Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 2:37 - ಕನ್ನಡ ಸಮಕಾಲಿಕ ಅನುವಾದ

37 ಅಮ್ಮೋನಿಯರ ದೇಶದ ಯಬ್ಬೋಕ್ ನದಿಯ ಬಳಿಯಲ್ಲಿರುವ ಸ್ಥಳವನ್ನೂ ಪರ್ವತ ಪಟ್ಟಣವನ್ನೂ ನಮ್ಮ ದೇವರಾದ ಯೆಹೋವ ದೇವರು ನಮಗೆ ಬೇಡವೆಂದ ಕಾರಣ, ಆ ಸ್ಥಳಗಳನ್ನು ನೀವು ಅತಿಕ್ರಮಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಅಮ್ಮೋನಿಯರ ದೇಶವನ್ನು ಮಾತ್ರ ಅಂದರೆ ಯಬ್ಬೋಕ್ ಹೊಳೆಯ ಬಳಿಯಲ್ಲಿರುವ ಪ್ರದೇಶವು ಮತ್ತು ಬೆಟ್ಟದ ಸೀಮೆಯ ಊರುಗಳು ಇವೇ ಮೊದಲಾದ ಸ್ಥಳಗಳನ್ನು ನೀವು ಅತಿಕ್ರಮಿಸಲಿಲ್ಲ; ಅಲ್ಲಿಗೆ ಹೋಗಲೇ ಬಾರದೆಂದು ನಮ್ಮ ದೇವರಾದ ಯೆಹೋವನು ಆಜ್ಞಾಪಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಅಮ್ಮೋನಿಯರ ನಾಡನ್ನು ಮಾತ್ರ, ಅಂದರೆ ಯಬ್ಬೋಕ್ ಹೊಳೆಯ ಬಳಿಯಲ್ಲಿರುವ ಪ್ರದೇಶ ಮತ್ತು ಮಲೆನಾಡಿನ ಊರುಗಳು ಇವೇ ಮೊದಲಾದ ಸ್ಥಳಗಳನ್ನು ನೀವು ಅತಿಕ್ರಮಿಸಲಿಲ್ಲ; ಅಲ್ಲಿಗೆ ಹೋಗಲೇಬಾರದೆಂದು ನಮ್ಮ ದೇವರಾದ ಸರ್ವೇಶ್ವರ ಆಜ್ಞಾಪಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಅಮ್ಮೋನಿಯರ ದೇಶವನ್ನು ಮಾತ್ರ ಅಂದರೆ ಯಬ್ಬೋಕ್ ಹೊಳೆಯ ಬಳಿಯಲ್ಲಿರುವ ಪ್ರದೇಶವು ಮತ್ತು ಬೆಟ್ಟದ ಸೀಮೆಯ ಊರುಗಳು ಇವೇ ಮೊದಲಾದ ಸ್ಥಳಗಳನ್ನು ನೀವು ಅತಿಕ್ರವಿುಸಲಿಲ್ಲ; ಅಲ್ಲಿಗೆ ಹೋಗಲೇಬಾರದೆಂದು ನಮ್ಮ ದೇವರಾದ ಯೆಹೋವನು ಆಜ್ಞಾಪಿಸಿದ್ದನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಆದರೆ ಅಮ್ಮೋನಿಯರಿಗೆ ಸೇರಿದ ದೇಶದ ಸಮೀಪಕ್ಕೆ ನಾವು ಹೋಗಲಿಲ್ಲ: ಯಬ್ಬೋಕ್ ನದಿಯ ಬದಿಗೂ ನಾವು ಹೋಗಲಿಲ್ಲ: ಬೆಟ್ಟಪ್ರದೇಶಗಳ ಪಟ್ಟಣಗಳಿಗೂ ನಾವು ಹೋಗಲಿಲ್ಲ: ನಮ್ಮ ದೇವರಾದ ಯೆಹೋವನು ನಮಗೆ ಕೊಡದೆ ಇರುವ ದೇಶಗಳ ಬಳಿಗೆ ನಾವು ಹೋಗಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 2:37
9 ತಿಳಿವುಗಳ ಹೋಲಿಕೆ  

ಗಿಲ್ಯಾದ್ ಮೊದಲುಗೊಂಡು ಅರ್ನೋನ್ ತಗ್ಗಿನವರೆಗೂ ಯಬ್ಬೋಕ್ ಹೊಳೆಯವರೆಗೂ ಇರುವ ಪ್ರದೇಶವನ್ನು ರೂಬೇನ್ಯರಿಗೂ ಗಾದ್ಯರಿಗೂ ಕೊಟ್ಟೆನು. ಅರ್ನೋನ್ ತಗ್ಗಿನ ಮಧ್ಯಭಾಗವೇ ಅವರ ಮೇರೆ. ಅವರಿಗೂ ಅಮ್ಮೋನಿಯರಿಗೂ ನಡುವೆ ಇರುವ ಯಬ್ಬೋಕ್ ಹೊಳೆಯು ಅವರ ಮೇರೆ.


ಆದರೆ ಇಸ್ರಾಯೇಲರು ಅವನನ್ನು ಖಡ್ಗದಿಂದ ಹೊಡೆದು, ಅವನ ದೇಶವನ್ನು ಅರ್ನೋನ್ ನದಿಯಿಂದ ಯಬ್ಬೋಕ್ ನದಿಯವರೆಗೆ ಅಮ್ಮೋನನ ಮಕ್ಕಳ ಮೇರೆಯವರೆಗೂ ಸ್ವಾಧೀನಪಡಿಸಿಕೊಂಡರು. ಏಕೆಂದರೆ ಅಮ್ಮೋನನ ಮಕ್ಕಳ ಮೇರೆಯು ಬಲಿಷ್ಠವಾಗಿತ್ತು.


ಆ ರಾತ್ರಿಯಲ್ಲಿ ಯಾಕೋಬನು ಎದ್ದು ತನ್ನ ಇಬ್ಬರು ಹೆಂಡತಿಯರನ್ನೂ, ತನ್ನ ಇಬ್ಬರು ದಾಸಿಯರನ್ನೂ, ತನ್ನ ಹನ್ನೊಂದು ಮಂದಿ ಪುತ್ರರನ್ನೂ ಕರೆದುಕೊಂಡು ಯಬ್ಬೋಕ್ ಎಂಬ ಹೊಳೆಯ ದಂಡೆಯನ್ನು ದಾಟಿದನು.


ಅಮ್ಮೋನ್ಯರ ಹತ್ತಿರಕ್ಕೆ ನೀವು ಬಂದಾಗ, ಅವರಿಗೆ ಕಿರುಕುಳ ನೀಡಬೇಡಿರಿ ಅಥವಾ ಅವರನ್ನು ಯುದ್ಧಕ್ಕೆ ಪ್ರಚೋದಿಸಬೇಡಿರಿ. ನಾನು ಆ ದೇಶವನ್ನು ಲೋಟನ ವಂಶದವರಾದ ಅಮ್ಮೋನಿಯರಿಗೆ ಸೊತ್ತಾಗಿ ಕೊಟ್ಟಿರುವದರಿಂದ ನಿಮಗೆ ಅದರಲ್ಲಿ ಯಾವ ಭಾಗವನ್ನೂ ಕೊಡುವುದಿಲ್ಲ” ಎಂದರು.


ಅವರಲ್ಲಿ ಮೊದಲನೆಯವನು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸ ಸೀಹೋನ್ ಎಂಬವನು. ಅವನು ಅರ್ನೋನ್ ಕಣಿವೆಯ ಮಧ್ಯಭಾಗದ ದಾರಿಯ ಬಳಿಯಲ್ಲಿ ಇರುವ ಅರೋಯೇರ್ ನಗರದಿಂದ, ಅರ್ಧ ಗಿಲ್ಯಾದಿನಿಂದಲೂ ಅಮ್ಮೋನಿಯರ ಮೇರೆಯಾದ ಯಬ್ಬೋಕ್ ನದಿಯವರೆಗೆ ಆಳುತ್ತಿದ್ದನು.


ಅವರಿಗೆ ಯೆಫ್ತಾಹನು ಹೇಳುವ ಮಾತೇನೆಂದರೆ: “ಇದೇ ಇಸ್ರಾಯೇಲರು ಮೋವಾಬಿನ ದೇಶವನ್ನಾದರೂ, ಅಮ್ಮೋನಿಯರ ದೇಶವನ್ನಾದರೂ ತೆಗೆದುಕೊಂಡಿಲ್ಲ.


ಆಗ ಯೆಹೋವ ದೇವರು ನನಗೆ, “ಮೋವಾಬ್ಯರಿಗೆ ಕಿರುಕುಳ ನೀಡಬೇಡಿರಿ ಅಥವಾ ಅವರನ್ನು ಯುದ್ಧಕ್ಕೆ ಪ್ರಚೋದಿಸಬೇಡಿರಿ. ಏಕೆಂದರೆ ನಾನು ಅವರ ದೇಶದಲ್ಲಿ ನಿನಗೆ ಸೊತ್ತನ್ನು ಕೊಡುವುದಿಲ್ಲ. ನಾನು ಅದನ್ನು ಲೋಟನ ಮಕ್ಕಳಿಗೆ ಆರ್ ಎಂಬ ಪ್ರದೇಶವನ್ನು ಕೊಟ್ಟೆನಲ್ಲವೇ?” ಎಂದರು.


ಅವರನ್ನು ಯುದ್ಧಕ್ಕೆ ಪ್ರಚೋದಿಸಬೇಡಿರಿ. ನಾನು ನಿಮಗೆ ಅವರ ದೇಶದಲ್ಲಿ ಪಾದವಿಡುವಷ್ಟು ಸ್ಥಳವನ್ನಾದರೂ ಕೊಡುವುದಿಲ್ಲ. ಏಕೆಂದರೆ ಸೇಯೀರ್ ಬೆಟ್ಟವನ್ನು ನಾನು ಏಸಾವನಿಗೆ ಸ್ವದೇಶವಾಗಿ ಕೊಟ್ಟಿದ್ದೇನೆ.


ಅರ್ನೋನಿನಿಂದ ಯಬ್ಬೋಕಿನವರೆಗೂ, ಮರುಭೂಮಿಯಿಂದ ಯೊರ್ದನಿನವರೆಗೂ ಇರುವ ಅಮೋರಿಯರ ಮೇರೆಯಾದ ದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು