Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 16:10 - ಕನ್ನಡ ಸಮಕಾಲಿಕ ಅನುವಾದ

10 ಆಗ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಅನುಗ್ರಹಿಸಿದ ಬೆಳೆಗೆ ತಕ್ಕಷ್ಟು ಕಾಣಿಕೆಯನ್ನು ಅರ್ಪಿಸಿ, ನಿಮ್ಮ ದೇವರಾದ ಯೆಹೋವ ದೇವರಿಗೆ ವಾರಗಳ ಹಬ್ಬವನ್ನು ಆಚರಿಸಬೇಕು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆ ಏಳು ವಾರಗಳಾದ ನಂತರ ಪಂಚಾಶತ್ತಮ ದಿನದ ಹಬ್ಬವನ್ನು ಆಚರಿಸಬೇಕು. ನಿಮ್ಮ ದೇವರಾದ ಯೆಹೋವನು ನಿಮಗೆ ಅನುಗ್ರಹಿಸಿದ ಬೆಳೆಗೆ ತಕ್ಕಷ್ಟು ಕಾಣಿಕೆಯನ್ನು ನೀವು ಆಗ ಆತನಿಗೋಸ್ಕರ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆ ಏಳು ವಾರಗಳಾದನಂತರ, ಪಂಚಾಶತ್ತಮ ದಿನದ ಜಾತ್ರೆಯನ್ನು ಆಚರಿಸಬೇಕು. ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಅನುಗ್ರಹಿಸಿದ ಬೆಳೆಗೆ ತಕ್ಕಷ್ಟು ಕಾಣಿಕೆಯನ್ನು ನೀವು ಆಗ ಅವರಿಗಾಗಿ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆ ಏಳು ವಾರಗಳಾದನಂತರ ಪಂಚಾಶತ್ತಮ ದಿನದ ಜಾತ್ರೆಯನ್ನು ಆಚರಿಸಬೇಕು. ನಿಮ್ಮ ದೇವರಾದ ಯೆಹೋವನು ನಿಮಗೆ ಅನುಗ್ರಹಿಸಿದ ಬೆಳೆಗೆ ತಕ್ಕಷ್ಟು ಕಾಣಿಕೆಯನ್ನು ನೀವು ಆಗ ಆತನಿಗೋಸ್ಕರ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಅಲ್ಲಿ ನಿಮ್ಮ ದೇವರಾದ ಯೆಹೋವನಿಗೆ ವಾರಗಳ ಹಬ್ಬವನ್ನು ಆಚರಿಸಿರಿ. ಅಲ್ಲಿ ನಿಮ್ಮ ವಿಶೇಷ ಕಾಣಿಕೆಗಳನ್ನು ತಂದು ಸಮರ್ಪಿಸಿರಿ. ನಿಮ್ಮ ದೇವರು ನಿಮ್ಮನ್ನು ಎಷ್ಟು ಆಶೀರ್ವದಿಸಿರುತ್ತಾನೆಂದು ಯೋಚಿಸಿ ಅದರ ಪ್ರಕಾರ ನಿಮ್ಮ ಕಾಣಿಕೆಗಳನ್ನು ಸಲ್ಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 16:10
22 ತಿಳಿವುಗಳ ಹೋಲಿಕೆ  

ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ಆದಾಯಕ್ಕೆ ತಕ್ಕಂತೆ ವಾರದ ಮೊದಲನೆಯ ದಿನದಲ್ಲಿ ಕೂಡಿಟ್ಟುಕೊಂಡಿರಲಿ. ಹೀಗೆ ಮಾಡಿದರೆ, ನಾನು ಬಂದಾಗ ನೀವು ಹಣ ಕೂಡಿಸುವ ಅವಶ್ಯವಿರುವುದಿಲ್ಲ.


ಈ ವಿಷಯದಲ್ಲಿ ನನ್ನ ಸಲಹೆ ಏನೆಂದರೆ, ಕಳೆದ ವರ್ಷದಲ್ಲಿ ಮೊದಲು ನೀವೇ ಈ ಕಾರ್ಯವನ್ನು ಪ್ರಾರಂಭಿಸಿದ್ದಲ್ಲದೇ ಇದನ್ನು ಮಾಡಬೇಕೆಂದು ಬಯಸಿದ್ದೀರಿ.


ದೇವರು ಒಂದು ವೇಳೆ ತಮ್ಮ ಮನಸ್ಸನ್ನು ಬದಲಾಯಿಸಬಹುದು. ನಿಮ್ಮ ಕಡೆಗೆ ತಿರುಗಿಕೊಂಡು ನಿಮ್ಮನ್ನು ಆಶೀರ್ವದಿಸಬಹುದು. ನಿಮ್ಮ ಯೆಹೋವ ದೇವರಿಗೆ ಅರ್ಪಿಸಲು ಬೇಕಾದ ಧಾನ್ಯ ಸಮರ್ಪಣೆ ಹಾಗು ಪಾನಾರ್ಪಣೆಯನ್ನು ನಿಮಗೆ ಧಾರಾಳವಾಗಿ ಉಳಿಸಬಹುದು, ಯಾರಿಗೆ ಗೊತ್ತು?


ಯೆಹೋವ ದೇವರ ಆಶೀರ್ವಾದವು ಸಂಪತ್ತನ್ನು ಉಂಟುಮಾಡುವುದು; ಅವರು ಅದರೊಂದಿಗೆ ಯಾವ ದುಃಖವನ್ನೂ ಸೇರಿಸುವುದಿಲ್ಲ.


ಯೆಹೋವ ದೇವರಿಗೆ ಕೊಡಲಾದ ಕಪ್ಪವು 675;


ಜನರಿಂದಲೂ, ಪಶುಗಳಿಂದಲೂ, ಕತ್ತೆಗಳಿಂದಲೂ, ಕುರಿಗಳಿಂದಲೂ ಐನೂರರಲ್ಲಿ ಒಂದು ಪ್ರಾಣವನ್ನು ಯುದ್ಧಕ್ಕೆ ಹೊರಟ ಯುದ್ಧಭಟರ ಕಡೆಯಿಂದ ಯೆಹೋವ ದೇವರಿಗೆ ಕಪ್ಪವಾಗಿ ಎತ್ತಬೇಕು.


ಬಿಡಿಸುವ ಬಂಧುವು ಇಲ್ಲದೆ ಹೋದರೆ, ಮಾರಿದವನೇ ಸ್ಥಿತಿವಂತನಾಗಿ ಅದನ್ನು ಬಿಡಿಸಿಕೊಳ್ಳುವಂತಾದರೆ,


ಅವಳು ಕುರಿಮರಿಯನ್ನು ತರಲು ಅಶಕ್ತಳಾಗಿದ್ದರೆ, ಅವಳು ದಹನಬಲಿಗಾಗಿ ಒಂದು ಪಾಪ ಪರಿಹಾರದ ಬಲಿಗಾಗಿ, ಇನ್ನೊಂದು ಎಂಬಂತೆ ಎರಡು ಬೆಳವಕ್ಕಿಗಳನ್ನು ಇಲ್ಲವೆ ಎರಡು ಪಾರಿವಾಳದ ಮರಿಗಳನ್ನು ತರಬೇಕು ಮತ್ತು ಯಾಜಕನು ಅವಳಿಗಾಗಿ ಪ್ರಾಯಶ್ಚಿತ್ತ ಮಾಡಬೇಕು. ಆಗ ಅವಳು ಶುದ್ಧಳಾಗುವಳು.’ ”


“ ‘ಯಾರಾದರೂ ಒಂದು ಕುರಿಮರಿಯನ್ನು ತರುವುದಕ್ಕೆ ಅಶಕ್ತರಾಗಿದ್ದರೆ, ತಾವು ಮಾಡಿದ ಅಪರಾಧಕ್ಕಾಗಿ ಎರಡು ಬೆಳವಕ್ಕಿಗಳನ್ನಾಗಲಿ, ಇಲ್ಲವೆ ಎರಡು ಪಾರಿವಾಳದ ಮರಿಗಳನ್ನಾಗಲಿ ಯೆಹೋವ ದೇವರಿಗೆ ತರಬೇಕು. ಒಂದನ್ನು ಪಾಪ ಪರಿಹಾರದ ಬಲಿಗಾಗಿ, ಮತ್ತೊಂದನ್ನು ದಹನಬಲಿಗಾಗಿ ತರಬೇಕು.


ಯಾರಿಗಾದರೂ ಕೊಡುವ ಮನಸ್ಸಿದ್ದರೆ, ಅದು ದೇವರ ದೃಷ್ಟಿಯಲ್ಲಿ ಕೊಟ್ಟಂತೆ ಪರಿಗಣಿಸಲಾಗುವುದು. ಏಕೆಂದರೆ ಕೊಡುವವರು ಎಷ್ಟು ಕೊಟ್ಟಿದ್ದಾರೆ ಎಂಬುದು ಪ್ರಾಮುಖ್ಯವಲ್ಲ, ಆದರೆ ಇಲ್ಲದಿರುವುದನ್ನು ದೇವರು ಬಯಸದೇ ಇರುವುದನ್ನು ಕೊಡಬಯಸುತ್ತಾರೆ.


ಹೀಗೆ ಮಾಡಬೇಕೆಂದು ಯೆಹೋವ ದೇವರು ಮೋಶೆಯ ಮುಖಾಂತರವಾಗಿ ಆಜ್ಞಾಪಿಸಿದ ಎಲ್ಲಾ ಕೆಲಸಕ್ಕೋಸ್ಕರ ಬೇಕಾದವುಗಳನ್ನು ಇಸ್ರಾಯೇಲಿನ ಸ್ತ್ರೀಪುರುಷರೆಲ್ಲರು ಮನಃಪೂರ್ವಕವಾಗಿಯೇ ಯೆಹೋವ ದೇವರಿಗೆ ಕಾಣಿಕೆಯನ್ನು ತಂದರು.


ಏಳು ವಾರಗಳನ್ನು ನನಗಾಗಿ ಎಣಿಸಿಕೊಳ್ಳಬೇಕು. ಪೈರಿನಲ್ಲಿ ಕುಡುಗೋಲು ಮೊದಲು ಹಾಕಿದಂದಿನಿಂದ ಏಳು ವಾರಗಳನ್ನು ಎಣಿಸಿಕೊಳ್ಳುವುದಕ್ಕೆ ಪ್ರಾರಂಭಿಸಬೇಕು.


ಮತ್ತು ಅವರು ತಮ್ಮ ನಾಮಸ್ಥಾಪನೆಗಾಗಿ ಆರಿಸಿಕೊಳ್ಳುವ ಸ್ಥಳದಲ್ಲಿ ನೀವು, ನಿಮ್ಮ ಗಂಡು ಹೆಣ್ಣುಮಕ್ಕಳು, ದಾಸದಾಸಿಯರು, ನಿಮ್ಮ ಊರಲ್ಲಿರುವ ಲೇವಿಯರು, ಪರದೇಶದವರು, ತಂದೆತಾಯಿ ಇಲ್ಲದವರು ಹಾಗೂ ವಿಧವೆಯರು ನಿಮ್ಮ ದೇವರಾದ ಯೆಹೋವ ದೇವರ ಸನ್ನಿಧಿಯಲ್ಲಿ ಸಂಭ್ರಮದಿಂದಿರಬೇಕು.


“ ‘ಸಬ್ಬತ್ ದಿನದ ಮಾರನೆಯ ದಿನ ನೀವು ನೈವೇದ್ಯವಾಗಿ ನಿವಾಳಿಸಿದ ಸಿವುಡನ್ನು ತಂದ ದಿನದಿಂದ ಏಳು ವಾರಗಳು ಪೂರ್ಣವಾಗುವವರೆಗೆ ಲೆಕ್ಕಿಸಬೇಕು.


“ ‘ಪ್ರಥಮ ಫಲಗಳ ದಿವಸದಲ್ಲಿಯೂ ನೀವು ಯೆಹೋವ ದೇವರಿಗೆ ನಿಮ್ಮ ವಾರಗಳಲ್ಲಿ ಹೊಸ ಧಾನ್ಯ ಸಮರ್ಪಣೆಯನ್ನು ಅರ್ಪಿಸುವಾಗ, ಆ ದಿನದಲ್ಲಿ ನೀವು ಉದ್ಯೋಗವನ್ನೂ ಮಾಡದೆ ಪವಿತ್ರ ಸಭೆ ಕೂಡಬೇಕು.


“ಆದರೆ ನಾವು ಈ ಪ್ರಕಾರ ಇಷ್ಟಪೂರ್ತಿಯಾಗಿ ಅರ್ಪಿಸುವುದಕ್ಕೆ ಶಕ್ತಿಯನ್ನು ಹೊಂದಲು ನಾನೆಷ್ಟರವನು? ನನ್ನ ಜನರು ಎಷ್ಟರವರು? ಏಕೆಂದರೆ ಸಮಸ್ತವೂ ನಿಮ್ಮಿಂದಲೇ.


ಲೇವಿಯನಾಗಿರುವ ಇಮ್ನನ ಮಗ ಕೋರೆಯು ಎಂಬ ಪೂರ್ವದಿಕ್ಕಿನಲ್ಲಿರುವ ದ್ವಾರಪಾಲಕನು ಯೆಹೋವ ದೇವರ ಕಾಣಿಕೆಗಳನ್ನೂ, ಮಹಾಪರಿಶುದ್ಧವಾದವುಗಳನ್ನೂ ಪಾಲು ಹಂಚುವುದಕ್ಕೆ ದೇವರಿಗೆ ಉಚಿತಾರ್ಥವಾಗಿ ಅರ್ಪಿಸಿದ ಕಾಣಿಕೆಗಳ ಮೇಲ್ವಿಚಾರಕನಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು