Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 9:3 - ಕನ್ನಡ ಸಮಕಾಲಿಕ ಅನುವಾದ

3 ಆದ್ದರಿಂದ ನಾನು ಉಪವಾಸದಿಂದ ಗೋಣಿತಟ್ಟನ್ನು ಸುತ್ತಿಕೊಂಡು, ಬೂದಿಯನ್ನು ಬಳಿದುಕೊಂಡು, ಪ್ರಾರ್ಥನೆಗಳಿಂದ ಮತ್ತು ವಿಜ್ಞಾಪನೆಗಳಿಂದ ಕರ್ತರಾದ ದೇವರ ಕಡೆಗೆ ನನ್ನ ಮುಖವನ್ನು ತಿರುಗಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಾನು ಉಪವಾಸವಿದ್ದು ಗೋಣಿತಟ್ಟು ಸುತ್ತಿಕೊಂಡು ಬೂದಿ ಬಳಿದುಕೊಂಡು ಕರ್ತನಾದ ದೇವರ ಕಡೆಗೆ ಮುಖವೆತ್ತಿ ಪ್ರಾರ್ಥನೆ, ವಿಜ್ಞಾಪನೆಗಳಲ್ಲಿ ನಿರತನಾದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಉಪವಾಸವಿದ್ದು, ಗೋಣಿತಟ್ಟು ಸುತ್ತಿಕೊಂಡು, ಬೂದಿ ಬಳಿದುಕೊಂಡು, ಸರ್ವೇಶ್ವರನಾದ ದೇವರ ಕಡೆಗೆ ಮುಖವೆತ್ತಿ, ಪ್ರಾರ್ಥನೆ-ವಿಜ್ಞಾಪನೆಗಳಲ್ಲಿ ನಿತರನಾದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಉಪವಾಸವಿದ್ದು ಗೋಣಿತಟ್ಟು ಸುತ್ತಿಕೊಂಡು ಬೂದಿ ಬಳಿದುಕೊಂಡು ಕರ್ತನಾದ ದೇವರ ಕಡೆಗೆ ಮುಖವೆತ್ತಿ ಪ್ರಾರ್ಥನೆ ವಿಜ್ಞಾಪನೆಗಳಲ್ಲಿ ನಿರತನಾದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆಗ ನಾನು ದೇವರಾದ ನನ್ನ ಯೆಹೋವನನ್ನು ಪ್ರಾರ್ಥಿಸಿದೆ ಮತ್ತು ಆತನ ಸಹಾಯವನ್ನು ಕೋರಿದೆ. ನಾನು ಯಾವ ಆಹಾರವನ್ನೂ ಸ್ವೀಕರಿಸಲಿಲ್ಲ ಮತ್ತು ದುಃಖಸೂಚಕವಾದ ವಸ್ತ್ರಗಳನ್ನು ಧರಿಸಿಕೊಂಡೆ. ನನ್ನ ತಲೆಯ ಮೇಲೆ ಬೂದಿಯನ್ನು ಸುರಿದುಕೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 9:3
30 ತಿಳಿವುಗಳ ಹೋಲಿಕೆ  

‘ನನ್ನನ್ನು ಕರೆ, ಆಗ ನಿನಗೆ ಉತ್ತರಕೊಡುವೆನು. ನಿನಗೆ ತಿಳಿಯದ ಮತ್ತು ಪರಿಶೋಧನೆಗೆ ಮೀರಿದ ಮಹಾಕಾರ್ಯಗಳನ್ನೂ ನಿನಗೆ ಹೇಳಿಕೊಡುವೆನು.’


“ನೀನು ಹೋಗಿ ಶೂಷನಿನಲ್ಲಿರುವ ಎಲ್ಲಾ ಯೆಹೂದ್ಯರನ್ನು ಕೂಡಿಸು; ನೀವು ರಾತ್ರಿ ಹಗಲೂ ಮೂರು ದಿನ ಅನ್ನಪಾನಗಳನ್ನು ಬಿಟ್ಟು ನನಗೋಸ್ಕರ ಉಪವಾಸಮಾಡಿರಿ. ಹಾಗೆಯೇ ನಾನೂ ನನ್ನ ದಾಸಿಯರೊಡನೆ ಉಪವಾಸ ಮಾಡುವೆನು. ಅನಂತರ ನಾನು ರಾಜಾಜ್ಞೆಯನ್ನು ಮೀರಿ ಅರಸನ ಬಳಿಗೆ ಹೋಗುವೆನು. ನಾನು ಸತ್ತರೂ ಸಾಯುವೆನು,” ಎಂದು ಹೇಳಿಕಳುಸಿದಳು.


ಆದರೆ ಸಾಯಂಕಾಲದ ಬಲಿಯನ್ನರ್ಪಿಸುವಾಗ, ನಾನು ನನ್ನ ಶೋಕ ಸ್ಥಿತಿಯಿಂದ ಎದ್ದು, ನನ್ನ ವಸ್ತ್ರವನ್ನೂ, ನನ್ನ ನಿಲುವಂಗಿಯನ್ನೂ ಹರಿದುಕೊಂಡವನಾಗಿ, ನನ್ನ ಮೊಣಕಾಲುಗಳನ್ನೂರಿ, ನನ್ನ ಕೈಗಳನ್ನು ನನ್ನ ದೇವರಾಗಿರುವ ಯೆಹೋವ ದೇವರ ಮುಂದೆ ಚಾಚಿ,


ಆಮೇಲೆ ಎಜ್ರನು ಎದ್ದು ದೇವರ ಆಲಯದ ಮುಂಭಾಗದ ಸ್ಥಳವನ್ನು ಬಿಟ್ಟು, ಎಲ್ಯಾಷೀಬನ ಮಗ ಯೆಹೋಹಾನಾನನ ಕೊಠಡಿಗೆ ಹೋಗಿ, ದುಃಖಿಸುತ್ತಾ ಅನ್ನಪಾನಗಳನ್ನು ತೆಗೆದುಕೊಳ್ಳದೆ ರಾತ್ರಿಯನ್ನು ಕಳೆದನು. ಏಕೆಂದರೆ ಸೆರೆಯಿಂದ ಯೆರೂಸಲೇಮಿಗೆ ಬಂದಿದ್ದ ಯೆಹೂದ್ಯರ ಅಪನಂಬಿಗಸ್ತಿಕೆಯ ಬಗ್ಗೆ ತುಂಬಾ ದುಃಖಿತನಾಗಿದ್ದನು.


ಆಗ ನಾವು ನಮ್ಮ ದೇವರ ಮುಂದೆ ನಮ್ಮನ್ನು ತಗ್ಗಿಸಿಕೊಳ್ಳುವುದಕ್ಕೂ, ನಮಗೂ ನಮ್ಮ ಮಕ್ಕಳಿಗೂ, ನಮ್ಮ ಎಲ್ಲಾ ಸ್ಥಿತಿಗೂ ಅವರಿಂದ ಸರಿಯಾದ ಮಾರ್ಗವನ್ನು ಹುಡುಕುವುದಕ್ಕೂ, ನಾನು ಅಲ್ಲಿ ಅಹಾವ ನದಿಯ ಬಳಿಯಲ್ಲಿ ಉಪವಾಸವನ್ನು ಮಾಡಲು ಪ್ರಕಟಿಸಿದೆನು.


ಆಗ ಕೊರ್ನೇಲ್ಯನು, “ನಾಲ್ಕು ದಿನಗಳ ಹಿಂದೆ ಈ ಸಮಯದಲ್ಲಿ ಅಂದರೆ, ಮಧ್ಯಾಹ್ನ ಮೂರು ಗಂಟೆಯ ಸಮಯದಲ್ಲಿ ನಾನು ನನ್ನ ಮನೆಯಲ್ಲಿದ್ದುಕೊಂಡು ಪ್ರಾರ್ಥನೆ ಮಾಡುತ್ತಿದ್ದೆನು. ಆಗ ಫಕ್ಕನೆ ಹೊಳೆಯುತ್ತಿರುವ ವಸ್ತ್ರ ಧರಿಸಿದ್ದ ಒಬ್ಬನು ನನ್ನೆದುರು ಬಂದು ನಿಂತುಕೊಂಡನು.


ಅವಳು ಎಂಬತ್ತನಾಲ್ಕು ವರ್ಷ ವಿಧವೆಯಾಗಿದ್ದು, ದೇವಾಲಯವನ್ನು ಬಿಟ್ಟುಹೋಗದೆ ಉಪವಾಸಗಳಿಂದಲೂ ಪ್ರಾರ್ಥನೆಗಳಿಂದಲೂ ರಾತ್ರಿ ಹಗಲೂ ಆರಾಧನೆ ಮಾಡುತ್ತಿದ್ದಳು.


ಯೆಹೋವ ದೇವರು ಹೀಗೆ ಘೋಷಿಸುತ್ತಾರೆ, “ಈಗಲಾದರೂ ಉಪವಾಸದಿಂದಲೂ ಅಳುವಿಕೆಯಿಂದಲೂ ಗೋಳಾಟದಿಂದಲೂ ನಿಮ್ಮ ಪೂರ್ಣಹೃದಯದಿಂದ ನನ್ನ ಕಡೆಗೆ ತಿರುಗಿಕೊಳ್ಳಿರಿ.”


ಯಾಜಕರೇ, ಗೋಣಿತಟ್ಟು ಕಟ್ಟಿಕೊಂಡು ಗೋಳಾಡಿರಿ. ಬಲಿಪೀಠದ ಸೇವಕರೇ, ಗೋಳಾಡಿರಿ. ನನ್ನ ದೇವರ ಸೇವಕರೇ, ಬಂದು ಗೋಣಿತಟ್ಟಿನಲ್ಲಿ ರಾತ್ರಿಯೆಲ್ಲಾ ಕಳೆಯಿರಿ. ಏಕೆಂದರೆ, ಧಾನ್ಯ ಸಮರ್ಪಣೆಯೂ ಪಾನಾರ್ಪಣೆಯೂ ನಿಮ್ಮ ದೇವರ ಆಲಯದಿಂದ ನಿಂತುಹೋಗಿವೆ.


“ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಇನ್ನೊಂದು ವಿಷಯದಲ್ಲಿ, ಇಸ್ರಾಯೇಲರ ಮತ್ತೊಂದು ಕೋರಿಕೆಯನ್ನು ಆಲಿಸಿ ನೆರವೇರಿಸುವೆನು. ನಾನು ಅವರನ್ನು ಮನುಷ್ಯರಲ್ಲಿ ಮಂದೆಯಂತೆ ಹೆಚ್ಚಿಸುವೆನು.


ನಾನಾದರೋ ಅವರು ಅಸ್ವಸ್ಥರಾದಾಗ ಗೋಣಿತಟ್ಟು ಹೊದ್ದುಕೊಂಡು ಉಪವಾಸದಿಂದ ತಗ್ಗಿಸಿಕೊಂಡೆನು; ನನ್ನ ಪ್ರಾರ್ಥನೆಗಳಿಗೆ ಉತ್ತರ ದೊರೆಯಲಿಲ್ಲ.


ಶಾಸನಕ್ಕೆ ರುಜು ಹಾಕಿದ್ದಾಯಿತೆಂದು ದಾನಿಯೇಲನಿಗೆ ತಿಳಿದಾಗ, ಅವನು ತನ್ನ ಮನೆಗೆ ಹೋದನು. ಅವನ ಕೋಣೆಯಲ್ಲಿ ಕಿಟಕಿಗಳು ಯೆರೂಸಲೇಮಿಗೆ ಎದುರಾಗಿ ತೆರೆದಿರಲು, ಅವನು ಮೊದಲು ಮಾಡುತ್ತಿದ್ದ ಪ್ರಕಾರವೇ ದಿನಕ್ಕೆ ಮೂರು ಸಾರಿ ಮೊಣಕಾಲೂರಿ ತನ್ನ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆಯನ್ನೂ, ಸ್ತೋತ್ರವನ್ನೂ ಸಲ್ಲಿಸಿದನು.


ಅದೇ ತಿಂಗಳಿನ ಇಪ್ಪತ್ತನಾಲ್ಕನೆಯ ದಿವಸದಲ್ಲಿ ಇಸ್ರಾಯೇಲರು ಉಪವಾಸ ಮಾಡಿ, ಗೋಣಿತಟ್ಟನ್ನು ಉಟ್ಟುಕೊಂಡು, ತಮ್ಮ ಮೇಲೆ ಧೂಳನ್ನು ಹಾಕಿಕೊಂಡು ನೆರೆದುಬಂದರು.


ಆ ದಿವಸದಲ್ಲಿ ಅತ್ತು, ದುಃಖಿಸಿ, ತಲೆ ಬೋಳಿಸಿಕೊಂಡು, ಗೋಣಿತಟ್ಟನ್ನು ಸುತ್ತಿಕೊಳ್ಳಬೇಕೆಂದು ಸರ್ವಶಕ್ತ ದೇವರಾದ ಯೆಹೋವ ದೇವರು ನಿಮ್ಮನ್ನು ಕರೆದರು.


ದಾನಿಯೇಲನಾದ ನಾನು ಪವಿತ್ರ ಗ್ರಂಥಗಳನ್ನು ಪರೀಕ್ಷಿಸಿ, ಯೆಹೋವ ದೇವರ ಪ್ರವಾದಿ ಯೆರೆಮೀಯನಿಗೆ ದಯಪಾಲಿಸಿದ ವಾಕ್ಯಾನುಸಾರ, ಯೆರೂಸಲೇಮ್ ಪಾಳುಬಿದ್ದಿರಬೇಕಾದ ಪೂರ್ಣ ಕಾಲಾವಧಿ ಎಪ್ಪತ್ತು ವರ್ಷಗಳೆಂದು ತಿಳಿದುಕೊಂಡೆನು.


ನಾನು ನನ್ನ ದೇವರಾದ ಯೆಹೋವ ದೇವರಿಗೆ ಪ್ರಾರ್ಥಿಸಿ, ಅರಿಕೆಮಾಡಿದೆನು: “ಕರ್ತನೇ, ಮಹೋನ್ನತ ಮತ್ತು ಅದ್ಭುತ ದೇವರೇ, ನಿಮ್ಮನ್ನು ಪ್ರೀತಿಮಾಡಿ, ನಿಮ್ಮ ಆಜ್ಞೆಗಳನ್ನು ಕೈಗೊಂಡು ನಡೆಯುವವರಿಗೆ ಒಡಂಬಡಿಕೆಯ ಪ್ರೀತಿಯನ್ನೂ ಇಟ್ಟು ನೆರವೇರಿಸುವವರೇ,


ನಾನು ಮಾತಾಡುತ್ತಾ, ಪ್ರಾರ್ಥನೆ ಮಾಡುತ್ತಾ ನನ್ನ ಪಾಪವನ್ನೂ, ನನ್ನ ಜನರಾದ ಇಸ್ರಾಯೇಲರ ಪಾಪವನ್ನೂ ಅರಿಕೆಮಾಡುತ್ತಾ, ನನ್ನ ದೇವರಾದ ಯೆಹೋವ ದೇವರ ಮುಂದೆ ಅವರ ಪರಿಶುದ್ಧ ಪರ್ವತಕ್ಕೋಸ್ಕರವಾಗಿ, ವಿಜ್ಞಾಪಿಸುತ್ತಿರಲಾಗಿ,


ನಿನೆವೆಯ ಮನುಷ್ಯರು, ದೇವರನ್ನು ನಂಬಿ, ಉಪವಾಸವನ್ನು ಸಾರಿ, ಅವರಲ್ಲಿ ದೊಡ್ಡವನು ಮೊದಲುಗೊಂಡು ಚಿಕ್ಕವನವರೆಗೂ ಗೋಣಿತಟ್ಟನ್ನು ಉಟ್ಟುಕೊಂಡರು.


ದಾವೀದನು ಕೂಸಿಗೋಸ್ಕರ ದೇವರನ್ನು ಬೇಡಿಕೊಂಡನು. ಇದಲ್ಲದೆ ದಾವೀದನು ಉಪವಾಸ ಮಾಡಿ, ಒಳಗಿನ ಕೋಣೆಯಲ್ಲಿ ನೆಲದ ಮೇಲೆಯೇ ರಾತ್ರಿ ಕಳೆಯುತ್ತಿದ್ದನು.


ಆದ್ದರಿಂದ ನಾನು ಹೇಳಿದ್ದನ್ನೆಲ್ಲಾ ಹಿಂತೆಗೆದುಕೊಂಡು, ಧೂಳಿನಲ್ಲಿಯೂ ಬೂದಿಯಲ್ಲಿಯೂ ಕುಳಿತು ಪಶ್ಚಾತ್ತಾಪಪಡುತ್ತೇನೆ,” ಎಂದನು.


ಆದರೂ ದೇವರ ಪ್ರಾರ್ಥನೆ ಉಪವಾಸಗಳಿಂದ ಹೊರತು ಬೇರೆ ಯಾವುದರಿಂದಲೂ ಈ ರೀತಿಯಾದ ದೆವ್ವ ಹೊರಟು ಹೋಗುವುದಿಲ್ಲ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು