Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 1:32 - ಕನ್ನಡ ಸಮಕಾಲಿಕ ಅನುವಾದ

32 ಆದರೆ ಈ ಕಾರ್ಯದಲ್ಲಿ ನೀವು ನಿಮ್ಮ ದೇವರಾದ ಯೆಹೋವ ದೇವರನ್ನು ನಂಬಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಆದರೂ ನೀವು ನಿಮ್ಮ ದೇವರಾದ ಯೆಹೋವನನ್ನು ನಂಬಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 “ಆದರೂ ನೀವು ನಿಮ್ಮ ದೇವರಾದ ಸರ್ವೇಶ್ವರನನ್ನು ನಂಬಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಆದರೂ ನೀವು ನಿಮ್ಮ ದೇವರಾದ ಯೆಹೋವನನ್ನು ಇನ್ನೂ ನಂಬಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 “ಆದರೂ ನೀವು ಇನ್ನೂ ನಿಮ್ಮ ದೇವರಾದ ಯೆಹೋವನ ಮೇಲೆ ಭರವಸೆ ಇಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 1:32
9 ತಿಳಿವುಗಳ ಹೋಲಿಕೆ  

ಹೌದು, ಇಸ್ರಾಯೇಲರು ಮನೋಹರವಾದ ದೇಶವನ್ನು ಹೀನೈಸಿ, ದೇವರ ಮಾತನ್ನು ನಂಬದೆ ಹೋದರು.


ಇದನ್ನು ನೀವು ಈಗಾಗಲೇ ಒಂದು ಸಾರಿ ತಿಳಿದವರಾಗಿದ್ದೀರಿ. ಆದರೂ ನಾನು ಅದನ್ನೇ ನಿಮ್ಮ ಜ್ಞಾಪಕಕ್ಕೆ ತರಬೇಕೆಂದು ಅಪೇಕ್ಷಿಸುತ್ತೇನೆ. ಅದು ಯಾವುದೆಂದರೆ: ಕರ್ತದೇವರು ತಮ್ಮ ಪ್ರಜೆಯನ್ನು ಈಜಿಪ್ಟ್ ದೇಶದೊಳಗಿಂದ ರಕ್ಷಿಸಿದರೂ ತರುವಾಯ ಅವರೊಳಗೆ ನಂಬದೆ ಹೋದವರನ್ನು ಸಂಹಾರ ಮಾಡಿದರು.


ಪ್ರಿಯರೇ, ದೇವರನ್ನು ಬಿಟ್ಟುಹೋಗುವ ಅವಿಶ್ವಾಸಯುಳ್ಳ ದುಷ್ಟ ಹೃದಯವು ನಿಮ್ಮಲ್ಲಿ ಯಾರಿಗೂ ಇರದಂತೆ ಎಚ್ಚರಿಕೆಯಿಂದ ನೋಡಿಕೊಳ್ಳಿರಿ.


ಏಕೆಂದರೆ ಅವರು ದೇವರಲ್ಲಿ ನಂಬಿಕೆ ಇಡಲಿಲ್ಲ. ದೇವರ ರಕ್ಷಣೆಯಲ್ಲಿ ಭರವಸೆ ಇಡಲಿಲ್ಲ.


ಎಫ್ರಾಯೀಮಿನ ರಾಜಧಾನಿ ಸಮಾರ್ಯ. ಸಮಾರ್ಯದ ರಾಜಧಾನಿ ರೆಮಲ್ಯನ ಮಗನು. ನೀವು ನಂಬದೆ ಹೋದರೆ ನೀವು ನಿಜವಾಗಿಯೂ ನೆಲೆಗೊಳ್ಳುವುದಿಲ್ಲ,’ ಎಂದು ಹೇಳುತ್ತಾರೆ.”


ಅವರು ಉದಯದಲ್ಲಿ ಎದ್ದು ತೆಕೋವದ ಮರುಭೂಮಿಗೆ ಹೊರಟರು. ಅವರು ಹೊರಟು ಹೋಗುತ್ತಿರುವಾಗ ಯೆಹೋಷಾಫಾಟನು ನಿಂತುಕೊಂಡು, “ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ನನ್ನ ಮಾತನ್ನು ಕೇಳಿರಿ. ನಿಮ್ಮ ದೇವರಾದ ಯೆಹೋವ ದೇವರನ್ನು ನಂಬಿ ಸ್ಥಿರವಾಗಿರಿ. ದೇವರ ಪ್ರವಾದಿಗಳನ್ನು ನಂಬಿರಿ, ಆಗ ಜಯ ಹೊಂದುವಿರಿ,” ಎಂದನು.


ಇಸ್ರಾಯೇಲರಿಗೆ ಸುವಾರ್ತೆಯು ಸಾರೋಣವಾದಂತೆಯೇ ನಮಗೂ ಸಾರಿಹೇಳಲಾಯಿತು. ಆದರೆ ಕೇಳಿದವರು ವಿಧೇಯರಾದವರ ನಂಬಿಕೆಯಲ್ಲಿ ಭಾಗವಹಿಸದೇ ಹೋದದ್ದರಿಂದ, ಸಾರಿದ ವಾಕ್ಯವು ಅವರಿಗೆ ಪ್ರಯೋಜನವಾಗಲಿಲ್ಲ.


ಆಗ ಯೆಹೋವ ದೇವರು ಮೋಶೆಗೆ, “ಈ ಜನರು ಎಷ್ಟರವರೆಗೆ ನನಗೆ ಕೋಪವನ್ನೆಬ್ಬಿಸುವರು? ನಾನು ಅವರ ಮಧ್ಯದಲ್ಲಿ ಮಾಡಿದ ಸಕಲ ಸೂಚಕಕಾರ್ಯಗಳನ್ನು ಕಣ್ಣಾರೆ ನೋಡಿಯೂ ನನ್ನನ್ನು ಎಷ್ಟು ಮಾತ್ರಕ್ಕು ನಂಬದೆ ಇರುವರು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು