Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 2:29 - ಕನ್ನಡ ಸಮಕಾಲಿಕ ಅನುವಾದ

29 ನಾವು ಯೊರ್ದನಿನ ಆಚೆಗೆ ನಮ್ಮ ದೇವರಾದ ಯೆಹೋವ ದೇವರು ನಮಗೆ ಕೊಡುವ ದೇಶಕ್ಕೆ ಹೋಗುವವರಿದ್ದೇವೆ. ಸೇಯೀರಿನಲ್ಲಿ ವಾಸಮಾಡುವ ಏಸಾವನ ಮಕ್ಕಳೂ ಆರ್ ಪ್ರದೇಶದಲ್ಲಿ ವಾಸಮಾಡುವ ಮೋವಾಬ್ಯರೂ ನಮಗೆ ದಾರಿಕೊಟ್ಟಂತೆ ನೀವೂ ನಮಗೆ ಕೊಡಬೇಕು,” ಎಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ನಾವು ಯೊರ್ದನ್ ನದಿಯನ್ನು ದಾಟಿ ನಮ್ಮ ದೇವರಾದ ಯೆಹೋವನು ನಮಗೆ ಕೊಡುವ ದೇಶವನ್ನು ಸೇರಬೇಕೆಂದಿದ್ದೇವೆ. ಸೇಯೀರಿನಲ್ಲಿರುವ ಏಸಾವ್ಯರೂ ಮತ್ತು ಆರ್ ಪ್ರದೇಶದಲ್ಲಿರುವ ಮೋವಾಬ್ಯರೂ ನಮಗೆ ದಾರಿ ಕೊಟ್ಟಂತೆ ನೀನೂ ಕೊಡಬೇಕು. ಕಾಲ್ನಡೆಯಾಗಿ ನಿನ್ನ ದೇಶವನ್ನು ದಾಟಿಹೋಗುವುದಕ್ಕೆ ನಿನ್ನ ಅಪ್ಪಣೆಯಾಗಬೇಕೇ ಹೊರತು ಬೇರೆ ಏನೂ ಬೇಕಿಲ್ಲ” ಎಂದು ಸಮಾಧಾನಕರವಾದ ಮಾತುಗಳಿಂದ ಹೇಳಿ ಕಳುಹಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ನಾವು ಜೋರ್ಡನ್ ಹೊಳೆಯನ್ನು ದಾಟಿ, ನಮ್ಮ ದೇವರಾದ ಸರ್ವೇಶ್ವರ ನಮಗೆ ಕೊಡುವ ನಾಡನ್ನು ಸೇರಬೇಕೆಂದಿದ್ದೇವೆ. ಸೇಯೀರಿನಲ್ಲಿರುವ ಏಸಾವ್ಯರು ಹಾಗು ಆರ್ ಪ್ರದೇಶದಲ್ಲಿರುವ ಮೋವಾಬ್ಯರು ನಮಗೆ ದಾರಿಕೊಟ್ಟಂತೆ ನೀನೂ ಕೊಡಬೇಕು. ಕಾಲ್ನಡೆಯಾಗಿ ನಿನ್ನ ನಾಡನ್ನು ದಾಟಿಹೋಗುವುದಕ್ಕೆ ನಿನ್ನ ಅಪ್ಪಣೆಯಾಗಬೇಕೇ ಹೊರತು ಬೇರೆ ಏನೂ ಬೇಕಿಲ್ಲ,’ ಎಂದು ವಿನಯಪೂರ್ವಕವಾದ ಮಾತುಗಳಿಂದ ಹೇಳಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ನಾವು ಯೊರ್ದನ್ ಹೊಳೆಯನ್ನು ದಾಟಿ ನಮ್ಮ ದೇವರಾದ ಯೆಹೋವನು ನಮಗೆ ಕೊಡುವ ದೇಶವನ್ನು ಸೇರಬೇಕೆಂದಿದ್ದೇವೆ. ಸೇಯೀರಿನಲ್ಲಿರುವ ಏಸಾವ್ಯರೂ ಆರ್ ಪ್ರದೇಶದಲ್ಲಿರುವ ಮೋವಾಬ್ಯರೂ ನಮಗೆ ದಾರಿಕೊಟ್ಟಂತೆ ನೀನೂ ಕೊಡಬೇಕು. ಕಾಲ್ನಡೆಯಾಗಿ ನಿನ್ನ ದೇಶವನ್ನು ದಾಟಿಹೋಗುವದಕ್ಕೆ ನಿನ್ನ ಅಪ್ಪಣೆಯಾಗಬೇಕೇ ಹೊರತು ಬೇರೆ ಏನೂ ಬೇಕಿಲ್ಲವೆಂದು ವಿನಯಪೂರ್ವಕವಾದ ಮಾತುಗಳಿಂದ ಹೇಳಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ನಾವು ಜೋರ್ಡನ್ ನದಿಯನ್ನು ದಾಟುವವರೆಗೆ ನಿಮ್ಮ ದೇಶದ ಮೂಲಕ ಹೋಗಿ, ನಮ್ಮ ದೇವರಾದ ಯೆಹೋವನು ಕೊಡಲಿರುವ ದೇಶವನ್ನು ಪ್ರವೇಶಿಸುತ್ತೇವೆ. ಸೇಯೀರ್‌ನಲ್ಲಿ ವಾಸಿಸುವ ಏಸಾವನ ಜನರೂ, ಆರ್‌ನಲ್ಲಿ ವಾಸಿಸುವ ಮೋವಾಬ್ಯರೂ ತಮ್ಮ ದೇಶಗಳ ಮೂಲಕ ಹೋಗಲು ನಮಗೆ ಅವಕಾಶ ಮಾಡಿಕೊಟ್ಟಿದ್ದಾರೆ’ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 2:29
15 ತಿಳಿವುಗಳ ಹೋಲಿಕೆ  

ಎದೋಮ್ಯರು ದೂತರಿಗೆ, “ನೀನು ಈ ಕಡೆಯಲ್ಲಿ ದಾಟಿ ಹೋಗಬೇಡ. ಹೋದರೆ ನಾನು ಖಡ್ಗದಿಂದ ನಿನ್ನ ಮೇಲೆ ದಾಳಿಗೆ ಬರುವೆನು,” ಎಂದನು.


ತೂಕದ ಕಲ್ಲೂ, ಅಳತೆಯ ಸೇರೂ, ಸರಿಯಾಗಿಯೂ ನ್ಯಾಯವಾಗಿಯೂ ಇರಬೇಕು. ಆಗ ನಿನ್ನ ದೇವರಾದ ಯೆಹೋವ ದೇವರು ನಿನಗೆ ಕೊಡುವ ಭೂಮಿಯ ಮೇಲೆ ನಿನ್ನ ದಿನಗಳು ಹೆಚ್ಚಾಗುತ್ತವೆ.


ಹೀಗಿರುವುದರಿಂದ ನಿಮ್ಮ ನೀತಿಗೋಸ್ಕರ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಈ ಒಳ್ಳೆಯ ದೇಶವನ್ನು ಸ್ವಾಧೀನಪಡಿಸಿಕೊಳ್ಳುವುದಕ್ಕೆ ಕೊಡುವುದಿಲ್ಲವೆಂದು ನೀವು ತಿಳಿದುಕೊಳ್ಳಬೇಕು. ಏಕೆಂದರೆ ನೀವು ಹಟಮಾರಿ ಜನಾಂಗವಾಗಿದ್ದೀರಿ.


ನಿನ್ನ ದಿವಸಗಳು ಹೆಚ್ಚಾಗುವ ಹಾಗೆಯೂ, ನಿನ್ನ ದೇವರಾದ ಯೆಹೋವ ದೇವರು ನಿನಗೆ ಕೊಡುವ ದೇಶದಲ್ಲಿ ನಿನಗೆ ಒಳ್ಳೆಯದಾಗುವ ಹಾಗೆಯೂ, ನಿನ್ನ ದೇವರಾದ ಯೆಹೋವ ದೇವರು ಆಜ್ಞಾಪಿಸಿದಂತೆ ನಿನ್ನ ತಂದೆಯನ್ನೂ, ನಿನ್ನ ತಾಯಿಯನ್ನೂ ಗೌರವಿಸು.


ನಿಮಗೂ, ನಿಮ್ಮ ತರುವಾಯ ನಿಮ್ಮ ಮಕ್ಕಳಿಗೂ ಒಳ್ಳೆಯದು ಆಗುವ ಹಾಗೆಯೂ, ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸದಾಕಾಲಕ್ಕೆ ಕೊಡುವ ಭೂಮಿಯ ಮೇಲೆ ನೀವು ಬಹಳ ದಿವಸವಿರುವ ಹಾಗೆಯೂ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ದೇವರ ನಿಯಮಗಳನ್ನೂ, ಆಜ್ಞೆಗಳನ್ನೂ ಅನುಸರಿಸಿರಿ.


ನಾನು ಯೊರ್ದನಿನ ಆಚೆಗೆ ಹೋಗದ ಹಾಗೆಯೂ, ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸೊತ್ತಾಗಿ ಕೊಡುವ ಆ ಒಳ್ಳೆಯ ದೇಶದಲ್ಲಿ ಪ್ರವೇಶಿಸದಂತೆ, ನಿಮ್ಮ ನಿಮಿತ್ತ ಯೆಹೋವ ದೇವರು ನನ್ನ ಮೇಲೆ ಕೋಪಮಾಡಿಕೊಂಡು ಪ್ರಮಾಣ ಮಾಡಿದರು.


ಈಗ ಇಸ್ರಾಯೇಲರೇ, ನೀವು ಬದುಕಿ ನಿಮ್ಮ ಪಿತೃಗಳ ದೇವರಾದ ಯೆಹೋವ ದೇವರು ನಿಮಗೆ ಕೊಡುವ ದೇಶವನ್ನು ಪ್ರವೇಶಿಸಿ, ಸ್ವತಂತ್ರಿಸಿಕೊಳ್ಳುವ ಹಾಗೆ ನಾನು ನಿಮಗೆ ಬೋಧಿಸುವ ನಿಯಮಗಳನ್ನೂ, ನ್ಯಾಯಗಳನ್ನೂ ಕೇಳಿ, ಅವುಗಳನ್ನು ಕೈಗೊಳ್ಳಿರಿ.


ಆಗ ಯೆಹೋವ ದೇವರು ನನಗೆ, “ಮೋವಾಬ್ಯರಿಗೆ ಕಿರುಕುಳ ನೀಡಬೇಡಿರಿ ಅಥವಾ ಅವರನ್ನು ಯುದ್ಧಕ್ಕೆ ಪ್ರಚೋದಿಸಬೇಡಿರಿ. ಏಕೆಂದರೆ ನಾನು ಅವರ ದೇಶದಲ್ಲಿ ನಿನಗೆ ಸೊತ್ತನ್ನು ಕೊಡುವುದಿಲ್ಲ. ನಾನು ಅದನ್ನು ಲೋಟನ ಮಕ್ಕಳಿಗೆ ಆರ್ ಎಂಬ ಪ್ರದೇಶವನ್ನು ಕೊಟ್ಟೆನಲ್ಲವೇ?” ಎಂದರು.


ನಿನ್ನ ದೇವರಾದ ಯೆಹೋವ ದೇವರು ನಿನಗೆ ಕೊಡುವ ದೇಶದಲ್ಲಿ ನೀನು ಬಹುಕಾಲ ಬಾಳುವಂತೆ ನಿನ್ನ ತಂದೆತಾಯಿಗಳನ್ನು ಗೌರವಿಸು.


ಹಿರಿಯ ಮಗಳು ಮಗನನ್ನು ಹೆತ್ತು, ಅವನಿಗೆ ಮೋವಾಬ್ ಎಂದು ಹೆಸರಿಟ್ಟಳು. ಈಗಿನ ಮೋವಾಬ್ಯರಿಗೂ ಇವನೇ ತಂದೆ.


ಆ ದೇಶವನ್ನು ನಿಮಗೆ ಕೊಟ್ಟಿದ್ದೇನೆ. ನೀವು ಹೋಗಿ ಯೆಹೋವ ದೇವರಾದ ನಾನು ನಿಮ್ಮ ಪಿತೃಗಳಾದ ಅಬ್ರಹಾಮನಿಗೂ ಇಸಾಕನಿಗೂ ಯಾಕೋಬನಿಗೂ ಅವರ ತರುವಾಯ ಹುಟ್ಟುವ ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣ ಮಾಡಿದ ದೇಶವನ್ನು ಸ್ವತಂತ್ರಿಸಿಕೊಳ್ಳಿರಿ,” ಎಂದು ಹೇಳಿದರು.


ಆದರೂ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಪ್ರೀತಿಸಿದ್ದರಿಂದ ಬಿಳಾಮನ ಮಾತಿಗೆ ಸಮ್ಮತಿಸಲಿಲ್ಲ. ನಿಮ್ಮ ದೇವರಾದ ಯೆಹೋವ ದೇವರು ಅವನಿಂದ ಶಾಪವನ್ನು ನುಡಿಸದೆ, ಆಶೀರ್ವಾದವನ್ನೇ ಹೇಳಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು