Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 12:17 - ಕನ್ನಡ ಸಮಕಾಲಿಕ ಅನುವಾದ

17 ನಿಮ್ಮ ಧಾನ್ಯ, ಹೊಸ ದ್ರಾಕ್ಷಾರಸ, ಎಣ್ಣೆಗಳ ದಶಮಾಂಶವನ್ನೂ, ನಿಮ್ಮ ದನಕುರಿಗಳ ಚೊಚ್ಚಲಾದವುಗಳನ್ನೂ, ನೀವು ಮಾಡುವ ಎಲ್ಲಾ ಹರಕೆಯ ಪದಾರ್ಥಗಳನ್ನೂ, ನಿಮ್ಮ ಉಚಿತವಾದ ಕಾಣಿಕೆಗಳನ್ನೂ, ಯಾಜಕರಿಗೆ ಪ್ರತ್ಯೇಕಿಸಿದ ಅರ್ಪಣೆಗಳನ್ನೂ ನಿಮ್ಮ ಊರುಗಳಲ್ಲಿ ತಿನ್ನಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಧಾನ್ಯ, ದ್ರಾಕ್ಷಿ, ಎಣ್ಣೇಕಾಯಿ ಈ ಬೆಳೆಗಳ ದಶಮಾಂಶಗಳನ್ನೂ, ದನ ಮತ್ತು ಕುರಿಗಳ ಚೊಚ್ಚಲು ಮರಿಗಳನ್ನೂ, ಹರಕೆಮಾಡಿದ ಪದಾರ್ಥಗಳನ್ನೂ, ಕಾಣಿಕೆಗಳನ್ನೂ, ಯಾಜಕರಿಗೋಸ್ಕರ ಪ್ರತ್ಯೇಕಿಸಿದ ಪದಾರ್ಥಗಳನ್ನೂ ನಿಮ್ಮ ನಿಮ್ಮ ಊರುಗಳಲ್ಲಿ ತಿನ್ನಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 “ಧಾನ್ಯ, ದ್ರಾಕ್ಷಿ, ಎಣ್ಣೇಕಾಯಿ ಈ ಬೆಳೆಗಳ ದಶಮಾಂಶಗಳನ್ನು, ದನಕುರಿಗಳ ಚೊಚ್ಚಲು ಮರಿಗಳನ್ನು, ಹರಕೆಮಾಡಿದ ಪದಾರ್ಥಗಳನ್ನು, ಕಾಣಿಕೆಗಳನ್ನು ಹಾಗು ಯಾಜಕರಿಗಾಗಿ ಪ್ರತ್ಯೇಕಿಸಿದ ಪದಾರ್ಥಗಳನ್ನು ನಿಮ್ಮ ನಿಮ್ಮ ಊರುಗಳಲ್ಲಿ ತಿನ್ನಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಧಾನ್ಯ, ದ್ರಾಕ್ಷೆ, ಎಣ್ಣೇಕಾಯಿ ಈ ಬೆಳೆಗಳ ದಶಮಾಂಶಗಳನ್ನೂ ದನಕುರಿಗಳ ಚೊಚ್ಚಲುಮರಿಗಳನ್ನೂ ಹರಕೆಮಾಡಿದ ಪದಾರ್ಥಗಳನ್ನೂ ಕಾಣಿಕೆಗಳನ್ನೂ ಯಾಜಕರಿಗೋಸ್ಕರ ಪ್ರತ್ಯೇಕಿಸಿದ ಪದಾರ್ಥಗಳನ್ನೂ ನಿಮ್ಮ ನಿಮ್ಮ ಊರುಗಳಲ್ಲಿ ತಿನ್ನಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 “ನೀವು ವಾಸಿಸುವ ಆ ಸ್ಥಳದಲ್ಲಿ ಕೆಲವನ್ನು ತಿನ್ನಕೂಡದು. ಅವು ಯಾವುವೆಂದರೆ: ದೇವರಿಗೆ ಮೀಸಲಿಟ್ಟ ಧಾನ್ಯ, ಹೊಸ ದ್ರಾಕ್ಷಾರಸ ಮತ್ತು ಎಣ್ಣೆಯ ಪಾಲು; ದೇವರಿಗೆ ಸಮರ್ಪಿಸಲು ಇಟ್ಟಿರುವ ಚೊಚ್ಚಲ ಪಶುಗಳು ಮತ್ತು ಹಿಂಡಿನ ಮರಿಗಳು, ನೀವು ಹರಕೆ ಹೊತ್ತುಕೊಂಡ ಕಾಣಿಕೆಗಳು ಮತ್ತು ದೇವರಿಗಾಗಿ ಮೀಸಲಿಟ್ಟಿದ್ದ ವಸ್ತುಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 12:17
11 ತಿಳಿವುಗಳ ಹೋಲಿಕೆ  

ದುಃಖದ ಸಮಯದಲ್ಲಿ ಪರಿಶುದ್ಧವಾದದ್ದರಲ್ಲಿ ಏನೂ ತಿನ್ನಲಿಲ್ಲ. ಅಶುದ್ಧರಾಗಿ ಅದರಿಂದ ತೆಗೆದುಕೊಂಡು ಉಪಯೋಗಿಸಲಿಲ್ಲ. ಸತ್ತವರಿಗಾಗಿ ಅದರಲ್ಲಿ ಏನೂ ಕೊಡಲಿಲ್ಲ. ನಮ್ಮ ದೇವರಾದ ಯೆಹೋವ ದೇವರ ಮಾತನ್ನು ಕೇಳಿದ್ದೇವೆ. ನಮಗೆ ಆಜ್ಞಾಪಿಸಿದ್ದೆಲ್ಲಾ ಮಾಡಿದ್ದೇವೆ.


ಅಲ್ಲಿಗೆ ನಿಮ್ಮ ದಹನಬಲಿಗಳನ್ನೂ, ನಿಮ್ಮ ಅರ್ಪಣೆಗಳನ್ನೂ, ನಿಮ್ಮ ಬೆಳೆಯನ್ನೂ, ದಶಮಾಂಶಗಳನ್ನೂ, ನಿಮ್ಮ ಹರಕೆಗಳನ್ನೂ, ಉಚಿತವಾದ ಕಾಣಿಕೆಗಳನ್ನೂ, ನಿಮ್ಮ ಚೊಚ್ಚಲಾದ ದನಕುರಿಗಳನ್ನೂ ತರಬೇಕು.


ಹತ್ತನೆಯ ಪಾಲನ್ನು ಕೊಡುವ ವರ್ಷವಾಗಿರುವ ಮೂರನೆಯ ವರ್ಷದಲ್ಲಿ ನೀವು ನಿಮ್ಮ ಎಲ್ಲಾ ಹುಟ್ಟುವಳಿಯ ಹತ್ತನೆಯ ಪಾಲನ್ನು ಪ್ರತ್ಯೇಕಿಸಿದಾಗ, ನಿಮ್ಮ ಊರುಗಳಲ್ಲಿರುವ ಲೇವಿಯರೂ ಪರದೇಶಿಗಳೂ ದಿಕ್ಕಿಲ್ಲದವರೂ ವಿಧವೆಯರೂ ಉಂಡು ತೃಪ್ತರಾಗುವಂತೆ ಅದನ್ನು ಅವರಿಗೆ ಕೊಡಬೇಕು.


ನಿಮಗಿರುವ ಪರಿಶುದ್ಧವಾದವುಗಳನ್ನೂ ಹರಕೆಮಾಡಿದ್ದನ್ನೂ ಯೆಹೋವ ದೇವರು ಆಯ್ದುಕೊಳ್ಳುವ ಸ್ಥಳಕ್ಕೆ ತೆಗೆದುಕೊಂಡು ಬರಬೇಕು.


ನಾನು ನಿಮಗೆ ಆಜ್ಞಾಪಿಸಿದ ಎಲ್ಲಾ ಕಾಣಿಕೆಗಳನ್ನು ಅಂದರೆ, ದಹನಬಲಿಗಳನ್ನು, ಅರ್ಪಣೆಗಳನ್ನು, ಬೆಳೆಯ ದಶಮಾಂಶಗಳನ್ನು, ಯೆಹೋವ ದೇವರಿಗಾಗಿ ವಿಶೇಷ ಉಡುಗೊರೆಗಳನ್ನು, ಹರಕೆಮಾಡಿದ ವಿಶೇಷ ಕಾಣಿಕೆಗಳನ್ನು, ನಿಮ್ಮ ದೇವರಾದ ಯೆಹೋವ ದೇವರು ತಮ್ಮ ನಾಮಸ್ಥಾಪನೆಗಾಗಿ ಆರಿಸಿಕೊಳ್ಳುವ ಸ್ಥಳಕ್ಕೇ ತರಬೇಕು.


ನೀವು ಇಸ್ರಾಯೇಲ್ ಜನರ ಕುರಿತು ಆಲೋಚಿಸಿರಿ: ಯಜ್ಞಾರ್ಪಿತವಾದದ್ದನ್ನು ತಿನ್ನುವವರು ಬಲಿಪೀಠದೊಡನೆ ಭಾಗಿಗಳಾಗಿದ್ದಾರಲ್ಲವೇ?


ಎಲ್ಕಾನನು ಬಲಿ ಅರ್ಪಿಸುವ ಕಾಲದಲ್ಲಿ ಅವನು ತನ್ನ ಹೆಂಡತಿ ಪೆನಿನ್ನಳಿಗೂ, ಅವಳ ಸಮಸ್ತ ಪುತ್ರಪುತ್ರಿಯರಿಗೂ ಪಾಲನ್ನು ಕೊಡುತ್ತಿದ್ದನು.


ಲೇವಿಯನಾಗಿರುವ ಇಮ್ನನ ಮಗ ಕೋರೆಯು ಎಂಬ ಪೂರ್ವದಿಕ್ಕಿನಲ್ಲಿರುವ ದ್ವಾರಪಾಲಕನು ಯೆಹೋವ ದೇವರ ಕಾಣಿಕೆಗಳನ್ನೂ, ಮಹಾಪರಿಶುದ್ಧವಾದವುಗಳನ್ನೂ ಪಾಲು ಹಂಚುವುದಕ್ಕೆ ದೇವರಿಗೆ ಉಚಿತಾರ್ಥವಾಗಿ ಅರ್ಪಿಸಿದ ಕಾಣಿಕೆಗಳ ಮೇಲ್ವಿಚಾರಕನಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು