Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 17:11 - ಕನ್ನಡ ಸಮಕಾಲಿಕ ಅನುವಾದ

11 ಅವರು ನಿಮಗೆ ಬೋಧಿಸುವ ತೀರ್ಪಿನ ಪ್ರಕಾರವೂ, ಅವರು ನಿಮಗೆ ಹೇಳುವ ನ್ಯಾಯದ ಪ್ರಕಾರವೂ ನೀವು ಮಾಡಬೇಕು. ಅವರು ನಿಮಗೆ ತಿಳಿಸುವ ವಾಕ್ಯವನ್ನು ಬಿಟ್ಟು ಎಡಕ್ಕಾದರೂ, ಬಲಕ್ಕಾದರೂ ತಿರುಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವರು ಕಲಿಸಿಕೊಡುವ ಆಜ್ಞೆಗಳನ್ನು ಅನುಸರಿಸಿ, ಅವರು ಹೇಳಿಕೊಡುವ ತೀರ್ಪಿನಂತೆ ನೀವು ಮಾಡಬೇಕು; ಅವರು ತಿಳಿಸುವ ಮಾತನ್ನು ಬಿಟ್ಟು ಎಡಕ್ಕಾದರೂ ಬಲಕ್ಕಾದರೂ ತಿರುಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅವರು ಕೊಡುವ ಆದೇಶದ ಪ್ರಕಾರ ಹಾಗು ಅವರು ಹೇಳಿಕೊಡುವ ತೀರ್ಪಿನಂತೆ ನೀವು ಮಾಡಬೇಕು; ಅವರು ತಿಳಿಸುವ ಮಾತನ್ನು ಬಿಟ್ಟು ಎಡಬಲಕ್ಕೆ ತಿರುಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅವರು ಬೋಧಿಸುವ ಬೋಧನೆಯಂತೆಯೂ ಅವರು ಹೇಳಿಕೊಡುವ ತೀರ್ಪಿನಂತೆಯೂ ನೀವು ಮಾಡಬೇಕು; ಅವರು ತಿಳಿಸುವ ಮಾತನ್ನು ಬಿಟ್ಟು ಎಡಬಲಕ್ಕೆ ತಿರುಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಅವರು ಹೇಳಿದ ಹಾಗೆ ಎಲ್ಲವನ್ನು ಅಕ್ಷರಶಃ ಪರಿಪಾಲಿಸಬೇಕು. ಅವರ ತೀರ್ಪನ್ನು ಬದಲಾಯಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 17:11
16 ತಿಳಿವುಗಳ ಹೋಲಿಕೆ  

“ನನ್ನ ಸೇವಕನಾದ ಮೋಶೆಯು ನಿನಗೆ ಆಜ್ಞಾಪಿಸಿದ ದೇವರ ನಿಯಮದ ಪ್ರಕಾರ ನೀನು ಕೈಗೊಂಡು ನಡೆಯುವ ಹಾಗೆ ಬಲಿಷ್ಠನಾಗಿರು, ಧೈರ್ಯದಿಂದಿರು. ನೀನು ಹೋಗುವ ಸ್ಥಳದಲ್ಲೆಲ್ಲಾ ಸಫಲವಾಗುವ ಹಾಗೆ, ಅದನ್ನು ಬಿಟ್ಟು ಬಲಕ್ಕಾದರೂ, ಎಡಕ್ಕಾದರೂ ತಿರುಗಬೇಡ.


ಹಾಗೆಯೇ ಈ ದುಃಸ್ವಪ್ನದವರೂ ಶರೀರವನ್ನು ಮಲಿನಮಾಡಿಕೊಳ್ಳುವವರೂ ಪ್ರಭುತ್ವವನ್ನು ಅಸಡ್ಡೆಮಾಡುವವರೂ ದೇವದೂತರುಗಳನ್ನು ದೂಷಿಸುವವರೂ ಆಗಿದ್ದಾರೆ.


ಆದರೆ ಮುಖ್ಯವಾಗಿ ತುಚ್ಛವಾದ ದೈಹಿಕ ವ್ಯಾಮೋಹಗಳಿಗೆ ಶರೀರಾನುಸಾರ ನಡೆದು ಪ್ರಭುತ್ವವನ್ನು ತಿರಸ್ಕಾರ ಮಾಡುವವರನ್ನು ಹೀಗೆ ಶಿಕ್ಷಿಸುವರು. ಇವರು ಯಾರಿಗೂ ಹೆದರದೆ ಸ್ವೇಚ್ಛಾಪರರಾಗಿದ್ದಾರೆ. ದುರಹಂಕಾರದಿಂದ ಸ್ವರ್ಗೀಯ ಜೀವಿಗಳನ್ನು ದೂಷಿಸುತ್ತಾರೆ.


ಆಳುವವರಿಗೂ ಅಧಿಕಾರಿಗಳಿಗೂ ಅಧೀನರಾಗಿ ವಿಧೇಯರಾಗಿರಬೇಕೆಂತಲೂ ಪ್ರತಿಯೊಂದು ಒಳ್ಳೆಯ ಕಾರ್ಯಕ್ಕೆ ಸಿದ್ಧರಾಗಿರಬೇಕೆಂತಲೂ ಅವರಿಗೆ ಜ್ಞಾಪಕಮಾಡು.


ನಿನ್ನ ಬಲಕ್ಕಾಗಲಿ, ಎಡಕ್ಕಾಗಲಿ ತಿರುಗಬೇಡ; ಕೇಡಿನಿಂದ ನಿನ್ನ ಕಾಲುಗಳು ದೂರವಿರಲಿ.


ಅದಕ್ಕೆ ಅರಸನು, “ಇದೆಲ್ಲಾದರಲ್ಲಿ ಯೋವಾಬನ ಕೈ ನಿನ್ನ ಸಂಗಡ ಉಂಟಲ್ಲವೋ?” ಎಂದು ಕೇಳಿದನು. ಆ ಸ್ತ್ರೀಯು ಉತ್ತರವಾಗಿ, “ನಿನ್ನ ಜೀವದಾಣೆ, ಅರಸನಾದ ನನ್ನ ಒಡೆಯನೇ, ನೀನು ಒಂದು ಮಾತು ಹೇಳಿದರೆ, ನಾವು ಅದನ್ನು ಬಿಟ್ಟು ಎಡಕ್ಕಾದರೂ, ಬಲಕ್ಕಾದರೂ ಜಾರಿಕೊಳ್ಳುವುದಕ್ಕೆ ಆಗುವುದಿಲ್ಲ; ಏಕೆಂದರೆ ನಿನ್ನ ಸೇವಕನಾದ ಯೋವಾಬನು ನನಗೆ ಆಜ್ಞಾಪಿಸಿ, ಈ ಎಲ್ಲಾ ಮಾತುಗಳನ್ನು ನಿನ್ನ ಸೇವಕಳಿಗೆ ಹೇಳಿಕೊಟ್ಟನು.


“ನೀವು ಬಲಗೊಳ್ಳಿರಿ, ಎಡಕ್ಕಾಗಲಿ, ಬಲಕ್ಕಾಗಲಿ ತಿರುಗದೆ, ಮೋಶೆಯ ನಿಯಮದ ಗ್ರಂಥದಲ್ಲಿ ಬರೆದಿರುವ ಎಲ್ಲವನ್ನು ಕೈಗೊಂಡು ನಡೆಯಿರಿ.


ಹೀಗಿರುವುದರಿಂದ ನೀವು ಬೇರೆ ದೇವರುಗಳನ್ನು ಹಿಂಬಾಲಿಸಿ ಅವುಗಳನ್ನು ಅನುಸರಿಸಿ ನಡೆಯದಂತೆ, ನಾನು ಇಂದು ನಿಮಗೆ ಆಜ್ಞಾಪಿಸುವ ಈ ಮಾತುಗಳನ್ನು ಬಿಟ್ಟು ಎಡಕ್ಕಾದರೂ, ಬಲಕ್ಕಾದರೂ ತಿರುಗಬಾರದು.


ಜನರಲ್ಲಿ ಏನಾದರೂ ವ್ಯಾಜ್ಯವಿದ್ದರೆ, ಅವರು ಅದನ್ನು ನ್ಯಾಯಾಲಯಕ್ಕೆ ಕೊಂಡೊಯ್ಯಬೇಕು. ನ್ಯಾಯಾಧೀಶರು ನೀತಿವಂತನನ್ನು ನೀತಿವಂತನೆಂದೂ ತಪ್ಪುಳ್ಳವನನ್ನು ಅಪರಾಧಿಯೆಂದೂ ನ್ಯಾಯತೀರಿಸುವರು.


ಹೀಗೆ ಮಾಡಿದರೆ, ಅವನೂ, ಅವನ ಸಂತತಿಯವರೂ ದೀರ್ಘಕಾಲ ಇಸ್ರಾಯೇಲರ ಮೇಲೆ ರಾಜ್ಯಾಧಿಕಾರ ನಡೆಸುವರು.


ಹೀಗಿರುವುದರಿಂದ ನೀವು ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಆಜ್ಞಾಪಿಸಿದಂತೆ ಅವುಗಳನ್ನು ಕೈಗೊಂಡು ನಡೆಯಬೇಕು. ಎಡಕ್ಕಾದರೂ, ಬಲಕ್ಕಾದರೂ ತಿರುಗಬೇಡಿರಿ.


ನೀವು ಇಸ್ರಾಯೇಲರಿಗೆ ಯೆಹೋವ ದೇವರು ಮೋಶೆಯ ಕೈಗೆ ಒಪ್ಪಿಸಿ ಹೇಳಿದ ಹಾಗೆ, ಎಲ್ಲಾ ಕಟ್ಟಳೆಗಳನ್ನು ಬೋಧಿಸುವುದಕ್ಕಾಗಿಯೂ ಇರುವುದು,” ಎಂದರು.


ಅವರು ನಿಮಗೆ ಯೆಹೋವ ದೇವರು ಆಯ್ದುಕೊಳ್ಳುವ ಆ ಸ್ಥಳದಿಂದ ತಿಳಿಸುವ ತೀರ್ಪಿನ ಪ್ರಕಾರ ನೀವು ಮಾಡಿ, ಅವರು ನಿಮಗೆ ಬೋಧಿಸುವುದನ್ನೇ ನೀವು ಕೈಗೊಂಡು ನಡೆಯಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು