Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 18:20 - ಕನ್ನಡ ಸಮಕಾಲಿಕ ಅನುವಾದ

20 ಆದರೆ ನಾನು ಮಾತನಾಡಲು ಆಜ್ಞಾಪಿಸದೆ ಇರುವುದನ್ನು ನನ್ನ ಹೆಸರಿನಿಂದ ಮಾತನಾಡುವ ಪ್ರವಾದಿಯೂ, ಬೇರೆ ದೇವರುಗಳ ಹೆಸರಿನಿಂದ ಮಾತನಾಡುವ ಪ್ರವಾದಿಯೂ ಸಾಯಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆದರೆ ಯಾವ ಪ್ರವಾದಿ ನನ್ನಿಂದ ಅಧಿಕಾರಹೊಂದದೆ, ನಾನು ಪ್ರೇರಣೆಮಾಡದ ಮಾತುಗಳನ್ನು ಯೆಹೋವನ ಮಾತೆಂದು ಹೇಳಿ ಜನರಿಗೆ ತಿಳಿಸುವನೋ, ಇಲ್ಲವೆ ಇತರ ದೇವರುಗಳ ಹೆಸರಿನಲ್ಲಿ ಮಾತನಾಡುವನೋ ಅವನಿಗೆ ಮರಣಶಿಕ್ಷೆಯಾಗಬೇಕೆಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಆದರೆ ಯಾವ ಪ್ರವಾದಿ ನನ್ನಿಂದ ಅಧಿಕಾರ ಹೊಂದದೆ ನಾನು ಪ್ರೇರಣೆಮಾಡದ ಮಾತುಗಳನ್ನು ಸರ್ವೇಶ್ವರನ ಮಾತೆಂದು ಜನರಿಗೆ ತಿಳಿಸುವನೋ, ಇಲ್ಲವೆ ಇತರ ದೇವರುಗಳ ಹೆಸರಿನಲ್ಲಿ ಮಾತಾಡುವನೋ, ಅವನಿಗೆ ಮರಣಶಿಕ್ಷೆಯಾಗಬೇಕು,’ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆದರೆ ಯಾವ ಪ್ರವಾದಿ ನನ್ನಿಂದ ಅಧಿಕಾರಹೊಂದದೆ ನಾನು ಪ್ರೇರಣೆಮಾಡದ ಮಾತುಗಳನ್ನು ಯೆಹೋವನ ಮಾತೆಂದು ಹೇಳಿ ಜನರಿಗೆ ತಿಳಿಸುವನೋ ಇಲ್ಲವೆ ಇತರ ದೇವರುಗಳ ಹೆಸರಿನಲ್ಲಿ ಮಾತಾಡುವನೋ ಅವನಿಗೆ ಮರಣಶಿಕ್ಷೆಯಾಗಬೇಕೆಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 “ಒಬ್ಬ ಪ್ರವಾದಿಯು ನಾನು ಹೇಳದ ಸಂಗತಿಯನ್ನು ನಿಮಗೆ ಹೇಳಿದರೂ ಹೇಳಬಹುದು. ದೇವರಿಂದ ಬಂದ ಸಂದೇಶವನ್ನು ನಿಮಗೆ ತಿಳಿಸುತ್ತಿರುವೆನು ಎಂದು ಅವನು ಹೇಳಬಹುದು. ಇಂಥಾ ಸಂದರ್ಭಗಳು ಬಂದಲ್ಲಿ ಆ ಪ್ರವಾದಿಯನ್ನು ಸಾಯಿಸಬೇಕು. ಇಷ್ಟು ಮಾತ್ರವಲ್ಲ ಇತರ ದೇವರುಗಳ ಸಂದೇಶವನ್ನು ಕೊಡುವ ಪ್ರವಾದಿಗಳೂ ಬರಬಹುದು. ಅವರನ್ನೂ ನೀವು ಸಾಯಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 18:20
24 ತಿಳಿವುಗಳ ಹೋಲಿಕೆ  

ಅವರನ್ನು ನಾನು ಕಳುಹಿಸಲಿಲ್ಲ, ನನ್ನ ಹೆಸರೆತ್ತಿ ಸುಳ್ಳನ್ನು ಸಾರುತ್ತಾ ಇದ್ದಾರೆ. ಅವರ ದುರ್ಬೋಧನೆಯ ನಿಮಿತ್ತ ನಾನು ನಿಮ್ಮನ್ನು ಮತ್ತು ನಿಮಗೆ ಪ್ರವಾದಿಸುವ ಪ್ರವಾದಿಗಳನ್ನು ಹೊರದೂಡಬೇಕಾಗುವುದು, ನೀವು ನಾಶವಾಗುವಿರಿ, ಎಂದು ಯೆಹೋವ ದೇವರೇ ನುಡಿದಿದ್ದಾರೆ.”


“ಕುರಿಯ ವೇಷಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳು ಪ್ರವಾದಿಗಳ ಬಗ್ಗೆ ಎಚ್ಚರಿಕೆ. ಏಕೆಂದರೆ ಅವರು ಒಳಗೆ ಕ್ರೂರವಾದ ತೋಳಗಳಾಗಿದ್ದಾರೆ.


ಯಾವನಾದರೂ ಇನ್ನು ಪ್ರವಾದಿಸಿದರೆ, ಅವನ ಹೆತ್ತವರಾದ ತಂದೆತಾಯಿಗಳು ಅವನಿಗೆ, ‘ನೀನು ಬದುಕಬಾರದು, ಏಕೆಂದರೆ ಯೆಹೋವ ದೇವರ ಹೆಸರಿನಲ್ಲಿ ಸುಳ್ಳು ಹೇಳುತ್ತೀ,’ ಎಂದು ಹೇಳುವರು. ಅವನು ಪ್ರವಾದಿಸುವಾಗ ಅವನ ತಂದೆತಾಯಿಗಳು ಅವನನ್ನು ಇರಿದುಬಿಡುವರು.


“ಯೆಹೋವ ದೇವರು ಇಂತೆನ್ನುತ್ತಾರೆ,” ಎಂದು ನುಡಿ: ಅಂಥವರಿಗೆ ಆದ ದರ್ಶನ ಮಿಥ್ಯ, ಕೇಳಿಸಿದ ಕಣಿ ಸುಳ್ಳು, ಯೆಹೋವ ದೇವರು ಅವರನ್ನು ಕಳುಹಿಸಲಿಲ್ಲ, ತಾವು ನುಡಿದ ಮಾತು ನೆರವೇರುವುದೆಂದು ಸುಮ್ಮಸುಮ್ಮನೆ ನಿರೀಕ್ಷಿಸಿಕೊಂಡಿದ್ದಾರೆ.


“ಇಗೋ, ತಮ್ಮ ನಾಲಿಗೆಗಳನ್ನು ಆಡಿಸುತ್ತಾ, ‘ಯೆಹೋವ ದೇವರು ನುಡಿಯುತ್ತಾರೆ,’ ಎಂದು ಅನ್ನುವ ಪ್ರವಾದಿಗಳಿಗೆ ನಾನು ವಿರೋಧವಾಗಿದ್ದೇನೆ.


ಯಾಜಕರು, ‘ಯೆಹೋವ ದೇವರು ಎಲ್ಲಿ?’ ಎಂದು ಕೇಳಲಿಲ್ಲ. ದೈವನಿಯಮವನ್ನು ಉಪದೇಶಿಸುವವರು ನನ್ನನ್ನು ತಿಳಿಯಲಿಲ್ಲ. ನಾಯಕರು ನನಗೆ ವಿರೋಧವಾಗಿ ದ್ರೋಹಮಾಡಿದರು. ಪ್ರವಾದಿಗಳು ಬಾಳನಿಂದ ಪ್ರವಾದಿಸಿದರು. ಪ್ರಯೋಜನವಿಲ್ಲದವುಗಳನ್ನು ಹಿಂದಟ್ಟಿದರು.


ಮಧ್ಯಾಹ್ನದಲ್ಲಿ ಎಲೀಯನು ಅವರನ್ನು ಗೇಲಿಮಾಡಿ ಅವರಿಗೆ, “ದೊಡ್ಡ ಶಬ್ದದಿಂದ ಕೂಗಿರಿ, ಏಕೆಂದರೆ ಅವನು ಒಬ್ಬ ದೇವರಲ್ಲವೇ? ಒಂದು ವೇಳೆ ಅವನು ಧ್ಯಾನದಲ್ಲಿರಬಹುದು; ಇಲ್ಲವೆ ಯಾವುದೋ ಕೆಲಸದಲ್ಲಿರಬಹುದು; ಇಲ್ಲವೆ ಪ್ರಯಾಣದಲ್ಲಿದ್ದಾನೆ; ಇಲ್ಲವೆ ಅವನು ನಿದ್ದೆಯಲ್ಲಿದ್ದಾನೆ; ಈಗ ಅವನು ಎಚ್ಚರವಾಗಬೇಕು,” ಎಂದನು.


ಆದರೆ ಬೇಟೆಗಾಗಿ ಹುಟ್ಟಿರುವ ವಿವೇಕಹೀನ ಮೃಗಗಳಂತಿರುವ ಈ ದುರ್ಬೋಧಕರು ತಮಗೆ ತಿಳಿಯದವುಗಳ ವಿಷಯವಾಗಿ ದೂಷಣೆ ಮಾಡುವವರಾಗಿದ್ದಾರೆ. ಇವರು ತಮ್ಮ ಕೆಟ್ಟತನದಿಂದ ಮೃಗಗಳಂತೆ ಸಂಪೂರ್ಣ ನಾಶವಾಗುವರು.


ಆಗ ಎಲೀಯನು ಅವರಿಗೆ, “ನೀವು ಬಾಳನ ಪ್ರವಾದಿಗಳನ್ನು ಹಿಡಿಯಿರಿ. ಅವರಲ್ಲಿ ಒಬ್ಬನೂ ತಪ್ಪಿಸಿಕೊಳ್ಳದೆ ಇರಲಿ,” ಎಂದನು. ಇವರು ಅವರನ್ನು ಹಿಡಿದರು. ಎಲೀಯನು ಅವರನ್ನು ಕೀಷೋನು ಹಳ್ಳದ ಬಳಿಗೆ ತೆಗೆದುಕೊಂಡುಹೋಗಿ ಅಲ್ಲಿ ಅವರನ್ನು ಕೊಂದುಹಾಕಿದನು.


ಆಗ ಮೃಗವನ್ನು ಸೆರೆಹಿಡಿಯಲಾಯಿತು. ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ, ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಸುಳ್ಳು ಪ್ರವಾದಿ ಸಹ ಅದರ ಜೊತೆಯಲ್ಲಿ ಸೆರೆಸಿಕ್ಕಿದನು. ಇವರಿಬ್ಬರನ್ನೂ ಜೀವಸಹಿತವಾಗಿ ಗಂಧಕದಿಂದ ಉರಿಯುವ ಬೆಂಕಿಯ ಕೆರೆಯಲ್ಲಿ ಹಾಕಲಾಯಿತು.


ಆದ್ದರಿಂದ ನೀನು ಕರ್ಮೆಲು ಬೆಟ್ಟದ ಬಳಿಯಲ್ಲಿ ಸಮಸ್ತ ಇಸ್ರಾಯೇಲನ್ನೂ, ಬಾಳನ ನಾನೂರ ಐವತ್ತು ಮಂದಿ ಪ್ರವಾದಿಗಳನ್ನೂ, ಈಜೆಬೆಲಳ ಮೇಜಿನ ಹತ್ತಿರ ಭೋಜನಮಾಡುವ ಅಶೇರನ ನಾನೂರು ಮಂದಿ ಪ್ರವಾದಿಗಳನ್ನೂ ನನ್ನ ಬಳಿಗೆ ಕೂಡಿಸು,” ಎಂದನು.


ಅಲ್ಲಿ ನಿಮ್ಮ ದೇವರಾದ ಯೆಹೋವ ದೇವರಿಗೆ ಸೇವೆ ಮಾಡುವುದಕ್ಕೆ ನಿಂತ ಯಾಜಕನ ಮಾತನ್ನಾದರೂ, ನ್ಯಾಯಾಧಿಪತಿಯ ಮಾತನ್ನಾದರೂ ಕೇಳದೆ ಅಹಂಕಾರದಿಂದ ಏನಾದರೂ ಮಾಡುವುದಾದರೆ, ಆ ಮನುಷ್ಯನು ಸಾಯಲೇಬೇಕು. ಕೆಟ್ಟದ್ದನ್ನು ಇಸ್ರಾಯೇಲಿನಿಂದ ತೆಗೆದುಹಾಕಬೇಕು.


ಇದಲ್ಲದೆ ನೀವು, “ಇದು ಯೆಹೋವ ದೇವರು ಹೇಳಿದ ವಾಕ್ಯವು ಅಲ್ಲ ಎಂದು ನಾವು ತಿಳಿದುಕೊಳ್ಳುವುದು ಹೇಗೆ?” ಎಂದು ನೀವು ನಿಮ್ಮ ಹೃದಯದಲ್ಲಿ ಆಲೋಚಿಸಬಹುದು.


ಒಬ್ಬ ಪ್ರವಾದಿಯು ಯೆಹೋವ ದೇವರ ಹೆಸರಿನಲ್ಲಿ ಮುಂತಿಳಿಸಿದ ಮಾತು ಸಂಭವಿಸದೆ ಹೋದರೆ ಅಥವಾ ನಿಜವಾಗದಿದ್ದರೆ, ಅದು ಯೆಹೋವ ದೇವರ ಮಾತು ಅಲ್ಲವೆಂದು ನೀವು ತಿಳಿದುಕೊಳ್ಳಬೇಕು. ಆ ಪ್ರವಾದಿಯು ಅಹಂಕಾರದಿಂದ ಅದನ್ನು ಮಾತನಾಡಿದ್ದರೆ, ಆದ್ದರಿಂದ ನೀವು ಅವನಿಗೆ ಭಯಪಡಬಾರದು.


ಆದ್ದರಿಂದ ಇಗೋ, “ತನ್ನ ನೆರೆಯವನಿಂದ ನನ್ನ ವಾಕ್ಯಗಳನ್ನು ಕದ್ದುಕೊಳ್ಳುವ ಪ್ರತಿಯೊಬ್ಬ ಪ್ರವಾದಿಗೆ ನಾನು ವಿರೋಧವಾಗಿದ್ದೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ.


ಆಗ ಯಾಜಕರೂ, ಪ್ರವಾದಿಗಳೂ, ಅಧಿಕಾರಿಗಳಿಗೂ, ಜನರೆಲ್ಲರಿಗೂ, “ಈ ಮನುಷ್ಯನು ಮರಣಕ್ಕೆ ತಕ್ಕವನು. ಏಕೆಂದರೆ ನಿಮ್ಮ ಕಿವಿಗಳಿಂದಲೇ ನೀವು ಕೇಳಿದ ಪ್ರಕಾರ, ಇವನು ಈ ಪಟ್ಟಣಕ್ಕೆ ವಿರೋಧವಾಗಿ ಪ್ರವಾದಿಸಿದ್ದಾನೆ,” ಎಂದರು.


ನಿನ್ನ ಸಹೋದರನಾಗಲಿ, ಮಗನಾಗಲಿ, ಮಗಳಾಗಲಿ, ಪ್ರೀತಿಯ ಹೆಂಡತಿಯಾಗಲಿ, ಪ್ರಾಣ ಸ್ನೇಹಿತನಾಗಲಿ, “ನೀವೂ, ನಿಮ್ಮ ಪಿತೃಗಳೂ ತಿಳಿಯದ ಬೇರೆ ದೇವರುಗಳನ್ನು


ಯೆಹೋವ ದೇವರು ಹೇಳಿದ ಹಾಗೆಯೂ ಕರ್ತನು ಅವರಿಗೆ ಆಣೆಯಿಟ್ಟ ಹಾಗೆಯೂ ಅವರು ಎಲ್ಲಿ ಹೋದರೂ ಅಲ್ಲಿ ಕೇಡು ಆಗುವುದಕ್ಕೆ ಯೆಹೋವ ದೇವರ ಕೈ ಅವರಿಗೆ ವಿರೋಧವಾಗಿತ್ತು.


ಹಾಗೆಯೇ ದೇವರ ಮನುಷ್ಯನು ವೃದ್ಧನ ಸಂಗಡ ಹಿಂದಿರುಗಿ ಹೋಗಿ, ಅವನ ಮನೆಯಲ್ಲಿ ಅನ್ನಪಾನಗಳನ್ನು ತೆಗೆದುಕೊಂಡನು.


“ಆ ದಿನದಲ್ಲಿ, ನಾನು ವಿಗ್ರಹಗಳ ಹೆಸರುಗಳನ್ನು ದೇಶದೊಳಗಿಂದ ಕಡಿದುಬಿಡುವೆನು. ಅವು ಇನ್ನು ಮೇಲೆ ಜ್ಞಾಪಕಕ್ಕೆ ಬರುವುದಿಲ್ಲ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. “ಪ್ರವಾದಿಗಳನ್ನೂ, ಅಶುದ್ಧ ಆತ್ಮವನ್ನೂ ದೇಶದೊಳಗಿಂದ ತೊಲಗಿಹೋಗುವಂತೆ ಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು