Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 15:18 - ಕನ್ನಡ ಸಮಕಾಲಿಕ ಅನುವಾದ

18 ಒಬ್ಬ ಗುಲಾಮನನ್ನು ನಿಮ್ಮಿಂದ ಬಿಡುಗಡೆಯಾಗಿ ಕಳುಹಿಸುವುದು ನಿಮಗೆ ಕಷ್ಟವೆಂದು ಹೇಳಿಕೊಳ್ಳಬಾರದು. ಏಕೆಂದರೆ ಅವನು ಆರು ವರ್ಷ ನಿಮ್ಮ ದಾಸನಾಗಿದ್ದದರಿಂದ ಸಂಬಳದ ಸೇವಕನಿಗಿಂತ ಎರಡಷ್ಟಾಗಿದ್ದನು. ಹೀಗೆ ನಿಮ್ಮ ದೇವರಾದ ಯೆಹೋವ ದೇವರು ನೀವು ಮಾಡುವುದೆಲ್ಲದರಲ್ಲಿಯೂ ನಿಮ್ಮನ್ನು ಆಶೀರ್ವದಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ದಾಸನನ್ನು ಬಿಡುಗಡೆಮಾಡುವುದು ಕಷ್ಟವೆಂದು ಹೇಳಿಕೊಳ್ಳಬಾರದು. ಅವನು ಆರು ವರ್ಷಗಳು ನಿಮ್ಮ ದಾಸನಾಗಿದ್ದು ಕೂಲಿಯಾಳಿಗಿಂತ ಎರಡರಷ್ಟು ಪ್ರಯೋಜನವನ್ನು ಉಂಟುಮಾಡಿದನಲ್ಲಾ. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಪ್ರಯತ್ನಗಳನ್ನು ಸಫಲಗೊಳಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 “ಗುಲಾಮನನ್ನು ಬಿಡುಗಡೆ ಮಾಡುವುದು ಕಷ್ಟವೆಂದು ಹೇಳಿಕೊಳ್ಳಬಾರದು. ಅವನು ಆರು ವರ್ಷಗಳು ನಿಮ್ಮ ಗುಲಾಮನಾಗಿದ್ದು ಕೂಲಿಯಾಳಿಗಿಂತ ಎರಡರಷ್ಟು ಪ್ರಯೋಜನವನ್ನು ಉಂಟುಮಾಡಿದನಲ್ಲವೆ? ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಎಲ್ಲ ಪ್ರಯತ್ನಗಳನ್ನು ಸಫಲಗೊಳಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ದಾಸನನ್ನು ಬಿಡುಗಡೆಮಾಡುವದು ಕಷ್ಟವೆಂದು ಹೇಳಿಕೊಳ್ಳಬಾರದು. ಅವನು ಆರು ವರುಷಗಳು ನಿಮ್ಮ ದಾಸನಾಗಿದ್ದು ಕೂಲಿಯಾಳಿಗಿಂತ ಎರಡರಷ್ಟು ಪ್ರಯೋಜನವನ್ನುಂಟುಮಾಡಿದನಲ್ಲಾ. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಪ್ರಯತ್ನಗಳನ್ನು ಸಫಲಗೊಳಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 “ನಿಮ್ಮ ಗುಲಾಮರನ್ನು ಸ್ವತಂತ್ರರಾಗಿ ಬಿಡಬೇಕಲ್ಲಾ ಎಂದು ಬೇಸರಪಡಬೇಡಿ. ಅವರು ಅರ್ಧಕೂಲಿ ತೆಗೆದುಕೊಂಡು ಆರು ವರ್ಷ ನಿಮ್ಮ ಸೇವೆ ಮಾಡಿದ್ದಾರಲ್ಲಾ? ನಿಮ್ಮ ಕಾರ್ಯಗಳನ್ನೆಲ್ಲಾ ನಿಮ್ಮ ದೇವರಾದ ಯೆಹೋವನು ಸಫಲಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 15:18
6 ತಿಳಿವುಗಳ ಹೋಲಿಕೆ  

ಏಕೆಂದರೆ ಕರ್ತರು ನನಗೆ ಹೀಗೆ ಹೇಳುತ್ತಾರೆ: “ಕೂಲಿಯವನ ವರುಷಗಳಂತೆ ಒಂದು ವರುಷದೊಳಗೆ ಕೇದಾರಿನ ವೈಭವವು ತೀರಿಹೋಗುವುದು.


ಆದರೆ ಈಗ ಯೆಹೋವ ದೇವರು ಮಾತನಾಡಿ, “ಗುಲಾಮಗಿರಿಯ ಕಟ್ಟುನಿಟ್ಟಿನ ಲೆಕ್ಕಾಚಾರದಂತೆ, ಮೂರು ವರುಷದೊಳಗೆ ಮೋವಾಬಿನ ವೈಭವವು ಹೀನಾಯಕ್ಕೆ ಈಡಾಗುವುದು. ಅಲ್ಲಿನವರ ದೊಡ್ಡ ಜನಸಂಖ್ಯೆಯಲ್ಲಿ ಅಳಿದುಉಳಿಯುವವರು ಬಲಹೀನರಾದ ಕೆಲವು ಜನರಾಗಿರುವರು,” ಎಂದು ಹೇಳಿದ್ದಾರೆ.


ನೀವು ದಬ್ಬಳವನ್ನು ತೆಗೆದುಕೊಂಡು ಅವನ ಕಿವಿಯನ್ನು ಬಾಗಿಲಿಗೆ ತಗಲಿಸಿ ಚುಚ್ಚಬೇಕು. ಆಗ ಅವನು ನಿತ್ಯವಾಗಿ ನಿಮ್ಮ ದಾಸನಾಗಿರುವನು. ನಿಮ್ಮ ದಾಸಿಗೂ ಹಾಗೆಯೇ ಮಾಡಬೇಕು.


ನಿಮ್ಮ ದನಕುರಿಗಳಲ್ಲಿ ಹುಟ್ಟುವ ಚೊಚ್ಚಲು ಗಂಡುಗಳನ್ನೆಲ್ಲಾ ನಿಮ್ಮ ದೇವರಾದ ಯೆಹೋವ ದೇವರಿಗೆ ಪ್ರತಿಷ್ಠಿಸಬೇಕು. ನಿಮ್ಮ ಹೋರಿಯ ಚೊಚ್ಚಲಿನಿಂದ ನೀವು ಕೆಲಸ ಮಾಡಿಸಬಾರದು. ನಿಮ್ಮ ಕುರಿಯ ಚೊಚ್ಚಲಲ್ಲಿ ಉಣ್ಣೆ ಕತ್ತರಿಸಬಾರದು.


ಕೊಡುವಾಗ ಬೇಸರಗೊಳ್ಳದೇ ಉದಾರಮನಸ್ಸಿನಿಂದ ಕೊಡಿರಿ. ಏಕೆಂದರೆ ಇದಕ್ಕೋಸ್ಕರವೇ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ನಿಮ್ಮ ಎಲ್ಲಾ ಕೆಲಸಗಳಲ್ಲಿಯೂ, ನೀವು ಕೈಹಾಕುವುದೆಲ್ಲದರಲ್ಲಿಯೂ ಆಶೀರ್ವದಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು