ಉಂಟಾದಂದಿನಿಂದ ಇಂದಿನವರೆಗೂ ಸಂಭವಿಸದಂತಹ ಸಂಕಟವು ಸಂಭವಿಸುವುದು. ಆಗ ನಿನ್ನ ಜನರೊಳಗೆ ಎಂದರೆ ಜೀವ ಪುಸ್ತಕದಲ್ಲಿ ಯಾರ ಹೆಸರು ಬರೆಯಲಾಗಿದೆಯೋ, ಅವರೆಲ್ಲರೂ ಬಿಡುಗಡೆಯಾಗುವರು.


ಅವರು ನಿಯಮವನ್ನೂ, ಸರ್ವಶಕ್ತದರಾದ ಯೆಹೋವ ದೇವರು ತಮ್ಮ ಆತ್ಮದ ಮುಖಾಂತರ ಪೂರ್ವದ ಪ್ರವಾದಿಗಳ ಕೈಯಿಂದ ಕಳುಹಿಸಿದ ವಾಕ್ಯಗಳನ್ನೂ ಕೇಳದ ಹಾಗೆ, ತಮ್ಮ ಹೃದಯಗಳನ್ನು ವಜ್ರದ ಕಲ್ಲಿನಂತೆ ಕಠಿಣಮಾಡಿಕೊಂಡರು. ಆದ್ದರಿಂದ ಸರ್ವಶಕ್ತರಾದ ಯೆಹೋವ ದೇವರ ಮಹಾಕೋಪಕ್ಕೆ ಗುರಿಯಾದರು.


‘ನಾನು ಈ ಸ್ಥಳದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಯೆಹೂದದ ಅರಸನು ಓದಿದ ಗ್ರಂಥದಲ್ಲಿ ಬರೆದಿರುವ ಪ್ರತಿಯೊಂದರಂತೆ ಕೇಡನ್ನು ಬರಮಾಡುವೆನು.


ಆದಕಾರಣ ಪವಿತ್ರಾಲಯದ ಪ್ರಧಾನರನ್ನು ನಾಚಿಕೆಪಡಿಸಿ, ಯಾಕೋಬನ್ನು ಶಾಪಕ್ಕೂ, ಇಸ್ರಾಯೇಲನ್ನು ದೂಷಣೆಗಳಿಗೂ ಒಪ್ಪಿಸಿಬಿಟ್ಟಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು