Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 1:38 - ಕನ್ನಡ ಸಮಕಾಲಿಕ ಅನುವಾದ

38 ಆದರೆ ನಿನ್ನ ಮುಂದೆ ನಿಂತಿರುವ ನೂನನ ಮಗ ಯೆಹೋಶುವನು ಅಲ್ಲಿಗೆ ಸೇರುವನು. ಅವನನ್ನು ಧೈರ್ಯಗೊಳಿಸು. ಅವನೇ ಆ ನಾಡನ್ನು ಇಸ್ರಾಯೇಲಿಗೆ ಸ್ವಾಧೀನಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಆದರೆ ನಿನ್ನ ಮುಂದೆ ನಿಂತಿರುವ ನಿನ್ನ ಸೇವಕನು, ನೂನನ ಮಗನೂ ಆದ ಯೆಹೋಶುವನು ಅಲ್ಲಿಗೆ ಸೇರುವನು. ಅವನೇ ಇಸ್ರಾಯೇಲರಿಗೆ ಆ ದೇಶವನ್ನು ಸ್ವಾಧೀನಪಡಿಸುವನು. ಆದುದರಿಂದ ಅವನನ್ನು ಧೈರ್ಯಗೊಳಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಆದರೆ ನಿನ್ನ ಮುಂದೆ ನಿಂತಿರುವ ನೂನನ ಮಗ ಯೆಹೋಶುವನು ಅಲ್ಲಿಗೆ ಸೇರುವನು. ಅವನೇ ಇಸ್ರಯೇಲರಿಗೆ ಆ ನಾಡನ್ನು ಸ್ವಾಧೀನಪಡಿಸುವನು; ಆದುದರಿಂದ ಅವನನ್ನು ಧೈರ್ಯಗೊಳಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಆದರೆ ನಿನ್ನ ಶಿಷ್ಯನಾದ ನೂನನ ಮಗ ಯೆಹೋಶುವನು ಅಲ್ಲಿಗೆ ಸೇರುವನು. ಅವನೇ ಇಸ್ರಾಯೇಲ್ಯರಿಗೆ ಆ ದೇಶವನ್ನು ಸ್ವಾಧೀನಪಡಿಸುವನು; ಆದದರಿಂದ ಅವನನ್ನು ಧೈರ್ಯಗೊಳಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಆದರೆ ನಿನ್ನ ಸಹಾಯಕನಾದ ನೂನನ ಮಗನಾದ ಯೆಹೋಶುವನು ಆ ದೇಶವನ್ನು ಪ್ರವೇಶಿಸುವನು. ಯೆಹೋಶುವನನ್ನು ಪ್ರೋತ್ಸಾಹಿಸು; ಯಾಕೆಂದರೆ ಆ ದೇಶವನ್ನು ವಶಪಡಿಸಿಕೊಳ್ಳಲು ಅವನು ಇಸ್ರೇಲರನ್ನು ಮುನ್ನಡೆಸಬೇಕು’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 1:38
20 ತಿಳಿವುಗಳ ಹೋಲಿಕೆ  

ಆದರೆ ಯೆಹೋಶುವನಿಗೆ ಆಜ್ಞಾಪಿಸಿ, ಅವನಿಗೆ ದೃಢಮಾಡಿ ಬಲಪಡಿಸು. ಅವನು ಈ ಜನರ ಮುಂದೆ ದಾಟಿ ಹೋಗಿ, ನೀನು ನೋಡುವ ದೇಶವನ್ನು ಅವರಿಗೆ ಸ್ವಾಧೀನಪಡಿಸುವನು,” ಎಂದು ಹೇಳಿದರು.


ಯೆಫುನ್ನೆಯ ಮಗ ಕಾಲೇಬನೂ, ನೂನನ ಮಗ ಯೆಹೋಶುವನ ಹೊರತು ನಾನು ನಿಮ್ಮನ್ನು ವಾಸಮಾಡುವುದಕ್ಕೆ ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ದೇಶಕ್ಕೆ ನಿಸ್ಸಂದೇಹವಾಗಿ ನೀವೆಲ್ಲರೂ ಬಾರದೆ ಇರುವಿರಿ.


ತನ್ನ ಕೆಲಸದಲ್ಲಿ ಶ್ರದ್ಧೆಯುಳ್ಳವನನ್ನು ನೀನು ನೋಡಿದ್ದೀಯಾ? ಅವನು ನೀಚರ ಮುಂದೆ ಅಲ್ಲ, ಅರಸರ ಮುಂದೆಯೇ ಸೇವೆ ಸಲ್ಲಿಸುವನು.


ಸೌಲನು ಇಷಯನ ಬಳಿಗೆ ಮನುಷ್ಯನನ್ನು ಕಳುಹಿಸಿ, “ದಾವೀದನು ನನ್ನ ಸಮ್ಮುಖದಲ್ಲಿ ಸೇವೆಮಾಡಲಿ. ಏಕೆಂದರೆ ನಾನು ದಾವೀದನನ್ನು ಮೆಚ್ಚಿದ್ದೇನೆ,” ಎಂದನು.


ಅವನು ನೂನನ ಮಗನಾದ ಯೆಹೋಶುವನಿಗೆ ಆಜ್ಞಾಪಿಸಿ, “ಶೂರನಾಗಿರು, ಧೈರ್ಯವಾಗಿರು, ಏಕೆಂದರೆ ನೀನು ಇಸ್ರಾಯೇಲರನ್ನು ನಾನು ಅವರಿಗೆ ಪ್ರಮಾಣ ಮಾಡಿದ ದೇಶಕ್ಕೆ ತರುವೆ, ನಾನು ನಿನ್ನ ಸಂಗಡ ಇರುವೆನು,” ಎಂದು ಹೇಳಿದನು.


ಇದಲ್ಲದೆ ಯೆಹೋವ ದೇವರು ಮೋಶೆಗೆ, “ಇಗೋ, ನೀನು ಸಾಯುವ ದಿನಗಳು ಸಮೀಪವಾದವು. ಯೆಹೋಶುವನನ್ನು ಕರೆದು ನೀವು ದೇವದರ್ಶನ ಗುಡಾರದಲ್ಲಿ ನಿಂತುಕೊಳ್ಳಿರಿ. ಆಗ ಅವನಿಗೆ ಅಧಿಕಾರ ಕೊಡುವೆನು,” ಎಂದರು. ಆ ಪ್ರಕಾರವೆ ಮೋಶೆಯೂ, ಯೆಹೋಶುವನೂ ಹೋಗಿ ದೇವದರ್ಶನ ಗುಡಾರದಲ್ಲಿ ನಿಂತುಕೊಂಡರು.


ಏಕೆಂದರೆ ಅವರು ಮರುಭೂಮಿಯಲ್ಲಿ ನಿಶ್ಚಯವಾಗಿ ಸಾಯಲಿ ಎಂದು ಯೆಹೋವ ದೇವರು ಅವರಿಗೆ ಹೇಳಿದ್ದರು. ಈ ಪ್ರಕಾರ ಯೆಫುನ್ನೆಯ ಮಗ ಕಾಲೇಬನೂ ನೂನನ ಮಗ ಯೆಹೋಶುವನೂ ಇವರನ್ನು ಬಿಟ್ಟು ಒಬ್ಬನೂ ಉಳಿಯಲಿಲ್ಲ.


ಆದರೆ ದೇಶವನ್ನು ಪರೀಕ್ಷಿಸುವುದಕ್ಕೆ ಹೋದ ಮನುಷ್ಯರೊಳಗೆ ಇಬ್ಬರಾದ ನೂನನ ಮಗ ಯೆಹೋಶುವನೂ, ಯೆಫುನ್ನೆಯ ಮಗ ಕಾಲೇಬನೂ ಉಳಿದರು.


ದೇಶವನ್ನು ಸಂಚರಿಸಿ ನೋಡುವುದಕ್ಕಾಗಿ ಮೋಶೆ ಕಳುಹಿಸಿದ ಮನುಷ್ಯರ ಹೆಸರುಗಳು ಇವೇ. ಮೋಶೆ ನೂನನ ಮಗ ಹೋಶೇಯನಿಗೆ ಯೆಹೋಶುವ ಎಂದು ಹೆಸರಿಟ್ಟನು.


ಎಫ್ರಾಯೀಮ್ ಗೋತ್ರದ ನೂನನ ಮಗ ಹೋಶೇಯ,


ಒಬ್ಬ ಮನುಷ್ಯನು ತನ್ನ ಸ್ನೇಹಿತನ ಸಂಗಡ ಮಾತನಾಡುವಂತೆ ಯೆಹೋವ ದೇವರು ಮೋಶೆಯ ಸಂಗಡ ಮುಖಾಮುಖಿಯಾಗಿ ಮಾತನಾಡುತ್ತಿದ್ದರು. ತರುವಾಯ ಅವನು ಪಾಳೆಯಕ್ಕೆ ಹಿಂದಿರುಗಿ ಹೋಗುತ್ತಿದ್ದನು. ಆದರೆ ಅವನ ಸೇವಕನೂ ನೂನನ ಮಗನೂ ಆದ ಯೆಹೋಶುವನೆಂಬ ಯೌವನಸ್ಥನು ಗುಡಾರವನ್ನು ಬಿಟ್ಟುಹೋಗಲಿಲ್ಲ.


ಆಗ ಮೋಶೆಯೂ ಅವನ ಸಹಾಯಕನಾದ ಯೆಹೋಶುವನೂ ದೇವರ ಬೆಟ್ಟದ ಮೇಲೆ ಹೊರಟರು.


ಯೆಹೋವ ದೇವರ ಸೇವಕನಾದ ಮೋಶೆಯ ಮರಣದ ತರುವಾಯ, ನೂನನ ಮಗ ಮತ್ತು ಮೋಶೆಯ ಸೇವಕ ಆಗಿರುವ ಯೆಹೋಶುವನಿಗೆ ಯೆಹೋವ ದೇವರು:


“ದೇಶವನ್ನು ನಿಮಗೆ ಹಂಚಬೇಕಾದ ಜನರ ಹೆಸರುಗಳು ಇವೇ. ಯಾಜಕನಾದ ಎಲಿಯಾಜರನೂ, ನೂನನ ಮಗ ಯೆಹೋಶುವನೂ


ಹೀಗೆ ಯೆಹೋಶುವನು ದೇಶವನ್ನೆಲ್ಲಾ ಯೆಹೋವ ದೇವರು ಮೋಶೆಗೆ ಹೇಳಿದ ಪ್ರಕಾರವೇ ಸ್ವಾಧೀನಮಾಡಿಕೊಂಡನು. ಅದನ್ನು ಇಸ್ರಾಯೇಲರಿಗೆ ಅವರ ಗೋತ್ರಗಳ ಭಾಗಗಳಿಗನುಸಾರ ಬಾಧ್ಯತೆಯಾಗಿ ಕೊಟ್ಟನು. ಆಗ ದೇಶವು ಯುದ್ಧವಿಲ್ಲದೆ ವಿಶ್ರಮಿಸಿಕೊಂಡಿತು.


ನಾನಾದರೋ ಇಗೋ, ನಾನು ನಮ್ಮ ಬಳಿಗೆ ಬರುವ ಬಾಬಿಲೋನಿಯರ ಹತ್ತಿರ ಕಾದುಕೊಳ್ಳುವುದಕ್ಕೆ ಮಿಚ್ಪದಲ್ಲಿ ವಾಸಮಾಡುವೆನು. ಆದರೆ ನೀವು ದ್ರಾಕ್ಷಾರಸವನ್ನೂ, ಹಣ್ಣುಗಳನ್ನೂ, ಎಣ್ಣೆಯನ್ನೂ ಕೂಡಿಸಿ, ನಿಮ್ಮ ಪಾತ್ರೆಗಳಲ್ಲಿ ಇಟ್ಟು, ನೀವು ಹಿಡಿದಿರುವ ನಿಮ್ಮ ಪಟ್ಟಣಗಳಲ್ಲಿ ವಾಸವಾಗಿರಿ,” ಎಂಬುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು