Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 21:5 - ಕನ್ನಡ ಸಮಕಾಲಿಕ ಅನುವಾದ

5 ಲೇವಿಯ ಪುತ್ರರಾದ ಯಾಜಕರು ಹತ್ತಿರ ಇರಬೇಕು. ಏಕೆಂದರೆ ಅವರನ್ನೇ ನಿಮ್ಮ ದೇವರಾದ ಯೆಹೋವ ದೇವರು ತಮ್ಮ ಸೇವೆ ಮಾಡುವುದಕ್ಕೂ ಯೆಹೋವ ದೇವರ ಹೆಸರಿನಲ್ಲಿ ಆಶೀರ್ವಾದ ಕೊಡುವುದಕ್ಕೂ ಎಲ್ಲಾ ವಿವಾದ ಹೊಡೆದಾಟಗಳ ವಿಷಯದಲ್ಲಿ ತೀರ್ಮಾನಿಸುವುದಕ್ಕೂ ಆಯ್ದುಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಲೇವಿ ಕುಲದವರಾದ ಯಾಜಕರಲ್ಲಿ ಕೆಲವರು ಹತ್ತಿರ ಬರಬೇಕು. ನಿಮ್ಮ ದೇವರಾದ ಯೆಹೋವನು ಅವರನ್ನೇ ತನ್ನ ಸಾನ್ನಿಧ್ಯಸೇವೆಯನ್ನು ಮಾಡುವುದಕ್ಕೂ ಮತ್ತು ತನ್ನ ಹೆಸರಿನಿಂದ ಜನರನ್ನು ಆಶೀರ್ವದಿಸುವುದಕ್ಕೂ ಆರಿಸಿಕೊಂಡಿದ್ದಾನಲ್ಲಾ; ಅನುಮಾನವಾದ ಎಲ್ಲಾ ವ್ಯಾಜ್ಯಗಳ ಮತ್ತು ಹೊಡೆದಾಟಗಳ ವಿಷಯದಲ್ಲಿ ಅವರೇ ತೀರ್ಮಾನಿಸುವವರು, ಅವರ ಮಾತುಗಳನ್ನು ಕೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಲೇವಿಕುಲದವರಾದ ಯಾಜಕರಲ್ಲಿ ಕೆಲವರು ಹತ್ತಿರ ಇರಬೇಕು. ನಿಮ್ಮ ದೇವರಾದ ಸರ್ವೇಶ್ವರ ಅವರನ್ನೇ ತಮ್ಮ ಸಾನ್ನಿಧ್ಯಸೇವೆಯನ್ನು ಮಾಡುವುದಕ್ಕೆ ಹಾಗು ತಮ್ಮ ಹೆಸರಿನಲ್ಲಿ ಜನರನ್ನು ಆಶೀರ್ವದಿಸುವುದಕ್ಕೆ ಆರಿಸಿಕೊಂಡಿದ್ದಾರಲ್ಲವೆ? ಸಂದೇಹಕರವಾದ ಎಲ್ಲ ವ್ಯಾಜ್ಯಗಳ ಮತ್ತು ಹೊಡೆದಾಟಗಳ ವಿಷಯದಲ್ಲಿ ಅವರೇ ತೀರ್ಮಾನಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಲೇವಿಕುಲದವರಾದ ಯಾಜಕರಲ್ಲಿ ಕೆಲವರು ಹತ್ತಿರವಿರಬೇಕು. ನಿಮ್ಮ ದೇವರಾದ ಯೆಹೋವನು ಅವರನ್ನೇ ತನ್ನ ಸಾನ್ನಿಧ್ಯಸೇವೆಯನ್ನು ಮಾಡುವದಕ್ಕೂ ತನ್ನ ಹೆಸರಿನಿಂದ ಜನರನ್ನು ಆಶೀರ್ವದಿಸುವದಕ್ಕೂ ಆದುಕೊಂಡಿದ್ದಾನಲ್ಲ; ಅನುಮಾನವಾದ ಎಲ್ಲಾ ವ್ಯಾಜ್ಯಗಳ ಮತ್ತು ಹೊಡೆದಾಟಗಳ ವಿಷಯದಲ್ಲಿ ಅವರೇ ತೀರ್ಮಾನಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಊರಿನಲ್ಲಿದ್ದ ಲೇವಿಯರೂ ಅಲ್ಲಿಗೆ ಹೋಗಬೇಕು. ಯೆಹೋವನು ಅವರ ಜನರನ್ನು ಆತನ ಹೆಸರಿನಲ್ಲಿ ಆಶೀರ್ವದಿಸುವುದಕ್ಕಾಗಿಯೂ ತನ್ನ ಸೇವೆ ಮಾಡುವುದಕ್ಕಾಗಿಯೂ ಆರಿಸಿದ್ದಾನೆ. ಎಲ್ಲಾ ವಾಗ್ವಾದಗಳನ್ನು ಯಾಜಕನೇ ಇತ್ಯರ್ಥಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 21:5
12 ತಿಳಿವುಗಳ ಹೋಲಿಕೆ  

ಅಮ್ರಾಮನ ಪುತ್ರರು: ಆರೋನ್ ಮತ್ತು ಮೋಶೆ; ಆರೋನನನ್ನು ಮತ್ತು ಅವನ ಪುತ್ರರನ್ನು ಮಹಾಪರಿಶುದ್ಧವಾದ ವಸ್ತುಗಳನ್ನು ಪ್ರತಿಷ್ಠಿಸುವುದಕ್ಕೆ ಶಾಶ್ವತವಾಗಿ ಪ್ರತ್ಯೇಕಿಸಲಾಯಿತು. ಇವರು ಯೆಹೋವ ದೇವರ ಸನ್ನಿಧಿಯಲ್ಲಿ ಸದಾಕಾಲ ಧೂಪಹಾಕುವವರೂ, ಅವರ ಸೇವೆ ಮಾಡುವವರೂ, ಅವರ ಹೆಸರಿನಿಂದ ಜನರನ್ನು ಆಶೀರ್ವದಿಸುವವರೂ ಆಗಿದ್ದರು.


“ಯಾಜಕನ ತುಟಿಗಳು ತಿಳುವಳಿಕೆಯನ್ನು ಕಾಪಾಡ ತಕ್ಕದ್ದು. ದೈವ ಬೋಧನೆಯನ್ನು ಅವನ ಬಾಯಲ್ಲಿ ಹುಡುಕತಕ್ಕದ್ದು, ಏಕೆಂದರೆ ಅವನು ಸೇನಾಧೀಶ್ವರ ಯೆಹೋವ ದೇವರ ದೂತನು.


ಆ ಕಾಲದಲ್ಲಿ ಯೆಹೋವ ದೇವರು ಲೇವಿ ಗೋತ್ರವನ್ನು ದೇವರ ಒಡಂಬಡಿಕೆಯ ಮಂಜೂಷವನ್ನು ಹೊರುವುದಕ್ಕೂ, ಯೆಹೋವ ದೇವರ ಮುಂದೆ ನಿಂತುಕೊಂಡು ಅವರಿಗೆ ಸೇವೆಮಾಡಿ, ಅವರ ಹೆಸರಿನಲ್ಲಿ ಜನರನ್ನು ಆಶೀರ್ವದಿಸುವುದಕ್ಕೂ ಅವರನ್ನು ನೇಮಿಸಿದರು. ಅವರು ಈ ದಿನದವರೆಗೂ ಆ ಕೆಲಸವನ್ನು ನಡೆಸುತ್ತಿದ್ದಾರೆ.


ವ್ಯಾಜ್ಯವಾಡುವ ಆ ಇಬ್ಬರು ಮನುಷ್ಯರು ಯೆಹೋವ ದೇವರ ಮುಂದೆಯೂ ಆ ದಿನಗಳಲ್ಲಿರುವ ಯಾಜಕರ ಹಾಗು ನ್ಯಾಯಾಧಿಪತಿಗಳ ಮುಂದೆಯೂ ನಿಂತುಕೊಳ್ಳಬೇಕು.


ಏಕೆಂದರೆ ಅವರೂ, ಅವರ ಪುತ್ರರೂ ನಿತ್ಯವಾಗಿ ಯೆಹೋವ ದೇವರ ಹೆಸರಿನಲ್ಲಿ ಸೇವೆಮಾಡುತ್ತಾ ನಿಂತಿರುವ ಹಾಗೆ ಅವರನ್ನು ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಎಲ್ಲಾ ಗೋತ್ರಗಳೊಳಗಿಂದ ಆಯ್ದುಕೊಂಡಿದ್ದಾರೆ.


ಆರೋನನು ಜನರ ಕಡೆಗೆ ತನ್ನ ಕೈಗಳನ್ನು ಎತ್ತಿ, ಅವರನ್ನು ಆಶೀರ್ವದಿಸಿದನು. ಪಾಪ ಪರಿಹಾರದ ಬಲಿಯನ್ನೂ ದಹನಬಲಿಯನ್ನೂ ಮತ್ತು ಸಮಾಧಾನದ ಬಲಿಯನ್ನೂ ಸಮರ್ಪಿಸಿದ ಮೇಲೆ ಇಳಿದು ಬಂದನು.


ಆಮೇಲೆ ಆ ಊರಿನ ಹಿರಿಯರು ಆ ಕಡಸನ್ನು ನಿತ್ಯ ಹರಿಯುವ ಹಳ್ಳದ ಬಳಿಗೆ ಬೇಸಾಯವಾಗದಂಥ, ಬೀಜ ಹಾಕದಂಥ ಸ್ಥಳಕ್ಕೆ ತೆಗೆದುಕೊಂಡುಹೋಗಿ, ಅಲ್ಲಿ ಹಳ್ಳದಲ್ಲಿ ಕಡಸನ್ನು ವಧಿಸಬೇಕು.


ಆಗ ಅವನು ನನಗೆ, “ಪ್ರತ್ಯೇಕ ಸ್ಥಳದ ಮುಂದೆ ಇರುವ ಉತ್ತರ ಮತ್ತು ದಕ್ಷಿಣದ ಕೊಠಡಿಗಳು ಪರಿಶುದ್ಧವಾದವು. ಅಲ್ಲಿ ಯೆಹೋವ ದೇವರಿಗಾಗಿ ಬರುವ ಯಾಜಕರು ಅತಿ ಪರಿಶುದ್ಧ ಪದಾರ್ಥಗಳನ್ನು ಭುಜಿಸುತ್ತಾರೆ. ಮತ್ತು ಕಾಣಿಕೆಯನ್ನೂ ದೋಷಪರಿಹಾರ ಬಲಿಯನ್ನೂ ಪ್ರಾಯಶ್ಚಿತ್ತ ಬಲಿಯನ್ನೂ ಅಲ್ಲಿಡುತ್ತಾರೆ. ಆ ಸ್ಥಳವು ಪರಿಶುದ್ಧ.


“ ‘ವ್ಯಾಜ್ಯವಾಗುವಾಗ ಅದನ್ನು ತೀರಿಸಲು ಯಾಜಕರು ನನ್ನ ನ್ಯಾಯಾನುಸಾರವಾಗಿ ನ್ಯಾಯಾಧಿಪತಿಗಳಾಗಿ ನ್ಯಾಯತೀರಿಸಲಿ. ಅವರು ನನ್ನ ತೀರ್ಪುಗಳನ್ನೂ, ನನ್ನ ನಿಯಮಗಳನ್ನೂ ನಾನು ನೇಮಿಸಿದ ಹಬ್ಬಗಳಲ್ಲಿಯೂ ನನ್ನ ಸಬ್ಬತ್ ದಿನಗಳಲ್ಲಿಯೂ ಪರಿಶುದ್ಧವಾಗಿ ಪಾಲಿಸಬೇಕು.


ಇದಲ್ಲದೆ ಜೀವಹತ್ಯ, ನ್ಯಾಯಕ್ಕೂ, ಆಜ್ಞೆಗೂ, ನಿಯಮಗಳಿಗೂ, ನ್ಯಾಯತೀರ್ವಿಕೆಗಳಿಗೂ ತಮ್ಮ ಪಟ್ಟಣಗಳಲ್ಲಿ ವಾಸವಾಗಿರುವ ನಿಮ್ಮ ಸಹೋದರರಿಂದ ಯಾವ ಕಾರ್ಯವಾದರೂ ನಿಮ್ಮ ಮುಂದೆ ಬಂದರೆ, ರೌದ್ರವು ನಿಮ್ಮ ಮೇಲೆಯೂ, ನಿಮ್ಮ ಸಹೋದರರ ಮೇಲೆಯೂ ಬಾರದ ಹಾಗೆ ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡದಂತೆ ನೀವು ಅವರನ್ನು ಎಚ್ಚರಿಸಬೇಕು. ಇದನ್ನು ಮಾಡಿರಿ. ಆಗ ನೀವು ಅಪರಾಧವಿಲ್ಲದವರಾಗಿರುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು