Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 9:2 - ಕನ್ನಡ ಸಮಕಾಲಿಕ ಅನುವಾದ

2 ದಾನಿಯೇಲನಾದ ನಾನು ಪವಿತ್ರ ಗ್ರಂಥಗಳನ್ನು ಪರೀಕ್ಷಿಸಿ, ಯೆಹೋವ ದೇವರ ಪ್ರವಾದಿ ಯೆರೆಮೀಯನಿಗೆ ದಯಪಾಲಿಸಿದ ವಾಕ್ಯಾನುಸಾರ, ಯೆರೂಸಲೇಮ್ ಪಾಳುಬಿದ್ದಿರಬೇಕಾದ ಪೂರ್ಣ ಕಾಲಾವಧಿ ಎಪ್ಪತ್ತು ವರ್ಷಗಳೆಂದು ತಿಳಿದುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ದಾನಿಯೇಲನಾದ ನಾನು ಪವಿತ್ರಗ್ರಂಥಗಳನ್ನು ಪರೀಕ್ಷಿಸಿ ಯೆಹೋವನು ಪ್ರವಾದಿಯಾದ ಯೆರೆಮೀಯನಿಗೆ ದಯಪಾಲಿಸಿದ ವಾಕ್ಯಾನುಸಾರ ಯೆರೂಸಲೇಮ್ ಹಾಳು ಬಿದ್ದಿರಬೇಕಾದ ಪೂರ್ಣಕಾಲದ ವರ್ಷಗಳ ಸಂಖ್ಯೆ ಎಪ್ಪತ್ತೆಂದು ತಿಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ದಾನಿಯೇಲನಾದ ನಾನು ಪವಿತ್ರಗ್ರಂಥಗಳನ್ನು ಪರೀಕ್ಷಿಸಿ, ಸರ್ವೇಶ್ವರಸ್ವಾಮಿ ಪ್ರವಾದಿ ಯೆರೆಮೀಯನಿಗೆ ದಯಪಾಲಿಸಿದ ವಾಕ್ಯಾನುಸಾರ ಜೆರುಸಲೇಮ್ ಪಾಳುಬಿದ್ದಿರಬೇಕಾದ ಪೂರ್ಣಕಾಲಾವಧಿ ಎಪ್ಪತ್ತು ವರ್ಷಗಳೆಂದು ತಿಳಿದುಕೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ದಾನಿಯೇಲನಾದ ನಾನು ಶಾಸ್ತ್ರಗಳನ್ನು ಪರೀಕ್ಷಿಸಿ ಯೆಹೋವನು ಪ್ರವಾದಿಯಾದ ಯೆರೆಮೀಯನಿಗೆ ದಯಪಾಲಿಸಿದ ವಾಕ್ಯಾನುಸಾರ ಯೆರೂಸಲೇಮು ಹಾಳುಬಿದ್ದಿರಬೇಕಾದ ಪೂರ್ಣಕಾಲದ ವರುಷಗಳ ಸಂಖ್ಯೆ ಎಪ್ಪತ್ತೆಂದು ತಿಳಿದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ದಾರ್ಯಾವೆಷನ ಆಳ್ವಿಕೆಯ ಮೊದಲನೆಯ ವರ್ಷ ದಾನಿಯೇಲನೆಂಬ ನಾನು ಕೆಲವು ಧರ್ಮಗ್ರಂಥಗಳನ್ನು ಓದುತ್ತಿದ್ದೆ. ಎಪ್ಪತ್ತು ವರ್ಷಗಳ ತರುವಾಯ ಜೆರುಸಲೇಮಿನ ಪುನರ್ನಿರ್ಮಾಣವಾಗುವದೆಂದು ಯೆಹೋವನು ಯೆರೆಮೀಯನಿಗೆ ಹೇಳಿದ್ದು ನನಗೆ ಈ ಧರ್ಮಗ್ರಂಥಗಳಿಂದ ತಿಳಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 9:2
32 ತಿಳಿವುಗಳ ಹೋಲಿಕೆ  

ಯೆಹೋವ ದೇವರು ಹೀಗೆ ಹೇಳುತ್ತಾರೆ: “ಬಾಬಿಲೋನಿನಲ್ಲಿ ಎಪ್ಪತ್ತು ವರ್ಷ ತುಂಬಿದ ಮೇಲೆ ನಿಮ್ಮನ್ನು ಪರಾಮರಿಸುವೆನು. ನನ್ನ ಒಳ್ಳೆಯ ವಾಕ್ಯವನ್ನು ನಿಮ್ಮ ವಿಷಯದಲ್ಲಿ ಸ್ಥಾಪಿಸಿ, ನಿಮ್ಮನ್ನು ತಿರುಗಿ ಈ ಸ್ಥಳಕ್ಕೆ ಬರಮಾಡುವೆನು.


ಹೀಗೆ ಯೆರೆಮೀಯನ ಮುಖಾಂತರವಾಗಿ ಹೇಳಿಸಿದ ಯೆಹೋವ ದೇವರ ವಾಕ್ಯವು ನೆರವೇರಿತು. ದೇಶವು ಅದರ ಸಬ್ಬತ್ ದಿನಗಳನ್ನು ಅನುಭವಿಸುವುದಕ್ಕೆ ಮಾರ್ಗವಾಯಿತು. ಅದು ಎಪ್ಪತ್ತು ವರ್ಷ ಹಾಳುಬಿದ್ದು, ಆ ಕಾಲಾವಧಿಯಲ್ಲಿ ವಿಶ್ರಾಂತಿಯನ್ನು ಅನುಭವಿಸುತ್ತಾ ಇತ್ತು.


ಈ ಪ್ರವಾದನೆಯ ವಾಕ್ಯಗಳನ್ನು ಓದುವಂಥವರೂ ಕೇಳುವಂಥವರೂ ಈ ಪ್ರವಾದನೆಯ ವಾಕ್ಯಗಳಲ್ಲಿ ಬರೆದಿರುವ ಮಾತುಗಳನ್ನು ಕೈಕೊಂಡು ನಡೆಯುವಂಥವರೂ ಧನ್ಯರು. ಏಕೆಂದರೆ ಸಮಯವು ಸಮೀಪವಾಗಿದೆ.


“ದೇಶದ ಜನರೆಲ್ಲರಿಗೂ, ಯಾಜಕರಿಗೂ ಹೀಗೆ ಹೇಳು: ‘ನೀವು ಈ ಎಪ್ಪತ್ತು ವರ್ಷಗಳು ಐದನೆಯ ಮತ್ತು ಏಳನೆಯ ತಿಂಗಳುಗಳಲ್ಲಿ ಉಪವಾಸ ಮಾಡಿ, ದುಃಖಿಸುತ್ತಿದ್ದಾಗ, ಆ ನಿಮ್ಮ ಉಪವಾಸವು ನಿಜವಾಗಿಯೂ ನನಗಾಗಿ ಮಾಡಿದ್ದೀರೋ?


ಆದರೆ ಪಾರಸಿಯ ಅರಸ ಕೋರೆಷನ ಮೊದಲನೆಯ ವರ್ಷದಲ್ಲಿ ಯೆಹೋವ ದೇವರು ಯೆರೆಮೀಯನ ಮುಂಖಾತರ ಹೇಳಿದ ವಾಕ್ಯವು ಈಡೇರುವ ಹಾಗೆ ಯೆಹೋವ ದೇವರು ಪಾರಸಿಯ ಅರಸ ಕೋರೆಷನ ಆತ್ಮವನ್ನು ಪ್ರೇರೇಪಿಸಿದ್ದರಿಂದ, ಅವನು ತನ್ನ ಸಮಸ್ತ ರಾಜ್ಯದಲ್ಲಿ ಡಂಗುರದಿಂದಲೂ, ಪತ್ರಗಳಿಂದಲೂ ಸಾರಿ ಹೇಳಿದ್ದೇನೆಂದರೆ:


ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನನ್ನು ಹೊಲದ ಹಾಗೆ ಉಳಲಾಗುವುದು. ಯೆರೂಸಲೇಮು ಹಾಳುದಿಬ್ಬಗಳಾಗುವುದು. ಆಲಯದ ಬೆಟ್ಟವೂ ಕಾಡುಗುಡ್ಡಗಳಂತಾಗುವುದು.


ಅವನ ದೇಶಕ್ಕೆ ನಿಯಮಿತ ಕಾಲ ಬರುವ ತನಕ, ಎಲ್ಲ ರಾಷ್ಟ್ರಗಳು ಅವನಿಗೂ, ಅವನ ಮಗನಿಗೂ, ಮೊಮ್ಮಗನಿಗೂ ಅಡಿಯಾಳಾಗಿ ಇರಬೇಕು. ಆಮೇಲೆ ಅನೇಕ ರಾಷ್ಟ್ರಗಳೂ, ಮಹಾರಾಜರೂ ಅವನನ್ನೇ ಅಡಿಯಾಳನ್ನಾಗಿ ಮಾಡಿಕೊಳ್ಳುವರು,” ಎಂಬುದು.


ಯೆರೂಸಲೇಮಿಗೂ, ಯೆಹೂದದ ಪಟ್ಟಣಗಳಿಗೂ, ಅದರ ಅರಸುಗಳಿಗೂ, ಅಧಿಕಾರಿಗಳಿಗೂ ಅವರನ್ನು ಇಂದಿನ ಪ್ರಕಾರ ಹಾಳು ಮಾಡಿ, ಭಯಕ್ಕೂ, ಪರಿಹಾಸ್ಯಕ್ಕೂ, ಶಾಪಕ್ಕೂ ಗುರಿ ಮಾಡುವ ಹಾಗೆ ಕುಡಿಸಿದೆನು.


ಆಗ ನಾನು ಯೆಹೂದದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಉಲ್ಲಾಸದ ಶಬ್ದವನ್ನೂ, ಸಂತೋಷ ಶಬ್ದವನ್ನೂ, ಮದುಮಗನ ಶಬ್ದವನ್ನೂ, ಮದುಮಗಳ ಶಬ್ದವನ್ನೂ ನಿಲ್ಲಿಸುವೆನು. ಏಕೆಂದರೆ, ದೇಶವು ಹಾಳಾಗುವುದು.


ನಿನ್ನ ಪರಿಶುದ್ಧ ಪಟ್ಟಣಗಳು ಅಡವಿಯಾದವು. ಚೀಯೋನು ಅಡವಿಯಾಯಿತು. ಯೆರೂಸಲೇಮು ಹಾಳಾಯಿತು.


ನಾನು ಬರುವ ತನಕ ಓದುವುದರಲ್ಲಿಯೂ ಎಚ್ಚರಿಸುವುದರಲ್ಲಿಯೂ ಬೋಧಿಸುವುದರಲ್ಲಿಯೂ ಲಕ್ಷ್ಯಕೊಡು.


ನಂತರ ಕಂಚುಕಿಯು, “ಪ್ರವಾದಿ ಇಲ್ಲಿ ಯಾರ ಬಗ್ಗೆ ಮಾತನಾಡುತ್ತಿದ್ದಾನೆ, ತನ್ನನ್ನು ಕುರಿತೋ ಅಥವಾ ಬೇರೆಯವರನ್ನು ಕುರಿತೋ? ನನಗೆ ಹೇಳು,” ಎಂದು ಫಿಲಿಪ್ಪನನ್ನು ಕೇಳಿದನು.


“ಆದರೆ ‘ಅಸಹ್ಯ ವಸ್ತು’ ನಿಲ್ಲಬಾರದ ಸ್ಥಳದಲ್ಲಿ ನಿಂತಿರುವುದನ್ನು ನೀವು ಕಾಣುವಾಗ ಓದುವವನು ತಿಳಿದುಕೊಳ್ಳಲಿ. ಆಗ ಯೂದಾಯದಲ್ಲಿ ಇರುವವರು ಬೆಟ್ಟಗಳಿಗೆ ಓಡಿಹೋಗಲಿ.


“ಆದ್ದರಿಂದ ಪ್ರವಾದಿ ದಾನಿಯೇಲನಿಂದ ಹೇಳಿದ ಹಾಗೆ ‘ಅಸಹ್ಯ ವಸ್ತು’ ಪವಿತ್ರ ಸ್ಥಳದಲ್ಲಿ ನಿಂತಿರುವುದನ್ನು ನೀವು ಕಾಣುವಾಗ, ಓದುವವನು ತಿಳಿದುಕೊಳ್ಳಲಿ.


ಜನಭರಿತವಾಗಿದ್ದ ನಗರಿಯು ಹೇಗೆ ಬರಿದಾಗಿ ಹೋಗಿದೆ! ಜನಾಂಗಗಳಲ್ಲಿ ಶ್ರೇಷ್ಠಳಾದವಳೂ, ಈಗ ಹೇಗೆ ವಿಧವೆಯಾಗಿದ್ದಾಳೆ! ಸಂಸ್ಥಾನಗಳಲ್ಲಿ ರಾಜಕುಮಾರಿಯಾಗಿದ್ದವಳೂ, ಹೇಗೆ ಈಗ ದಾಸಿಯಂತಾಗಿದ್ದಾಳೆ!


ಆಗ ನಾನು ಈ ಆಲಯವನ್ನು ಶೀಲೋವಿನ ಗತಿಗೆ ಇಳಿಸುವೆನು. ಈ ನಗರವು ವಿಶ್ವದ ಜನರಿಗೆಲ್ಲಾ ಶಾಪಗ್ರಸ್ತ ನಗರವಾಗುವಂತೆ ಮಾಡುವೆನು.’ ”


ನಿಮ್ಮ ಶಾಸನಗಳು ನನಗೆ ಉಲ್ಲಾಸಕರವಾಗಿವೆ; ಅವೇ ನನ್ನ ಸಮಾಲೋಚಕರು.


“ಮೊರೇಷೆತಿನವನಾದ ಮೀಕಾಯನು ಯೆಹೂದದ ಅರಸನಾದ ಹಿಜ್ಕೀಯನ ದಿನಗಳಲ್ಲಿ ಪ್ರವಾದಿಸಿ, ಯೆಹೂದದ ಜನರಿಗೆಲ್ಲಾ ಹೇಳಿದ್ದೇನೆಂದರೆ: ‘ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ಚೀಯೋನನ್ನು ಹೊಲದ ಹಾಗೆ ಉಳಲಾಗುವುದು; ಯೆರೂಸಲೇಮು ಹಾಳುದಿಬ್ಬಗಳಾಗುವುದು; ಆಲಯದ ಬೆಟ್ಟವೂ ಕಾಡುಗುಡ್ಡಗಳಂತಾಗುವುದು.’


ಬೆನ್ಯಾಮೀನ್ ಸೀಮೆಗೆ ಸೇರಿ ಅನಾತೋತ್ ಊರಿನ ಯಾಜಕ ವರ್ಗದವನೂ, ಹಿಲ್ಕೀಯನ ಮಗನೂ ಆದ ಯೆರೆಮೀಯನ ಪ್ರವಾದನೆಗಳು.


ಆದ್ದರಿಂದ ನಾನು ಉಪವಾಸದಿಂದ ಗೋಣಿತಟ್ಟನ್ನು ಸುತ್ತಿಕೊಂಡು, ಬೂದಿಯನ್ನು ಬಳಿದುಕೊಂಡು, ಪ್ರಾರ್ಥನೆಗಳಿಂದ ಮತ್ತು ವಿಜ್ಞಾಪನೆಗಳಿಂದ ಕರ್ತರಾದ ದೇವರ ಕಡೆಗೆ ನನ್ನ ಮುಖವನ್ನು ತಿರುಗಿಸಿದೆನು.


ಆಗ ಯೆಹೋವ ದೇವರ ದೂತನು ಉತ್ತರಕೊಟ್ಟು: “ಸರ್ವಶಕ್ತರಾದ ಯೆಹೋವ ದೇವರೇ, ನೀವು ಯೆರೂಸಲೇಮನ್ನೂ, ಯೆಹೂದದ ಪಟ್ಟಣಗಳನ್ನೂ ಎಷ್ಟರವರೆಗೆ ಕನಿಕರಿಸದೆ ಇರುವಿರಿ? ಅವುಗಳ ಮೇಲೆ ಈ ಎಪ್ಪತ್ತು ವರ್ಷಗಳು ಸಿಟ್ಟು ಮಾಡಿದ್ದೀರಲ್ಲವೋ?” ಎಂದನು.


ಯಾವ ಮನುಷ್ಯನ ಪಾದವಾದರೂ ಅದರಲ್ಲಿ ಹಾದು ಹೋಗುವುದಿಲ್ಲ. ಮೃಗಗಳ ಪಾದವೂ ಅದರಲ್ಲಿ ಹಾದು ಹೋಗುವುದಿಲ್ಲ ಅಥವಾ ನಲವತ್ತು ವರ್ಷಗಳ ಕಾಲ ಅದರಲ್ಲಿ ವಾಸಮಾಡುವವರೇ ಇರುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು