Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 22:1 - ಕನ್ನಡ ಸಮಕಾಲಿಕ ಅನುವಾದ

1 ಸ್ವದೇಶದವನ ಎತ್ತಾಗಲಿ, ಕುರಿಯಾಗಲಿ ದಾರಿತಪ್ಪಿ ಹೋಗಿರುವುದನ್ನು ನೀವು ಕಂಡರೆ, ಕಾಣದವರಂತೆ ಅದನ್ನು ಬಿಟ್ಟುಹೋಗಬಾರದು. ಅವನ ಬಳಿಗೆ ಅಟ್ಟಿಕೊಂಡು ಹೋಗಿ ಕೊಡಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಸ್ವದೇಶದವನ ಎತ್ತಾಗಲಿ ಅಥವಾ ಕುರಿಯಾಗಲಿ ದಾರಿ ತಪ್ಪಿ ಹೋಗಿರುವುದನ್ನು ನೀವು ನೋಡಿಯೂ ನೋಡದಂತೆ ಅದನ್ನು ಬಿಟ್ಟು ಹೋಗಬಾರದು; ಅದನ್ನು ಅಟ್ಟಿಸಿಕೊಂಡು ಹೋಗಿ ಅವನಿಗೆ ಕೊಡಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 “ಸ್ವದೇಶದವನ ಎತ್ತಾಗಲಿ, ಕುರಿ ಆಗಲಿ ದಾರಿತಪ್ಪಿಹೋಗಿರುವುದನ್ನು ನೀವು ಕಂಡರೆ, ಕಾಣದವರಂತೆ ಅದನ್ನು ಬಿಟ್ಟುಹೋಗಬಾರದು; ಅವನ ಬಳಿಗೆ ಅಟ್ಟಿಕೊಂಡು ಹೋಗಿ ಕೊಡಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಸ್ವದೇಶದವನ ಎತ್ತಾಗಲಿ ಕುರಿಯಾಗಲಿ ದಾರಿತಪ್ಪಿ ಹೋಗಿರುವದನ್ನು ನೀವು ಕಂಡರೆ ಕಾಣದವರಂತೆ ಅದನ್ನು ಬಿಟ್ಟು ಹೋಗಬಾರದು; ಅವನ ಬಳಿಗೆ ಅಟ್ಟಿಕೊಂಡುಹೋಗಿ ಕೊಡಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 “ನಿಮ್ಮ ನೆರೆಯವನ ಕಟ್ಟಿರುವ ದನವಾಗಲಿ ಕುರಿಯಾಗಲಿ ಹಗ್ಗ ಬಿಚ್ಚಿಕೊಂಡಿರುವುದನ್ನು ನೀವು ಕಂಡರೆ ಅದನ್ನು ನಿರ್ಲಕ್ಷಿಸದೆ, ಕೂಡಲೇ ಅದನ್ನು ಅದರ ಧಣಿಯ ಬಳಿಗೆ ಅಟ್ಟಿಕೊಂಡು ಹೋಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 22:1
21 ತಿಳಿವುಗಳ ಹೋಲಿಕೆ  

ಕಳೆದುಹೋದದ್ದನ್ನು ನಾನೇ ಹುಡುಕುವೆನು. ದಾರಿ ತಪ್ಪಿದ್ದನ್ನು ನಾನೇ ಮತ್ತೆ ತರುವೆನು, ಮುರಿದ ಅಂಗವನ್ನು ನಾನೇ ಕಟ್ಟುವೆನು. ದುರ್ಬಲವಾದುದನ್ನು ಬಲಗೊಳಿಸುವೆನು, ಆದರೆ ಕೊಬ್ಬಿದ್ದನ್ನೂ ಬಲಿಷ್ಠವಾದದ್ದನ್ನೂ ನಾನೇ ಸಂಹರಿಸುವೆನು. ನಾನು ನ್ಯಾಯದಿಂದ ಮಂದೆಯನ್ನು ಮೇಯಿಸುವೆನು.


ಹಸಿದವರಿಗೆ ಅನ್ನ ಕೊಡುವುದು, ನೆಲೆಯಿಲ್ಲದೆ ಅಲೆಯುತ್ತಿರುವ ಬಡವರನ್ನು ಮನೆಗೆ ಬರಮಾಡಿಕೊಳ್ಳುವುದು, ಬಟ್ಟೆಯಿಲ್ಲದವರನ್ನು ಕಂಡಾಗ ಅವರಿಗೆ ಬಟ್ಟೆ ಹೊದಿಸುವುದು, ನಿನ್ನ ರಕ್ತಸಂಬಂಧಿಕರಿಂದ ಮುಖ ಮರೆಮಾಡಿಕೊಳ್ಳದಿರುವುದು, ಇದೇ ಅಲ್ಲವೇ ನನಗೆ ಇಷ್ಟಕರವಾದ ಉಪವಾಸ ವ್ರತ?


ಅನ್ಯಾಯವಾಗಿ ಮರಣಕ್ಕೆ ಸಾಗಿಸುವನನ್ನು ಬಿಡಿಸುವುದಕ್ಕೆ ಯತ್ನಿಸು; ಕೊಲೆಗೆ ನೇಮಿತವಾದವರನ್ನು ನೀನು ರಕ್ಷಿಸು.


ಏಕೆಂದರೆ, “ನೀವು ಕುರಿಗಳಂತೆ ದಾರಿ ತಪ್ಪಿದವರಾಗಿದ್ದೀರಿ.” ಆದರೆ ಈಗ ನೀವು ತಿರುಗಿ ನಿಮ್ಮ ಆತ್ಮಗಳ ಕುರುಬ ಹಾಗೂ ಸಭಾಧ್ಯಕ್ಷರೂ ಆಗಿರುವ ಕ್ರಿಸ್ತ ಯೇಸುವಿನ ಬಳಿಗೆ ಬಂದಿದ್ದೀರಿ.


ಯೇಸು ಉತ್ತರವಾಗಿ, “ತಪ್ಪಿಸಿಕೊಂಡ ಕುರಿಗಳಂತಿರುವ ಇಸ್ರಾಯೇಲಿನ ಮನೆತನದವರ ಬಳಿಗೆ ಮಾತ್ರ ನನ್ನನ್ನು ಕಳುಹಿಸಲಾಗಿದೆ,” ಎಂದರು.


ಆದರೆ ತಪ್ಪಿಹೋದ ಕುರಿಗಳಾದ ಇಸ್ರಾಯೇಲಿನ ಮನೆತನದವರ ಬಳಿಗೆ ಹೋಗಿರಿ.


ನೀವು ದುರ್ಬಲರನ್ನು ಬಲಪಡಿಸಲಿಲ್ಲ ಅಥವಾ ರೋಗಿಗಳನ್ನು ಗುಣಪಡಿಸಲಿಲ್ಲ ಅಥವಾ ಮುರಿದದ್ದನ್ನು ಕಟ್ಟುವುದಿಲ್ಲ. ಕಳೆದುಹೋದದ್ದನ್ನು ಹುಡುಕುವುದಿಲ್ಲ, ಓಡಿಸಿದ್ದನ್ನು ನೀವು ಹಿಂದಕ್ಕೆ ತರುವುದಿಲ್ಲ. ಆದರೆ ಬಲಾತ್ಕಾರದಿಂದ ಮತ್ತು ಕ್ರೂರತನದಿಂದ ಅವುಗಳ ಮೇಲೆ ದೊರೆತನ ಮಾಡುತ್ತೀರಿ.


ಯಾಕೋಬಿನ ವಂಶದವರಿಗೆ ಮುಖವನ್ನು ಮರೆಮಾಡಿಕೊಂಡಿರುವ ಯೆಹೋವ ದೇವರಿಗಾಗಿ ನಾನು ಕಾದುಕೊಂಡು ಎದುರು ನೋಡುತ್ತಿರುವೆನು. ನಾನು ದೇವರ ಮೇಲೆ ಭರವಸೆ ಇಡುವೆನು.


ಬಡವರಿಗೆ ದಾನ ಮಾಡುವವನು, ಕೊರತೆ ಪಡುವುದಿಲ್ಲ; ಆದರೆ ತನ್ನ ಕಣ್ಣುಗಳನ್ನು ಮುಚ್ಚಿಕೊಳ್ಳುವವನಿಗೆ ಅನೇಕ ಶಾಪಗಳು.


ಆ ಮನುಷ್ಯನು ತನ್ನ ಸಂತತಿಯನ್ನು ಮೋಲೆಕನಿಗೆ ಕೊಡುವಾಗ, ಜನರು ತಮ್ಮ ಕಣ್ಣುಗಳನ್ನು ಮರೆಮಾಡಿ, ಅವನನ್ನು ಕೊಲ್ಲದೆ ಹೋದರೆ,


“ಕಣ ತುಳಿಯುವ ಎತ್ತಿನ ಬಾಯನ್ನು ಕಟ್ಟಬಾರದು,” ಎಂದು ಮೋಶೆಯ ನಿಯಮದಲ್ಲಿ ಬರೆದಿದೆ. ಇಲ್ಲಿ ದೇವರಿಗೆ ಎತ್ತಿನ ಬಗ್ಗೆ ಮಾತ್ರ ಚಿಂತೆಯಿದೆಯೋ?


ಇಲ್ಲವೆ ಕಳೆದುಹೋಗಿದ ವಸ್ತು ಸಿಕ್ಕಿ, ಅದರ ವಿಷಯದಲ್ಲಿ ಸುಳ್ಳಾಡಿದ್ದರೆ ಮತ್ತು ಸುಳ್ಳಾಗಿ ಪ್ರಮಾಣ ಮಾಡಿದ್ದರೆ, ಇವೆಲ್ಲವುಗಳಲ್ಲಿ ಯಾವುದನ್ನಾದರೂ ಒಬ್ಬನು ಮಾಡಿದ್ದರೆ, ಅವನು ಪಾಪಮಾಡುವವನಾಗಿದ್ದಾನೆ.


ಅವನು ನಿಮಗೆ ದೂರ ಆಗಿದ್ದರೆ, ಇಲ್ಲವೆ ಅವನು ಯಾರು ಎಂದು ನಿಮಗೆ ತಿಳಿಯದೆ ಹೋದರೆ, ಆ ಪ್ರಾಣಿಯನ್ನು ನಿಮ್ಮ ಮನೆಗೆ ಹೊಡೆದುಕೊಂಡು ಬಂದು ಕಾಯಬೇಕು. ಅವನು ಅದನ್ನು ಹುಡುಕುತ್ತಾ ಬಂದಾಗ, ನೀವು ಅದನ್ನು ಅವನಿಗೆ ಮರಳಿ ಕೊಡಬೇಕು.


ನಿನ್ನ ಸ್ನೇಹಿತನನ್ನೂ ನಿನ್ನ ತಂದೆಯ ಸ್ನೇಹಿತನನ್ನೂ ತ್ಯಜಿಸಬೇಡ; ಅಲ್ಲದೆ ನಿನ್ನ ಇಕ್ಕಟ್ಟಿನ ದಿನದಲ್ಲಿ ನಿನ್ನ ಸಹೋದರನ ಮನೆಗೆ ಹೋಗಬೇಡ; ಏಕೆಂದರೆ ದೂರವಾಗಿರುವ ಸಹೋದರನಿಗಿಂತ ಹತ್ತಿರವಾಗಿರುವ ನೆರೆಯವನೇ ಲೇಸು.


“ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ನಿಜವಾದ ನ್ಯಾಯವನ್ನು ತೀರಿಸಿರಿ; ಒಬ್ಬರಿಗೊಬ್ಬರು ಪ್ರೀತಿಯನ್ನೂ, ಕನಿಕರವನ್ನೂ ತೋರಿಸಿರಿ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು