Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 18:9 - ಕನ್ನಡ ಸಮಕಾಲಿಕ ಅನುವಾದ

9 ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ದೇಶಕ್ಕೆ ನೀವು ಬಂದಾಗ, ಆ ಜನಾಂಗಗಳು ಮಾಡುವ ಅಸಹ್ಯ ಕಾರ್ಯಗಳನ್ನು ನೀವು ಕಲಿಯಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ನೀವು ಸೇರಿದಾಗ ಅಲ್ಲಿರುವ ಜನಗಳು ಮಾಡುವ ಅಸಹ್ಯವಾದ ಕೆಲಸಗಳನ್ನು ನೀವು ಅನುಸರಿಸಲೇಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 “ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಕೊಡುವ ನಾಡನ್ನು ನೀವು ಸೇರಿದಾಗ ಅಲ್ಲಿರುವ ಜನಗಳು ಮಾಡುವ ಖಂಡನೀಯ ಆಚಾರಗಳನ್ನು ಅನುಸರಿಸಲೇಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ನೀವು ಸೇರಿದಾಗ ಅಲ್ಲಿರುವ ಜನಗಳು ಮಾಡುವ ಹೇಸಿಗೆ ಕೆಲಸಗಳನ್ನು ಅನುಸರಿಸಲೇಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ನೀವು ನಿಮ್ಮ ವಾಗ್ದತ್ತ ದೇಶಕ್ಕೆ ಬಂದಾಗ ಸುತ್ತಮುತ್ತಲಿನ ಜನರು ನಡೆಯುವ ರೀತಿಯಲ್ಲಿ ನೀವು ನಡೆಯಬಾರದು. ಅವರ ಅಸಹ್ಯವಾದ ಪದ್ದತಿಗಳನ್ನು ಅನುಸರಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 18:9
11 ತಿಳಿವುಗಳ ಹೋಲಿಕೆ  

ನಿಮಗಿಂತ ಮೊದಲಿನವರು ಮಾಡಿದಂತೆ ಅಸಹ್ಯವಾದ ಆಚರಣೆಗಳಲ್ಲಿ ಒಂದನ್ನಾದರೂ ನೀವು ಮಾಡದಂತೆ ಮತ್ತು ಅವುಗಳಲ್ಲಿ ನಿಮ್ಮನ್ನು ಅಶುದ್ಧಮಾಡಿಕೊಳ್ಳದಂತೆ ನೀವು ನನ್ನ ಕಟ್ಟಳೆಗಳನ್ನು ಕೈಗೊಳ್ಳಬೇಕು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.’ ”


ನಿಮ್ಮ ದೇವರಾದ ಯೆಹೋವ ದೇವರು ಅವರನ್ನು ನಿಮ್ಮ ಮುಂದೆ ತೆಗೆದುಹಾಕಿದಾಗ, “ಯೆಹೋವ ದೇವರು ನಮ್ಮನ್ನು ಈ ದೇಶವನ್ನು ಸ್ವಾಧೀನಪಡಿಸಲು ಕರೆದುಕೊಂಡು ಬಂದಿದ್ದು ನಮ್ಮ ನೀತಿಯ ನಿಮಿತ್ತವೇ,” ಎಂದು ನೀವು ನಿಮ್ಮ ಹೃದಯದಲ್ಲಿ ಹೇಳಿಕೊಳ್ಳಬಾರದು. ಆ ಜನಾಂಗಗಳ ಕೆಟ್ಟತನದ ನಿಮಿತ್ತವೇ ಯೆಹೋವ ದೇವರು ಅವರನ್ನು ನಿಮ್ಮ ಮುಂದೆ ಹೊರಡಿಸುತ್ತಾರೆ.


ನಿಮ್ಮ ನೀತಿಗೋಸ್ಕರವೂ, ನಿಮ್ಮ ಹೃದಯದ ಯಥಾರ್ಥತೆಗೋಸ್ಕರವೂ ನೀವು ಅವರ ದೇಶವನ್ನು ಸ್ವತಂತ್ರಿಸಿಕೊಳ್ಳುವುದಕ್ಕೆ ಬರುವುದಿಲ್ಲ. ಆ ಜನಾಂಗಗಳ ಕೆಟ್ಟತನಕ್ಕೋಸ್ಕರವೂ, ಯೆಹೋವ ದೇವರು ನಿಮ್ಮ ಪಿತೃಗಳಾದ ಅಬ್ರಹಾಮ್, ಇಸಾಕ್, ಯಾಕೋಬರಿಗೆ ಕೊಟ್ಟ ಮಾತನ್ನು ಪೂರೈಸುವ ಹಾಗೆಯೂ ನಿಮ್ಮ ದೇವರಾದ ಯೆಹೋವ ದೇವರು ಅವರನ್ನು ನಿಮ್ಮ ಮುಂದೆ ಹೊರಡಿಸುತ್ತಾರೆ.


ಅವರ ಮುಂದೆ ಯೆಹೋವ ದೇವರು ಓಡಿಸಿಬಿಟ್ಟಿದ್ದ ಜನರ ಮತ್ತು ಇಸ್ರಾಯೇಲ್ ರಾಜರ ದುರಾಚಾರಗಳನ್ನು ಅವರು ಅನುಸರಿಸಿದರು.


ಇಲ್ಲವಾದರೆ ಅವರು ತಮ್ಮ ದೇವರುಗಳನ್ನು ಆರಾಧಿಸುವಾಗ ಮಾಡಿದ ಎಲ್ಲಾ ಅಸಹ್ಯಕರವಾದ ಆಚಾರಗಳನ್ನು ನಿಮಗೆ ಕಲಿಸಿಕೊಡಬಹುದು ಮತ್ತು ನೀವು ನಿಮ್ಮ ದೇವರಾದ ಯೆಹೋವ ದೇವರಿಗೆ ದ್ರೋಹಿಗಳಾಗಬಹುದು.


ಯೆಹೋವ ದೇವರು ತಮ್ಮ ಮುಂದೆ ಓಡಿಸಿಬಿಟ್ಟ ಇತರ ಜನರಂತೆ ಅವರು ಎಲ್ಲಾ ಪೂಜಾಸ್ಥಳಗಳಲ್ಲಿ ಧೂಪವನ್ನು ಸುಟ್ಟು ಯೆಹೋವ ದೇವರನ್ನು ಸಿಟ್ಟುಗೊಳಿಸುವ ಹಾಗೆ ಕೆಟ್ಟ ಕಾರ್ಯಗಳನ್ನು ಮಾಡಿದರು.


ಇದಲ್ಲದೆ ಆಹಾಜನು ಬೆನ್ ಹಿನ್ನೋಮ್ ತಗ್ಗಿನಲ್ಲಿ ಧೂಪವನ್ನರ್ಪಿಸಿ, ಯೆಹೋವ ದೇವರು ಇಸ್ರಾಯೇಲರ ಎದುರಿನಿಂದ ಓಡಿಸಿಬಿಟ್ಟ ಇತರ ಜನಾಂಗಗಳ ಅಸಹ್ಯಕರವಾದ ಆಚಾರಗಳನ್ನು ಅನುಸರಿಸಿ ಅವನು ತನ್ನ ಮಗನನ್ನೇ ಬೆಂಕಿಯಲ್ಲಿ ಯಜ್ಞವಾಗಿ ಅರ್ಪಿಸಿದನು.


ಯಾಜಕರಲ್ಲಿರುವ ಎಲ್ಲಾ ಪ್ರಧಾನರೂ, ಜನರೂ ಜನಾಂಗಗಳ ಅಸಹ್ಯಗಳನ್ನು ಹಿಂಬಾಲಿಸಿ ಬಹಳವಾಗಿ ಅಪನಂಬಿಗಸ್ತರಾಗಿ, ಯೆಹೋವ ದೇವರು ಯೆರೂಸಲೇಮಿನಲ್ಲಿ ಪರಿಶುದ್ಧ ಮಾಡಿದ ಆತನ ಆಲಯವನ್ನು ಹೊಲೆ ಮಾಡಿದರು.


ಯೆಹೋವ ದೇವರು ಹೀಗೆ ಹೇಳುತ್ತಾರೆ: ಬೇರೆ ಜನಾಂಗಗಳ ಆಚರಣೆಗಳನ್ನು ಅನುಸರಿಸಬೇಡಿರಿ. ಅವರು ಆಕಾಶದ ಗುರುತುಗಳಿಗೆ ಹೆದರುತ್ತಾರೆ. ನೀವು ಅವುಗಳಿಗೆ ಹೆದರಬೇಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು