Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 21:3 - ಕನ್ನಡ ಸಮಕಾಲಿಕ ಅನುವಾದ

3 ಹತನಾದವನಿಗೆ ಸಮೀಪವಾದ ಊರು ಯಾವುದೋ, ಆ ಊರಿನ ಹಿರಿಯರು ಇನ್ನೂ ಕೆಲಸ ಮಾಡದಂಥ, ನೊಗ ಎಳೆಯದಂಥ, ಒಂದು ಕಡಸನ್ನು ತೆಗೆದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯಾವ ಊರು ಹತ್ತಿರವಾಗಿದೆಯೋ ಆ ಊರಿನ ಹಿರಿಯರು ಇನ್ನೂ ನೊಗಕ್ಕೆ ಕಟ್ಟಲ್ಪಡದೆಯೂ, ಯಾವ ಕೆಲಸವನ್ನೂ ಮಾಡದೆಯೂ ಇರುವ ಒಂದು ಮಣಕವನ್ನು ತೆಗೆದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಯಾವ ಊರು ಹತ್ತಿರವಾಗಿದೆಯೋ ಆ ಊರಿನ ಹಿರಿಯರು ಇನ್ನೂ ನೊಗಕ್ಕೆ ಕಟ್ಟದ ಹಾಗು ಯಾವ ಕೆಲಸವನ್ನೂ ಮಾಡದ ಒಂದು ಕಡಸನ್ನು ತೆಗೆದುಕೊಳ್ಳಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯಾವ ಊರು ಹತ್ತಿರವಾಗಿದೆಯೋ ಆ ಊರಿನ ಹಿರಿಯರು ಇನ್ನೂ ನೊಗಕ್ಕೆ ಕಟ್ಟಲ್ಪಡದೆಯೂ ಯಾವ ಕೆಲಸವನ್ನೂ ಮಾಡದೆಯೂ ಇರುವ ಒಂದು ಮಣಕವನ್ನು ತೆಗೆದುಕೊಂಡು ಎಂದಿಗೂ ವ್ಯವಸಾಯವಿಲ್ಲದಂಥ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯಾವ ಪಟ್ಟಣವು ಕೊಲೆಯಾದ ವ್ಯಕ್ತಿಯ ಶವಕ್ಕೆ ಹತ್ತಿರವಾಗಿದೆಯೋ ಆ ಪಟ್ಟಣದ ನಾಯಕರು ಮತ್ತು ನ್ಯಾಯಾಧೀಶರು ತಮ್ಮ ಹಟ್ಟಿಯಿಂದ ಎಂದೂ ಕರು ಈಯದ, ಕೆಲಸಕ್ಕೆ ಉಪಯೋಗಿಸದ ಒಂದು ಹಸುವನ್ನು ತೆಗೆದುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 21:3
8 ತಿಳಿವುಗಳ ಹೋಲಿಕೆ  

“ಯೆಹೋವ ದೇವರಾದ ನಾನು ಆಜ್ಞಾಪಿಸಿದ ನಿಯಮದ ಕಟ್ಟಳೆ ಏನೆಂದರೆ, ಎಂದೂ ನೊಗವನ್ನು ಹೊರದಂಥ, ಮಚ್ಚೆ ಇಲ್ಲದಂಥ ಮತ್ತು ಕಳಂಕವಿಲ್ಲದ ಕೆಂದಾಕಳನ್ನು ನಿಮಗೆ ತಂದು ಕೊಡುವಂತೆ ಇಸ್ರಾಯೇಲರಿಗೆ ಹೇಳು.


ಹೀಗೆ ಅವರು ಆಕಾರದಲ್ಲಿ ಮನುಷ್ಯರಾಗಿ ಕಾಣಿಸಿಕೊಂಡಾಗ ತಮ್ಮನ್ನು ತಾವೇ ತಗ್ಗಿಸಿಕೊಂಡು ಮರಣವನ್ನು ಎಂದರೆ ಶಿಲುಬೆಯ ಮರಣವನ್ನೂ ಹೊಂದುವಷ್ಟು ವಿಧೇಯರಾದರು.


“ಎಫ್ರಾಯೀಮನು ಅಂಗಲಾಚುವುದನ್ನು ನಿಶ್ಚಯವಾಗಿ ಕೇಳಿದೆನು. ಹೇಗೆಂದರೆ, ‘ನೀನು ನನ್ನನ್ನು ಶಿಕ್ಷಿಸಿದೆ. ಪಳಗದ ಹೋರಿಗೆ ಆದ ಹಾಗೆ ನನಗೆ ಶಿಕ್ಷೆ ಆಯಿತು. ನನ್ನನ್ನು ತಿರುಗಿಸು, ಆಗ ತಿರುಗಿಕೊಳ್ಳುವೆನು. ಯೆಹೋವ ದೇವರೇ, ನೀವೇ ನನ್ನ ದೇವರಾಗಿದ್ದೀರಿ.


ನಿಮ್ಮ ಹಿರಿಯರೂ ನ್ಯಾಯಾಧಿಪತಿಗಳೂ ಹೊರಗೆ ಹೋಗಿ, ಆ ಹತನಾದವನ ಸುತ್ತಲಿರುವ ಪಟ್ಟಣಗಳಲ್ಲಿ ಯಾವುದು ಹತ್ತಿರವೆಂದು ತಿಳಿದುಕೊಳ್ಳಲು ಅಳತೆಮಾಡಬೇಕು.


ಆಮೇಲೆ ಆ ಊರಿನ ಹಿರಿಯರು ಆ ಕಡಸನ್ನು ನಿತ್ಯ ಹರಿಯುವ ಹಳ್ಳದ ಬಳಿಗೆ ಬೇಸಾಯವಾಗದಂಥ, ಬೀಜ ಹಾಕದಂಥ ಸ್ಥಳಕ್ಕೆ ತೆಗೆದುಕೊಂಡುಹೋಗಿ, ಅಲ್ಲಿ ಹಳ್ಳದಲ್ಲಿ ಕಡಸನ್ನು ವಧಿಸಬೇಕು.


“ಆದರೆ ಈಗ ನೀವು ಒಂದು ಹೊಸ ಬಂಡಿಯನ್ನು ಮಾಡಿ, ನೊಗವನ್ನು ಹಾಕದೆ ಇರುವ ಹಾಲು ಕರೆಯುವ ಎರಡು ಹಸುಗಳನ್ನು ತೆಗೆದುಕೊಂಡು, ಅವುಗಳನ್ನು ಬಂಡಿಗೆ ಕಟ್ಟಿ, ಅವುಗಳ ಕರುಗಳನ್ನು ಅವುಗಳ ಹಿಂದೆ ಹೋಗದ ಹಾಗೆ ಮನೆಗೆ ತೆಗೆದುಕೊಂಡು ಬಂದು,


ಆ ಕಾಲದಲ್ಲಿ ಯೆಹೋವ ದೇವರು ಲೇವಿ ಗೋತ್ರವನ್ನು ದೇವರ ಒಡಂಬಡಿಕೆಯ ಮಂಜೂಷವನ್ನು ಹೊರುವುದಕ್ಕೂ, ಯೆಹೋವ ದೇವರ ಮುಂದೆ ನಿಂತುಕೊಂಡು ಅವರಿಗೆ ಸೇವೆಮಾಡಿ, ಅವರ ಹೆಸರಿನಲ್ಲಿ ಜನರನ್ನು ಆಶೀರ್ವದಿಸುವುದಕ್ಕೂ ಅವರನ್ನು ನೇಮಿಸಿದರು. ಅವರು ಈ ದಿನದವರೆಗೂ ಆ ಕೆಲಸವನ್ನು ನಡೆಸುತ್ತಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು