Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 17:9 - ಕನ್ನಡ ಸಮಕಾಲಿಕ ಅನುವಾದ

9 ನೀವು ಯಾಜಕರಾದ ಲೇವಿಯರ ಬಳಿಗೂ, ಆ ದಿವಸದಲ್ಲಿ ನ್ಯಾಯಾಧಿಪತಿಯಾದವನ ಬಳಿಗೂ ಹೋಗಿ ವಿಚಾರಿಸಬೇಕು. ಅವರು ನಿಮಗೆ ಆ ತೀರ್ಪನ್ನು ತಿಳಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅಲ್ಲಿ ಯಾಜಕಸೇವೆಯನ್ನು ಮಾಡುವ ಲೇವಿಯರ ಮತ್ತು ಆ ಕಾಲದ ನ್ಯಾಯಾಧಿಪತಿಯ ಬಳಿಗೆ ಹೋಗಿ ವಿಚಾರಿಸಲು ನೀವು ಕೊಡಬೇಕಾದ ತೀರ್ಪನ್ನು ಅವರು ತಿಳಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಯಾಜಕಸೇವೆಮಾಡುವ ಲೇವಿಯರ ಮತ್ತು ಆ ಕಾಲದ ನ್ಯಾಯಾಧಿಪತಿಯ ಬಳಿಗೆ ಹೋಗಿ ವಿಚಾರಿಸಬೇಕು. ನೀವು ಕೊಡಬೇಕಾದ ತೀರ್ಪನ್ನು ಅವರು ತಿಳಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಯಾಜಕಸೇವೆಮಾಡುವ ಲೇವಿಯರ ಮತ್ತು ಆ ಕಾಲದ ನ್ಯಾಯಾಧಿಪತಿಯ ಬಳಿಗೆ ಹೋಗಿ ವಿಚಾರಿಸಲು ನೀವು ಕೊಡಬೇಕಾದ ತೀರ್ಪನ್ನು ಅವರು ತಿಳಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಲೇವಿಕುಲದ ಯಾಜಕರ ಬಳಿಗೂ ಅಲ್ಲಿ ಆ ಸಮಯದಲ್ಲಿರುವ ನ್ಯಾಯಾಧೀಶನ ಬಳಿಗೂ ಹೋಗಿ ಅವರಿಗೆ ವಿಷಯವನ್ನು ತಿಳಿಸಬೇಕು. ಅವರು ನಿಮ್ಮ ಮುಂದಿರುವ ಬಗೆಹರಿಯಲಾಗದ ಪ್ರಕರಣವನ್ನು ಆಲೈಸಿ, ವಿಚಾರಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 17:9
15 ತಿಳಿವುಗಳ ಹೋಲಿಕೆ  

“ ‘ವ್ಯಾಜ್ಯವಾಗುವಾಗ ಅದನ್ನು ತೀರಿಸಲು ಯಾಜಕರು ನನ್ನ ನ್ಯಾಯಾನುಸಾರವಾಗಿ ನ್ಯಾಯಾಧಿಪತಿಗಳಾಗಿ ನ್ಯಾಯತೀರಿಸಲಿ. ಅವರು ನನ್ನ ತೀರ್ಪುಗಳನ್ನೂ, ನನ್ನ ನಿಯಮಗಳನ್ನೂ ನಾನು ನೇಮಿಸಿದ ಹಬ್ಬಗಳಲ್ಲಿಯೂ ನನ್ನ ಸಬ್ಬತ್ ದಿನಗಳಲ್ಲಿಯೂ ಪರಿಶುದ್ಧವಾಗಿ ಪಾಲಿಸಬೇಕು.


“ಯಾಜಕನ ತುಟಿಗಳು ತಿಳುವಳಿಕೆಯನ್ನು ಕಾಪಾಡ ತಕ್ಕದ್ದು. ದೈವ ಬೋಧನೆಯನ್ನು ಅವನ ಬಾಯಲ್ಲಿ ಹುಡುಕತಕ್ಕದ್ದು, ಏಕೆಂದರೆ ಅವನು ಸೇನಾಧೀಶ್ವರ ಯೆಹೋವ ದೇವರ ದೂತನು.


“ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ: ‘ಮೋಶೆಯ ನಿಯಮದ ಪ್ರಕಾರವಾಗಿ ಯಾಜಕರಿಗೆ,


ಆಗ ಜನರು, “ಬನ್ನಿರಿ, ಯೆರೆಮೀಯನಿಗೆ ವಿರೋಧವಾಗಿ ಯುಕ್ತಿಯನ್ನು ಕಲ್ಪಿಸೋಣ. ಯಾಜಕನಿಂದ ನಿಯಮ ಬೋಧನೆಯೂ, ಜ್ಞಾನಿಯಿಂದ ಆಲೋಚನೆಯೂ, ಪ್ರವಾದಿಯಿಂದ ವಾಕ್ಯವೂ ನಿಂತುಹೋಗುವುದಿಲ್ಲ. ಬನ್ನಿರಿ, ನಾಲಿಗೆಯಿಂದ ಅವನನ್ನು ಆಕ್ರಮಿಸೋಣ. ಅವನ ಮಾತುಗಳಲ್ಲಿ ಒಂದನ್ನಾದರೂ ಲಕ್ಷಿಸದೆ ಇರೋಣ,” ಎಂದು ಹೇಳಿದರು.


ಕಳ್ಳನು ಸಿಕ್ಕದೆ ಹೋದರೆ ಮನೆಯ ಯಜಮಾನನು ತನ್ನ ನೆರೆಯವನ ವಸ್ತುಗಳನ್ನು ಅವನು ಮುಟ್ಟಲಿಲ್ಲವೆಂದು ವಿಚಾರಿಸುವುದಕ್ಕೆ ದೇವರ ಸನ್ನಿಧಿಯಲ್ಲಿ ಅವನನ್ನು ಹಾಜರುಪಡಿಸಬೇಕು.


ಅವರು ನಿಮಗೆ ಯೆಹೋವ ದೇವರು ಆಯ್ದುಕೊಳ್ಳುವ ಆ ಸ್ಥಳದಿಂದ ತಿಳಿಸುವ ತೀರ್ಪಿನ ಪ್ರಕಾರ ನೀವು ಮಾಡಿ, ಅವರು ನಿಮಗೆ ಬೋಧಿಸುವುದನ್ನೇ ನೀವು ಕೈಗೊಂಡು ನಡೆಯಬೇಕು.


ಲೇವಿಯ ಪುತ್ರರಾದ ಯಾಜಕರು ಹತ್ತಿರ ಇರಬೇಕು. ಏಕೆಂದರೆ ಅವರನ್ನೇ ನಿಮ್ಮ ದೇವರಾದ ಯೆಹೋವ ದೇವರು ತಮ್ಮ ಸೇವೆ ಮಾಡುವುದಕ್ಕೂ ಯೆಹೋವ ದೇವರ ಹೆಸರಿನಲ್ಲಿ ಆಶೀರ್ವಾದ ಕೊಡುವುದಕ್ಕೂ ಎಲ್ಲಾ ವಿವಾದ ಹೊಡೆದಾಟಗಳ ವಿಷಯದಲ್ಲಿ ತೀರ್ಮಾನಿಸುವುದಕ್ಕೂ ಆಯ್ದುಕೊಂಡಿದ್ದಾರೆ.


“ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ನೀನು ನನ್ನ ಮಾರ್ಗಗಳಲ್ಲಿ ನಡೆದು ನನ್ನ ಆಜ್ಞೆಗಳನ್ನು ಕೈಗೊಂಡರೆ, ಆಗ ನೀನು ನನ್ನ ಆಲಯಕ್ಕೂ ನ್ಯಾಯತೀರಿಸಿ, ನನ್ನ ಅಂಗಳಗಳನ್ನೂ ಕಾಯುವೆ. ಇಲ್ಲಿ ನಿಂತವರ ಬಳಿಯಲ್ಲಿ ನಡೆದಾಡುವ ಹಕ್ಕನ್ನು ನಿನಗೆ ಕೊಡುವೆನು.’


ಅವರಿಗೆ ಏನಾದರೂ ವ್ಯಾಜ್ಯವಿದ್ದರೆ ನನ್ನ ಬಳಿಗೆ ಬರುತ್ತಾರೆ. ನಾನು ಒಬ್ಬರ ಸಂಗಡ ಇನ್ನೊಬ್ಬರಿಗಿರುವ ವ್ಯಾಜ್ಯವನ್ನು ತೀರಿಸುತ್ತೇನೆ. ದೇವರ ನಿಯಮಗಳನ್ನೂ, ಆಜ್ಞೆಗಳನ್ನೂ ಅವರಿಗೆ ತಿಳಿಯಪಡಿಸುತ್ತೇನೆ,” ಎಂದನು.


ಯೆಹೋವ ದೇವರು ನಿಮ್ಮ ಗೋತ್ರಗಳ ಪ್ರಕಾರ ಕೊಡುವ ನಿಮ್ಮ ಎಲ್ಲಾ ಊರುಗಳಲ್ಲಿ ನಿಮಗೆ ನ್ಯಾಯಾಧಿಪತಿಗಳನ್ನೂ, ಅಧಿಕಾರಿಗಳನ್ನೂ ಇಟ್ಟುಕೊಳ್ಳಬೇಕು. ಅವರು ಜನಕ್ಕೆ ನೀತಿಯಿಂದ ನ್ಯಾಯತೀರಿಸಬೇಕು.


ಜನರಲ್ಲಿ ಏನಾದರೂ ವ್ಯಾಜ್ಯವಿದ್ದರೆ, ಅವರು ಅದನ್ನು ನ್ಯಾಯಾಲಯಕ್ಕೆ ಕೊಂಡೊಯ್ಯಬೇಕು. ನ್ಯಾಯಾಧೀಶರು ನೀತಿವಂತನನ್ನು ನೀತಿವಂತನೆಂದೂ ತಪ್ಪುಳ್ಳವನನ್ನು ಅಪರಾಧಿಯೆಂದೂ ನ್ಯಾಯತೀರಿಸುವರು.


ಅವನು ಯಾಕೋಬನಿಗೆ ನಿಮ್ಮ ಸೂತ್ರಗಳನ್ನೂ, ಇಸ್ರಾಯೇಲರಿಗೆ ನಿಮ್ಮ ನಿಯಮವನ್ನೂ ಬೋಧಿಸುವನು. ನಿಮ್ಮ ಮುಂದೆ ಧೂಪವನ್ನೂ ನಿಮ್ಮ ಬಲಿಪೀಠದ ಮೇಲೆ ಸರ್ವಾಂಗ ದಹನಬಲಿಯನ್ನೂ ಸಮರ್ಪಿಸುವನು.


ಇಚ್ಹಾರರಲ್ಲಿ ಕೆನನ್ಯನನ್ನು, ಅವನ ಪುತ್ರರನ್ನು ಪಾರುಪತ್ಯಗಾರರಿಗೋಸ್ಕರವೂ, ನ್ಯಾಯಾಧಿಪತಿಗಳಿಗೋಸ್ಕರವೂ ಇಸ್ರಾಯೇಲಿನ ಮೇಲೆ ಹೊರಗಿನ ಕಾರ್ಯಗಳನ್ನು ನೋಡಲು ನೇಮಿಸಲಾಗಿತ್ತು.


ಆಗ ಸರ್ವಶಕ್ತರಾದ ಯೆಹೋವ ದೇವರ ಆಲಯದಲ್ಲಿದ್ದ ಯಾಜಕರ ಸಂಗಡ ಮತ್ತು ಪ್ರವಾದಿಗಳ ಸಂಗಡ ನಾನು ಮಾತನಾಡಿ, “ಇಷ್ಟು ವರ್ಷ ಮಾಡಿದ ಪ್ರಕಾರ, ಐದನೆಯ ತಿಂಗಳಿನಲ್ಲಿ ಉಪವಾಸವಿದ್ದು, ಪ್ರಲಾಪಿಸಬೇಕೋ?” ಎಂದು ವಿಚಾರಿಸಿಕೊಂಡು ಬರಬೇಕೆಂದು ಅವರಿಗೆ ಆಜ್ಞಾಪಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು