Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 12:6 - ಕನ್ನಡ ಸಮಕಾಲಿಕ ಅನುವಾದ

6 ಅಲ್ಲಿಗೆ ನಿಮ್ಮ ದಹನಬಲಿಗಳನ್ನೂ, ನಿಮ್ಮ ಅರ್ಪಣೆಗಳನ್ನೂ, ನಿಮ್ಮ ಬೆಳೆಯನ್ನೂ, ದಶಮಾಂಶಗಳನ್ನೂ, ನಿಮ್ಮ ಹರಕೆಗಳನ್ನೂ, ಉಚಿತವಾದ ಕಾಣಿಕೆಗಳನ್ನೂ, ನಿಮ್ಮ ಚೊಚ್ಚಲಾದ ದನಕುರಿಗಳನ್ನೂ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನೀವು ಸಮರ್ಪಿಸುವ ಸರ್ವಾಂಗಹೋಮ, ಯಜ್ಞಪಶುಗಳನ್ನೂ, ನಿಮ್ಮ ಬೆಳೆಯಲ್ಲಿ ದಶಮಾಂಶವನ್ನೂ, ಯಾಜಕರಿಗೋಸ್ಕರ ಪ್ರತ್ಯೇಕಿಸುವ ಪದಾರ್ಥಗಳನ್ನೂ, ಹರಕೆ ಕಾಣಿಕೆಗಳನ್ನೂ, ದನ ಮತ್ತು ಕುರಿಗಳ ಚೊಚ್ಚಲ ಮರಿಗಳನ್ನೂ ಆ ಸ್ಥಳಕ್ಕೆ ಮಾತ್ರ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನೀವು ಸಮರ್ಪಿಸುವ ದಹನಬಲಿ ಮುಂತಾದ ಯಜ್ಞಗಳ ಪಶುಪ್ರಾಣಿಗಳನ್ನು, ನಿಮ್ಮ ಬೆಳೆಯಲ್ಲಿ ದಶಮಾಂಶವನ್ನು ಪ್ರತ್ಯೇಕಿಸುವ ಪದಾರ್ಥಗಳನ್ನು ಮತ್ತು ಹರಕೇಮುಡುಪುಗಳನ್ನು, ಕಾಣಿಕೆಗಳನ್ನು ಹಾಗು ದನಕುರಿಗಳ ಚೊಚ್ಚಲು ಮರಿಗಳನ್ನು ಆ ಸ್ಥಳಕ್ಕೆ ಮಾತ್ರ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆ ಸ್ಥಳಕ್ಕೆ ಮಾತ್ರ ನೀವು ಸಮರ್ಪಿಸುವ ಸರ್ವಾಂಗಹೋಮಗಳೇ ಮುಂತಾದ ಯಜ್ಞಗಳ ಪಶುಗಳನ್ನೂ ನಿಮ್ಮ ಬೆಳೆಯಲ್ಲಿ ದಶಮಾಂಶವನ್ನೂ ಯಾಜಕರಿಗೋಸ್ಕರ ಪ್ರತ್ಯೇಕಿಸುವ ಪದಾರ್ಥಗಳನ್ನೂ ಹರಕೇ ಮುಡುಪುಗಳನ್ನೂ ಕಾಣಿಕೆಗಳನ್ನೂ ದನಕುರಿಗಳ ಚೊಚ್ಚಲು ಮರಿಗಳನ್ನೂ ತಂದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅಲ್ಲಿಗೆ ನೀವು ನಿಮ್ಮ ಸರ್ವಾಂಗಹೋಮಗಳನ್ನು, ಯಜ್ಞಗಳನ್ನು, ನಿಮ್ಮ ಬೆಳೆಗಳಲ್ಲಿ ಮತ್ತು ಪಶುಗಳಲ್ಲಿ ದಶಾಂಶವನ್ನು, ನಿಮ್ಮ ವಿಶೇಷ ಕಾಣಿಕೆಗಳನ್ನು, ಯೆಹೋವನಿಗೆ ನೀವು ಹರಕೆ ಹೊತ್ತುಕೊಂಡ ಯಾವುದೇ ಕಾಣಿಕೆಗಳನ್ನು, ನೀವು ಕೊಡಲಿಚ್ಛಿಸುವ ಯಾವುದೇ ವಿಶೇಷ ಕಾಣಿಕೆಗಳನ್ನು, ನಿಮ್ಮ ಮಂದೆ ಮತ್ತು ಹಿಂಡುಗಳ ಚೊಚ್ಚಲುಮರಿಗಳನ್ನು ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 12:6
22 ತಿಳಿವುಗಳ ಹೋಲಿಕೆ  

ನಾನು ವಾರಕ್ಕೆ ಎರಡು ಸಾರಿ ಉಪವಾಸ ಮಾಡುತ್ತೇನೆ. ನನಗಿರುವ ಎಲ್ಲವುಗಳಲ್ಲಿ ದಶಾಂಶ ಕೊಡುತ್ತೇನೆ,’ ಎಂದು ಹೇಳಿ ತನಗೆ ತಾನೇ ಪ್ರಾರ್ಥಿಸಿದನು.


“ಫರಿಸಾಯರೇ, ನಿಮಗೆ ಕಷ್ಟ, ಏಕೆಂದರೆ ನೀವು ಪುದೀನ, ಸದಾಪು ಮತ್ತು ಸಕಲ ವಿಧವಾದ ಸೊಪ್ಪುಗಳಲ್ಲಿ ದಶಮಭಾಗವನ್ನು ಕೊಟ್ಟು, ನ್ಯಾಯವನ್ನೂ ದೇವರ ಪ್ರೀತಿಯನ್ನೂ ಲಕ್ಷಿಸದೆ ಹೋಗುತ್ತೀರಿ. ಅವುಗಳನ್ನು ಮಾಡಿದ ನೀವು ಇವುಗಳನ್ನೂ ಅವಶ್ಯವಾಗಿ ಮಾಡಬೇಕಾಗಿತ್ತು.


ನನ್ನ ಆಲಯದಲ್ಲಿ ಆಹಾರ ಇರುವಂತೆ ಹತ್ತನೆಯ ಪಾಲುಗಳನ್ನೆಲ್ಲಾ ಬೊಕ್ಕಸಕ್ಕೆ ತನ್ನಿರಿ. ನಾನು ನಿಮಗೆ ಪರಲೋಕದ ಮಹಾದ್ವಾರಗಳನ್ನು ತೆರೆದು, ಸ್ಥಳ ಹಿಡಿಸಲಾರದಷ್ಟು ನಿಮಗೆ ಆಶೀರ್ವಾದವನ್ನು ಸುರಿಸದಿರುವೆನೋ, ಇಲ್ಲವೋ ಎಂಬುದನ್ನು ನೀವು ಈಗ ನನ್ನನ್ನು ಪರೀಕ್ಷಿಸಿ ನೋಡಿರಿ?” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


“ಮನುಷ್ಯನು ದೇವರಿಂದ ಕದ್ದುಕೊಳ್ಳಲು ಸಾಧ್ಯವೇ? ಆದರೂ ನೀವು ನನ್ನಿಂದ ಕಳ್ಳತನ ಮಾಡಿದ್ದೀರಿ. “ಆದರೆ ನೀವು, ‘ಯಾವುದರಲ್ಲಿ ನಿನ್ನದನ್ನು ಕಳ್ಳತನ ಮಾಡಿದ್ದೇವೆ?’ ಎಂದು ಕೇಳುತ್ತೀರಿ. “ದಶಮಭಾಗ ಮತ್ತು ಅರ್ಪಣೆಗಳಲ್ಲಿಯೇ!


ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ನನ್ನ ಪರಿಶುದ್ಧ ಪರ್ವತದಲ್ಲಿಯೇ, ಇಸ್ರಾಯೇಲಿನ ಉನ್ನತ ಪರ್ವತದಲ್ಲಿಯೇ ಇಸ್ರಾಯೇಲಿನ ಮನೆತನದವರೆಲ್ಲರೂ, ದೇಶದಲ್ಲಿರುವವರೆಲ್ಲರೂ ನನ್ನನ್ನು ಸೇವಿಸುವರು. ನಾನು ಅಲ್ಲಿ ಅವರಿಗೆ ಮೆಚ್ಚಿ, ನಿಮ್ಮ ಉತ್ತಮ ಅರ್ಪಣೆಗಳನ್ನೂ, ನಿಮ್ಮ ಕಾಣಿಕೆಗಳ ಪ್ರಥಮ ಫಲವನ್ನೂ, ನಿಮ್ಮ ಎಲ್ಲಾ ಪರಿಶುದ್ಧ ಸಂಗತಿಗಳನ್ನೂ ಅಂಗೀಕರಿಸುವೆನು.


ಆಗ ನಿಮ್ಮ ದೇಶದಿಂದ ನೀವು ತರತಕ್ಕ ಭೂಮಿಯ ಎಲ್ಲಾ ಹುಟ್ಟುವಳಿಯ ಪ್ರಥಮ ಫಲವನ್ನು ಬುಟ್ಟಿಯಲ್ಲಿಟ್ಟು, ನಿಮ್ಮ ದೇವರಾದ ಯೆಹೋವ ದೇವರು ತಮ್ಮ ಹೆಸರನ್ನು ಸ್ಥಾಪಿಸುವದಕ್ಕೆ ಆಯ್ದುಕೊಳ್ಳುವ ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು.


ನಿಮ್ಮ ಧಾನ್ಯ, ಹೊಸ ದ್ರಾಕ್ಷಾರಸ, ಎಣ್ಣೆಗಳ ದಶಮಾಂಶವನ್ನೂ, ನಿಮ್ಮ ದನಕುರಿಗಳ ಚೊಚ್ಚಲಾದವುಗಳನ್ನೂ, ನೀವು ಮಾಡುವ ಎಲ್ಲಾ ಹರಕೆಯ ಪದಾರ್ಥಗಳನ್ನೂ, ನಿಮ್ಮ ಉಚಿತವಾದ ಕಾಣಿಕೆಗಳನ್ನೂ, ಯಾಜಕರಿಗೆ ಪ್ರತ್ಯೇಕಿಸಿದ ಅರ್ಪಣೆಗಳನ್ನೂ ನಿಮ್ಮ ಊರುಗಳಲ್ಲಿ ತಿನ್ನಬೇಡಿರಿ.


“ ‘ಅಂಥವನು ದನಕರುಗಳನ್ನು ದಹನಬಲಿಯನ್ನಾಗಿ ಸಮರ್ಪಿಸುವುದಾದರೆ, ಆ ಪ್ರಾಣಿ ಕಳಂಕರಹಿತವಾದ ಗಂಡಾಗಿರಬೇಕು. ಯೆಹೋವ ದೇವರಿಗೆ ಒಪ್ಪಿಗೆಯಾಗುವಂತೆ ಅದನ್ನು ದೇವದರ್ಶನದ ಗುಡಾರದ ಬಳಿಗೆ ತರಬೇಕು.


ನಮಗೂ ನಿಮಗೂ ನಮ್ಮ ತರುವಾಯ ನಮ್ಮ ಸಂತತಿಯವರಿಗೂ ಮಧ್ಯದಲ್ಲಿ ಒಂದು ಸಾಕ್ಷಿ ಉಂಟಾಗಿರುವಂತೆಯೂ ನಾವು ಯೆಹೋವ ದೇವರ ಸನ್ನಿಧಿಯಲ್ಲಿ ದಹನಬಲಿ, ಸಮಾಧಾನದ ಬಲಿ ಮುಂತಾದವುಗಳನ್ನು ಅರ್ಪಿಸಿ ಆರಾಧಿಸುವುದಕ್ಕೆ ನಿಮಗೆ ಗುರುತಾಗಿರುವಂತೆಯೂ, ಮುಂದಿನ ಕಾಲದಲ್ಲಿ ನಿಮ್ಮ ಮಕ್ಕಳು ನಮ್ಮ ಮಕ್ಕಳಿಗೆ, ‘ಯೆಹೋವ ದೇವರಲ್ಲಿ ನಿಮಗೆ ಭಾಗವಿಲ್ಲ,’ ಎಂದು ಹೇಳದೆ ಇರುವಂತೆಯೂ ಸಾಕ್ಷಿಗಾಗಿ ಕಟ್ಟಿದ್ದೇವೆ ಅಷ್ಟೇ.


ಅವನು ಎದೆಹಾಲು ಕುಡಿಯುವುದನ್ನು ಬಿಟ್ಟ ತರುವಾಯ, ಅವನನ್ನು ತನ್ನ ಸಂಗಡ ತೆಗೆದುಕೊಂಡು, ಮೂರು ವರ್ಷದ ಹೋರಿಯೊಂದನ್ನೂ, ಸುಮಾರು ಹದಿನಾರು ಕಿಲೋಗ್ರಾಂ ಹಿಟ್ಟನ್ನೂ, ಒಂದು ಬುದ್ದಲಿ ದ್ರಾಕ್ಷಾರಸವನ್ನೂ ತೆಗೆದುಕೊಂಡು ಶೀಲೋವಿನಲ್ಲಿರುವ ಯೆಹೋವ ದೇವರ ಮನೆಗೆ ಹೋದಳು.


ಆಗ ಯೋಚಾದಾಕನ ಮಗನಾದ ಯೇಷೂವನೂ, ಅವನ ಜೊತೆ ಯಾಜಕರೂ, ಶೆಯಲ್ತಿಯೇಲನ ಮಗ ಜೆರುಬ್ಬಾಬೆಲನೂ, ಅವನ ಸಹಾಯಕರು ಎದ್ದು ದೇವರ ಮನುಷ್ಯನಾದ ಮೋಶೆಯ ನಿಯಮದಲ್ಲಿ ಬರೆದಿರುವ ಹಾಗೆ ದಹನಬಲಿಗಳನ್ನು ಅರ್ಪಿಸುವುದಕ್ಕೆ ಇಸ್ರಾಯೇಲ್ ದೇವರ ಬಲಿಪೀಠವನ್ನು ಕಟ್ಟಿಸಿದರು.


ಏಕೆಂದರೆ ಪರಿಶುದ್ಧ ಸ್ಥಾನದ ಸಲಕರಣೆಗಳೂ, ಸೇವೆ ಮಾಡುವ ಯಾಜಕರೂ, ದ್ವಾರಪಾಲಕರೂ, ಹಾಡುಗಾರರೂ ಇರುವ ಕೊಟ್ಟಡಿಗಳಿಗೆ ಇಸ್ರಾಯೇಲರೂ, ಲೇವಿಯರ ಮಕ್ಕಳೂ, ಕಾಣಿಕೆಯಾದ ಧಾನ್ಯವನ್ನೂ, ದ್ರಾಕ್ಷಾರಸವನ್ನೂ, ಎಣ್ಣೆಯನ್ನೂ ತರಬೇಕು. “ನಾವು ನಮ್ಮ ದೇವರ ಆಲಯವನ್ನು ಎಂದೂ ಅಲಕ್ಷ್ಯಮಾಡುವುದಿಲ್ಲ,” ಎಂದು ಬರೆದುಕೊಟ್ಟರು.


ಎಲ್ಕಾನನು ಯೆಹೋವ ದೇವರಿಗೆ ಪ್ರತಿ ವರುಷದ ಬಲಿಯನ್ನೂ, ತನ್ನ ಹರಕೆಯನ್ನೂ ಸಲ್ಲಿಸುವುದಕ್ಕೆ ತನ್ನ ಮನೆಯವರೆಲ್ಲರ ಸಂಗಡ ಹೋಗುವಾಗ,


ಯೆಹೋವ ದೇವರು ರಾತ್ರಿಯಲ್ಲಿ ಸೊಲೊಮೋನನಿಗೆ ಪ್ರತ್ಯಕ್ಷರಾಗಿ ಅವನಿಗೆ, “ನಾನು ನಿನ್ನ ಪ್ರಾರ್ಥನೆಯನ್ನು ಕೇಳಿ ಬಲಿಯನ್ನು ಅರ್ಪಿಸುವ ಆಲಯವಾಗಿ ನನಗೆ ಈ ಸ್ಥಳವನ್ನು ಆಯ್ದುಕೊಂಡಿದ್ದೇನೆ.


ಲೇವಿಯನಾಗಿರುವ ಇಮ್ನನ ಮಗ ಕೋರೆಯು ಎಂಬ ಪೂರ್ವದಿಕ್ಕಿನಲ್ಲಿರುವ ದ್ವಾರಪಾಲಕನು ಯೆಹೋವ ದೇವರ ಕಾಣಿಕೆಗಳನ್ನೂ, ಮಹಾಪರಿಶುದ್ಧವಾದವುಗಳನ್ನೂ ಪಾಲು ಹಂಚುವುದಕ್ಕೆ ದೇವರಿಗೆ ಉಚಿತಾರ್ಥವಾಗಿ ಅರ್ಪಿಸಿದ ಕಾಣಿಕೆಗಳ ಮೇಲ್ವಿಚಾರಕನಾಗಿದ್ದನು.


ಮೋಶೆಯ ನಿಯಮದಲ್ಲಿ ಬರೆದಿರುವ ಹಾಗೆ ನಮ್ಮ ಪುತ್ರರಲ್ಲಿಯೂ, ನಮ್ಮ ಪಶುಗಳಲ್ಲಿಯೂ ಚೊಚ್ಚಲಾದವುಗಳನ್ನು; ನಮ್ಮ ದನಗಳಲ್ಲಿಯೂ, ಮಂದೆಗಳಲ್ಲಿಯೂ ಚೊಚ್ಚಲಾದವುಗಳನ್ನು, ನಮ್ಮ ದೇವರ ಆಲಯಕ್ಕೆ ತಂದು, ನಮ್ಮ ದೇವರ ಆಲಯದಲ್ಲಿ ಸೇವಿಸುವ ಯಾಜಕರಿಗೆ ಕೊಡುತ್ತೇವೆ;


ನಾನು ನಿಮಗೆ ಕೃತಜ್ಞತೆಯ ಬಲಿಯನ್ನು ಅರ್ಪಿಸುವೆನು; ಯೆಹೋವ ದೇವರ ಹೆಸರನ್ನು ಕರೆಯುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು