Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 19:19 - ಕನ್ನಡ ಸಮಕಾಲಿಕ ಅನುವಾದ

19 ಅವನು ತನ್ನ ಸಹೋದರನಿಗೆ ಮಾಡುವುದಕ್ಕೆ ಯೋಚಿಸಿದ ಪ್ರಕಾರವೇ ಅವನಿಗೆ ಶಿಕ್ಷೆ ಕೊಡಬೇಕು. ಹೀಗೆ ಕೆಟ್ಟದ್ದನ್ನು ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅವನು ಆ ಮತ್ತೊಬ್ಬನಿಗೆ ಕೊಡಿಸಬೇಕೆಂದಿದ್ದ ಶಿಕ್ಷೆಯನ್ನು ಅವನಿಗೆ ವಿಧಿಸಬೇಕು. ಹೀಗೆ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದೊಳಗಿಂದ ತೆಗೆದುಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅವನು ಆ ಮತ್ತೊಬ್ಬನಿಗೆ ಮಾಡಿಸಬೇಕೆಂದಿದ್ದ ಶಿಕ್ಷೆಯನ್ನು ಅವನಿಗೇ ವಿಧಿಸಬೇಕು. ಹೀಗೆ, ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯೆಯಿಂದ ತೆಗೆದುಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಹೀಗೆ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದೊಳಗಿಂದ ತೆಗೆದುಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆ ಸಾಕ್ಷಿಯವನಿಗೆ ಶಿಕ್ಷೆ ವಿಧಿಸಬೇಕು. ತನ್ನ ವಿರೋಧಿಗೆ ಯಾವ ಶಿಕ್ಷೆ ಬರಬೇಕೆಂಬುದಾಗಿ ಅವನು ಸುಳ್ಳಾಡಿದ್ದನೋ, ಅದೇ ಶಿಕ್ಷೆಯನ್ನು ಅವನಿಗೆ ವಿಧಿಸಬೇಕು. ಈ ರೀತಿಯಾಗಿ ಆ ದುಷ್ಟತನವನ್ನು ನಿಮ್ಮ ಕುಲಗಳಿಂದ ತೆಗೆದುಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 19:19
13 ತಿಳಿವುಗಳ ಹೋಲಿಕೆ  

ಸುಳ್ಳುಸಾಕ್ಷಿಯು ದಂಡನೆಯನ್ನು ಹೊಂದದಿರನು; ಸುಳ್ಳಾಡುವವನು ತಪ್ಪಿಸಿಕೊಳ್ಳದೆ ಇರಲಾರನು.


ಸುಳ್ಳುಸಾಕ್ಷಿಯು ಶಿಕ್ಷೆಹೊಂದದೇ ಇರುವುದಿಲ್ಲ; ಸುಳ್ಳಾಡುವವನು ಹಾಳಾಗಿ ಹೋಗುವನು.


ಆಗ ಅರಸನು ಆಜ್ಞಾಪಿಸಲಾಗಿ, ದಾನಿಯೇಲನ ಮೇಲೆ ತಪ್ಪು ಹೊರಿಸಿದ್ದ ಮನುಷ್ಯರನ್ನು ತಂದು ಅವರನ್ನೂ, ಅವರ ಹೆಂಡತಿ ಮಕ್ಕಳನ್ನೂ ಸಿಂಹಗಳ ಗುಹೆಯಲ್ಲಿ ಹಾಕಿದರು. ಅವರು ಗುಹೆಯ ತಳವನ್ನು ಮುಟ್ಟುವುದಕ್ಕೆ ಮೊದಲೇ ಸಿಂಹಗಳು ಅವರ ಮೇಲೆ ಹಾರಿ ಬಂದು, ಅವರ ಎಲುಬುಗಳನ್ನೆಲ್ಲಾ ತುಂಡುತುಂಡಾಗಿ ಮುರಿದುಹಾಕಿದವು.


ಅವರಿಬ್ಬರನ್ನೂ ಆ ಪಟ್ಟಣದ ಬಾಗಿಲಿನ ಹೊರಗೆ ತಂದು, ಅವರು ಸಾಯುವ ಹಾಗೆ ಕಲ್ಲೆಸೆಯಬೇಕು. ಆ ಹುಡುಗಿಯು ಪಟ್ಟಣದಲ್ಲಿ ಇದ್ದರೂ, ಕೂಗದೆ ಇದ್ದದ್ದರಿಂದಲೂ, ಆ ಮನುಷ್ಯನು ತನ್ನ ನೆರೆಯವನ ಹೆಂಡತಿಯನ್ನು ಕೆಡಿಸಿದ್ದರಿಂದಲೂ ಅವರನ್ನು ಸಾಯಿಸಬೇಕು. ಹೀಗೆ ಕೆಟ್ಟದ್ದನ್ನು ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಬೇಕು.


ಅವನನ್ನು ಕೊಲ್ಲುವ ಮೊದಲು ಸಾಕ್ಷಿಗಳಾದ ಎಲ್ಲಾ ಜನರು ತಮ್ಮ ಕೈಗಳನ್ನು ಅವನ ಮೇಲೆ ಇಡಬೇಕು. ಹೀಗೆ ಕೆಟ್ಟದ್ದನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.


ಆದ್ದರಿಂದ ಯೆಹೋವ ದೇವರು ತಾನು ಕಳುಹಿಸದೆ, ತನ್ನ ಹೆಸರಿನಲ್ಲಿ ಪ್ರವಾದಿಸುವಂಥ ಮತ್ತು, ‘ಈ ದೇಶದಲ್ಲಿ ಖಡ್ಗವೂ ಬರವೂ ಇರುವುದಿಲ್ಲ,’ ಎಂದು ಹೇಳುವಂಥ ಪ್ರವಾದಿಗಳನ್ನು ಕುರಿತು, ಖಡ್ಗದಿಂದಲೂ ಕ್ಷಾಮದಿಂದಲೂ ಆ ಪ್ರವಾದಿಗಳು ತಾವೇ ನಿರ್ಮೂಲವಾಗುತ್ತಾರೆ.


ಒಬ್ಬನು ತನ್ನ ಸಹೋದರರಾದ ಇಸ್ರಾಯೇಲರಲ್ಲಿ ಒಬ್ಬನನ್ನು ಕದ್ದು ಅವನನ್ನು ಗುಲಾಮನಾಗಿ ನಡೆಸಿಕೊಂಡದ್ದು ಅಥವಾ ಮಾರಿಬಿಟ್ಟದ್ದು ತಿಳಿದುಬಂದರೆ ಕದ್ದವನಿಗೆ ಮರಣಶಿಕ್ಷೆಯಾಗಬೇಕು. ಹೀಗೆ ಕೆಟ್ಟದ್ದನ್ನು ನಿಮ್ಮ ನಡುವೆಯಿಂದ ತೆಗೆದುಹಾಕಬೇಕು.


ಆ ಹುಡುಗಿಯನ್ನು ಅವಳ ತಂದೆಯ ಮನೆ ಬಾಗಿಲಿಗೆ ತರಬೇಕು. ಅವಳ ಪಟ್ಟಣದ ಮನುಷ್ಯರು ಅವಳನ್ನು ಸಾಯುವ ಹಾಗೆ ಕಲ್ಲೆಸೆಯಬೇಕು. ಏಕೆಂದರೆ ಅವಳು ತಂದೆಯ ಮನೆಯಲ್ಲಿರುವಾಗಲೇ ಅಕ್ರಮವಾಗಿ ನಡೆದು, ಇಸ್ರಾಯೇಲಿನಲ್ಲಿ ಸೂಳೆತನ ಮಾಡಿದ್ದಾಳೆ. ಹೀಗೆ ಕೆಟ್ಟದ್ದನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.


ಆಗ ಉಳಿದವರು ಕೇಳಿ ಭಯಪಟ್ಟು, ಆ ದುಷ್ಟಕೃತ್ಯವನ್ನು ಇನ್ನು ಮುಂದೆ ನಿಮ್ಮ ಮಧ್ಯದಲ್ಲಿ ಮಾಡದಿರುವರು.


ಆ ಪ್ರವಾದಿಯನ್ನು, ಕನಸು ಕಾಣುವವನಿಗೆ ಮರಣದಂಡನೆ ವಿಧಿಸಬೇಕು. ಏಕೆಂದರೆ ಈಜಿಪ್ಟ್ ದೇಶದೊಳಗಿಂದ ನಿಮ್ಮನ್ನು ಹೊರಗೆ ಬರಮಾಡಿ, ದಾಸತ್ವದಿಂದ ನಿಮ್ಮನ್ನು ವಿಮೋಚಿಸಿದ ನಿಮ್ಮ ದೇವರಾದ ಯೆಹೋವ ದೇವರಿಂದ ತಿರುಗುವಂತೆ ಮತ್ತು ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ನಡೆಯಲು ಆಜ್ಞಾಪಿಸಿದ ಮಾರ್ಗದಿಂದ ನಿಮ್ಮನ್ನು ತಪ್ಪಿಸುವಂತೆ ಅವನು ಮಾತನಾಡಿದ್ದಾನೆ. ಹೀಗೆ ನೀವು ಕೆಟ್ಟದ್ದನ್ನು ನಿಮ್ಮಿಂದ ತೆಗೆದುಹಾಕಬೇಕು.


ನಿನ್ನ ಸಹೋದರನಾಗಲಿ, ಮಗನಾಗಲಿ, ಮಗಳಾಗಲಿ, ಪ್ರೀತಿಯ ಹೆಂಡತಿಯಾಗಲಿ, ಪ್ರಾಣ ಸ್ನೇಹಿತನಾಗಲಿ, “ನೀವೂ, ನಿಮ್ಮ ಪಿತೃಗಳೂ ತಿಳಿಯದ ಬೇರೆ ದೇವರುಗಳನ್ನು


ಆಗ ಅರಸನಾದ ದಾರ್ಯಾವೆಷನು ಭೂಲೋಕದ ಎಲ್ಲಾ ಕಡೆಯಲ್ಲೂ ವಾಸವಾಗಿರುವ ಸಕಲ ಪ್ರಜೆ, ಜನಾಂಗ, ಭಾಷೆಗಳವರೆಗೆ ಬರೆದದ್ದೇನೆಂದರೆ, “ನೀವು ಅಪಾರವಾಗಿ ಸಮೃದ್ಧಿಗೊಳ್ಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು