Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 21:8 - ಕನ್ನಡ ಸಮಕಾಲಿಕ ಅನುವಾದ

8 ಯೆಹೋವ ದೇವರೇ, ನೀವು ವಿಮೋಚಿಸಿದ ನಿಮ್ಮ ಜನರಾದ ಇಸ್ರಾಯೇಲರಿಗೆ ಕರುಣೆ ಹೊದಿಸಿರಿ. ನಿಮ್ಮ ಜನರಾದ ಇಸ್ರಾಯೇಲರ ಮೇಲೆ ನಿರ್ದೋಷವಾದ ರಕ್ತಾಪರಾಧವನ್ನು ಹೊರಿಸಬೇಡಿರಿ,” ಎಂದು ಹೇಳಬೇಕು. ಆ ರಕ್ತಾಪರಾಧವು ಅವರಿಗೆ ಮುಚ್ಚಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೆಹೋವನೇ ನೀನು ಬಿಡುಗಡೆಮಾಡಿದ ನಿನ್ನ ಜನರನ್ನು ಕ್ಷಮಿಸಬೇಕು; ಅನ್ಯಾಯವಾದ ನರಹತ್ಯದೋಷ ಫಲವು ನಿನ್ನ ಜನರಾದ ಇಸ್ರಾಯೇಲರಿಗೆ ತಗಲದಿರಲಿ” ಎಂದು ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಸರ್ವೇಶ್ವರಾ, ನೀವು ಬಿಡುಗಡೆ ಮಾಡಿದ ನಿಮ್ಮ ಜನರನ್ನು ಕ್ಷಮಿಸಬೇಕು; ಅನ್ಯಾಯ ಆದ ನರಹತ್ಯ ದೋಷಫಲವು ನಿಮ್ಮ ಜನರಾದ ಇಸ್ರಯೇಲರಿಗೆ ತಗಲದಿರಲಿ’ ಎಂದು ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಯೆಹೋವನೇ, ನೀನು ಬಿಡುಗಡೆಮಾಡಿದ ನಿನ್ನ ಜನರನ್ನು ಕ್ಷವಿುಸಬೇಕು; ಅನ್ಯಾಯವಾದ ನರಹತ್ಯದೋಷಫಲವು ನಿನ್ನ ಜನರಾದ ಇಸ್ರಾಯೇಲ್ಯರಿಗೆ ತಗಲದಿರಲಿ ಎಂದು ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯೆಹೋವನೇ, ನೀನು ಇಸ್ರೇಲನ್ನು ರಕ್ಷಿಸಿರುವೆ, ನಾವು ನಿನ್ನ ಜನಗಳಾಗಿದ್ದೇವೆ. ಈಗ ನೀನು ನಮ್ಮನ್ನು ಶುದ್ಧೀಕರಿಸು; ನಿರ್ದೋಷಿಯ ಕೊಲೆಗೆ ನಮ್ಮನ್ನು ಕಾರಣರನ್ನಾಗಿ ಮಾಡಬೇಡ!’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 21:8
13 ತಿಳಿವುಗಳ ಹೋಲಿಕೆ  

ಆಗ ಅವರು ಯೆಹೋವ ದೇವರಿಗೆ ಕೂಗಿ, “ಯೆಹೋವ ದೇವರೇ, ನಾವು ಈ ಮನುಷ್ಯನ ಜೀವದ ನಿಮಿತ್ತ ನಾಶವಾಗದಿರಲಿ. ಅಪರಾಧವಿಲ್ಲದ ರಕ್ತವನ್ನು ನಮ್ಮ ಮೇಲೆ ಹೊರಿಸಬೇಡಿರಿ. ಯೆಹೋವ ದೇವರೇ, ಇದೆಲ್ಲವೂ ಸಂಭವಿಸಿರುವುದು ನಿಮ್ಮ ಚಿತ್ತವಲ್ಲವೇ?” ಎಂದು ಹೇಳಿದರು.


ಹೀಗೆ ನೀತಿವಂತನಾದ ಹೇಬೆಲನ ರಕ್ತ ಮೊದಲುಗೊಂಡು ದೇವಾಲಯಕ್ಕೂ ಬಲಿಪೀಠಕ್ಕೂ ನಡುವೆ ನೀವು ಕೊಂದುಹಾಕಿದ ಬರಕೀಯನ ಮಗ ಜಕರೀಯನ ರಕ್ತದವರೆಗೂ ಭೂಮಿಯಲ್ಲಿ ಸುರಿಸಲಾದ ಎಲ್ಲಾ ನೀತಿವಂತರ ರಕ್ತಾಪರಾಧವು ನಿಮ್ಮ ಮೇಲೆ ಬರುವುದು.


ಅವರು ಈಜಿಪ್ಟಿನಲ್ಲಿ ವೇಶ್ಯೆ ಆದರು. ಅವರು ಎಳೆಯ ಪ್ರಾಯದಲ್ಲಿ ವ್ಯಭಿಚಾರ ಮಾಡಿದ್ದರಿಂದ ಕನ್ಯಾವಸ್ಥೆಯ ಅವರ ಸ್ತನಗಳು ಹಿಸುಕಲಾದವು; ಅವುಗಳ ತೊಟ್ಟುಗಳು ನಸುಕಲಾದವು.


ಆದರೂ ನೀವು ನನ್ನನ್ನು ಕೊಂದುಹಾಕಿದರೆ, ನಿಮ್ಮ ಮೇಲೆಯೂ, ಈ ಪಟ್ಟಣದ ಮೇಲೆಯೂ, ಅದರ ನಿವಾಸಿಗಳ ಮೇಲೆಯೂ ನಿರ್ದೋಷಿಯ ರಕ್ತವನ್ನು ಬರಮಾಡುತ್ತೀರೆಂದು ನಿಶ್ಚಯವಾಗಿ ತಿಳಿದುಕೊಳ್ಳಿರಿ. ಈ ವಾಕ್ಯಗಳನ್ನೆಲ್ಲಾ ನಿಮ್ಮ ಕಿವಿಗಳಲ್ಲಿ ಹೇಳುವ ಹಾಗೆ ಸತ್ಯವಾಗಿ ಯೆಹೋವ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆ,” ಎಂದನು.


ತಮ್ಮ ತಪ್ಪುಗಳನ್ನು ತಿಳಿದುಕೊಳ್ಳಲು ಯಾರಿಗೆ ಸಾಧ್ಯ? ನನ್ನ ಗುಪ್ತ ಪಾಪಗಳನ್ನು ಕ್ಷಮಿಸು.


ಇದಲ್ಲದೆ ಮನಸ್ಸೆಯು ಚೆಲ್ಲಿದ ನಿರಪರಾಧದ ರಕ್ತದ ನಿಮಿತ್ತ ಇದಾಯಿತು. ಅವನು ನಿರಪರಾಧದ ರಕ್ತದಿಂದ ಯೆರೂಸಲೇಮನ್ನು ತುಂಬಿಸಿದ್ದನು. ಯೆಹೋವ ದೇವರು ಅದನ್ನು ಕ್ಷಮಿಸಲು ಸಿದ್ಧವಾಗಿರಲಿಲ್ಲ.


ದಾವೀದನು ಅದನ್ನು ಕೇಳಿದಾಗ, “ನೇರನ ಮಗನಾದ ಅಬ್ನೇರನ ರಕ್ತಾಪರಾಧಕ್ಕೆ ನಾನೂ ನನ್ನ ರಾಜ್ಯವೂ ಎಂದೆಂದಿಗೂ ಯೆಹೋವ ದೇವರ ಮುಂದೆ ನಿರಪರಾಧಿಯಾಗಿದ್ದೇವೆ.


ಅನಂತರ, “ನಮ್ಮ ಕೈಗಳು ಈ ರಕ್ತವನ್ನು ಚೆಲ್ಲಲಿಲ್ಲ. ನಮ್ಮ ಕಣ್ಣುಗಳು ನಡೆದದ್ದನ್ನು ನೋಡಲಿಲ್ಲ.


ಅರಸನು ಬೆನಾಯನಿಗೆ, “ಅವನು ಹೇಳಿದ ಪ್ರಕಾರ ಮಾಡು. ಯೋವಾಬನು ನಿನ್ನ ಹಾಗೂ ನನ್ನ ತಂದೆಯ ಮನೆಯವರ ನಿರಪರಾಧ ರಕ್ತವನ್ನು ಚೆಲ್ಲಿದ ದೋಷವನ್ನು ತೊಲಗಿಸುವ ಹಾಗೆ ಅವನನ್ನು ಕೊಂದು, ಅವನ ಶವವನ್ನು ಸಮಾಧಿಮಾಡು.


ಯೆಹೋವ ದೇವರಿಗೆ ಸಮರ್ಪಿಸುವುದಕ್ಕಾಗಿ ದೇವದರ್ಶನದ ಗುಡಾರದ ಬಾಗಿಲ ಮುಂದೆ ತಾರದಿದ್ದರೆ, ಆ ಮನುಷ್ಯನ ಮೇಲೆ ರಕ್ತಾಪರಾಧವು ಹೊರಿಸಬೇಕು. ಅವನು ರಕ್ತ ಸುರಿಸಿರುವವನು, ಆ ಮನುಷ್ಯನು ತನ್ನ ಜನರ ಮಧ್ಯದೊಳಗಿಂದ ತೆಗೆದುಹಾಕಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು