Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 9:23 - ಕನ್ನಡ ಸಮಕಾಲಿಕ ಅನುವಾದ

23 ನೀನು ವಿಜ್ಞಾಪನೆ ಮಾಡಿದ ಕೂಡಲೇ ಉತ್ತರ ಸಿಕ್ಕಿತು. ಅದನ್ನು ನಿನಗೆ ತಿಳಿಸುವುದಕ್ಕೆ ನಾನು ಬಂದಿದ್ದೇನೆ. ಏಕೆಂದರೆ ನೀನು ಅತಿ ಪ್ರಿಯನಾಗಿರುವೆ. ಆದ್ದರಿಂದ ವಿಷಯವನ್ನು ಗ್ರಹಿಸಿಕೊಂಡು ದರ್ಶನವನ್ನು ತಿಳಿದುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನಿನ್ನ ವಿಜ್ಞಾಪನೆಯ ಆರಂಭದಲ್ಲಿಯೇ ದೇವರ ಅಪ್ಪಣೆಯಾಯಿತು; ಅದನ್ನು ನಿನಗೆ ತಿಳಿಸಲು ಇಲ್ಲಿಗೆ ಬಂದಿದ್ದೇನೆ; ನೀನು ದೇವರಿಗೆ ಅತಿಪ್ರಿಯನು. ಈ ದೈವೋಕ್ತಿಯನ್ನು ಯೋಚಿಸು, ಈ ದರ್ಶನವನ್ನು ಗ್ರಹಿಸಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ನಿನ್ನ ವಿಜ್ಞಾಪನೆಯ ಆರಂಭದಲ್ಲೇ ದೇವರ ಅಪ್ಪಣೆಯಾಯಿತು. ಅದನ್ನು ನಿನಗೆ ತಿಳಿಸಲು ಇಲ್ಲಿಗೆ ಬಂದಿದ್ದೇನೆ. ನೀನು ದೇವರಿಗೆ ಅತಿ ಪ್ರಿಯನು. ಈ ದೈವೋಕ್ತಿಯನ್ನು ಆಲೋಚಿಸು; ಈ ದರ್ಶನವನ್ನು ಗ್ರಹಿಸಿಕೊ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ನಿನ್ನ ವಿಜ್ಞಾಪನೆಯ ಆರಂಭದಲ್ಲಿಯೇ ದೇವರ ಅಪ್ಪಣೆಯಾಯಿತು; ಅದನ್ನು ನಿನಗೆ ತಿಳಿಸಲು ಇಲ್ಲಿಗೆ ಬಂದಿದ್ದೇನೆ; ನೀನು (ದೇವರಿಗೆ) ಅತಿಪ್ರಿಯ; ಈ ದೈವೋಕ್ತಿಯನ್ನು ಯೋಚಿಸು, ಈ ದರ್ಶನವನ್ನು ಗ್ರಹಿಸಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ನೀನು ಪ್ರಾರ್ಥಿಸಲು ಪ್ರಾರಂಭಿಸಿದಾಗಲೇ ನನಗೆ ದೇವರ ಆಜ್ಞೆಯಾಯಿತು. ನಾನು ಅದನ್ನು ನಿನಗೆ ತಿಳಿಸಲು ಬಂದಿರುವೆನು. ದೇವರು ನಿನ್ನನ್ನು ತುಂಬ ಪ್ರೀತಿಸುತ್ತಾನೆ. ನೀನು ದೈವಾಜ್ಞೆಯನ್ನು ಅರಿತುಕೊಳ್ಳುವೆ ಮತ್ತು ದರ್ಶನದ ಅರ್ಥವನ್ನು ತಿಳಿದುಕೊಳ್ಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 9:23
12 ತಿಳಿವುಗಳ ಹೋಲಿಕೆ  

“ಅತಿ ಪ್ರಿಯನೇ, ಭಯಪಡಬೇಡ, ನಿನಗೆ ಸಮಾಧಾನವಾಗಲಿ, ಬಲವಾಗಿರು, ಈಗ ಬಲಶಾಲಿಯಾಗಿರು,” ಎಂದನು. ಅವನು ನನ್ನ ಸಂಗಡ ಮಾತನಾಡಿದಾಗ ನಾನು ಬಲವನ್ನು ಹೊಂದಿ, “ನನ್ನ ಒಡೆಯನೇ ಮಾತನಾಡು, ನೀನು ನನ್ನನ್ನು ಬಲಪಡಿಸಿದ್ದೀ,” ಎಂದು ಹೇಳಿದೆನು.


“ಆದ್ದರಿಂದ ಪ್ರವಾದಿ ದಾನಿಯೇಲನಿಂದ ಹೇಳಿದ ಹಾಗೆ ‘ಅಸಹ್ಯ ವಸ್ತು’ ಪವಿತ್ರ ಸ್ಥಳದಲ್ಲಿ ನಿಂತಿರುವುದನ್ನು ನೀವು ಕಾಣುವಾಗ, ಓದುವವನು ತಿಳಿದುಕೊಳ್ಳಲಿ.


ಆ ದೇವದೂತನು ಆಕೆಗೆ, “ಅತ್ಯಂತ ದಯೆ ಹೊಂದಿದವಳೇ! ನಿನಗೆ ಶುಭವಾಗಲಿ, ಪ್ರಭುವು ನಿನ್ನೊಂದಿಗಿದ್ದಾರೆ,” ಎಂದು ಹೇಳಿದನು.


ನಾನು ನನ್ನ ಪ್ರಿಯನವಳು. ಅವನ ಆಸೆಯು ನನ್ನ ಕಡೆಗಿರುವುದು.


ಅವರು ನಿನ್ನ ಸಂಪತ್ತನ್ನು ಕಸಿದುಕೊಂಡು, ನಿನ್ನ ಸರಕುಗಳನ್ನು ಕೊಳ್ಳೆಹೊಡೆದು, ನಿನ್ನ ಗೋಡೆಗಳನ್ನು ಒಡೆದು, ನಿನ್ನ ರಮ್ಯವಾದ ಮನೆಗಳನ್ನು ಕೆಡವಿ, ನಿನ್ನ ಕಲ್ಲುಗಳನ್ನೂ ನಿನ್ನ ಮರಗಳನ್ನೂ ಧೂಳನ್ನೂ ನೀರಿನಲ್ಲಿ ಹಾಕುವರು.


“ಮನುಷ್ಯಪುತ್ರನೇ, ಒಂದೇ ಏಟಿನಿಂದ ನೇತ್ರಾನಂದವಾಗಿರುವುದನ್ನು ನಿನ್ನಿಂದ ತೆಗೆಯುತ್ತೇನೆ. ಆದರೆ ನೀನು ದುಃಖಪಡಬೇಡ, ಅಳಬೇಡ, ನಿನ್ನ ಕಣ್ಣೀರು ಹರಿದು ಹೋಗದಿರಲಿ.


ಈ ದಾನಿಯೇಲನಲ್ಲಿ ಉತ್ತಮ ಯೋಗ್ಯತೆಗಳು ಇದ್ದುದರಿಂದ ಅವನು ಉಪರಾಜರಿಗಿಂತಲೂ, ದೇಶಾಧಿಪತಿಗಿಂತಲೂ ಶ್ರೇಷ್ಠನಾಗಿದ್ದನು. ಈ ಕಾರಣದಿಂದ ಅರಸನು ಅವನನ್ನು ಸಮಸ್ತ ರಾಜ್ಯದ ಮೇಲೆ ಅಧಿಕಾರಿಯನ್ನಾಗಿ ನೇಮಿಸಲು ಉದ್ದೇಶಿಸಿದ್ದನು.


ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿ ಕಳುಹಿಸಿದ್ದೇನೆಂದರೆ: “ಇಸ್ರಾಯೇಲಿನ ಯೆಹೋವ ದೇವರ ಮಾತಿದು: ನೀನು ಅಸ್ಸೀರಿಯದ ಅರಸನಾದ ಸನ್ಹೇರೀಬನನ್ನು ಕುರಿತು ಮಾಡಿದ ಪ್ರಾರ್ಥನೆಯನ್ನು ಕೇಳಿದ್ದೇನೆ.


ದುಷ್ಟರ ಯಜ್ಞವು ಯೆಹೋವ ದೇವರಿಗೆ ಅಸಹ್ಯ. ಆದರೆ ಯಥಾರ್ಥವಂತರ ಪ್ರಾರ್ಥನೆಯು ಅವರಿಗೆ ಮೆಚ್ಚುಗೆ.


ನೋಹನೂ ದಾನಿಯೇಲನೂ ಯೋಬನೂ ಎಂಬ ಈ ಮೂವರು ಅದರಲ್ಲಿದ್ದರೂ ತಮ್ಮ ನೀತಿಯಿಂದ ತಮ್ಮ ಪ್ರಾಣಗಳನ್ನು ಮಾತ್ರವೇ ಉಳಿಸಿಕೊಳ್ಳುತ್ತಿದ್ದರು,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ಪಾರಸಿಯ ಅರಸ ಕೋರೆಷನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಬೇಲ್ತೆಶಚ್ಚರನೆಂಬ ದಾನಿಯೇಲನಿಗೆ ಒಂದು ಪ್ರಕಟಣೆಯಾಯಿತು. ಅದರ ಸಂದೇಶವು ಸತ್ಯವಾದದ್ದು. ಅದು ಮಹಾ ಯುದ್ಧ ವಿಷಯವಾಗಿದೆ. ಸಂದೇಶದ ಅರ್ಥವು ಅವನಿಗೆ ಒಂದು ದರ್ಶನದಲ್ಲಿ ಬಂದಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು