Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 20:10 - ಕನ್ನಡ ಸಮಕಾಲಿಕ ಅನುವಾದ

10 ನೀವು ಯುದ್ಧಮಾಡುವುದಕ್ಕಾಗಿ ಒಂದು ಪಟ್ಟಣದ ಹತ್ತಿರ ಬಂದಾಗ, ಮೊದಲು ಅದನ್ನು ಸಮಾಧಾನಕ್ಕಾಗಿ ಕರೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನೀವು ಒಂದು ಪಟ್ಟಣವನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ಅದರ ಹತ್ತಿರಕ್ಕೆ ಬಂದಾಗ ಮೊದಲು ಅದು ಯುದ್ಧವಿಲ್ಲದೆ ಸಮಾಧಾನದಿಂದಲೇ ಅಧೀನವಾಗಬಹುದೆಂದು ಪ್ರಕಟಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 “ನೀವು ಒಂದು ಪಟ್ಟಣವನ್ನು ಸ್ವಾಧೀನಮಾಡಿಕೊಳ್ಳಲು ಅದರ ಹತ್ತಿರಕ್ಕೆ ಬಂದಾಗ, ಮೊದಲು ಅದು ಯುದ್ಧವಿಲ್ಲದೆ ಸಮಾಧಾನದಿಂದಲೇ ಶರಣಾಗಬಹುದೆಂದು ಪ್ರಕಟಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನೀವು ಒಂದು ಪಟ್ಟಣವನ್ನು ಸ್ವಾಧೀನಮಾಡಿಕೊಳ್ಳುವದಕ್ಕೆ ಅದರ ಹತ್ತಿರಕ್ಕೆ ಬಂದಾಗ ಮೊದಲು ಅದು ಯುದ್ಧವಿಲ್ಲದೆ ಸಮಾಧಾನದಿಂದಲೇ ಅಧೀನವಾಗಬಹುದೆಂದು ಪ್ರಕಟಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 “ನೀವು ಒಂದು ಪಟ್ಟಣವನ್ನು ಆಕ್ರಮಿಸಲು ಹೋದಾಗ, ಅಲ್ಲಿಯ ಜನರಿಗೆ ‘ಶಾಂತಿಸಂಧಾನಕ್ಕೆ’ ಕರೆಯನ್ನು ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 20:10
13 ತಿಳಿವುಗಳ ಹೋಲಿಕೆ  

ಇದಲ್ಲದೆ ಕ್ರಿಸ್ತ ಯೇಸುವು ಬಂದು ದೂರವಾಗಿದ್ದ ನಿಮಗೂ ಸಮೀಪವಾಗಿದ್ದ ನಮಗೂ ಸಮಾಧಾನವನ್ನು ಸಾರಿದರು.


ಇವೆಲ್ಲವೂ ದೇವರಿಂದಲೇ ಆಯಿತು. ನಮ್ಮನ್ನು ಕ್ರಿಸ್ತ ಯೇಸುವಿನ ಮೂಲಕ ತಮ್ಮೊಂದಿಗೆ ಸಮಾಧಾನ ಮಾಡಿಕೊಂಡ ದೇವರು, ಇತರರನ್ನು ಸಮಾಧಾನಕ್ಕೆ ತರುವ ಸೇವೆಯನ್ನೂ ನಮಗೆ ಕೊಟ್ಟಿರುತ್ತಾರೆ:


ಸರ್ವಸೃಷ್ಟಿಗೆ ಕರ್ತ ಆಗಿರುವ ಯೇಸುಕ್ರಿಸ್ತರ ಮುಖಾಂತರ ಸಮಾಧಾನದ ಶುಭಸಮಾಚಾರ ಹೇಳುತ್ತಾ, ಇಸ್ರಾಯೇಲ್ ಜನರಿಗೆ ದೇವರು ಕಳುಹಿಸಿದ ವಾಕ್ಯವನ್ನು ನೀವು ತಿಳಿದಿದ್ದೀರಿ.


ಎಫ್ರಾಯೀಮಿನೊಳಗಿಂದ ರಥಗಳನ್ನೂ ಯೆರೂಸಲೇಮಿನೊಳಗಿಂದ ಯುದ್ಧದ ಕುದುರೆಗಳನ್ನೂ ತೆಗೆದುಬಿಡುವೆನು. ಯುದ್ಧದ ಬಿಲ್ಲು ಸಹ ಮುರಿದು ಹಾಕಲಾಗುವುದು. ಇತರ ರಾಷ್ಟ್ರಗಳಿಗೆ ಸಮಾಧಾನಕರವಾಗಿರುವುದು. ಆತನ ದೊರೆತನವು ಸಮುದ್ರದಿಂದ ಸಮುದ್ರಕ್ಕೂ, ನದಿಯಿಂದ ಭೂಮಿಯ ಅಂತ್ಯಗಳವರೆಗೂ ಇರುವುದು.


ನಾನು ತುಟಿಗಳಿಗೆ ಸ್ತೋತ್ರವನ್ನು ಉಂಟುಮಾಡುವೆನು; ದೂರವಾದವನಿಗೂ ಸಮೀಪವಾದವನಿಗೂ ಸಮಾಧಾನವಿರಲಿ, ಸಮಾಧಾನವಿರಲಿ. ನಾನು ಅವರನ್ನು ಸ್ವಸ್ಥ ಮಾಡುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


ಅಧಿಕಾರಿಗಳು ಯೋಧರ ಸಂಗಡ ಮಾತನಾಡಿ ಮುಗಿಸಿದಾಗ, ಅವರು ಅದರ ಮೇಲೆ ಸೇನಾಧಿಪತಿಗಳನ್ನು ನೇಮಿಸಬೇಕು.


ಆ ಪಟ್ಟಣವು ನಿಮಗೆ ಸಮಾಧಾನದ ಉತ್ತರಕೊಟ್ಟು ಬಾಗಿಲನ್ನು ತೆರೆದರೆ, ಅದರಲ್ಲಿರುವ ಜನರೆಲ್ಲರೂ ನಿಮಗೆ ಕಪ್ಪಕೊಟ್ಟು, ನಿಮಗಾಗಿ ಕೆಲಸ ಮಾಡಬೇಕು.


ಆಗ ಸಭೆಯವರೆಲ್ಲರೂ ರಿಮ್ಮೋನ್ ಗುಡ್ಡದಲ್ಲಿರುವ ಬೆನ್ಯಾಮೀನ್ಯರ ಸಂಗಡ ಮಾತನಾಡಿ, ಅವರಿಗೆ ಸಮಾಧಾನವನ್ನು ಸಾರಲು ಕೆಲವರನ್ನು ಕಳುಹಿಸಿದರು.


ಆಗ ನಾನು ಕೆದೇಮೋತೆಂಬ ಮರುಭೂಮಿಯಿಂದ ಹೆಷ್ಬೋನಿನ ಅರಸನಾದ ಸೀಹೋನನಿಗೆ ಸಮಾಧಾನದ ಸುದ್ದಿಯನ್ನು ತಿಳಿಸುವಂತೆ ದೂತರನ್ನು ಕಳುಹಿಸಿ,


ಯೆಫ್ತಾಹನು ಅಮ್ಮೋನಿಯರ ಅರಸನ ಬಳಿಗೆ ದೂತರನ್ನು ಕಳುಹಿಸಿ, “ನೀನು ನನಗೆ ವಿರೋಧವಾಗಿ ನನ್ನ ಸಂಗಡ ಯುದ್ಧಮಾಡುವುದಕ್ಕೆ ನನ್ನ ದೇಶದಲ್ಲಿ ಬರುವ ಕಾರಣವೇನು?” ಎಂದು ಹೇಳಿ ಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು