Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 2:9 - ಕನ್ನಡ ಸಮಕಾಲಿಕ ಅನುವಾದ

9 ಆಗ ಯೆಹೋವ ದೇವರು ನನಗೆ, “ಮೋವಾಬ್ಯರಿಗೆ ಕಿರುಕುಳ ನೀಡಬೇಡಿರಿ ಅಥವಾ ಅವರನ್ನು ಯುದ್ಧಕ್ಕೆ ಪ್ರಚೋದಿಸಬೇಡಿರಿ. ಏಕೆಂದರೆ ನಾನು ಅವರ ದೇಶದಲ್ಲಿ ನಿನಗೆ ಸೊತ್ತನ್ನು ಕೊಡುವುದಿಲ್ಲ. ನಾನು ಅದನ್ನು ಲೋಟನ ಮಕ್ಕಳಿಗೆ ಆರ್ ಎಂಬ ಪ್ರದೇಶವನ್ನು ಕೊಟ್ಟೆನಲ್ಲವೇ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆಗ ಯೆಹೋವನು ನನಗೆ, “ನೀವು ಮೋವಾಬ್ಯರಿಗೆ ವೈರಿಗಳಾಗಿ ನಡೆದು ಅವರೊಡನೆ ಯುದ್ಧಮಾಡಬಾರದು. ಲೋಟನ ವಂಶದವರಾದ ಅವರಿಗೆ ನಾನು ಆರ್ ಎಂಬ ಪ್ರದೇಶವನ್ನು ಸ್ವದೇಶವಾಗುವುದಕ್ಕೆ ಕೊಟ್ಟಿರುವುದರಿಂದ ಅದರಲ್ಲಿ ನಿಮಗೆ ಸ್ವತ್ತನ್ನು ಕೊಡುವುದಿಲ್ಲ” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆಗ ಸರ್ವೇಶ್ವರ ನನಗೆ, ‘ನೀವು ಮೋವಾಬ್ಯರಿಗೆ ವೈರಿಗಳಾಗಿ ನಡೆದು ಅವರೊಡನೆ ಯುದ್ಧಮಾಡಬಾರದು. ಲೋಟನ ವಂಶದವರಾದ ಅವರಿಗೆ ನಾನು ಆರ್ ಎಂಬ ಪ್ರದೇಶವನ್ನು ಸ್ವದೇಶವಾಗುವುದಕ್ಕೆ ಕೊಟ್ಟಿರುವುದರಿಂದ ಅದರಲ್ಲಿ ನಿಮಗೆ ಸೊತ್ತನ್ನು ಕೊಡುವುದಿಲ್ಲ. ನೀವು ಎದ್ದು ಜೆರೆದ್ ಹಳ್ಳವನ್ನು ದಾಟಬೇಕು.’ ಎಂದು ಆಜ್ಞಾಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆಗ ಯೆಹೋವನು ನನಗೆ - ನೀವು ಮೋವಾಬ್ಯರಿಗೆ ವೈರಿಗಳಾಗಿ ನಡೆದು ಅವರೊಡನೆ ಯುದ್ಧಮಾಡಬಾರದು. ಲೋಟನ ವಂಶದವರಾದ ಅವರಿಗೆ ನಾನು ಆರ್ ಎಂಬ ಪ್ರದೇಶವನ್ನು ಸ್ವದೇಶವಾಗುವದಕ್ಕೆ ಕೊಟ್ಟಿರುವದರಿಂದ ಅದರಲ್ಲಿ ನಿಮಗೆ ಸ್ವಾಸ್ತ್ಯವನ್ನು ಕೊಡುವದಿಲ್ಲ. ನೀವು ಎದ್ದು ಜೆರೆದ್ ಹಳ್ಳವನ್ನು ದಾಟಬೇಕೆಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ಯೆಹೋವನು ನನಗೆ ಹೀಗೆ ಹೇಳಿದನು: ‘ಮೋವಾಬಿನ ಜನರಿಗೆ ತೊಂದರೆ ಕೊಡಬೇಡ. ಅವರ ವಿರುದ್ಧ ಯುದ್ಧಕ್ಕೆ ಹೋಗಬೇಡ; ಅವರ ದೇಶದಲ್ಲಿ ನಿಮಗೆ ಯಾವ ಪಾಲೂ ಸಿಗದು. ಅವರು ಲೋಟನ ಸಂತತಿಯವರು. ನಾನು ಅವರಿಗೆ ಆರ್ ಪಟ್ಟಣವನ್ನು ಕೊಟ್ಟಿರುತ್ತೇನೆ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 2:9
13 ತಿಳಿವುಗಳ ಹೋಲಿಕೆ  

ಹೊಳೆಗೆ ಸೇರುವ ಹಳ್ಳಗಳನ್ನು, ಆರ್ ಪಟ್ಟಣದ ತನಕ ಮೋವಾಬಿನ ಎಲ್ಲೆಯಾಗಿರುವ ಕೊರಕಲನ್ನು.”


“ಏಕೆಂದರೆ ಬೆಂಕಿ ಹೆಷ್ಬೋನಿನಿಂದಲೂ, ಜ್ವಾಲೆಯು ಸೀಹೋನನ ಪಟ್ಟಣದಿಂದಲೂ ಹೊರಟು, ಮೋವಾಬಿನ ಆರ್ ಎಂಬ ಪಟ್ಟಣವನ್ನೂ, ಅರ್ನೋನ್ ಹೊಳೆಯ ಬಳಿಯಲ್ಲಿರುವ ಎತ್ತರ ಸ್ಥಳಗಳ ಪ್ರಭುಗಳನ್ನೂ ದಹಿಸಿಬಿಟ್ಟಿತು.


ಅಸ್ಸೀರಿಯರು ಎಲ್ಲರೂ ಅವರಲ್ಲಿ ಕೂಡಿಕೊಂಡಿರುವರು; ಅವರು ಲೋಟನ ಸಂತತಿಯವರಿಗೆ ಸಹಾಯಮಾಡಲು ಸಿದ್ಧರಾಗಿದ್ದಾರೆ.


ಎದೋಮಿನ ಅರಸನ ಬಳಿಗೆ ದೂತರನ್ನು ಕಳುಹಿಸಿ, ‘ನಾನು ನಿನ್ನ ದೇಶವನ್ನು ಹಾದು ಹೋಗಲು ಅಪ್ಪಣೆ ಆಗಬೇಕು,’ ಎಂದು ಹೇಳಿದರು. ಆದರೆ ಎದೋಮಿನ ಅರಸನು ಕೇಳದೆ ಹೋದನು. ಅವರು ಮೋವಾಬಿನ ಅರಸನ ಬಳಿಗೂ ಹಾಗೆಯೇ ಕಳುಹಿಸಿದರು; ಅವನೂ ಒಪ್ಪದೆ ಹೋದನು. ಆದ್ದರಿಂದ ಇಸ್ರಾಯೇಲರು ಕಾದೇಶಿನಲ್ಲಿ ವಾಸಮಾಡಿದರು.


ನಾವು ಯೊರ್ದನಿನ ಆಚೆಗೆ ನಮ್ಮ ದೇವರಾದ ಯೆಹೋವ ದೇವರು ನಮಗೆ ಕೊಡುವ ದೇಶಕ್ಕೆ ಹೋಗುವವರಿದ್ದೇವೆ. ಸೇಯೀರಿನಲ್ಲಿ ವಾಸಮಾಡುವ ಏಸಾವನ ಮಕ್ಕಳೂ ಆರ್ ಪ್ರದೇಶದಲ್ಲಿ ವಾಸಮಾಡುವ ಮೋವಾಬ್ಯರೂ ನಮಗೆ ದಾರಿಕೊಟ್ಟಂತೆ ನೀವೂ ನಮಗೆ ಕೊಡಬೇಕು,” ಎಂದೆನು.


ಅವರನ್ನು ಯುದ್ಧಕ್ಕೆ ಪ್ರಚೋದಿಸಬೇಡಿರಿ. ನಾನು ನಿಮಗೆ ಅವರ ದೇಶದಲ್ಲಿ ಪಾದವಿಡುವಷ್ಟು ಸ್ಥಳವನ್ನಾದರೂ ಕೊಡುವುದಿಲ್ಲ. ಏಕೆಂದರೆ ಸೇಯೀರ್ ಬೆಟ್ಟವನ್ನು ನಾನು ಏಸಾವನಿಗೆ ಸ್ವದೇಶವಾಗಿ ಕೊಟ್ಟಿದ್ದೇನೆ.


ಮೋವಾಬ್ಯರು ಮಿದ್ಯಾನ್ಯರ ಹಿರಿಯರಿಗೆ, “ಎತ್ತು ಅಡವಿಯ ಹುಲ್ಲನ್ನು ಮೇಯುವಂತೆ, ಈಗ ಈ ಸಮೂಹವು ನಮ್ಮ ಸುತ್ತಲಿರುವುದನ್ನೆಲ್ಲಾ ಮೇಯುವುದು,” ಎಂದನು. ಆ ಕಾಲದಲ್ಲಿ ಚಿಪ್ಪೋರನ ಮಗ ಬಾಲಾಕನು ಮೋವಾಬ್ಯರ ಅರಸನಾಗಿದ್ದನು.


“ಈಗ, ಅಮ್ಮೋನ್ ಮೋವಾಬ್, ಸೇಯೀರ್ ಬೆಟ್ಟದ ಜನರು, ಇಸ್ರಾಯೇಲರು ಈಜಿಪ್ಟ್ ದೇಶದೊಳಗಿಂದ ಹೊರಟು ಬರುವಾಗ, ಅವರ ಕಡೆಗೆ ಹೋಗಲು ನೀವು ಇವರಿಗೆ ಅಪ್ಪಣೆ ಕೊಡದೆ ಇದ್ದುದರಿಂದ, ಇವರು ಅವರನ್ನು ಬಿಟ್ಟು ತೊಲಗಿ ಅವರನ್ನು ನಾಶಮಾಡದೆ ಹೋದರು.


“ಮರುಭೂಮಿಯಲ್ಲಿ ನಡೆದು, ಎದೋಮ್ ದೇಶವನ್ನೂ, ಮೋವಾಬ್ ದೇಶವನ್ನೂ ಸುತ್ತಿಕೊಂಡು ಹೋಗಿ, ಮೋವಾಬ್ ದೇಶದ ಪೂರ್ವದಿಕ್ಕಿಗೆ ಬಂದು, ಮೋವಾಬಿನ ಮೇರೆಯೊಳಗೆ ಪ್ರವೇಶಿಸದೆ, ಮೋವಾಬಿನ ಮೇರೆಯಾದ ಅರ್ನೋನಿನ ಆಚೆಯಲ್ಲಿ ಇಳಿದುಕೊಂಡರು.


ಅವರಿಗೆ ಯೆಫ್ತಾಹನು ಹೇಳುವ ಮಾತೇನೆಂದರೆ: “ಇದೇ ಇಸ್ರಾಯೇಲರು ಮೋವಾಬಿನ ದೇಶವನ್ನಾದರೂ, ಅಮ್ಮೋನಿಯರ ದೇಶವನ್ನಾದರೂ ತೆಗೆದುಕೊಂಡಿಲ್ಲ.


ಮೋವಾಬಿನ ವಿಷಯವಾದ ಪ್ರವಾದನೆ: ಆ ರಾತ್ರಿಯಲ್ಲಿ ಮೋವಾಬಿನ ಆರ್ ಪಟ್ಟಣವು ಹಾಳಾಗಿ ನಿಶ್ಶಬ್ದವಾಯಿತು. ಹೌದು, ಆ ರಾತ್ರಿಯಲ್ಲಿ ಮೋವಾಬಿನ ಕೀರ್ ಪಟ್ಟಣವು ಹಾಳಾಗಿ ನಿಶ್ಶಬ್ದವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು