Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 9:22 - ಕನ್ನಡ ಸಮಕಾಲಿಕ ಅನುವಾದ

22 ನನಗೆ, “ದಾನಿಯೇಲನೇ, ನಿನಗೆ ವಿವೇಕವನ್ನೂ, ಬುದ್ಧಿಯನ್ನೂ ಕೊಡುವುದಕ್ಕೆ ಈಗ ನಾನು ಬಂದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆತನು ನನ್ನೊಂದಿಗೆ ಹೀಗೆ ಮಾತನಾಡಿ ಉಪದೇಶಿಸಿದನು, “ದಾನಿಯೇಲನೇ, ನಿನಗೆ ಜ್ಞಾನಬೋಧೆ ಮಾಡುವುದಕ್ಕೆ ಈಗ ಬಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 “ದಾನಿಯೇಲನೇ, ನಿನಗೆ ಜ್ಞಾನಬೋಧೆ ಮಾಡಲು ಈಗ ಬಂದಿದ್ದೇನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ನನ್ನೊಂದಿಗೆ ಹೀಗೆ ಮಾತಾಡಿ ಉಪದೇಶಿಸಿದನು - ದಾನಿಯೇಲನೇ, ನಿನಗೆ ಜ್ಞಾನಬೋಧೆ ಮಾಡುವದಕ್ಕೆ ಈಗ ಬಂದೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ನಾನು ತಿಳಿದುಕೊಳ್ಳಬಯಸಿದ ವಿಷಯಗಳನ್ನು ತಿಳಿದುಕೊಳ್ಳಲು ಗಬ್ರಿಯೇಲನು ನನಗೆ ಸಹಾಯ ಮಾಡಿದನು. ಗಬ್ರಿಯೇಲನು, “ದಾನಿಯೇಲನೇ, ನಾನು ನಿನಗೆ ಜ್ಞಾನವನ್ನು ಕೊಡಲು ಮತ್ತು ಅರ್ಥಮಾಡಿಕೊಳ್ಳಲು ನಿನಗೆ ಸಹಾಯ ಮಾಡಲು ಬಂದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 9:22
12 ತಿಳಿವುಗಳ ಹೋಲಿಕೆ  

ಆದರೆ ಸತ್ಯ ಗ್ರಂಥದಲ್ಲಿ ಲಿಖಿತವಾದದ್ದನ್ನು ಈಗ ನಿನಗೆ ತಿಳಿಸುತ್ತೇನೆ. ನಿಮ್ಮ ರಾಜಕುಮಾರನಾದ ಮೀಕಾಯೇಲನ ಹೊರತು ಮತ್ತೆ ಯಾರೂ ಅವರಿಗೆ ವಿರೋಧವಾಗಿ ನನಗೆ ಸಹಕಾರ ಕೊಡುವುದಿಲ್ಲ.”


ನಾನು ಊಲಾ ನದಿಯ ಮಧ್ಯದಲ್ಲಿದ್ದಾಗ, “ಗಬ್ರಿಯೇಲನೇ, ಈ ಮನುಷ್ಯನು ದರ್ಶನವನ್ನು ಅರ್ಥಮಾಡಿಕೊಳ್ಳುವಂತೆ ಮಾಡು,” ಎಂದು ಹೇಳುವ ಮನುಷ್ಯನ ಧ್ವನಿಯನ್ನು ಕೇಳಿದೆನು.


ಆಗ ನಾನು, “ನನ್ನ ಒಡೆಯನೇ, ಇವೇನು?” ಎಂದೆನು. ಆಗ ನನ್ನ ಸಂಗಡ ಮಾತನಾಡಿದ ದೇವದೂತನು, “ಇವೇನೆಂದು ನಿನಗೆ ತೋರಿಸುತ್ತೇನೆ,” ಎಂದನು.


ಇವುಗಳಾದ ಮೇಲೆ ನಾನು ನೋಡಿದಾಗ, ಪರಲೋಕದಲ್ಲಿ ತೆರೆದಿದ್ದ ಒಂದು ದ್ವಾರವು ಕಾಣಿಸಿತು. ನನ್ನೊಂದಿಗೆ ತುತೂರಿಯ ಧ್ವನಿಯಂತೆ ಮಾತನಾಡಿದ, ನಾನು ಮೊದಲು ಕೇಳಿದ ಧ್ವನಿಯಿಂದ, “ಬಾ, ಮುಂದೆ ಸಂಭವಿಸಲಿಕ್ಕೆ ಇರುವವುಗಳನ್ನು ನಿನಗೆ ತೋರಿಸುವೆನು,” ಎಂದು ಹೇಳಿತು.


ನನ್ನ ಸಂಗಡ ಮಾತನಾಡಿದ ದೂತನು ನನಗೆ, “ಇದನ್ನು ಸಾರಿ ಹೇಳು: ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಯೆರೂಸಲೇಮಿಗಾಗಿಯೂ, ಚೀಯೋನಿಗಾಗಿಯೂ ಮಹಾ ರೋಷವುಳ್ಳವನಾಗಿದ್ದೇನೆ.


ನಾನು ಹತ್ತಿರ ನಿಂತವರಲ್ಲಿ ಒಬ್ಬನ ಬಳಿಗೆ ಬಂದು ಇವೆಲ್ಲವುಗಳ ಸತ್ಯಾರ್ಥವನ್ನು ಕೇಳಿದೆನು. “ಆಗ ಅವನು ಅದನ್ನು ನನಗೆ ಹೇಳಿ ಇವುಗಳ ಅರ್ಥವನ್ನು ನನಗೆ ತಿಳಿಸಿದನು.


ನಿನ್ನ ಜನರಿಗೆ ಮುಂದಿನ ದಿನಗಳಲ್ಲಿ ಏನು ಸಂಭವಿಸುವುದು ಎಂಬುದನ್ನು ತಿಳಿಸುವುದಕ್ಕೋಸ್ಕರ ನಾನೀಗ ಬಂದಿದ್ದೇನೆ. ಏಕೆಂದರೆ ದರ್ಶನವು ಮುಂದೆ ಬರಲಿಕ್ಕಿರುವ ಸಮಯವನ್ನು ಕುರಿತಾಗಿರುತ್ತದೆ,” ಎಂದನು.


ನಿಶ್ಚಯವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ತನ್ನ ಯೋಜನೆಗಳನ್ನು ತಿಳಿಸದೆ, ಸಾರ್ವಭೌಮ ಯೆಹೋವ ದೇವರು ಏನನ್ನೂ ಮಾಡುವುದಿಲ್ಲ.


ಆತನು ನನಗೆ, “ದಾನಿಯೇಲನೇ, ಅತಿ ಪ್ರಿಯನಾದ ಮನುಷ್ಯನೇ, ನಾನು ನಿನಗೆ ಹೇಳುವ ಮಾತುಗಳನ್ನು ತಿಳಿದುಕೊಂಡು ಸ್ಥಿರವಾಗಿ ನಿಲ್ಲು. ಏಕೆಂದರೆ ನಾನು ಈಗ ನಿನ್ನ ಬಳಿಗೆ ಕಳುಹಿಸಲಾಗಿದ್ದೇನೆ,” ಎಂದು ಹೇಳಿದನು. ಅವನು ಈ ಮಾತನ್ನು ಹೇಳಿದ ಮೇಲೆ, ನಾನು ನಡುಗುತ್ತಲೇ ನಿಂತೆನು.


ಆಗ ಅವನು ನನಗೆ, “ದಾನಿಯೇಲನೇ, ನೀನು ಭಯಪಡಬೇಡ. ಏಕೆಂದರೆ ನೀನು ತಿಳಿದುಕೊಳ್ಳುವುದಕ್ಕೂ, ನಿನ್ನ ದೇವರ ಮುಂದೆ ನಿನ್ನನ್ನು ತಗ್ಗಿಸಿಕೊಳ್ಳುವುದಕ್ಕೂ ಮನಸ್ಸಿಟ್ಟ ಮೊದಲನೆಯ ದಿನದಲ್ಲಿಯೇ ನಿನ್ನ ಪ್ರಾರ್ಥನೆಯು ದೇವರಿಗೆ ಮುಟ್ಟಿತು. ಆ ನಿನ್ನ ಮಾತುಗಳ ನಿಮಿತ್ತವಾಗಿಯೇ ನಾನು ಬಂದಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು