Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 1:37 - ಕನ್ನಡ ಸಮಕಾಲಿಕ ಅನುವಾದ

37 ನನ್ನ ಮೇಲೆಯೂ ಯೆಹೋವ ದೇವರು ನಿಮ್ಮ ವಿಷಯವಾಗಿ ಬೇಸರಮಾಡಿಕೊಂಡು, “ನೀನು ಸಹ ಅದರಲ್ಲಿ ಪ್ರವೇಶಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಅದು ಮಾತ್ರವಲ್ಲದೆ ಯೆಹೋವನು ನಿಮ್ಮಿಂದ ನನ್ನ ಮೇಲೆಯೂ ಕೋಪಗೊಂಡು, “ನೀನೂ ಆ ದೇಶಕ್ಕೆ ಸೇರುವುದಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಅದು ಮಾತ್ರವಲ್ಲದೆ, ಸರ್ವೇಶ್ವರ ನಿಮ್ಮ ದೆಸೆಯಿಂದ ನನ್ನ ಮೇಲೆಯೂ ಕೋಪಮಾಡಿದರು. ‘ನೀನೂ ಆ ನಾಡಿಗೆ ಸೇರುವುದಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಅದು ಮಾತ್ರವಲ್ಲದೆ ಯೆಹೋವನು ನಿಮ್ಮ ದೆಸೆಯಿಂದ ನನ್ನ ಮೇಲೆಯೂ ಕೋಪಮಾಡಿ - ನೀನೂ ಆ ದೇಶಕ್ಕೆ ಸೇರುವದಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 “ದೇವರಾದ ಯೆಹೋವನು ನಿಮ್ಮಿಂದಾಗಿ ನನ್ನ ಮೇಲೂ ಸಿಟ್ಟುಗೊಂಡು, ‘ಮೋಶೆಯೇ, ನೀನೂ ಸಹ ವಾಗ್ದಾನದ ದೇಶವನ್ನು ಪ್ರವೇಶಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 1:37
12 ತಿಳಿವುಗಳ ಹೋಲಿಕೆ  

ನಾನು ಯೊರ್ದನಿನ ಆಚೆಗೆ ಹೋಗದ ಹಾಗೆಯೂ, ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸೊತ್ತಾಗಿ ಕೊಡುವ ಆ ಒಳ್ಳೆಯ ದೇಶದಲ್ಲಿ ಪ್ರವೇಶಿಸದಂತೆ, ನಿಮ್ಮ ನಿಮಿತ್ತ ಯೆಹೋವ ದೇವರು ನನ್ನ ಮೇಲೆ ಕೋಪಮಾಡಿಕೊಂಡು ಪ್ರಮಾಣ ಮಾಡಿದರು.


ಆಗ ಯೆಹೋವ ದೇವರು ಮೋಶೆ ಮತ್ತು ಆರೋನನ ಸಂಗಡ ಮಾತನಾಡಿ, “ನನ್ನಲ್ಲಿ ವಿಶ್ವಾಸವಿಡದೆ ಹೋದಕಾರಣ ನೀವು ಇಸ್ರಾಯೇಲರ ಕಣ್ಣುಗಳ ಮುಂದೆ ನನ್ನನ್ನು ಪರಿಶುದ್ಧನಾಗಿ ಗೌರವಿಸುವುದಕ್ಕೆ, ನಾನು ಅವರಿಗೆ ಕೊಡುವ ದೇಶದಲ್ಲಿ ನೀವು ಅವರನ್ನು ಸೇರಿಸುವುದಿಲ್ಲ,” ಎಂದರು.


ಅನಂತರ ಯೆಹೋವ ದೇವರು ಅವನಿಗೆ, “ಅಬ್ರಹಾಮನಿಗೂ ಅವನ ಸಂತತಿಗೂ ಕೊಡುತ್ತೇನೆಂದು ನಾನು ಇಸಾಕನಿಗೂ, ಯಾಕೋಬನಿಗೂ ಪ್ರಮಾಣ ಮಾಡಿದ ದೇಶವು ಇದೇ. ಇದನ್ನು ನಿನಗೆ ತೋರಿಸಿದೆನು. ಆದರೆ ನೀನು ಅಲ್ಲಿಗೆ ಸೇರುವುದಿಲ್ಲ,” ಎಂದು ಹೇಳಿದರು.


ಆಗ ಯೆಹೋವ ದೇವರು ಮೋಶೆಗೆ, “ಪವಿತ್ರಾತ್ಮವುಳ್ಳವನಾಗಿರುವ ನೂನನ ಮಗ ಯೆಹೋಶುವನನ್ನು ತೆಗೆದುಕೊಂಡು, ನಿನ್ನ ಕೈಯನ್ನು ಅವನ ಮೇಲೆ ಇಟ್ಟು,


ಪಿಸ್ಗಾದ ತುದಿಗೆ ಏರಿ, ಪಶ್ಚಿಮಕ್ಕೂ, ಉತ್ತರಕ್ಕೂ, ದಕ್ಷಿಣಕ್ಕೂ, ಪೂರ್ವಕ್ಕೂ ಕಣ್ಣೆತ್ತಿ ಅದನ್ನು ಕಣ್ಣಾರೆ ನೋಡು. ಈ ಯೊರ್ದನನ್ನು ನೀನು ದಾಟಿ ಹೋಗುವುದಿಲ್ಲ.


“ನಾನು ಈ ಹೊತ್ತು ನೂರ ಇಪ್ಪತ್ತು ವರ್ಷದವನಾಗಿದ್ದೇನೆ. ಇನ್ನು ಮುಂದೆ ನಿಮ್ಮನ್ನು ಮುನ್ನಡೆಸಲು ನನಗೆ ಸಾಧ್ಯವಾಗುತ್ತಿಲ್ಲ. ಇದಲ್ಲದೆ ಯೆಹೋವ ದೇವರು ನನಗೆ, ‘ನೀನು ಈ ಯೊರ್ದನನ್ನು ದಾಟುವುದಿಲ್ಲ,’ ಎಂದು ಹೇಳಿದ್ದಾರೆ.


ಆದುದರಿಂದ, ನೀನು ಆ ದೇಶವನ್ನು ದೂರದಿಂದ ನೋಡುವೆ, ಆದರೆ ನಾನು ಇಸ್ರಾಯೇಲರಿಗೆ ಕೊಡುವ ದೇಶದಲ್ಲಿ ನೀನು ಪ್ರವೇಶಿಸುವುದಿಲ್ಲ,” ಎಂದು ಹೇಳಿದರು.


ಆದರೆ ಯೆಹೋಶುವನಿಗೆ ಆಜ್ಞಾಪಿಸಿ, ಅವನಿಗೆ ದೃಢಮಾಡಿ ಬಲಪಡಿಸು. ಅವನು ಈ ಜನರ ಮುಂದೆ ದಾಟಿ ಹೋಗಿ, ನೀನು ನೋಡುವ ದೇಶವನ್ನು ಅವರಿಗೆ ಸ್ವಾಧೀನಪಡಿಸುವನು,” ಎಂದು ಹೇಳಿದರು.


ಆದರೆ ನಾನು ಈ ದೇಶದಲ್ಲಿ ಸಾಯಲೇಬೇಕು. ನಾನು ಯೊರ್ದನಿನ ಆಚೆಗೆ ಹೋಗತಕ್ಕದ್ದಲ್ಲ. ಆದರೆ ನೀವು ಆಚೆಗೆ ಹೋಗಿ, ಆ ಒಳ್ಳೆಯ ದೇಶವನ್ನು ಸ್ವಾಧೀನಮಾಡಿಕೊಳ್ಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು