Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 19:6 - ಕನ್ನಡ ಸಮಕಾಲಿಕ ಅನುವಾದ

6 ಸತ್ತವನಲ್ಲಿ ಅವನಿಗೆ ಮೊದಲಿನಿಂದಲೂ ದ್ವೇಷವಿರಲಿಲ್ಲ. ಆದ್ದರಿಂದ ಅವನು ಮರಣಶಿಕ್ಷೆಗೆ ಪಾತ್ರನಲ್ಲ. ಆದರೂ ಹತ್ಯೆ ಮಾಡಿದವನಿಗೆ ಮುಯ್ಯಿ ತೀರಿಸುವ ಹಂಗುಳ್ಳ ಸಮೀಪ ಬಂಧು ಕೋಪದಿಂದ ಉರಿಯುತ್ತಾ, ಅವನನ್ನು ಹಿಂದಟ್ಟಬಹುದು. ಮಾರ್ಗದ ಮಧ್ಯದಲ್ಲೇ ಅವನನ್ನು ಹಿಡಿದು ಕೊಂದು ಹಾಕಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಸತ್ತವನ ಮೇಲೆ ಅವನಿಗೆ ಮೊದಲು ದ್ವೇಷವಿಲ್ಲದ್ದರಿಂದ ಮತ್ತು ಅವನನ್ನು ಸಾಯಿಸುವ ಉದ್ದೇಶವಿಲ್ಲದ ಕಾರಣ ಮರಣಶಿಕ್ಷೆಗೆ ಪಾತ್ರನಲ್ಲ. ಆದರೂ ಹತ್ಯಮಾಡಿದವನಿಗೆ ಮುಯ್ಯಿತೀರಿಸುವ ಹಂಗುಳ್ಳ ಸಮೀಪ ಬಂಧುವು ಇನ್ನು ಕೋಪದಿಂದ ಉರಿಯುತ್ತಿರುವಾಗಲೇ ಅವನನ್ನು ಹಿಂದಟ್ಟಿ ಹೋಗಬಹುದು ಮತ್ತು ಮಾರ್ಗ ದೂರವಾಗಿರುವ ಪಕ್ಷಕ್ಕೆ ಅವನನ್ನು ಹಿಡಿದು ಕೊಂದು ಹಾಕಿಬಿಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಸತ್ತವನಲ್ಲಿ ಅವನಿಗೆ ಮೊದಲಿನಿಂದಲೂ ದ್ವೇಷವಿರಲಿಲ್ಲ; ಆದುದರಿಂದ ಅವನು ಮರಣಶಿಕ್ಷೆಗೆ ಪಾತ್ರನಲ್ಲ; ಆದರೂ ಹತ್ಯ ಮಾಡಿದವನಿಗೆ ಮುಯ್ಯಿ ತೀರಿಸುವ ಹಂಗುಳ್ಳ ಸಮೀಪಬಂಧು ಕೋಪದಿಂದ ಕೆಂಡ ಕಾರುತ್ತಾ ಅವನನ್ನು ಹಿಂದಟ್ಟಬಹುದು. ಮಾರ್ಗ ಮಧ್ಯದಲ್ಲೇ ಅವನನ್ನು ಹಿಡಿದು ಕೊಂದುಹಾಕಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಸತ್ತವನಲ್ಲಿ ಅವನಿಗೆ ಮೊದಲು ದ್ವೇಷವಿಲ್ಲದ್ದರಿಂದ ಅವನು ಮರಣಶಿಕ್ಷೆಗೆ ಪಾತ್ರನಲ್ಲವಲ್ಲಾ. ಆದರೂ ಹತ್ಯಮಾಡಿದವನಿಗೆ ಮುಯ್ಯಿತೀರಿಸುವ ಹಂಗುಳ್ಳ ಸಮೀಪಬಂಧುವು ಇನ್ನು ಕೋಪದಿಂದ ಉರಿಯುತ್ತಿರುವಾಗಲೇ ಅವನನ್ನು ಹಿಂದಟ್ಟಾನು; ಮತ್ತು ಮಾರ್ಗ ದೂರವಾಗಿರುವ ಪಕ್ಷಕ್ಕೆ ಅವನನ್ನು ಹಿಡಿದು ಕೊಂದುಹಾಕಿಬಿಟ್ಟಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದರೆ ಆ ನಗರವು ತುಂಬಾ ದೂರವಿದ್ದಲ್ಲಿ ಅವನು ಅಲ್ಲಿಗೆ ಸೇರುವ ಮೊದಲೇ ಸತ್ತವನ ಹತ್ತಿರದ ಸಂಬಂಧಿ ಅವನನ್ನು ಹಿಂಬಾಲಿಸಿ ಅವನ ಮೇಲೆ ಮುಯ್ಯಿತೀರಿಸಿಕೊಳ್ಳುವನು. ಅವನ ಮೇಲೆ ಕೋಪಗೊಂಡು ಅವನನ್ನು ಕೊಂದರೆ ನಿಷ್ಕಾರಣವಾಗಿ ಅವನು ಕೊಲ್ಲಲ್ಪಟ್ಟಂತಾಯಿತು. ಯಾಕೆಂದರೆ ಸತ್ತವನನ್ನು ಅವನು ದ್ವೇಷಿಸುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 19:6
7 ತಿಳಿವುಗಳ ಹೋಲಿಕೆ  

ಕೊಂದವನು ಸಭೆಯ ಮುಂದೆ ನ್ಯಾಯತೀರ್ಪಿಗೆ ನಿಲ್ಲುವವರೆಗೂ ಸೇಡು ತೀರಿಸುವವನ ದೆಸೆಯಿಂದ ಸಾಯದಂತೆ ಅವು ನಿಮಗೆ ಆಶ್ರಯದ ಪಟ್ಟಣಗಳಾಗಿರಬೇಕು.


ಆದ್ದರಿಂದ ಕುಟುಂಬದವರೆಲ್ಲರು ನಿನ್ನ ಸೇವಕಿಯ ವಿರೋಧವಾಗಿ ಎದ್ದು, ‘ತನ್ನ ಸಹೋದರನನ್ನು ಕೊಂದವನನ್ನು ಅವನ ಸಹೋದರನ ಪ್ರಾಣಕ್ಕೋಸ್ಕರ ಅವನನ್ನು ಒಪ್ಪಿಸಿಕೊಡು, ತಮ್ಮನ ಪ್ರಾಣಕ್ಕಾಗಿ ಅವನ ಪ್ರಾಣವನ್ನೂ ತೆಗೆದುಬಿಟ್ಟು ನಿನ್ನನ್ನು ಬಾಧ್ಯಸ್ಥವಿಲ್ಲದ ಹಾಗೆ ಮಾಡಿಬಿಡುತ್ತೇವೆ’ ಎನ್ನುತ್ತಾರೆ. ಹೀಗೆಯೇ ಅವರು ನನಗೆ ಉಳಿದಿರುವ ಒಂದು ಕೆಂಡವನ್ನು ಆರಿಸಿ, ಭೂಮಿಯ ಮೇಲೆ ನನ್ನ ಗಂಡನ ಹೆಸರನ್ನೂ, ಸಂತಾನವನ್ನೂ ಅಳಿಸಬೇಕೆಂದಿದ್ದಾರೆ,” ಎಂದಳು.


ರಕ್ತದ ಸೇಡು ತೀರಿಸಿಕೊಳ್ಳುವವನು ಅವನನ್ನು ಹಿಂದಟ್ಟಿ ಬಂದರೆ, ಕೊಲೆ ಮಾಡಿದವನನ್ನು ಅವನ ಕೈಗೆ ಒಪ್ಪಿಸಿಕೊಡಬಾರದು. ಏಕೆಂದರೆ ಅವನು ತನ್ನ ನೆರೆಯವನನ್ನು ಅಕಸ್ಮಾತ್ತಾಗಿ ಕೊಂದನು ಮತ್ತು ಪೂರ್ವದಲ್ಲಿ ಅವನ ಬಗ್ಗೆ ದ್ವೇಷ ಇರಲಿಲ್ಲ.


ಒಬ್ಬನು ಮರಣದಂಡನೆಗೆ ಯೋಗ್ಯವಾದ ಅಪರಾಧ ಮಾಡಿದ್ದರಿಂದ, ನೀವು ಅವನಿಗೆ ಮರಣದಂಡನೆಯನ್ನು ವಿಧಿಸಿ, ಅವನ ಶವವನ್ನು ಮರಕ್ಕೆ ತೂಗುಹಾಕಿದ್ದಾದರೆ,


ಉದಾಹರಣೆಗೆ: ಒಬ್ಬ ವ್ಯಕ್ತಿ ಕಟ್ಟಿಗೆಯನ್ನು ಕಡಿಯಲು ಮತ್ತೊಬ್ಬನ ಜೊತೆಯಲ್ಲಿ ಅಡವಿಗೆ ಹೋದನೆಂದು ಇಟ್ಟುಕೊಳ್ಳೋಣ. ಅಲ್ಲಿ ಒಂದು ಮರವನ್ನು ಕೊಡಲಿಯಿಂದ ಹೊಡೆಯುತ್ತಿರುವಾಗ, ಕೊಡಲಿ ಕಾವಿನಿಂದ ಜಾರಿ, ಆ ಮತ್ತೊಬ್ಬನಿಗೆ ತಗಲಿ ಅವನು ಸತ್ತರೆ, ಹೊಡೆದವನು ಆ ನಗರಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಿಕೊಳ್ಳಬಹುದು.


ಈ ಕಾರಣದಿಂದಲೇ ನೀವು ಆ ಮೂರು ಆಶ್ರಯಪಟ್ಟಣಗಳನ್ನು ಗೊತ್ತು ಮಾಡಬೇಕೆಂದು ಆಜ್ಞಾಪಿಸಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು