Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 1:19 - ಕನ್ನಡ ಸಮಕಾಲಿಕ ಅನುವಾದ

19 ಆಗ ನಾವು ಹೋರೇಬಿನಿಂದ ಹೊರಟು ನಮ್ಮ ದೇವರಾದ ಯೆಹೋವ ದೇವರು ನಮಗೆ ಆಜ್ಞಾಪಿಸಿದ ಪ್ರಕಾರ, ನೀವು ಅಮೋರಿಯರ ಬೆಟ್ಟದ ಮಾರ್ಗದಲ್ಲಿ ನೋಡಿದ ಆ ದೊಡ್ಡ ಭಯಂಕರವಾದ ಮರುಭೂಮಿಯನ್ನೆಲ್ಲಾ ದಾಟಿ, ಕಾದೇಶ್ ಬರ್ನೇಯಕ್ಕೆ ಬಂದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನಾವು ಹೋರೇಬಿನಿಂದ ಹೊರಟು ನಮ್ಮ ದೇವರಾದ ಯೆಹೋವನು ಆಜ್ಞಾಪಿಸಿದಂತೆ ಅಮೋರಿಯರ ಬೆಟ್ಟದ ಸೀಮೆಯ ಮಾರ್ಗವನ್ನು ಹಿಡಿದು ನೀವು ನೋಡಿದ ಆ ಘೋರವಾದ ಮಹಾ ಅರಣ್ಯದಲ್ಲಿ ನಡೆದು ಕಾದೇಶ್‌ಬರ್ನೇಯಕ್ಕೆ ಸೇರಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 “ನಾವು ಹೋರೇಬಿನಿಂದ ಹೊರಟು ನಮ್ಮ ದೇವರಾದ ಸರ್ವೇಶ್ವರ ಆಜ್ಞಾಪಿಸಿದಂತೆ ಅಮೋರಿಯರ ಮಲೆನಾಡಿನ ಮಾರ್ಗವನ್ನು ಹಿಡಿದು, ನೀವು ನೋಡಿದ ಆ ಘೋರ ಮಹಾ ಅರಣ್ಯದಲ್ಲಿ ನಡೆದು, ಕಾದೇಶ್ ಬರ್ನೇಯಕ್ಕೆ ಸೇರಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನಾವು ಹೋರೇಬಿನಿಂದ ಹೊರಟು ನಮ್ಮ ದೇವರಾದ ಯೆಹೋವನು ಆಜ್ಞಾಪಿಸಿದಂತೆ ಅಮೋರಿಯರ ಬೆಟ್ಟದ ಸೀಮೆಯ ಮಾರ್ಗವನ್ನು ಹಿಡಿದು ನೀವು ನೋಡಿದ ಆ ಘೋರವಾದ ಮಹಾರಣ್ಯದಲ್ಲಿ ನಡೆದು ಕಾದೇಶ್‍ಬರ್ನೇಯಕ್ಕೆ ಸೇರಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 “ಬಳಿಕ ನಾವು ನಮ್ಮ ದೇವರಾದ ಯೆಹೋವನ ಆಜ್ಞಾನುಸಾರವಾಗಿ ಹೋರೇಬ್ ಬೆಟ್ಟಪ್ರದೇಶವನ್ನು ಬಿಟ್ಟು ಅಮೋರಿಯರ ಗುಡ್ಡಗಾಡು ಪ್ರದೇಶದಲ್ಲಿ ಪ್ರಯಾಣಮಾಡುತ್ತಾ ನೀವು ನೋಡಿದ ಅತ್ಯಂತ ಭಯಂಕರವಾದ ಮತ್ತು ವಿಶಾಲವಾದ ಮರುಭೂಮಿಯನ್ನು ದಾಟಿ ಕಾದೇಶ್‌ಬರ್ನೇಯಕ್ಕೆ ಬಂದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 1:19
13 ತಿಳಿವುಗಳ ಹೋಲಿಕೆ  

ಹೋರೇಬಿನಿಂದ ಕಾದೇಶ್ ಬರ್ನೇಯಕ್ಕೆ ಸೇಯೀರ್ ಬೆಟ್ಟದ ಮಾರ್ಗವಾಗಿ ಹನ್ನೊಂದು ದಿವಸ ಪ್ರಯಾಣ.


ಅವರು, ‘ನಮ್ಮನ್ನು ಈಜಿಪ್ಟ್ ದೇಶದೊಳಗಿಂದ ಹೊರಗೆ ಬರಮಾಡಿ ನಮ್ಮನ್ನು ಮರುಭೂಮಿಯಲ್ಲಿ ಕಾಡು ಕುಳಿಗಳು ಉಳ್ಳ ದೇಶದಲ್ಲಿ, ಕ್ಷಾಮದ ಮತ್ತು ಮರಣದ ನೆರಳಾದಂಥ ದೇಶದಲ್ಲಿ, ಒಬ್ಬರೂ ಹಾದುಹೋಗದೆ ಯಾರೂ ವಾಸಮಾಡದೆ ಇರುವಲ್ಲಿ ನಡೆಸಿದ ಯೆಹೋವ ದೇವರು ಎಲ್ಲಿ?’ ಎಂದು ಪ್ರಶ್ನೆ ಮಾಡಲಿಲ್ಲ.


ದೇವರು ಅಗ್ನಿಸರ್ಪಗಳೂ, ಚೇಳುಗಳೂ ತುಂಬಿದ ಮತ್ತು ನೀರಿಲ್ಲದ ಆ ಭಯಂಕರವಾದ ವಿಶಾಲ ಮರುಭೂಮಿಯಲ್ಲಿ ನಿಮ್ಮನ್ನು ನಡೆಸಿ, ಗಟ್ಟಿಯಾದ ಬಂಡೆಯೊಳಗಿಂದ ನಿಮಗೆ ನೀರು ಬರಮಾಡಿದರು.


ದೇವರು ಬರಿದಾದ ಮರುಭೂಮಿಯಲ್ಲಿ ಇಸ್ರಾಯೇಲರನ್ನು ಕಂಡು ನಡೆಸಿದರು. ದೇವರು ಇಸ್ರಾಯೇಲರನ್ನು ರಕ್ಷಿಸಿ, ಉಪದೇಶಿಸಿ, ತಮ್ಮ ಕಣ್ಣುಗುಡ್ಡೆಯಂತೆ ಕಾಪಾಡಿದರು.


ಅವರು ಹೋಗಿ ಮೋಶೆ ಆರೋನರ ಬಳಿಗೂ, ಇಸ್ರಾಯೇಲರ ಸಮಸ್ತ ಸಭೆಯ ಬಳಿಗೂ ಪಾರಾನ್ ಮರುಭೂಮಿಯಲ್ಲಿರುವ ಕಾದೇಶಿಗೂ ಬಂದು, ಅವರಿಗೂ, ಸಮಸ್ತ ಸಭೆಗೂ ವಿಷಯವನ್ನು ವಿವರಿಸಿ, ಆ ದೇಶದ ಫಲಗಳನ್ನು ಅವರಿಗೆ ತೋರಿಸಿದರು.


ಆಗ ಇಸ್ರಾಯೇಲರು ತಮ್ಮ ಕ್ರಮಗಳ ಪ್ರಕಾರ ಸೀನಾಯಿ ಮರುಭೂಮಿಯಿಂದ ಪ್ರಯಾಣಮಾಡಿದರು. ಮೇಘವು ಪಾರಾನ್ ಎಂಬ ಮರುಭೂಮಿಯಲ್ಲಿ ಇಳಿಯಿತು.


ನಾನು ದೇಶವನ್ನು ನೋಡುವುದಕ್ಕೆ ಕಾದೇಶ್ ಬರ್ನೇಯದಿಂದ ಅವರನ್ನು ಕಳುಹಿಸಿದಾಗ, ನಿಮ್ಮ ಪಿತೃಗಳು ಹಾಗೆಯೇ ಮಾಡಿದರು.


ತಿರುಗಿಕೊಂಡು ಹೊರಟು ಅಮೋರಿಯರ ಬೆಟ್ಟಕ್ಕೂ, ಅದರ ಅರಾಬಾ ಸಮೀಪದ ಎಲ್ಲಾ ಪ್ರದೇಶದ ಗುಡ್ಡದಲ್ಲಿಯೂ ತಗ್ಗಿನಲ್ಲಿಯೂ ನೆಗೆವನಲ್ಲಿಯೂ ಸಮುದ್ರ ತೀರದಲ್ಲಿಯೂ ಇರುವ ಎಲ್ಲಾ ಸ್ಥಳಗಳಿಗೂ ಕಾನಾನ್ಯರ ದೇಶಕ್ಕೂ, ಲೆಬನೋನಿಗೂ ಯೂಫ್ರೇಟೀಸ್ ಎಂಬ ಮಹಾನದಿಯ ಬಳಿಗೂ ಹೋಗಿರಿ.


ಆಗ ನಾನು ನಿಮಗೆ, “ನಮ್ಮ ದೇವರಾದ ಯೆಹೋವ ದೇವರು ನಮಗೆ ಕೊಡುವ ಅಮೋರಿಯರ ಮಲೆನಾಡಿಗೆ ಹತ್ತಿರ ಬಂದಿದ್ದೀರಿ.


ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಎಲ್ಲಾ ಕೈಕೆಲಸದಲ್ಲಿ ನಿಮ್ಮನ್ನು ಆಶೀರ್ವದಿಸಿದ್ದಾರೆ. ನೀವು ಈ ದೊಡ್ಡ ಮರುಭೂಮಿಯಲ್ಲಿ ಸಂಚಾರ ಮಾಡಿದ್ದನ್ನು ದೇವರು ಗಮನಿಸಿದ್ದಾರೆ. ಈ ನಲವತ್ತು ವರ್ಷ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಸಂಗಡ ಇದ್ದರು. ನಿಮಗೆ ಏನೂ ಕಡಿಮೆ ಆಗಲಿಲ್ಲ.


ಆಶೇರ್ ಗೋತ್ರದ ಮೀಕಾಯೇಲನ ಮಗ ಸೆತೂರ್,


ಅವರು ಈ ದೇಶದ ನಿವಾಸಿಗಳಿಗೆ ಅದನ್ನು ಹೇಳುವರು. ನೀವು ಈ ಜನರ ಸಂಗಡ ಇದ್ದೀಯೆಂದೂ, ಯೆಹೋವ ದೇವರಾದ ನೀವೇ ಮುಖಾಮುಖಿಯಾಗಿ ಕಾಣಿಸಿಕೊಳ್ಳುತ್ತೀರಿ ಎಂದೂ ನೀವು ಹಗಲು ಹೊತ್ತಿನಲ್ಲಿ ಮೇಘಸ್ತಂಭದಲ್ಲಿಯೂ, ರಾತ್ರಿಯಲ್ಲಿ ಅಗ್ನಿಸ್ತಂಭದಲ್ಲಿಯೂ ಅವರ ಮುಂದೆ ನಡೆಯುತ್ತೀರಿ ಎಂದೂ ನೀವಿರುವ ಮೇಘವು ಇಸ್ರಾಯೇಲರ ಮೇಲೆ ಇರುವುದಾಗಿಯೂ ಎಂದೂ ಅವರು ಈಗಾಗಲೇ ಕೇಳಿದ್ದಾರೆ.


ಯೆಹೋಶುವನು ಕಾದೇಶ್ ಬರ್ನೇಯದಿಂದ ಗಾಜದವರೆಗೂ ಇರುವವರನ್ನೂ, ಗೋಷೆನಿನ ಸಮಸ್ತ ಪ್ರಾಂತವನ್ನೂ ಗಿಬ್ಯೋನಿನವರೆಗೆ ಸೋಲಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು