Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 23:14 - ಕನ್ನಡ ಸಮಕಾಲಿಕ ಅನುವಾದ

14 ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ರಕ್ಷಿಸುವುದಕ್ಕೂ, ನಿಮ್ಮ ಶತ್ರುಗಳನ್ನು ನಿಮ್ಮ ಮುಂದೆ ಒಪ್ಪಿಸಿಬಿಡುವುದಕ್ಕೂ ಪಾಳೆಯದ ಮಧ್ಯದಲ್ಲಿ ಸಂಚಾರ ಮಾಡುತ್ತಾರೆ. ಅವರು ನಿಮ್ಮಲ್ಲಿ ಅಶುದ್ಧವಾದ ಕಾರ್ಯವನ್ನು ನೋಡಿ, ನಿಮ್ಮನ್ನು ಬಿಟ್ಟು ತಿರುಗಿಹೋಗದಂತೆ ನಿಮ್ಮ ಪಾಳೆಯವು ನಿರ್ಮಲವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಕಾಪಾಡುವುದಕ್ಕೂ, ಶತ್ರುಗಳನ್ನು ನಿಮ್ಮ ಕೈವಶಮಾಡುವುದಕ್ಕೂ ನಿಮ್ಮ ಪಾಳೆಯದೊಳಗೆ ಸಂಚಾರಮಾಡುತ್ತಾನಲ್ಲಾ; ಆದುದರಿಂದ ಪಾಳೆಯವು ನಿಮರ್ಲವಾಗಿರಬೇಕು; ನಿಮ್ಮಲ್ಲಿ ಅಶುದ್ಧವೇನಾದರೂ ಕಂಡುಬಂದರೆ ಆತನು ನಿಮ್ಮನ್ನು ಬಿಟ್ಟುಹೋದಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನಿಮ್ಮ ದೇವರಾದ ಸರ್ವೇಶ್ವರಾ ನಿಮ್ಮನ್ನು ಕಾಪಾಡಲು, ಶತ್ರುಗಳನ್ನು ನಿಮ್ಮ ಕೈವಶಮಾಡಲು ನಿಮ್ಮ ಪಾಳೆಯದೊಳಗೆ ಸಂಚಾರಮಾಡುತ್ತಾರೆ; ನಿಮ್ಮಲ್ಲಿ ಅಶುಚಿಯೇನಾದರೂ ಕಂಡುಬಂದರೆ ಅವರು ನಿಮ್ಮನ್ನು ಬಿಟ್ಟುಹೋಗದಂತೆ ಪಾಳೆಯವು ನಿರ್ಮಲವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಕಾಪಾಡುವದಕ್ಕೂ ಶತ್ರುಗಳನ್ನು ನಿಮ್ಮ ಕೈವಶಮಾಡುವದಕ್ಕೂ ನಿಮ್ಮ ಪಾಳೆಯದೊಳಗೆ ಸಂಚಾರಮಾಡುತ್ತಾನಲ್ಲಾ; ಆದದರಿಂದ ಪಾಳೆಯವು ನಿರ್ಮಲವಾಗಿರಬೇಕು; ನಿಮ್ಮಲ್ಲಿ ಅಶುಚಿಯೇನಾದರೂ ಕಂಡುಬಂದರೆ ಆತನು ನಿಮ್ಮನ್ನು ಬಿಟ್ಟುಹೋದಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಸಂರಕ್ಷಿಸಲೂ ವೈರಿಗಳನ್ನು ಸೋಲಿಸುವಂತೆ ಸಹಾಯ ಮಾಡಲೂ ನಿಮ್ಮೊಂದಿಗೆ ಪಾಳೆಯದಲ್ಲಿರುವುದರಿಂದ ನಿಮ್ಮ ಪಾಳೆಯವು ಪವಿತ್ರವಾಗಿರಬೇಕು. ಇಲ್ಲದಿದ್ದಲ್ಲಿ ನಿಮ್ಮ ಪಾಳೆಯದಲ್ಲಿರುವ ಹೊಲಸನ್ನು ನೋಡಿ ಆತನು ಹಿಂದಿರುಗಿ ಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 23:14
8 ತಿಳಿವುಗಳ ಹೋಲಿಕೆ  

ನಾನು ನಿಮ್ಮ ಮಧ್ಯದಲ್ಲಿ ನಡೆದು ನಿಮ್ಮ ದೇವರಾಗಿರುವೆನು. ನೀವು ನನ್ನ ಜನರಾಗಿರುವಿರಿ.


ಅಬ್ರಾಮನು ತೊಂಬತ್ತೊಂಬತ್ತು ವರ್ಷದವನಾದಾಗ, ಯೆಹೋವ ದೇವರು ಅಬ್ರಾಮನಿಗೆ ಕಾಣಿಸಿಕೊಂಡು, “ನಾನೇ ಸರ್ವಶಕ್ತ ದೇವರು. ನೀನು ನನ್ನ ಸನ್ನಿಧಿಯಲ್ಲಿಯೇ ನಡೆಯುತ್ತಾ ದೋಷವಿಲ್ಲದವನಾಗಿರು.


ದೇವರ ಆಲಯಕ್ಕೂ ವಿಗ್ರಹಗಳಿಗೂ ಏನು ಒಪ್ಪಂದ? ನಾವು ಜೀವಿಸುವ ದೇವರ ಆಲಯವಾಗಿದ್ದೇವೆ. ದೇವರು ಹೀಗೆ ಹೇಳಿದ್ದಾರೆ: “ನಾನು ಅವರೊಂದಿಗೆ ವಾಸಿಸುವೆನು, ಅವರ ಮಧ್ಯದಲ್ಲಿ ತಿರುಗಾಡುವೆನು. ನಾನು ಅವರಿಗೆ ದೇವರಾಗಿರುವೆನು ಮತ್ತು ಅವರು ನನ್ನ ಜನರಾಗಿರುವರು.”


ಆಗ ದೇವರು ಅವನಿಗೆ, “ಇಲ್ಲಿ ಸಮೀಪಕ್ಕೆ ಬರಬೇಡ, ನಿನ್ನ ಪಾದರಕ್ಷೆಗಳನ್ನು ತೆಗೆದಿಡು. ನೀನು ನಿಂತಿರುವ ಸ್ಥಳ ಪರಿಶುದ್ಧ ಭೂಮಿ,” ಎಂದರು.


ಅವರು ದೇಶದಲ್ಲೆಲ್ಲಾ ಹರಡಿಕೊಂಡು ಪರಿಶುದ್ಧರ ದಂಡಿಗೂ ಆ ಪ್ರಿಯಪಟ್ಟಣಕ್ಕೂ ಮುತ್ತಿಗೆ ಹಾಕಿದರು. ಆಗ ಪರಲೋಕದಿಂದ ಬೆಂಕಿ ಬಿದ್ದು ಅವರನ್ನು ದಹಿಸಿಬಿಟ್ಟಿತು.


ತರುವಾಯ ಯೆಹೋವ ದೇವರು, ಸಂಜೆಯ ತಂಗಾಳಿಯಲ್ಲಿ ತೋಟದೊಳಗೆ ಸಂಚರಿಸುತ್ತಿರುವಾಗ, ಆ ಸ್ತ್ರೀ ಪುರುಷರು ಅವರ ಸಪ್ಪಳವನ್ನು ಕೇಳಿ, ಅವರಿಗೆ ಕಾಣಿಸಿಕೊಳ್ಳಬಾರದೆಂದು ತೋಟದ ಮರಗಳ ಮಧ್ಯದಲ್ಲಿ ಅಡಗಿಕೊಂಡರು.


ನಿಮ್ಮ ಆಯುಧಗಳ ಜೊತೆಯಲ್ಲಿ ಕಬ್ಬಿಣದ ಸಲಕೆ ಇರಬೇಕು. ನೀವು ಮಲವಿಸರ್ಜನೆ ಮಾಡಿದಾಗ, ಆ ಸಲಕೆಯಿಂದ ಅಗೆದು ಮುಚ್ಚಿಬಿಡಬೇಕು.


ದೇವರು ಅದರ ಮಧ್ಯದಲ್ಲಿ ಇದ್ದಾರೆ, ಅದು ಕದಲದು; ದೇವರು ಉದಯಕಾಲದಲ್ಲಿ ಅದಕ್ಕೆ ಸಹಾಯ ಮಾಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು