Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 18:5 - ಕನ್ನಡ ಸಮಕಾಲಿಕ ಅನುವಾದ

5 ಏಕೆಂದರೆ ಅವರೂ, ಅವರ ಪುತ್ರರೂ ನಿತ್ಯವಾಗಿ ಯೆಹೋವ ದೇವರ ಹೆಸರಿನಲ್ಲಿ ಸೇವೆಮಾಡುತ್ತಾ ನಿಂತಿರುವ ಹಾಗೆ ಅವರನ್ನು ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಎಲ್ಲಾ ಗೋತ್ರಗಳೊಳಗಿಂದ ಆಯ್ದುಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಕುಲಗಳಲ್ಲಿ ಇವರನ್ನೂ ಮತ್ತು ಇವರ ತರುವಾಯ ಇವರ ಸಂತತಿಯವರನ್ನೂ ತನ್ನ ಸನ್ನಿಧಿಯಲ್ಲಿ ಶಾಶ್ವತವಾಗಿ ಸೇವೆ ಮಾಡುವುದಕ್ಕೆ ತಾನೇ ನೇಮಿಸಿಕೊಂಡನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಎಲ್ಲ ಕುಲಗಳಲ್ಲಿ ಲೇವಿಯನನ್ನು, ಇವನ ತರುವಾಯ ಇವನ ಸಂತತಿಯವರನ್ನು, ತಮ್ಮ ಸನ್ನಿಧಿಯಲ್ಲಿ ಶಾಶ್ವತವಾಗಿ ಸೇವೆಮಾಡುವುದಕ್ಕೆ ತಾವೇ ನೇಮಿಸಿಕೊಂಡು ಇದ್ದಾರಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಕುಲಗಳಲ್ಲಿ ಇವರನ್ನೂ ಇವರ ತರುವಾಯ ಇವರ ಸಂತತಿಯವರನ್ನೂ ತನ್ನ ಸನ್ನಿಧಿಯಲ್ಲಿ ಶಾಶ್ವತವಾಗಿ ಸೇವೆಮಾಡುವದಕ್ಕೆ ತಾನೇ ನೇವಿುಸಿಕೊಂಡನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯಾಕೆಂದರೆ ನಿಮ್ಮ ದೇವರಾದ ಯೆಹೋವನು ಇಸ್ರೇಲ್ ಕುಲದವರಿಂದ ಲೇವಿಕುಲದವರನ್ನು ನಿರಂತರವಾಗಿ ಆತನ ಸೇವೆಮಾಡುವುದಕ್ಕೆ ಆರಿಸಿಕೊಂಡಿರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 18:5
9 ತಿಳಿವುಗಳ ಹೋಲಿಕೆ  

ಆ ಕಾಲದಲ್ಲಿ ಯೆಹೋವ ದೇವರು ಲೇವಿ ಗೋತ್ರವನ್ನು ದೇವರ ಒಡಂಬಡಿಕೆಯ ಮಂಜೂಷವನ್ನು ಹೊರುವುದಕ್ಕೂ, ಯೆಹೋವ ದೇವರ ಮುಂದೆ ನಿಂತುಕೊಂಡು ಅವರಿಗೆ ಸೇವೆಮಾಡಿ, ಅವರ ಹೆಸರಿನಲ್ಲಿ ಜನರನ್ನು ಆಶೀರ್ವದಿಸುವುದಕ್ಕೂ ಅವರನ್ನು ನೇಮಿಸಿದರು. ಅವರು ಈ ದಿನದವರೆಗೂ ಆ ಕೆಲಸವನ್ನು ನಡೆಸುತ್ತಿದ್ದಾರೆ.


ಇದಲ್ಲದೆ ಯಾಜಕ ಉದ್ಯೋಗವನ್ನು ನಡೆಸುವುದಕ್ಕಾಗಿ ಆರೋನನನ್ನೂ ಅವನ ಪುತ್ರರನ್ನೂ ನೇಮಿಸಬೇಕು. ಪರಕೀಯನು ಸಮೀಪಿಸಿದರೆ ಸಾಯಬೇಕು.”


ಅಲ್ಲಿ ನಿಮ್ಮ ದೇವರಾದ ಯೆಹೋವ ದೇವರಿಗೆ ಸೇವೆ ಮಾಡುವುದಕ್ಕೆ ನಿಂತ ಯಾಜಕನ ಮಾತನ್ನಾದರೂ, ನ್ಯಾಯಾಧಿಪತಿಯ ಮಾತನ್ನಾದರೂ ಕೇಳದೆ ಅಹಂಕಾರದಿಂದ ಏನಾದರೂ ಮಾಡುವುದಾದರೆ, ಆ ಮನುಷ್ಯನು ಸಾಯಲೇಬೇಕು. ಕೆಟ್ಟದ್ದನ್ನು ಇಸ್ರಾಯೇಲಿನಿಂದ ತೆಗೆದುಹಾಕಬೇಕು.


ಕೋರಹನಿಗೂ, ಅವನ ಸಮಸ್ತ ಸಮೂಹಕ್ಕೂ, “ಯೆಹೋವ ದೇವರು ತಮ್ಮ ಹತ್ತಿರ ಬರಮಾಡಿಕೊಳ್ಳುವ ಹಾಗೆ ತನ್ನವರು ಯಾರಾರೆಂಬುದನ್ನು ಮತ್ತು ಪರಿಶುದ್ಧ ಯಾರು ಎಂಬುದನ್ನು ನಾಳೆ ತೋರಿಸುವರು. ಅವರು ಯಾರನ್ನು ಆಯ್ದುಕೊಳ್ಳುವರೋ, ಅವರನ್ನು ಹತ್ತಿರ ಬರಮಾಡಿಕೊಳ್ಳುವರು. ನೀವು ಇದನ್ನು ಮಾಡಿರಿ:


ಅವನು ತನ್ನ ದೇವರ ಗೌರವವನ್ನು ಕಾಪಾಡಲು ಆಸಕ್ತನಾಗಿದ್ದು, ಇಸ್ರಾಯೇಲರಿಗೋಸ್ಕರ ಪಾಪ ಪ್ರಾಯಶ್ಚಿತ್ತ ಮಾಡಿದ್ದರಿಂದ, ಅವನಿಗೂ ಅವನ ಹಿಂದೆ ಬರುವ ಅವನ ಸಂತತಿಗೂ ನಿತ್ಯ ಯಾಜಕತ್ವದ ಒಡಂಬಡಿಕೆ ಮಾಡಿದ್ದೇನೆ,” ಎಂದರು.


ಆರೋನನಿಗೂ ಅವನ ಪುತ್ರರಿಗೂ ಮುಂಡಾಸುಗಳನ್ನು ಇಟ್ಟು ನಡುಕಟ್ಟುಗಳನ್ನು ಕಟ್ಟಬೇಕು, ಅವರಿಗೆ ಹೀಗೆ ಅವರಿಗೆ ಯಾಜಕತ್ವ ಸೇವೆಯು ಶಾಶ್ವತ ಕಟ್ಟಳೆಯಾಗಿರುವುದು. “ಈ ರೀತಿಯಾಗಿ ಆರೋನನನ್ನೂ ಅವನ ಪುತ್ರರನ್ನೂ ನೀನು ಪ್ರತಿಷ್ಠೆ ಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು