Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 10:16 - ಕನ್ನಡ ಸಮಕಾಲಿಕ ಅನುವಾದ

16 ಹೀಗಿರುವುದರಿಂದ ನಿಮ್ಮ ಹೃದಯದ ಸುನ್ನತಿ ಮಾಡಿಕೊಳ್ಳಿರಿ. ಇನ್ನು ಮೇಲೆ ಹಟಮಾರಿಗಳಾಗಿರಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆದುದರಿಂದ ನೀವು ಆಜ್ಞೆಗೆ ಮಣಿಯದ ನಿಮ್ಮ ದುಷ್ಟಸ್ವಭಾವವನ್ನು ಬಿಟ್ಟು ನಿಮ್ಮ ಹೃದಯದಲ್ಲೇ ಸುನ್ನತಿಮಾಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆದುದರಿಂದ ಅವರ ಆಜ್ಞೆಗೆ ಮಣಿಯದ ನಿಮ್ಮ ದುಷ್ಟಸ್ವಭಾವವನ್ನು ಬಿಟ್ಟು ಬಿಟ್ಟು ನಿಮ್ಮ ಹೃದಯದಲ್ಲೇ ಸುನ್ನತಿಮಾಡಿಕೊಳ್ಳಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆದದರಿಂದ ನೀವು ಆಜ್ಞೆಗೆ ಮಣಿಯದ ನಿಮ್ಮ ದುಸ್ವಭಾವವನ್ನು ಬಿಟ್ಟುಬಿಟ್ಟು ನಿಮ್ಮ ಹೃದಯದಲ್ಲೇ ಸುನ್ನತಿ ಮಾಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 “ಆದ್ದರಿಂದ ಹಠಮಾರಿಗಳಾಗಬೇಡಿರಿ. ನಿಮ್ಮ ಹೃದಯಗಳನ್ನು ಯೆಹೋವನಿಗೆ ಕೊಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 10:16
13 ತಿಳಿವುಗಳ ಹೋಲಿಕೆ  

ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ಯೆಹೋವ ದೇವರಿಗೋಸ್ಕರ ಸುನ್ನತಿ ಮಾಡಿಕೊಳ್ಳಿರಿ; ನಿಮ್ಮ ಹೃದಯಗಳ ಮುಂದೊಗಲನ್ನು ತೆಗೆದುಹಾಕಿರಿ. ಇಲ್ಲದಿದ್ದರೆ ನನ್ನ ಉಗ್ರವು ಬೆಂಕಿಯ ಹಾಗೆ ಹೊರಟು, ನಿಮ್ಮ ಕ್ರಿಯೆಗಳ ಕೆಟ್ಟತನದ ನಿಮಿತ್ತ ಯಾರೂ ಆರಿಸಲಾಗದ ಹಾಗೆ ಉರಿಯುವುದು.”


ಆಗ ನೀವು ನಿಮ್ಮ ದೇವರಾದ ಯೆಹೋವ ದೇವರನ್ನು ನಿಮ್ಮ ಪೂರ್ಣಹೃದಯದಿಂದಲೂ, ನಿಮ್ಮ ಪೂರ್ಣಪ್ರಾಣದಿಂದಲೂ ಪ್ರೀತಿಸಿ, ನೀವು ಬದುಕಿ ಬಾಳುವಂತೆ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಹೃದಯವನ್ನೂ, ನಿಮ್ಮ ಸಂತತಿಯ ಹೃದಯವನ್ನೂ ಪರಿಚ್ಛೇದಿಸುವರು.


ನಾನು ಸಹ ಅವರಿಗೆ ವಿರೋಧವಾಗಿ ನಡೆದುಕೊಂಡು ಅವರನ್ನು ತಮ್ಮ ಶತ್ರುಗಳ ದೇಶದಲ್ಲಿ ಬರಮಾಡಿದ್ದನ್ನೂ ಅರಿಕೆಮಾಡಿದರೆ, ಆಗಲೇ ತಮ್ಮ ಮೊಂಡತನವನ್ನು ಬಿಟ್ಟು ನನ್ನ ಆಜ್ಞೆಗೆ ತಲೆಬಾಗಿ, ಅವರು ತಮ್ಮ ಅಕ್ರಮದಿಂದ ಉಂಟಾದ ಶಿಕ್ಷೆಗೆ ಒಪ್ಪಿಕೊಳ್ಳುವುದಾದರೆ,


ನೀವು ಕ್ರಿಸ್ತ ಯೇಸುವಿನಲ್ಲಿ ಸ್ವೀಕರಿಸಿದ ಸುನ್ನತಿಯು ಕೈಯಿಂದ ಮಾಡಿದ್ದಲ್ಲ, ಅದು ನಿಮ್ಮ ಮಾಂಸಭಾವವನ್ನು ಆಳುವ ಇಡೀ ಸ್ವಾರ್ಥವನ್ನೇ ಬಿಟ್ಟುಬಿಡುವ ಆತ್ಮಿಕ ಸುನ್ನತಿಯಾಗಿದೆ.


ಹೀಗಿರುವುದರಿಂದ ನಿಮ್ಮ ನೀತಿಗೋಸ್ಕರ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಈ ಒಳ್ಳೆಯ ದೇಶವನ್ನು ಸ್ವಾಧೀನಪಡಿಸಿಕೊಳ್ಳುವುದಕ್ಕೆ ಕೊಡುವುದಿಲ್ಲವೆಂದು ನೀವು ತಿಳಿದುಕೊಳ್ಳಬೇಕು. ಏಕೆಂದರೆ ನೀವು ಹಟಮಾರಿ ಜನಾಂಗವಾಗಿದ್ದೀರಿ.


ಯೆರೂಸಲೇಮೇ, ನಿನಗೆ ರಕ್ಷಣೆಯಾಗುವ ಹಾಗೆ ನಿನ್ನ ಹೃದಯದ ಕೆಟ್ಟತನವನ್ನು ತೊಳೆದುಕೋ; ನಿನ್ನ ವ್ಯರ್ಥ ಆಲೋಚನೆಗಳು ಎಷ್ಟರವರೆಗೆ ನಿನ್ನಲ್ಲಿ ತಂಗುವುವು.


ಏಕೆಂದರೆ ನಿಮ್ಮ ದ್ರೋಹವನ್ನೂ, ನಿಮ್ಮ ಹಟಮಾರಿತನವನ್ನೂ ನಾನು ಬಲ್ಲೆನು. ಈ ಹೊತ್ತು ನಾನು ಇನ್ನೂ ನಿಮ್ಮ ಸಂಗಡ ಬದುಕಿರುವಾಗಲೇ ಯೆಹೋವ ದೇವರಿಗೆ ದ್ರೋಹ ಮಾಡಿದವರಾದಿರಿ. ನಾನು ಸತ್ತಮೇಲೆ ಇನ್ನೇನಾಗುವುದು?


ಇದಲ್ಲದೆ ಯೆಹೋವ ದೇವರು ನನಗೆ, “ನಾನು ಈ ಜನರನ್ನು ನೋಡಿದ್ದೇನೆ. ಇಗೋ, ಇದು ಆಜ್ಞೆಗೆ ವಿಧೇಯವಾಗದ ಜನಾಂಗವೇ.


ನೀವು ಸುನ್ನತಿ ಮಾಡಿಸಿಕೊಳ್ಳುವುದು, ನಿಮಗೂ ನನಗೂ ಉಂಟಾದ ಒಡಂಬಡಿಕೆಗೆ ಗುರುತಾಗಿ ಇರುವುದು.


ಅವುಗಳಲ್ಲಿ ನೀವು ನನ್ನ ರೊಟ್ಟಿಯನ್ನೂ ಕೊಬ್ಬನ್ನೂ ರಕ್ತವನ್ನೂ ಅರ್ಪಿಸುವಾಗ ನಿಮ್ಮ ಎಲ್ಲಾ ಅಸಹ್ಯಗಳಿಗೋಸ್ಕರ ನನ್ನ ಒಡಂಬಡಿಕೆಯನ್ನು ಮೀರುವಂಥ ಹೃದಯದಲ್ಲಿಯೂ ಶರೀರದಲ್ಲಿಯೂ ಸುನ್ನತಿಯಿಲ್ಲದಂಥ ಪರಕೀಯರನ್ನು ನನ್ನ ಪರಿಶುದ್ಧ ಸ್ಥಳಕ್ಕೆ ಕರೆತಂದು ನನ್ನ ಆಲಯವನ್ನು ಅಪವಿತ್ರಪಡಿಸಿದಿರಿ.


ಆದ್ದರಿಂದ ನಿಮ್ಮ ಪಿತೃಗಳ ಹಾಗೆ ನಿಮ್ಮನ್ನು ಕಠಿಣಪಡಿಸಿಕೊಳ್ಳಬೇಡಿರಿ. ಯೆಹೋವ ದೇವರಿಗೆ ಅಧೀನರಾಗಿ ಅವರು ಯುಗಯುಗಕ್ಕೂ ಪ್ರತಿಷ್ಠೆ ಮಾಡಿದ ಪರಿಶುದ್ಧ ಸ್ಥಾನದಲ್ಲಿ ಪ್ರವೇಶಿಸಿದ ನಿಮ್ಮ ದೇವರಾದ ಯೆಹೋವ ದೇವರನ್ನು ಸೇವಿಸಿರಿ. ಆಗ ದೇವರು ತಮ್ಮ ಕೋಪವನ್ನು ಬಿಟ್ಟು ನಿಮ್ಮ ಕಡೆಗೆ ತಿರುಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು