ಧರ್ಮೋಪದೇಶಕಾಂಡ 13:10 - ಕನ್ನಡ ಸಮಕಾಲಿಕ ಅನುವಾದ10 ಗುಲಾಮಗಿರಿಯಲ್ಲಿದ್ದ ನಿಮ್ಮನ್ನು ಬಿಡುಗಡೆ ಮಾಡಿ, ಈಜಿಪ್ಟ್ ದೇಶದಿಂದ ಕರೆದುತಂದ ನಿಮ್ಮ ದೇವರಾದ ಯೆಹೋವ ದೇವರ ಆಶ್ರಯದಿಂದ ಅಂಥವರು ನಿಮ್ಮನ್ನು ತಪ್ಪಿಸಬೇಕೆಂದು ಇದ್ದುದರಿಂದ, ಅಂಥವರನ್ನು ಕಲ್ಲು ಎಸೆದು ಕೊಲ್ಲಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ತರುವಾಯ ಜನರೆಲ್ಲರೂ ಕೈಹಾಕಲಿ, ದಾಸತ್ವದಲ್ಲಿದ್ದ ನಿಮ್ಮನ್ನು ಬಿಡುಗಡೆಮಾಡಿ, ಐಗುಪ್ತ ದೇಶದೊಳಗಿಂದ ಕರೆದುಕೊಂಡು ಬಂದ ನಿಮ್ಮ ದೇವರಾದ ಯೆಹೋವನ ಆಶ್ರಯದಿಂದ ಅವನು ನಿಮ್ಮನ್ನು ತಪ್ಪಿಸಬೇಕೆಂದಿದ್ದರಿಂದ ಅವನನ್ನು ಕಲ್ಲೆಸೆದು ಕೊಲ್ಲಲೇಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಗುಲಾಮಗಿರಿಯಲ್ಲಿದ್ದ ನಿಮ್ಮನ್ನು ಬಿಡುಗಡೆಮಾಡಿ ಈಜಿಪ್ಟ್ ದೇಶದಿಂದ ಕರೆದುತಂದ ನಿಮ್ಮ ದೇವರಾದ ಸರ್ವೇಶ್ವರನ ಆಶ್ರಯದಿಂದ ಅವನು ನಿಮ್ಮನ್ನು ತಪ್ಪಿಸಬೇಕೆಂದು ಇದ್ದುದರಿಂದ ಅಂಥವನನ್ನು ಕಲ್ಲು ಎಸೆದು ಕೊಲ್ಲಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ತರುವಾಯ ಜನರೆಲ್ಲರೂ ಹಾಕಲಿ. ದಾಸತ್ವದಲ್ಲಿದ್ದ ನಿಮ್ಮನ್ನು ಬಿಡುಗಡೆಮಾಡಿ ಐಗುಪ್ತದೇಶದೊಳಗಿಂದ ಕರತಂದ ನಿಮ್ಮ ದೇವರಾದ ಯೆಹೋವನ ಆಶ್ರಯದಿಂದ ಅವನು ನಿಮ್ಮನ್ನು ತಪ್ಪಿಸಬೇಕೆಂದಿದ್ದದರಿಂದ ಅವನನ್ನು ಕಲ್ಲೆಸೆದು ಕೊಲ್ಲಲೇಬೇಕು. ಅಧ್ಯಾಯವನ್ನು ನೋಡಿ |
ಆ ಪ್ರವಾದಿಯನ್ನು, ಕನಸು ಕಾಣುವವನಿಗೆ ಮರಣದಂಡನೆ ವಿಧಿಸಬೇಕು. ಏಕೆಂದರೆ ಈಜಿಪ್ಟ್ ದೇಶದೊಳಗಿಂದ ನಿಮ್ಮನ್ನು ಹೊರಗೆ ಬರಮಾಡಿ, ದಾಸತ್ವದಿಂದ ನಿಮ್ಮನ್ನು ವಿಮೋಚಿಸಿದ ನಿಮ್ಮ ದೇವರಾದ ಯೆಹೋವ ದೇವರಿಂದ ತಿರುಗುವಂತೆ ಮತ್ತು ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ನಡೆಯಲು ಆಜ್ಞಾಪಿಸಿದ ಮಾರ್ಗದಿಂದ ನಿಮ್ಮನ್ನು ತಪ್ಪಿಸುವಂತೆ ಅವನು ಮಾತನಾಡಿದ್ದಾನೆ. ಹೀಗೆ ನೀವು ಕೆಟ್ಟದ್ದನ್ನು ನಿಮ್ಮಿಂದ ತೆಗೆದುಹಾಕಬೇಕು.